Homeಮುಖಪುಟಬ್ರಿಟನ್ ಕವಿ ಬ್ರಯಾನ್ ಪ್ಯಾಟನ್ ಅವರ ಹತ್ತು ಪದ್ಯಗಳು

ಬ್ರಿಟನ್ ಕವಿ ಬ್ರಯಾನ್ ಪ್ಯಾಟನ್ ಅವರ ಹತ್ತು ಪದ್ಯಗಳು

- Advertisement -
- Advertisement -

1.ಬೆಳಕಿನವತಾರ

ನನ್ನ ಕನ್ನಡಿಯೊಳಗೆ ನಡೆದು ಬಂದವಳು
ಪ್ರೀತಿ ಮತ್ತು ಅದರ ಇತರ ಉತ್ಪನ್ನಗಳ ಬಗ್ಗೆ
ಚಕಾರ ಎತ್ತುವುದಿಲ್ಲ,
ಸುಮ್ಮನೇ ನಿಂತಿರುತ್ತಾಳೆ,
ತನ್ನ ಮೌನವನ್ನು ತಾನೇ ಸುಖಿಸುತ್ತಾಳೆ,
ನನಗೆ ಗೊತ್ತಿರುವ ಎಲ್ಲ ಋತುಗಳೂ
ತಾನೇ ಎಂಬಂತೆ ಉಟ್ಟು ಮೆರೆಯುತ್ತಾಳೆ,
ಒಂದು ಮೊಲೆಯಲ್ಲಿ ಕಾಡು
ಇನ್ನೊಂದರಲ್ಲಿ ಸಮುದ್ರ ಧರಿಸಿಕೊಂಡಿದ್ದಾಳೆ.

ಯಾವುದೇ ಬೇಡಿಕೆಯಿಲ್ಲ ಅವಳಲ್ಲಿ
ಒಮ್ಮೆ ನೋಡಿದರೆ ಸಾಕು.
ಎಷ್ಟೆಲ್ಲಾ ಬೇಡಿಕೆ.

ಮಾಟ ಎಲ್ಲರ ಹಾಗೇ
ಪ್ರೇಮಕ್ಕೆ ಬೇಕಾದಷ್ಟು, ಸಾಕಾದಷ್ಟು,
ನನ್ನ ಕಟ್ಟಿ ಹಾಕಿರುವುದು ಅದಲ್ಲ,
ಅದರಾಚೆಗಿನ ಬೆಳಗು.

ಒಮ್ಮೊಮ್ಮೆ ನನಗನಿಸುತ್ತದೆ
ನಾನೂ ಹಾಗೇ
ಬೆಳಕಿನವತಾರ.

*****

2. Reading between Graffiti

ಟಾಯ್ಲೆಟ್‌ನ ಗೋಡೆಯ ಮೇಲೆ
ಮಸುಕು ಮಸುಕಾದ ಗೀಚು ಬರಹ,
‘FUCK THE STRANGER TONIGHT’
ಕಳೆದ ವಾರ ಕಣ್ಣಿಗೆ ಬಿದ್ದಿರಲಿಲ್ಲ.
ಬಾಕಿ ಎಲ್ಲ ಲವ್ ಸಿಂಬಲ್‌ಗಳು,
ಕಾಮ ಪ್ರಲಾಪಗಳು, ಉತ್ಕಟ ಹಳಹಳಿಕೆಗಳು
ಈ ಅನಾಮಿಕನ ಸಲಹೆಯ ಮುಂದೆ
ಸಪ್ಪೆ, ಸಪ್ಪೆ ಎನಿಸುವಂತಿದ್ದವು.
ಕಳೆದುಕೊಂಡವರು, ಸಾಯದ ಆದರೆ ದಿನದಿನಕ್ಕೂ
ಬಾತುಕೊಳ್ಳುತ್ತಲೇ ಸಣ್ಣಗಾಗುವವರು,
ಅನುಕಂಪಕ್ಕಾಗಿ ತುಡಿಯುವ ಆದರೆ
ಟಾಯ್ಲೆಟ್‌ನ ಗೋಡೆಗಳ ಮುಂದೆ ದಿಢೀರನೇ ದಾರ್ಶನಿಕರಾಗುವವರು,
ಹೀಗೆ ಗೋಡೆ ಬರಹಗಳು
ಆಯಾ ಗುಂಪಿನ ಮನಸ್ಥಿತಿಯನ್ನು ಹಾಡುತ್ತವೆ.
ಅದೇನೇ ಇರಲಿ
ಈ ಬರಹ ಬರೆದವನಿಗೆ
ಒಂದಿಷ್ಟು ಕ್ರೆಡಿಟ್ ಕೊಡಲೇಬೇಕು,
ಕೊನೆ ಪಕ್ಷ ತಿಳಿದುಕೊಳ್ಳಲಿಕ್ಕಾದರೂ
’ಯಾಕೆ? ರಾತ್ರಿ, ಹೀಗೆ ಒಳಗೆ ಇಳಿದು
ತನ್ನ ಉನ್ಮತ್ತ ದಾಸರಿಂದ
ತಪ್ಪುತಪ್ಪಾಗಿ ಬರೆಸುತ್ತದೆ
ಸತ್ಯ ವಚನ’

*****

3. ದುರಂತ

ನಿನ್ನೆ
ನಡು ಮನೆಯಲ್ಲಿರುವ
ಬೆಂಕಿಗೂಡಿನ ಹಿಂದೆ
ಪೆನ್ಸಿಲ್‌ನಲ್ಲಿ ಬರೆದಿರುವ ಒಂದು ಚೀಟಿ ಸಿಕ್ಕಿತು.
ಎಷ್ಟು ಹಳೆಯದೋ ಗೊತ್ತಿಲ್ಲ
ದಿನದ ಗೋಜಲುಗಳ ನಡುವೆ
ತನ್ನ ಪಾಳಿಗಾಗಿ ಕಾತುರದಿಂದ ಕಾಯುವಂತಿತ್ತು.

’ಬಾಸ್ಟರ್ಡ್’ ಹೀಗೆ ಶುರುವಾಗಿತ್ತು
’ಮತ್ತೆಂದೂ ವಾಪಸ್ ಆಗಲಾರೆ
ಇದೇ ಕೊನೆಯ ರಾತ್ರಿ
ಶಾಶ್ವತವಾಗಿ ಬಿಟ್ಟು ಹೋಗುತ್ತಿದ್ದೇನೆ’

ಕೆಳಗೆ ಬರೆದಿರುವ ಹೆಸರನ್ನ
ನನಗೆ ಗುರುತಿಸಲಾಗಲಿಲ್ಲ
ಆ ಸಹಿಯನ್ನ ಮಸಿ ನುಂಗಿ ಹಾಕಿತ್ತು.

ಅದು, ನನಗೇ ಬರೆದಿರುವ ಚೀಟಿ
ಎನ್ನುವ ಗ್ಯಾರಂಟಿ ಕೂಡ ನನಗಿರಲಿಲ್ಲ.
ಬಹುಶಃ ಇರಬಹುದು
ಬಹುಶಃ ಇರಲಿಕ್ಕೂ ಇಲ್ಲ.
ನನಗೆ ಅದು ಗೊತ್ತಾಗಲೂ ಇಲ್ಲ
ನಾನು ಕಾಳಜಿ ಕೂಡ ಮಾಡಲಿಲ್ಲ.

ತಮಾಷೆ ಎಂದರೆ ಒಮ್ಮೊಮ್ಮೆ
ದುರಂತ ಹೀಗೂ ನಡೆದುಹೋಗುತ್ತದೆ
ನಗಿಸದೇ ಅಳಿಸದೆ.
(The tragedy)

*****

4. ಹುಲ್ಲಿನ ಗರಿ

ನಿನ್ನ ಫರ್ಮಾಯಿಶ್ ಕವಿತೆಯಾಗಿತ್ತು,
ನಾನು ಹುಲ್ಲಿನ ಗರಿ ಕೊಟ್ಟೆ.
ಉಹೂಂ,
ಕವಿತೆಯೇ ಬೇಕು ನಿನ್ನ ಹಟ,
ಹುಲ್ಲಿನ ಗರಿ ಸಾಕು ನನ್ನ ವಾದ.

ಮಂಜಿನಲ್ಲಿ ಮಿಂದ ಗರಿ ಎಲ್ಲಕ್ಕಿಂತ ಹೊಸದು
ನನ್ನ ಯಾವ ರೂಪಕಕ್ಕಿಂತಲೂ
ನನ್ನ ಸಮಜಾಯಿಷಿ,
ಆದರೂ ಅದು ಕವಿತೆಯಲ್ಲ…..
ಮುಂದುವರಿದಿದೆ ನಿನ್ನ ಹಟ.

ನಿನಗೆ ಸಿಟ್ಟು
ಹುಲ್ಲಿನ ಗರಿ ಸುಲಭ ಎಂಬ ನಂಬಿಕೆ
ಯಾರೂ ಕೊಡಬಲ್ಲರು ಎಂಬ ತಿಳಿವಳಿಕೆ.

ನಿನ್ನ ಫರ್ಮಾಯಿಶ್ ಕವಿತೆಯಾಗಿತ್ತು
ಹುಲ್ಲಿನ ಗರಿಯನ್ನು
ನಿನಗೆ ಒಪ್ಪಿಸಲಾಗದ ನನ್ನ ಅಸಹಾಯಕತೆಯ ಕುರಿತು
ನಾನೊಂದು ದುರಂತ ಕವಿತೆ ಬರೆದೆ
ಅದರಲ್ಲೊಂದು ಸಾಲಿತ್ತು
ನಿನ್ನ ಬಗ್ಗೆ
ವಯಸ್ಸಾಗುತ್ತಾ ಹೋದಂತೆ
ಹುಲ್ಲಿನ ಗರಿಯನ್ನು
ಒಪ್ಪಿಕೊಳ್ಳದ ನಿನ್ನ ಜಿದ್ದಿನ ಬಗ್ಗೆ.
(Blade of grass)

*****

5. What I need for the present

ಥ್ಯಾಂಕ್ಸ್, ಆದರೆ
ವಾಪಸ್ ತೆಗೆದುಕೊಂಡುಬಿಡು
ಈ ಉಂಗುರ ಮತ್ತು ಅದರ ಬಾಕ್ಸ್,
ಚಿಟ್ಟೆಯ ರೆಕ್ಕೆ ಮತ್ತು ಗಾಜಿನ ಮಣಿಗಳಿಂದ
ಅಲಂಕೃತವಾದ ಈ ಬಣ್ಣದ ಚಿತ್ರ
ಬೇಡ ನನಗೀಗ ಇವೆಲ್ಲ.
ದಯವಿಟ್ಟು, ಈ ಪುಸ್ತಕಗಳು,
ಪೋಸ್ಟ್ ಕಾರ್ಡುಗಳು,
ಜೇನು ಮೇಣದ ಕ್ಯಾಂಡಲ್‌ಗಳು,
ಹೂವಿನ ಕುಂಡಗಳು, ಪೇಂಟಿಂಗ್‌ಗಳು,
ಮತ್ತು ಈ ದುಬಾರಿ ಪೆನ್
ಎಲ್ಲವನ್ನೂ ವಾಪಸ್ ತೆಗೆದುಕೊಂಡುಬಿಡು.

ಹೀಗೆ ಹೇಳುವುದು ಸೌಜನ್ಯ ಅಲ್ಲ ನಿಜ, ಆದರೆ
ಯಾವುದನ್ನು ಕೊಡಲಾಗುವುದಿಲ್ಲವೋ
ಅದರ ಬದಲಿಗೆ ಕೊಡಲಾಗಿದೆ
ಎಂಬಂತಿವೆ ಈ ಉಡುಗೊರೆಗಳು.

ಹೀಗೆ ಹೇಳುವುದು ಸೌಜನ್ಯ ಅಲ್ಲ ನಿಜ, ಆದರೆ
ಈ ಕೋಣೆಯಲ್ಲಿ ಓಡಾಡುವಾಗಲೆಲ್ಲ
ಕಣ್ಣಿಗೆ ಬೀಳುವುದು ಈ ಉಡುಗೊರೆಗಳಲ್ಲ
ಅವುಗಳ ಮೇಲೆ ಧೂಳಿನಂತೆ ಕುಳಿತಿರುವ
ನಿನ್ನ ಗೈರು ಹಾಜರಿ ಮಾತ್ರ.

ದಯವಿಟ್ಟು ಕ್ಷಮಿಸು

ನೀನೇನೊ ಪ್ರೀತಿಯಿಂದಲೇ ಕೊಟ್ಟಿರಬಹುದು, ಆದರೆ
ಸದ್ಯ ಈ ಬೇಡಿಗಳ ತುರ್ತು ನನಗಿಲ್ಲ.

******

ಬ್ರಯಾನ್ ಪ್ಯಾಟನ್

6. She complicates her life

ಅದೇನೋ ಅವಳು
ಎಲ್ಲವನ್ನು ಸುಮ್ಮನೆ ಕಾಂಪ್ಲಿಕೇಟ್ ಮಾಡಿಕೊಳ್ಳುತ್ತಾಳೆ.
ಕೆಲ ಭೂತಗಳು ಅವಳ ದಿನಗಳನ್ನು
ಹಿಡಿದು ಅಲ್ಲಾಡಿಸುತ್ತಿವೆ.

ಪ್ರೇಮ ತಾನಾಗಿಯೇ ಬಂದು, ಕೈಹಿಡಿದು
’ನಿಲ್ಲು’ ಎಂದರೆ
’ಹೋಗು’ ಎಂದು ಕೇಳಿಸಿಕೊಂಡು
ಬೆನ್ನು ತಿರುವಿ ಹೊರಟುಬಿಡುತ್ತಾಳೆ.

ಎಲ್ಲ ಬಾಗಿಲುಗಳನ್ನ ಮುಚ್ಚಿಕೊಂಡಿದ್ದಾಳೆ
ನೋವು ಹೆಚ್ಚಾದಾಗಲೆಲ್ಲ ಹಿಮವಾಗಿಬಿಡುತ್ತಾಳೆ.

*****

7. ತುಂಬಿಕೊಂಡವಳು

ಮೊನ್ನೆ ನಿನ್ನ
ಕಿಟಕಿಯಲ್ಲಿ ನೋಡಿದೆ.
ಅದೇ ಚೆಲುವು, ಅದೇ ಹೊಂಗೂದಲಿನ ಜಡೆ
ಅವೇ ಅಲೌಕಿಕ ನೀಳ ಕಾಲುಗಳು.
ಓಡಿ ಬೀದಿಗೆ ಬಂದವನೇ
ನಿನ್ನ ಹೆಸರಿಟ್ಟು ಕೂಗಿದೆ.
ನೀನು ಹಿಂತಿರುಗಿ ನೋಡಿ
ನನ್ನ ಆತುರಕ್ಕೆ
’ಛೀ’ ಎಂದೆ.
ಹೌದು obviously ಆಕೆ ನೀನಾಗಿರಲಿಲ್ಲ

ಮೂವತ್ತು ವರ್ಷ ಹೇಗೆ ಕಳೆದುಹೋಯಿತೆಂಬುದನ್ನ

ನಾನೂ ಮರೆತುಬಿಟ್ಟಿದ್ದೆ.
ಕ್ಷಮೆ ಕೇಳಿದೆ

“ಸಾರಿ, ಬೇರೆ ಯಾರೋ ಅಂದುಕೊಂಡಿದ್ದೆ” ತೊದಲಿದೆ.
ಆದರೆ ಇದರಲ್ಲಿ ನನ್ನದೇನೂ ಅಂಥ ತಪ್ಪಿಲ್ಲ.
ನಾನು ನೋಡಿದ್ದು,
ನನ್ನೊಳಗೆ ಅಂದು ತುಂಬಿಕೊಂಡಿದ್ದ ನಿನ್ನನ್ನು
ಈ ಹೊತ್ತಿಗೂ.

*****

8. ಪ್ರೇಮ ಪಾಠ

ಹಠಾತ್ ಆಗಿ ಪ್ರೇಮ
ತನ್ನ ಎಲ್ಲ ಹತಾಶೆಗಳಿಂದ ವಾಪಸ್ಸಾಗಿ
ನಿಮ್ಮ ತೋಳಲ್ಲಿ ಹುದುಗಿ, ಮುಲುಕುತ್ತ

“ಇನ್ನು ಎಲ್ಲೂ ಹೋಗಲಾರೆ,
ಬೇರೆ ದೇಹಗಳೆಲ್ಲ ಬಹುತೇಕ ರಾಜಿ ಮಾತ್ರ”

ಎಂದರೆ ಆ ಸುಳ್ಳನ್ನ
ಥಟ್ ಅಂತ ಒಪ್ಪಿಕೊಂಡುಬಿಡುತ್ತೀರಿ ನೀವು
ಅಕಸ್ಮಾತ್ ಜಾಣರಾಗಿದ್ದರೆ.
(Love lesson)

*****

9. ಸಿನಿಕನ ಪ್ರೇಮಗೀತೆ

ಪ್ರೇಮದ ಕೆಲಸವೇ
ಬರೋದು, ಹೋಗೋದು
ಮತ್ತು
ಆಗಾಗ ನಿಲ್ಲೋದು
ಆದರೆ

ಮತ್ತೆ ವಾಪಸ್ ಬರೋದು ಮಾತ್ರ
ಆದ ಅನಾಹುತದ ಪರಿಶೀಲನೆಗೆ

*****

10. ವ್ಯಾಲಂಟೈನ್

ಒಬ್ಬರು ಇನ್ನೊಬ್ಬರ ಜೊತೆ
ಹೀಗೇ ಸದಾ
ಯಾವದೇ ಸಂಶಯ ಇಲ್ಲದೆ
ಇದ್ದುಬಿಡುವ ಆಸೆ ಉಳ್ಳವರು,
(ಮುಂದೆ ಆಗಬಹುದಾದ ದಣಿವಿನ ಬಗ್ಗೆ ಯಾವ ಕಳವಳವೂ ಇಲ್ಲದೆ)

ನನ್ನ ನಿನ್ನ ಹಾಗೆ ಇರುವವರೇ,

ರಾತ್ರಿ ಇಡೀ ಪಿಸುಮಾತಿನಲ್ಲಿ
ಲೋಕದ ಉಸಿರನ್ನು ಜೀವಂತವಾಗಿಟ್ಟವರು,

ಶಾಶ್ವತದ ಮಿತಿಗೆ ಗಾಬರಿಯಾಗಿ
ನೆಲಕ್ಕೆ ಅಂಗುಷ್ಟವ ಒತ್ತಿದವರು,

ಎರಡು ಉಸಿರುಗಳ ನಡುವಿನ ಅಂತರದ ವಿರುದ್ಧ
ಕೋರ್ಟಿನಲ್ಲಿ ಸಾಕ್ಷಿ ಹೇಳಿದವರು.
( A Valentine)

ಕನ್ನಡಕ್ಕೆ: ಚಿದಂಬರ ನರೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...