Homeಮುಖಪುಟಬ್ರಿಟನ್ ಕವಿ ಬ್ರಯಾನ್ ಪ್ಯಾಟನ್ ಅವರ ಹತ್ತು ಪದ್ಯಗಳು

ಬ್ರಿಟನ್ ಕವಿ ಬ್ರಯಾನ್ ಪ್ಯಾಟನ್ ಅವರ ಹತ್ತು ಪದ್ಯಗಳು

- Advertisement -
- Advertisement -

1.ಬೆಳಕಿನವತಾರ

ನನ್ನ ಕನ್ನಡಿಯೊಳಗೆ ನಡೆದು ಬಂದವಳು
ಪ್ರೀತಿ ಮತ್ತು ಅದರ ಇತರ ಉತ್ಪನ್ನಗಳ ಬಗ್ಗೆ
ಚಕಾರ ಎತ್ತುವುದಿಲ್ಲ,
ಸುಮ್ಮನೇ ನಿಂತಿರುತ್ತಾಳೆ,
ತನ್ನ ಮೌನವನ್ನು ತಾನೇ ಸುಖಿಸುತ್ತಾಳೆ,
ನನಗೆ ಗೊತ್ತಿರುವ ಎಲ್ಲ ಋತುಗಳೂ
ತಾನೇ ಎಂಬಂತೆ ಉಟ್ಟು ಮೆರೆಯುತ್ತಾಳೆ,
ಒಂದು ಮೊಲೆಯಲ್ಲಿ ಕಾಡು
ಇನ್ನೊಂದರಲ್ಲಿ ಸಮುದ್ರ ಧರಿಸಿಕೊಂಡಿದ್ದಾಳೆ.

ಯಾವುದೇ ಬೇಡಿಕೆಯಿಲ್ಲ ಅವಳಲ್ಲಿ
ಒಮ್ಮೆ ನೋಡಿದರೆ ಸಾಕು.
ಎಷ್ಟೆಲ್ಲಾ ಬೇಡಿಕೆ.

ಮಾಟ ಎಲ್ಲರ ಹಾಗೇ
ಪ್ರೇಮಕ್ಕೆ ಬೇಕಾದಷ್ಟು, ಸಾಕಾದಷ್ಟು,
ನನ್ನ ಕಟ್ಟಿ ಹಾಕಿರುವುದು ಅದಲ್ಲ,
ಅದರಾಚೆಗಿನ ಬೆಳಗು.

ಒಮ್ಮೊಮ್ಮೆ ನನಗನಿಸುತ್ತದೆ
ನಾನೂ ಹಾಗೇ
ಬೆಳಕಿನವತಾರ.

*****

2. Reading between Graffiti

ಟಾಯ್ಲೆಟ್‌ನ ಗೋಡೆಯ ಮೇಲೆ
ಮಸುಕು ಮಸುಕಾದ ಗೀಚು ಬರಹ,
‘FUCK THE STRANGER TONIGHT’
ಕಳೆದ ವಾರ ಕಣ್ಣಿಗೆ ಬಿದ್ದಿರಲಿಲ್ಲ.
ಬಾಕಿ ಎಲ್ಲ ಲವ್ ಸಿಂಬಲ್‌ಗಳು,
ಕಾಮ ಪ್ರಲಾಪಗಳು, ಉತ್ಕಟ ಹಳಹಳಿಕೆಗಳು
ಈ ಅನಾಮಿಕನ ಸಲಹೆಯ ಮುಂದೆ
ಸಪ್ಪೆ, ಸಪ್ಪೆ ಎನಿಸುವಂತಿದ್ದವು.
ಕಳೆದುಕೊಂಡವರು, ಸಾಯದ ಆದರೆ ದಿನದಿನಕ್ಕೂ
ಬಾತುಕೊಳ್ಳುತ್ತಲೇ ಸಣ್ಣಗಾಗುವವರು,
ಅನುಕಂಪಕ್ಕಾಗಿ ತುಡಿಯುವ ಆದರೆ
ಟಾಯ್ಲೆಟ್‌ನ ಗೋಡೆಗಳ ಮುಂದೆ ದಿಢೀರನೇ ದಾರ್ಶನಿಕರಾಗುವವರು,
ಹೀಗೆ ಗೋಡೆ ಬರಹಗಳು
ಆಯಾ ಗುಂಪಿನ ಮನಸ್ಥಿತಿಯನ್ನು ಹಾಡುತ್ತವೆ.
ಅದೇನೇ ಇರಲಿ
ಈ ಬರಹ ಬರೆದವನಿಗೆ
ಒಂದಿಷ್ಟು ಕ್ರೆಡಿಟ್ ಕೊಡಲೇಬೇಕು,
ಕೊನೆ ಪಕ್ಷ ತಿಳಿದುಕೊಳ್ಳಲಿಕ್ಕಾದರೂ
’ಯಾಕೆ? ರಾತ್ರಿ, ಹೀಗೆ ಒಳಗೆ ಇಳಿದು
ತನ್ನ ಉನ್ಮತ್ತ ದಾಸರಿಂದ
ತಪ್ಪುತಪ್ಪಾಗಿ ಬರೆಸುತ್ತದೆ
ಸತ್ಯ ವಚನ’

*****

3. ದುರಂತ

ನಿನ್ನೆ
ನಡು ಮನೆಯಲ್ಲಿರುವ
ಬೆಂಕಿಗೂಡಿನ ಹಿಂದೆ
ಪೆನ್ಸಿಲ್‌ನಲ್ಲಿ ಬರೆದಿರುವ ಒಂದು ಚೀಟಿ ಸಿಕ್ಕಿತು.
ಎಷ್ಟು ಹಳೆಯದೋ ಗೊತ್ತಿಲ್ಲ
ದಿನದ ಗೋಜಲುಗಳ ನಡುವೆ
ತನ್ನ ಪಾಳಿಗಾಗಿ ಕಾತುರದಿಂದ ಕಾಯುವಂತಿತ್ತು.

’ಬಾಸ್ಟರ್ಡ್’ ಹೀಗೆ ಶುರುವಾಗಿತ್ತು
’ಮತ್ತೆಂದೂ ವಾಪಸ್ ಆಗಲಾರೆ
ಇದೇ ಕೊನೆಯ ರಾತ್ರಿ
ಶಾಶ್ವತವಾಗಿ ಬಿಟ್ಟು ಹೋಗುತ್ತಿದ್ದೇನೆ’

ಕೆಳಗೆ ಬರೆದಿರುವ ಹೆಸರನ್ನ
ನನಗೆ ಗುರುತಿಸಲಾಗಲಿಲ್ಲ
ಆ ಸಹಿಯನ್ನ ಮಸಿ ನುಂಗಿ ಹಾಕಿತ್ತು.

ಅದು, ನನಗೇ ಬರೆದಿರುವ ಚೀಟಿ
ಎನ್ನುವ ಗ್ಯಾರಂಟಿ ಕೂಡ ನನಗಿರಲಿಲ್ಲ.
ಬಹುಶಃ ಇರಬಹುದು
ಬಹುಶಃ ಇರಲಿಕ್ಕೂ ಇಲ್ಲ.
ನನಗೆ ಅದು ಗೊತ್ತಾಗಲೂ ಇಲ್ಲ
ನಾನು ಕಾಳಜಿ ಕೂಡ ಮಾಡಲಿಲ್ಲ.

ತಮಾಷೆ ಎಂದರೆ ಒಮ್ಮೊಮ್ಮೆ
ದುರಂತ ಹೀಗೂ ನಡೆದುಹೋಗುತ್ತದೆ
ನಗಿಸದೇ ಅಳಿಸದೆ.
(The tragedy)

*****

4. ಹುಲ್ಲಿನ ಗರಿ

ನಿನ್ನ ಫರ್ಮಾಯಿಶ್ ಕವಿತೆಯಾಗಿತ್ತು,
ನಾನು ಹುಲ್ಲಿನ ಗರಿ ಕೊಟ್ಟೆ.
ಉಹೂಂ,
ಕವಿತೆಯೇ ಬೇಕು ನಿನ್ನ ಹಟ,
ಹುಲ್ಲಿನ ಗರಿ ಸಾಕು ನನ್ನ ವಾದ.

ಮಂಜಿನಲ್ಲಿ ಮಿಂದ ಗರಿ ಎಲ್ಲಕ್ಕಿಂತ ಹೊಸದು
ನನ್ನ ಯಾವ ರೂಪಕಕ್ಕಿಂತಲೂ
ನನ್ನ ಸಮಜಾಯಿಷಿ,
ಆದರೂ ಅದು ಕವಿತೆಯಲ್ಲ…..
ಮುಂದುವರಿದಿದೆ ನಿನ್ನ ಹಟ.

ನಿನಗೆ ಸಿಟ್ಟು
ಹುಲ್ಲಿನ ಗರಿ ಸುಲಭ ಎಂಬ ನಂಬಿಕೆ
ಯಾರೂ ಕೊಡಬಲ್ಲರು ಎಂಬ ತಿಳಿವಳಿಕೆ.

ನಿನ್ನ ಫರ್ಮಾಯಿಶ್ ಕವಿತೆಯಾಗಿತ್ತು
ಹುಲ್ಲಿನ ಗರಿಯನ್ನು
ನಿನಗೆ ಒಪ್ಪಿಸಲಾಗದ ನನ್ನ ಅಸಹಾಯಕತೆಯ ಕುರಿತು
ನಾನೊಂದು ದುರಂತ ಕವಿತೆ ಬರೆದೆ
ಅದರಲ್ಲೊಂದು ಸಾಲಿತ್ತು
ನಿನ್ನ ಬಗ್ಗೆ
ವಯಸ್ಸಾಗುತ್ತಾ ಹೋದಂತೆ
ಹುಲ್ಲಿನ ಗರಿಯನ್ನು
ಒಪ್ಪಿಕೊಳ್ಳದ ನಿನ್ನ ಜಿದ್ದಿನ ಬಗ್ಗೆ.
(Blade of grass)

*****

5. What I need for the present

ಥ್ಯಾಂಕ್ಸ್, ಆದರೆ
ವಾಪಸ್ ತೆಗೆದುಕೊಂಡುಬಿಡು
ಈ ಉಂಗುರ ಮತ್ತು ಅದರ ಬಾಕ್ಸ್,
ಚಿಟ್ಟೆಯ ರೆಕ್ಕೆ ಮತ್ತು ಗಾಜಿನ ಮಣಿಗಳಿಂದ
ಅಲಂಕೃತವಾದ ಈ ಬಣ್ಣದ ಚಿತ್ರ
ಬೇಡ ನನಗೀಗ ಇವೆಲ್ಲ.
ದಯವಿಟ್ಟು, ಈ ಪುಸ್ತಕಗಳು,
ಪೋಸ್ಟ್ ಕಾರ್ಡುಗಳು,
ಜೇನು ಮೇಣದ ಕ್ಯಾಂಡಲ್‌ಗಳು,
ಹೂವಿನ ಕುಂಡಗಳು, ಪೇಂಟಿಂಗ್‌ಗಳು,
ಮತ್ತು ಈ ದುಬಾರಿ ಪೆನ್
ಎಲ್ಲವನ್ನೂ ವಾಪಸ್ ತೆಗೆದುಕೊಂಡುಬಿಡು.

ಹೀಗೆ ಹೇಳುವುದು ಸೌಜನ್ಯ ಅಲ್ಲ ನಿಜ, ಆದರೆ
ಯಾವುದನ್ನು ಕೊಡಲಾಗುವುದಿಲ್ಲವೋ
ಅದರ ಬದಲಿಗೆ ಕೊಡಲಾಗಿದೆ
ಎಂಬಂತಿವೆ ಈ ಉಡುಗೊರೆಗಳು.

ಹೀಗೆ ಹೇಳುವುದು ಸೌಜನ್ಯ ಅಲ್ಲ ನಿಜ, ಆದರೆ
ಈ ಕೋಣೆಯಲ್ಲಿ ಓಡಾಡುವಾಗಲೆಲ್ಲ
ಕಣ್ಣಿಗೆ ಬೀಳುವುದು ಈ ಉಡುಗೊರೆಗಳಲ್ಲ
ಅವುಗಳ ಮೇಲೆ ಧೂಳಿನಂತೆ ಕುಳಿತಿರುವ
ನಿನ್ನ ಗೈರು ಹಾಜರಿ ಮಾತ್ರ.

ದಯವಿಟ್ಟು ಕ್ಷಮಿಸು

ನೀನೇನೊ ಪ್ರೀತಿಯಿಂದಲೇ ಕೊಟ್ಟಿರಬಹುದು, ಆದರೆ
ಸದ್ಯ ಈ ಬೇಡಿಗಳ ತುರ್ತು ನನಗಿಲ್ಲ.

******

ಬ್ರಯಾನ್ ಪ್ಯಾಟನ್

6. She complicates her life

ಅದೇನೋ ಅವಳು
ಎಲ್ಲವನ್ನು ಸುಮ್ಮನೆ ಕಾಂಪ್ಲಿಕೇಟ್ ಮಾಡಿಕೊಳ್ಳುತ್ತಾಳೆ.
ಕೆಲ ಭೂತಗಳು ಅವಳ ದಿನಗಳನ್ನು
ಹಿಡಿದು ಅಲ್ಲಾಡಿಸುತ್ತಿವೆ.

ಪ್ರೇಮ ತಾನಾಗಿಯೇ ಬಂದು, ಕೈಹಿಡಿದು
’ನಿಲ್ಲು’ ಎಂದರೆ
’ಹೋಗು’ ಎಂದು ಕೇಳಿಸಿಕೊಂಡು
ಬೆನ್ನು ತಿರುವಿ ಹೊರಟುಬಿಡುತ್ತಾಳೆ.

ಎಲ್ಲ ಬಾಗಿಲುಗಳನ್ನ ಮುಚ್ಚಿಕೊಂಡಿದ್ದಾಳೆ
ನೋವು ಹೆಚ್ಚಾದಾಗಲೆಲ್ಲ ಹಿಮವಾಗಿಬಿಡುತ್ತಾಳೆ.

*****

7. ತುಂಬಿಕೊಂಡವಳು

ಮೊನ್ನೆ ನಿನ್ನ
ಕಿಟಕಿಯಲ್ಲಿ ನೋಡಿದೆ.
ಅದೇ ಚೆಲುವು, ಅದೇ ಹೊಂಗೂದಲಿನ ಜಡೆ
ಅವೇ ಅಲೌಕಿಕ ನೀಳ ಕಾಲುಗಳು.
ಓಡಿ ಬೀದಿಗೆ ಬಂದವನೇ
ನಿನ್ನ ಹೆಸರಿಟ್ಟು ಕೂಗಿದೆ.
ನೀನು ಹಿಂತಿರುಗಿ ನೋಡಿ
ನನ್ನ ಆತುರಕ್ಕೆ
’ಛೀ’ ಎಂದೆ.
ಹೌದು obviously ಆಕೆ ನೀನಾಗಿರಲಿಲ್ಲ

ಮೂವತ್ತು ವರ್ಷ ಹೇಗೆ ಕಳೆದುಹೋಯಿತೆಂಬುದನ್ನ

ನಾನೂ ಮರೆತುಬಿಟ್ಟಿದ್ದೆ.
ಕ್ಷಮೆ ಕೇಳಿದೆ

“ಸಾರಿ, ಬೇರೆ ಯಾರೋ ಅಂದುಕೊಂಡಿದ್ದೆ” ತೊದಲಿದೆ.
ಆದರೆ ಇದರಲ್ಲಿ ನನ್ನದೇನೂ ಅಂಥ ತಪ್ಪಿಲ್ಲ.
ನಾನು ನೋಡಿದ್ದು,
ನನ್ನೊಳಗೆ ಅಂದು ತುಂಬಿಕೊಂಡಿದ್ದ ನಿನ್ನನ್ನು
ಈ ಹೊತ್ತಿಗೂ.

*****

8. ಪ್ರೇಮ ಪಾಠ

ಹಠಾತ್ ಆಗಿ ಪ್ರೇಮ
ತನ್ನ ಎಲ್ಲ ಹತಾಶೆಗಳಿಂದ ವಾಪಸ್ಸಾಗಿ
ನಿಮ್ಮ ತೋಳಲ್ಲಿ ಹುದುಗಿ, ಮುಲುಕುತ್ತ

“ಇನ್ನು ಎಲ್ಲೂ ಹೋಗಲಾರೆ,
ಬೇರೆ ದೇಹಗಳೆಲ್ಲ ಬಹುತೇಕ ರಾಜಿ ಮಾತ್ರ”

ಎಂದರೆ ಆ ಸುಳ್ಳನ್ನ
ಥಟ್ ಅಂತ ಒಪ್ಪಿಕೊಂಡುಬಿಡುತ್ತೀರಿ ನೀವು
ಅಕಸ್ಮಾತ್ ಜಾಣರಾಗಿದ್ದರೆ.
(Love lesson)

*****

9. ಸಿನಿಕನ ಪ್ರೇಮಗೀತೆ

ಪ್ರೇಮದ ಕೆಲಸವೇ
ಬರೋದು, ಹೋಗೋದು
ಮತ್ತು
ಆಗಾಗ ನಿಲ್ಲೋದು
ಆದರೆ

ಮತ್ತೆ ವಾಪಸ್ ಬರೋದು ಮಾತ್ರ
ಆದ ಅನಾಹುತದ ಪರಿಶೀಲನೆಗೆ

*****

10. ವ್ಯಾಲಂಟೈನ್

ಒಬ್ಬರು ಇನ್ನೊಬ್ಬರ ಜೊತೆ
ಹೀಗೇ ಸದಾ
ಯಾವದೇ ಸಂಶಯ ಇಲ್ಲದೆ
ಇದ್ದುಬಿಡುವ ಆಸೆ ಉಳ್ಳವರು,
(ಮುಂದೆ ಆಗಬಹುದಾದ ದಣಿವಿನ ಬಗ್ಗೆ ಯಾವ ಕಳವಳವೂ ಇಲ್ಲದೆ)

ನನ್ನ ನಿನ್ನ ಹಾಗೆ ಇರುವವರೇ,

ರಾತ್ರಿ ಇಡೀ ಪಿಸುಮಾತಿನಲ್ಲಿ
ಲೋಕದ ಉಸಿರನ್ನು ಜೀವಂತವಾಗಿಟ್ಟವರು,

ಶಾಶ್ವತದ ಮಿತಿಗೆ ಗಾಬರಿಯಾಗಿ
ನೆಲಕ್ಕೆ ಅಂಗುಷ್ಟವ ಒತ್ತಿದವರು,

ಎರಡು ಉಸಿರುಗಳ ನಡುವಿನ ಅಂತರದ ವಿರುದ್ಧ
ಕೋರ್ಟಿನಲ್ಲಿ ಸಾಕ್ಷಿ ಹೇಳಿದವರು.
( A Valentine)

ಕನ್ನಡಕ್ಕೆ: ಚಿದಂಬರ ನರೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...