Homeಮುಖಪುಟಬ್ರಿಟನ್ ಕವಿ ಬ್ರಯಾನ್ ಪ್ಯಾಟನ್ ಅವರ ಹತ್ತು ಪದ್ಯಗಳು

ಬ್ರಿಟನ್ ಕವಿ ಬ್ರಯಾನ್ ಪ್ಯಾಟನ್ ಅವರ ಹತ್ತು ಪದ್ಯಗಳು

- Advertisement -
- Advertisement -

1.ಬೆಳಕಿನವತಾರ

ನನ್ನ ಕನ್ನಡಿಯೊಳಗೆ ನಡೆದು ಬಂದವಳು
ಪ್ರೀತಿ ಮತ್ತು ಅದರ ಇತರ ಉತ್ಪನ್ನಗಳ ಬಗ್ಗೆ
ಚಕಾರ ಎತ್ತುವುದಿಲ್ಲ,
ಸುಮ್ಮನೇ ನಿಂತಿರುತ್ತಾಳೆ,
ತನ್ನ ಮೌನವನ್ನು ತಾನೇ ಸುಖಿಸುತ್ತಾಳೆ,
ನನಗೆ ಗೊತ್ತಿರುವ ಎಲ್ಲ ಋತುಗಳೂ
ತಾನೇ ಎಂಬಂತೆ ಉಟ್ಟು ಮೆರೆಯುತ್ತಾಳೆ,
ಒಂದು ಮೊಲೆಯಲ್ಲಿ ಕಾಡು
ಇನ್ನೊಂದರಲ್ಲಿ ಸಮುದ್ರ ಧರಿಸಿಕೊಂಡಿದ್ದಾಳೆ.

ಯಾವುದೇ ಬೇಡಿಕೆಯಿಲ್ಲ ಅವಳಲ್ಲಿ
ಒಮ್ಮೆ ನೋಡಿದರೆ ಸಾಕು.
ಎಷ್ಟೆಲ್ಲಾ ಬೇಡಿಕೆ.

ಮಾಟ ಎಲ್ಲರ ಹಾಗೇ
ಪ್ರೇಮಕ್ಕೆ ಬೇಕಾದಷ್ಟು, ಸಾಕಾದಷ್ಟು,
ನನ್ನ ಕಟ್ಟಿ ಹಾಕಿರುವುದು ಅದಲ್ಲ,
ಅದರಾಚೆಗಿನ ಬೆಳಗು.

ಒಮ್ಮೊಮ್ಮೆ ನನಗನಿಸುತ್ತದೆ
ನಾನೂ ಹಾಗೇ
ಬೆಳಕಿನವತಾರ.

*****

2. Reading between Graffiti

ಟಾಯ್ಲೆಟ್‌ನ ಗೋಡೆಯ ಮೇಲೆ
ಮಸುಕು ಮಸುಕಾದ ಗೀಚು ಬರಹ,
‘FUCK THE STRANGER TONIGHT’
ಕಳೆದ ವಾರ ಕಣ್ಣಿಗೆ ಬಿದ್ದಿರಲಿಲ್ಲ.
ಬಾಕಿ ಎಲ್ಲ ಲವ್ ಸಿಂಬಲ್‌ಗಳು,
ಕಾಮ ಪ್ರಲಾಪಗಳು, ಉತ್ಕಟ ಹಳಹಳಿಕೆಗಳು
ಈ ಅನಾಮಿಕನ ಸಲಹೆಯ ಮುಂದೆ
ಸಪ್ಪೆ, ಸಪ್ಪೆ ಎನಿಸುವಂತಿದ್ದವು.
ಕಳೆದುಕೊಂಡವರು, ಸಾಯದ ಆದರೆ ದಿನದಿನಕ್ಕೂ
ಬಾತುಕೊಳ್ಳುತ್ತಲೇ ಸಣ್ಣಗಾಗುವವರು,
ಅನುಕಂಪಕ್ಕಾಗಿ ತುಡಿಯುವ ಆದರೆ
ಟಾಯ್ಲೆಟ್‌ನ ಗೋಡೆಗಳ ಮುಂದೆ ದಿಢೀರನೇ ದಾರ್ಶನಿಕರಾಗುವವರು,
ಹೀಗೆ ಗೋಡೆ ಬರಹಗಳು
ಆಯಾ ಗುಂಪಿನ ಮನಸ್ಥಿತಿಯನ್ನು ಹಾಡುತ್ತವೆ.
ಅದೇನೇ ಇರಲಿ
ಈ ಬರಹ ಬರೆದವನಿಗೆ
ಒಂದಿಷ್ಟು ಕ್ರೆಡಿಟ್ ಕೊಡಲೇಬೇಕು,
ಕೊನೆ ಪಕ್ಷ ತಿಳಿದುಕೊಳ್ಳಲಿಕ್ಕಾದರೂ
’ಯಾಕೆ? ರಾತ್ರಿ, ಹೀಗೆ ಒಳಗೆ ಇಳಿದು
ತನ್ನ ಉನ್ಮತ್ತ ದಾಸರಿಂದ
ತಪ್ಪುತಪ್ಪಾಗಿ ಬರೆಸುತ್ತದೆ
ಸತ್ಯ ವಚನ’

*****

3. ದುರಂತ

ನಿನ್ನೆ
ನಡು ಮನೆಯಲ್ಲಿರುವ
ಬೆಂಕಿಗೂಡಿನ ಹಿಂದೆ
ಪೆನ್ಸಿಲ್‌ನಲ್ಲಿ ಬರೆದಿರುವ ಒಂದು ಚೀಟಿ ಸಿಕ್ಕಿತು.
ಎಷ್ಟು ಹಳೆಯದೋ ಗೊತ್ತಿಲ್ಲ
ದಿನದ ಗೋಜಲುಗಳ ನಡುವೆ
ತನ್ನ ಪಾಳಿಗಾಗಿ ಕಾತುರದಿಂದ ಕಾಯುವಂತಿತ್ತು.

’ಬಾಸ್ಟರ್ಡ್’ ಹೀಗೆ ಶುರುವಾಗಿತ್ತು
’ಮತ್ತೆಂದೂ ವಾಪಸ್ ಆಗಲಾರೆ
ಇದೇ ಕೊನೆಯ ರಾತ್ರಿ
ಶಾಶ್ವತವಾಗಿ ಬಿಟ್ಟು ಹೋಗುತ್ತಿದ್ದೇನೆ’

ಕೆಳಗೆ ಬರೆದಿರುವ ಹೆಸರನ್ನ
ನನಗೆ ಗುರುತಿಸಲಾಗಲಿಲ್ಲ
ಆ ಸಹಿಯನ್ನ ಮಸಿ ನುಂಗಿ ಹಾಕಿತ್ತು.

ಅದು, ನನಗೇ ಬರೆದಿರುವ ಚೀಟಿ
ಎನ್ನುವ ಗ್ಯಾರಂಟಿ ಕೂಡ ನನಗಿರಲಿಲ್ಲ.
ಬಹುಶಃ ಇರಬಹುದು
ಬಹುಶಃ ಇರಲಿಕ್ಕೂ ಇಲ್ಲ.
ನನಗೆ ಅದು ಗೊತ್ತಾಗಲೂ ಇಲ್ಲ
ನಾನು ಕಾಳಜಿ ಕೂಡ ಮಾಡಲಿಲ್ಲ.

ತಮಾಷೆ ಎಂದರೆ ಒಮ್ಮೊಮ್ಮೆ
ದುರಂತ ಹೀಗೂ ನಡೆದುಹೋಗುತ್ತದೆ
ನಗಿಸದೇ ಅಳಿಸದೆ.
(The tragedy)

*****

4. ಹುಲ್ಲಿನ ಗರಿ

ನಿನ್ನ ಫರ್ಮಾಯಿಶ್ ಕವಿತೆಯಾಗಿತ್ತು,
ನಾನು ಹುಲ್ಲಿನ ಗರಿ ಕೊಟ್ಟೆ.
ಉಹೂಂ,
ಕವಿತೆಯೇ ಬೇಕು ನಿನ್ನ ಹಟ,
ಹುಲ್ಲಿನ ಗರಿ ಸಾಕು ನನ್ನ ವಾದ.

ಮಂಜಿನಲ್ಲಿ ಮಿಂದ ಗರಿ ಎಲ್ಲಕ್ಕಿಂತ ಹೊಸದು
ನನ್ನ ಯಾವ ರೂಪಕಕ್ಕಿಂತಲೂ
ನನ್ನ ಸಮಜಾಯಿಷಿ,
ಆದರೂ ಅದು ಕವಿತೆಯಲ್ಲ…..
ಮುಂದುವರಿದಿದೆ ನಿನ್ನ ಹಟ.

ನಿನಗೆ ಸಿಟ್ಟು
ಹುಲ್ಲಿನ ಗರಿ ಸುಲಭ ಎಂಬ ನಂಬಿಕೆ
ಯಾರೂ ಕೊಡಬಲ್ಲರು ಎಂಬ ತಿಳಿವಳಿಕೆ.

ನಿನ್ನ ಫರ್ಮಾಯಿಶ್ ಕವಿತೆಯಾಗಿತ್ತು
ಹುಲ್ಲಿನ ಗರಿಯನ್ನು
ನಿನಗೆ ಒಪ್ಪಿಸಲಾಗದ ನನ್ನ ಅಸಹಾಯಕತೆಯ ಕುರಿತು
ನಾನೊಂದು ದುರಂತ ಕವಿತೆ ಬರೆದೆ
ಅದರಲ್ಲೊಂದು ಸಾಲಿತ್ತು
ನಿನ್ನ ಬಗ್ಗೆ
ವಯಸ್ಸಾಗುತ್ತಾ ಹೋದಂತೆ
ಹುಲ್ಲಿನ ಗರಿಯನ್ನು
ಒಪ್ಪಿಕೊಳ್ಳದ ನಿನ್ನ ಜಿದ್ದಿನ ಬಗ್ಗೆ.
(Blade of grass)

*****

5. What I need for the present

ಥ್ಯಾಂಕ್ಸ್, ಆದರೆ
ವಾಪಸ್ ತೆಗೆದುಕೊಂಡುಬಿಡು
ಈ ಉಂಗುರ ಮತ್ತು ಅದರ ಬಾಕ್ಸ್,
ಚಿಟ್ಟೆಯ ರೆಕ್ಕೆ ಮತ್ತು ಗಾಜಿನ ಮಣಿಗಳಿಂದ
ಅಲಂಕೃತವಾದ ಈ ಬಣ್ಣದ ಚಿತ್ರ
ಬೇಡ ನನಗೀಗ ಇವೆಲ್ಲ.
ದಯವಿಟ್ಟು, ಈ ಪುಸ್ತಕಗಳು,
ಪೋಸ್ಟ್ ಕಾರ್ಡುಗಳು,
ಜೇನು ಮೇಣದ ಕ್ಯಾಂಡಲ್‌ಗಳು,
ಹೂವಿನ ಕುಂಡಗಳು, ಪೇಂಟಿಂಗ್‌ಗಳು,
ಮತ್ತು ಈ ದುಬಾರಿ ಪೆನ್
ಎಲ್ಲವನ್ನೂ ವಾಪಸ್ ತೆಗೆದುಕೊಂಡುಬಿಡು.

ಹೀಗೆ ಹೇಳುವುದು ಸೌಜನ್ಯ ಅಲ್ಲ ನಿಜ, ಆದರೆ
ಯಾವುದನ್ನು ಕೊಡಲಾಗುವುದಿಲ್ಲವೋ
ಅದರ ಬದಲಿಗೆ ಕೊಡಲಾಗಿದೆ
ಎಂಬಂತಿವೆ ಈ ಉಡುಗೊರೆಗಳು.

ಹೀಗೆ ಹೇಳುವುದು ಸೌಜನ್ಯ ಅಲ್ಲ ನಿಜ, ಆದರೆ
ಈ ಕೋಣೆಯಲ್ಲಿ ಓಡಾಡುವಾಗಲೆಲ್ಲ
ಕಣ್ಣಿಗೆ ಬೀಳುವುದು ಈ ಉಡುಗೊರೆಗಳಲ್ಲ
ಅವುಗಳ ಮೇಲೆ ಧೂಳಿನಂತೆ ಕುಳಿತಿರುವ
ನಿನ್ನ ಗೈರು ಹಾಜರಿ ಮಾತ್ರ.

ದಯವಿಟ್ಟು ಕ್ಷಮಿಸು

ನೀನೇನೊ ಪ್ರೀತಿಯಿಂದಲೇ ಕೊಟ್ಟಿರಬಹುದು, ಆದರೆ
ಸದ್ಯ ಈ ಬೇಡಿಗಳ ತುರ್ತು ನನಗಿಲ್ಲ.

******

ಬ್ರಯಾನ್ ಪ್ಯಾಟನ್

6. She complicates her life

ಅದೇನೋ ಅವಳು
ಎಲ್ಲವನ್ನು ಸುಮ್ಮನೆ ಕಾಂಪ್ಲಿಕೇಟ್ ಮಾಡಿಕೊಳ್ಳುತ್ತಾಳೆ.
ಕೆಲ ಭೂತಗಳು ಅವಳ ದಿನಗಳನ್ನು
ಹಿಡಿದು ಅಲ್ಲಾಡಿಸುತ್ತಿವೆ.

ಪ್ರೇಮ ತಾನಾಗಿಯೇ ಬಂದು, ಕೈಹಿಡಿದು
’ನಿಲ್ಲು’ ಎಂದರೆ
’ಹೋಗು’ ಎಂದು ಕೇಳಿಸಿಕೊಂಡು
ಬೆನ್ನು ತಿರುವಿ ಹೊರಟುಬಿಡುತ್ತಾಳೆ.

ಎಲ್ಲ ಬಾಗಿಲುಗಳನ್ನ ಮುಚ್ಚಿಕೊಂಡಿದ್ದಾಳೆ
ನೋವು ಹೆಚ್ಚಾದಾಗಲೆಲ್ಲ ಹಿಮವಾಗಿಬಿಡುತ್ತಾಳೆ.

*****

7. ತುಂಬಿಕೊಂಡವಳು

ಮೊನ್ನೆ ನಿನ್ನ
ಕಿಟಕಿಯಲ್ಲಿ ನೋಡಿದೆ.
ಅದೇ ಚೆಲುವು, ಅದೇ ಹೊಂಗೂದಲಿನ ಜಡೆ
ಅವೇ ಅಲೌಕಿಕ ನೀಳ ಕಾಲುಗಳು.
ಓಡಿ ಬೀದಿಗೆ ಬಂದವನೇ
ನಿನ್ನ ಹೆಸರಿಟ್ಟು ಕೂಗಿದೆ.
ನೀನು ಹಿಂತಿರುಗಿ ನೋಡಿ
ನನ್ನ ಆತುರಕ್ಕೆ
’ಛೀ’ ಎಂದೆ.
ಹೌದು obviously ಆಕೆ ನೀನಾಗಿರಲಿಲ್ಲ

ಮೂವತ್ತು ವರ್ಷ ಹೇಗೆ ಕಳೆದುಹೋಯಿತೆಂಬುದನ್ನ

ನಾನೂ ಮರೆತುಬಿಟ್ಟಿದ್ದೆ.
ಕ್ಷಮೆ ಕೇಳಿದೆ

“ಸಾರಿ, ಬೇರೆ ಯಾರೋ ಅಂದುಕೊಂಡಿದ್ದೆ” ತೊದಲಿದೆ.
ಆದರೆ ಇದರಲ್ಲಿ ನನ್ನದೇನೂ ಅಂಥ ತಪ್ಪಿಲ್ಲ.
ನಾನು ನೋಡಿದ್ದು,
ನನ್ನೊಳಗೆ ಅಂದು ತುಂಬಿಕೊಂಡಿದ್ದ ನಿನ್ನನ್ನು
ಈ ಹೊತ್ತಿಗೂ.

*****

8. ಪ್ರೇಮ ಪಾಠ

ಹಠಾತ್ ಆಗಿ ಪ್ರೇಮ
ತನ್ನ ಎಲ್ಲ ಹತಾಶೆಗಳಿಂದ ವಾಪಸ್ಸಾಗಿ
ನಿಮ್ಮ ತೋಳಲ್ಲಿ ಹುದುಗಿ, ಮುಲುಕುತ್ತ

“ಇನ್ನು ಎಲ್ಲೂ ಹೋಗಲಾರೆ,
ಬೇರೆ ದೇಹಗಳೆಲ್ಲ ಬಹುತೇಕ ರಾಜಿ ಮಾತ್ರ”

ಎಂದರೆ ಆ ಸುಳ್ಳನ್ನ
ಥಟ್ ಅಂತ ಒಪ್ಪಿಕೊಂಡುಬಿಡುತ್ತೀರಿ ನೀವು
ಅಕಸ್ಮಾತ್ ಜಾಣರಾಗಿದ್ದರೆ.
(Love lesson)

*****

9. ಸಿನಿಕನ ಪ್ರೇಮಗೀತೆ

ಪ್ರೇಮದ ಕೆಲಸವೇ
ಬರೋದು, ಹೋಗೋದು
ಮತ್ತು
ಆಗಾಗ ನಿಲ್ಲೋದು
ಆದರೆ

ಮತ್ತೆ ವಾಪಸ್ ಬರೋದು ಮಾತ್ರ
ಆದ ಅನಾಹುತದ ಪರಿಶೀಲನೆಗೆ

*****

10. ವ್ಯಾಲಂಟೈನ್

ಒಬ್ಬರು ಇನ್ನೊಬ್ಬರ ಜೊತೆ
ಹೀಗೇ ಸದಾ
ಯಾವದೇ ಸಂಶಯ ಇಲ್ಲದೆ
ಇದ್ದುಬಿಡುವ ಆಸೆ ಉಳ್ಳವರು,
(ಮುಂದೆ ಆಗಬಹುದಾದ ದಣಿವಿನ ಬಗ್ಗೆ ಯಾವ ಕಳವಳವೂ ಇಲ್ಲದೆ)

ನನ್ನ ನಿನ್ನ ಹಾಗೆ ಇರುವವರೇ,

ರಾತ್ರಿ ಇಡೀ ಪಿಸುಮಾತಿನಲ್ಲಿ
ಲೋಕದ ಉಸಿರನ್ನು ಜೀವಂತವಾಗಿಟ್ಟವರು,

ಶಾಶ್ವತದ ಮಿತಿಗೆ ಗಾಬರಿಯಾಗಿ
ನೆಲಕ್ಕೆ ಅಂಗುಷ್ಟವ ಒತ್ತಿದವರು,

ಎರಡು ಉಸಿರುಗಳ ನಡುವಿನ ಅಂತರದ ವಿರುದ್ಧ
ಕೋರ್ಟಿನಲ್ಲಿ ಸಾಕ್ಷಿ ಹೇಳಿದವರು.
( A Valentine)

ಕನ್ನಡಕ್ಕೆ: ಚಿದಂಬರ ನರೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...