Homeಚಳವಳಿಕ್ರಾಂತಿಕಾರಿ ಗುಣಸ್ವಭಾವ: ಭಾಗ-2; ಕ್ರಾಂತಿಯನ್ನು ಹೇಗೆ ವ್ಯಾಖ್ಯಾನಿಸಬಹುದು?

ಕ್ರಾಂತಿಕಾರಿ ಗುಣಸ್ವಭಾವ: ಭಾಗ-2; ಕ್ರಾಂತಿಯನ್ನು ಹೇಗೆ ವ್ಯಾಖ್ಯಾನಿಸಬಹುದು?

- Advertisement -
- Advertisement -

ನಾವು ಒಂದು ಕ್ರಾಂತಿಯನ್ನು ಪದಕೋಶದ ಅರ್ಥದಲ್ಲಿ- ಸರಳವಾಗಿ, ಈಗಿರುವ ಸರಕಾರವನ್ನು ಶಾಂತಿಯುತವಾಗಿ ಅಥವಾ ಹಿಂಸಾತ್ಮಕವಾಗಿ ಕಿತ್ತೆಸೆಯುವುದು ಮತ್ತದರ ಜಾಗದಲ್ಲಿ ಹೊಸ ಸರಕಾರವೊಂದನ್ನು ಸ್ಥಾಪಿಸುವುದು ಎಂದು ಹೇಳುವುದರ ಮೂಲಕ ವ್ಯಾಖ್ಯಾನಿಸಬಹುದು. ಖಂಡಿತವಾಗಿಯೂ ಇದೊಂದು ಬಹಳ ಔಪಚಾರಿಕ ರಾಜಕೀಯ ವ್ಯಾಖ್ಯಾನವಾದರೂ, ನಿರ್ದಿಷ್ಟವಾಗಿ ಅಷ್ಟೇನೂ ಅರ್ಥಪೂರ್ಣವಲ್ಲ. ನಾವು ಒಂದು ರೀತಿಯ ಹೆಚ್ಚು ಮಾರ್ಕ್ಸ್‌ವಾದಿ ಅರ್ಥದಲ್ಲಿ ಒಂದು ಕ್ರಾಂತಿಯನ್ನು, ಅಸ್ತಿತ್ವದಲ್ಲಿರುವ ವ್ಯವಸ್ಥೆಯೊಂದನ್ನು ಹೆಚ್ಚು ಪ್ರಗತಿಪರವಾದ ವ್ಯವಸ್ಥೆಯಿಂದ ಬದಲಿಸುವುದು ಎಂದು ವ್ಯಾಖ್ಯಾನಿಸಬಹುದು. ಖಂಡಿತವಾಗಿಯೂ ಇಲ್ಲಿ ಪ್ರಶ್ನೆಯೊಂದು ಯಾವಾಗಲೂ ಏಳುತ್ತದೆ; ಏನೆಂದರೆ, ಯಾವುದು “ಐತಿಹಾಸಿಕವಾಗಿ ಹೆಚ್ಚು ಪ್ರಗತಿಪರ” ಎಂಬುದನ್ನು ನಿರ್ಧರಿಸುವವರು ಯಾರು ಎಂಬುದು. ಸಾಮಾನ್ಯವಾಗಿ- ಕನಿಷ್ಟ ಪಕ್ಷ ತಮ್ಮತಮ್ಮ ದೇಶದಲ್ಲಾದರೂ- ಅದು ಗೆದ್ದವರೇ ಆಗಿರುತ್ತಾರೆ.

ಅಂತಿಮವಾಗಿ, ಒಂದು ಕ್ರಾಂತಿಯನ್ನು ಕ್ರಾಂತಿಕಾರಿ ಗುಣಸ್ವಭಾವ ಹೊಂದಿರುವವರ ನೇತೃತ್ವವಿರುವ, ಕ್ರಾಂತಿಕಾರಿ ಗುಣಸ್ವಭಾವದ ಜನರನ್ನು ಆಕರ್ಷಿಸುವ ಒಂದು ರಾಜಕೀಯ ಚಳವಳಿ ಎಂದು ಹೇಳುವ ಮೂಲಕ ನಾವು ಮನಃಶಾಸ್ತ್ರೀಯ ಅರ್ಥದಲ್ಲಿ ವ್ಯಾಖ್ಯಾನಿಸಬಹುದು.

ಅದು, ಖಂಡಿತವಾಗಿಯೂ, ಅಂತಾ ಉತ್ತಮ ವ್ಯಾಖ್ಯಾನವೇನಲ್ಲವಾದರೂ, ಈ ಪ್ರಬಂಧದ ನಿಲುವಿನಿಂದ ನೋಡಿದಲ್ಲಿ, ಒಂದು ಉಪಯುಕ್ತ ಹೇಳಿಕೆಯಾಗಿದ್ದು, ಈಗ ಚರ್ಚಿಸಲಿರುವ ಪ್ರಶ್ನೆಯ ಮೇಲೆ ಎಲ್ಲಾ ಒತ್ತನ್ನು ನೀಡುತ್ತದೆ: ಅದೆಂದರೆ, ಯಾವುದು ಕ್ರಾಂತಿಕಾರಿ ಗುಣಸ್ವಭಾವ?

“ಕ್ರಾಂತಿಕಾರಿ ಗುಣಸ್ವಭಾವ”ದ ಅತ್ಯಂತ ಮೂಲಭೂತ ಗುಣಲಕ್ಷಣ ಎಂದರೆ, ಆತ ಸ್ವತಂತ್ರ ಮತ್ತು ಮುಕ್ತ. ಸ್ವಾತಂತ್ರ್ಯ ಎಂದರೆ, ಮೇಲಿರುವ ಬಲಶಾಲಿಗಳಿಗೆ ಸಹವಾಸದ ನಿಷ್ಠೆಯ ಮತ್ತು ನಾನು ಹಿಂದೆ ಸರ್ವಾಧಿಕಾರಿ ಗುಣಸ್ವಭಾವದ ಕುರಿತು ಮಾತನಾಡುವಾಗ ವಿವರಿಸಿದ ತಮಗಿಂತ ಕೆಳಗಿರುವ ಬಲಹೀನರ ಬಗೆಗಿನ ನಿಷ್ಠೆಯ ತದ್ವಿರುದ್ಧವಾದದ್ದು ಎಂದು ಮನಗಾಣುವುದು ಸುಲಭ.

ಆದರೆ, ಇದು “ಮುಕ್ತತೆ” ಮತ್ತು “ಸ್ವಾತಂತ್ರ್ಯ” (ಇಂಡಿಪೆಂಡೆನ್ಸ್ ಮತ್ತು ಫ್ರೀಡಂ) ಎಂದರೆ ಏನು ಎಂಬುದನ್ನು ಸಾಕಷ್ಟು ಸ್ಪಷ್ಟಪಡಿಸುವುದಿಲ್ಲ. ಸಮಸ್ಯೆ ಇರುವುದು ನಿರ್ದಿಷ್ಟವಾಗಿ “ಫ್ರೀಡಂ” ಮತ್ತು “ಇಂಡಿಪೆಂಡೆನ್ಸ್” ಎಂಬ ಪದಗಳನ್ನು ಇಂದು ಪ್ರಜಾಪ್ರಭುತ್ವ ವ್ಯವಸ್ಥೆಯೊಂದರಲ್ಲಿ ಪ್ರತಿಯೊಬ್ಬರೂ ಮುಕ್ತರು ಮತ್ತು ಸ್ವತಂತ್ರರು ಎಂಬ ಅರ್ಥದಲ್ಲಿ ಬಳಸಲಾಗುತ್ತಿದೆ. (ಕನ್ನಡದಲ್ಲಿ ಎರಡೂ ಪದಗಳನ್ನು ಹೆಚ್ಚು ಕಡಿಮೆ ಒಂದೇ ಅರ್ಥದಲ್ಲಿ ಬಳಸಲಾಗುತ್ತಿದೆ- ಅನುವಾದಕನ ಟಿಪ್ಪಣಿ). ಈ ಎರಡೂ ಪದಗಳ ಪರಿಕಲ್ಪನೆಯ ಬೇರು ಇರುವುದು ಊಳಿಗಮಾನ್ಯ (ಫ್ಯೂಡಲ್) ವ್ಯವಸ್ಥೆಯ ವಿರುದ್ಧ ಮಧ್ಯಮ ವರ್ಗದ ಕ್ರಾಂತಿಯಲ್ಲಿ ಮತ್ತು ಅವುಗಳನ್ನು ಪ್ರಭುತ್ವಗಳ ತದ್ವಿರುದ್ಧವಾಗಿ ಇಟ್ಟು ನೋಡುವುದರಿಂದ ಅವು ಹೊಸ ಶಕ್ತಿಯನ್ನು ಪಡೆದುಕೊಂಡಿವೆ.

ಇದನ್ನೂ ಓದಿ: ಅನುವಾದ; ಕ್ರಾಂತಿಕಾರಿ ಗುಣಸ್ವಭಾವ-ಎರಿಕ್ ಫ್ರಾಮ್ ; ಭಾಗ-1

ಊಳಿಗಮಾನ್ಯ ಮತ್ತು ರಾಜಾಡಳಿತದ ಸರ್ವಾಧಿಕಾರದ ವ್ಯವಸ್ಥೆಯ ಕಾಲದಲ್ಲಿ, ವ್ಯಕ್ತಿಯು ಮುಕ್ತನಾಗಲೀ, ಸ್ವತಂತ್ರನಾಗಲೀ ಆಗಿರಲಿಲ್ಲ. ಆತ ತನಗಿಂತಲೂ ಮೇಲಿನವರ ಸಾಂಪ್ರದಾಯಿಕ ಅಥವಾ ನಿರಂಕುಶ ನಿಯಮ, ಕಾನೂನು ಮತ್ತು ಆಜ್ಞೆಗಳಿಗೆ ಅಧೀನನಾಗಿದ್ದ. ಯೂರೋಪ್ ಮತ್ತು ಅಮೆರಿಕಾದಲ್ಲಿ ಬೂರ್ಜ್ವಾ (bourgeois, ಮಧ್ಯಮ ವರ್ಗ) ಕ್ರಾಂತಿಗಳು ವ್ಯಕ್ತಿಗೆ ರಾಜಕೀಯ ಮುಕ್ತತೆ ಮತ್ತು ಸ್ವಾತಂತ್ರ್ಯವನ್ನು ತಂದುಕೊಟ್ಟವು.

ಈ ಸ್ವಾತಂತ್ರ್ಯವು “ಒಂದದಿಂದ ಸ್ವಾತಂತ್ರ್ಯ” ಆಗಿತ್ತು. ಅಂದರೆ, ರಾಜಕೀಯ ಅಧಿಕಾರಸ್ಥರಿಂದ ಸ್ವಾತಂತ್ರ್ಯ ಆಗಿತ್ತು. ಇಂದಿನ ಕೈಗಾರಿಕಾವಾದವು ಹೊಸ ರೀತಿಯ ಅಧಿಕಾರಶಾಹಿಗಳಲ್ಲಿ ಸಾಮಾನ್ಯರಿಗೆ ಹೊಸ ರೀತಿಯ ಅವಲಂಬನೆಗಳನ್ನು ಸೃಷ್ಟಿಸಿದ್ದರೂ, ಇದೊಂದು ಪ್ರಮುಖ ಬೆಳವಣಿಗೆಯಾಗಿತ್ತು, ಏಕೆಂದರೆ ಇದಕ್ಕೆ ವ್ಯತಿರಿಕ್ತವಾಗಿ ಕೈಗಾರಿಕಾವಾದವು ಹತ್ತೊಂಭತ್ತನೇ ಶತಮಾನದಲ್ಲಿ ವ್ಯಾಪಾರಿಗಳಿಗೆ ಅನಿಯಮಿತ ಅವಕಾಶ ಮತ್ತು ಸ್ವಾತಂತ್ರ್ಯವನ್ನು ಒದಗಿಸಿತ್ತು.

ಏನಿದ್ದರೂ, ಮುಕ್ತತೆ ಮತ್ತು ಸ್ವಾತಂತ್ರ್ಯದ ಸಮಸ್ಯೆಯು ಮೇಲೆ ಹೇಳಿದ ಅರ್ಥದ ಮುಕ್ತತೆ ಮತ್ತು ಸ್ವಾತಂತ್ರ್ಯಕ್ಕಿಂತ ಹೆಚ್ಚು ಆಳವಾಗಿದೆ. ವಾಸ್ತವದಲ್ಲಿ, ಸ್ವಾತಂತ್ರ್ಯದ ಸಮಸ್ಯೆಯು ಮಾನವ ಅಭಿವೃದ್ಧಿಯ ಆತ್ಯಂತ ಮೂಲಭೂತ ಅಂಶಗಳಲ್ಲಿ ಒಂದು- ನಾವು ಅದನ್ನು ಅದರ ಸಂಪೂರ್ಣ ಆಳ ಮತ್ತು ಅಗಲದಲ್ಲಿ ನೋಡಿದಲ್ಲಿ ಮಾತ್ರ.

ಆಗ ತಾನೇ ಹುಟ್ಟಿದ ಶಿಶು ತನ್ನ ಪರಿಸರದೊಂದಿಗೆ ಒಂದಾಗಿರುತ್ತದೆ. ಅದಕ್ಕೆ ಹೊರಗಿನ ಪ್ರಪಂಚವು ಆಗಿನ್ನೂ, ತನ್ನಿಂದ ಪ್ರತ್ಯೇಕವಾದ ಒಂದು ವಾಸ್ತವವಾಗಿ ಅಸ್ತಿತ್ವದಲ್ಲಿ ಇರುವುದಿಲ್ಲ. ಆಗಲೂ ಕೂಡಾ ಶಿಶುವು ತನ್ನಿಂದ ಹೊರಗಿರುವ ವಸ್ತುಗಳನ್ನು ಗುರುತಿಸಬಲ್ಲದು. ಹಾಗಿದ್ದೂ, ಅದು ಇನ್ನೂ ಬಹಳ ಕಾಲ ಅಸಹಾಯಕವಾಗಿರುತ್ತದೆ ಮತ್ತು ತನ್ನ ತಂದೆ, ತಾಯಿಯ ನೆರವಿಲ್ಲದೆ ಬದುಕಿ ಉಳಿಯಲಾರದು. ಇತರ ಎಳೆಯ ಪ್ರಾಣಿಗಳಿಗೆ ವ್ಯತಿರಿಕ್ತವಾಗಿ, ಮಾನವನ ಈ ದೀರ್ಘಕಾಲದ ಅಸಹಾಯಕತೆಯು ಅದರ ಬೆಳವಣಿಗೆಗೆ ಒಂದು ತಳಹದಿಯಾಗಿದ್ದರೂ, ಅದು ಅದಕ್ಕೆ ಅಧಿಕಾರವನ್ನು ಅವಲಂಬಿಸಿರಲು ಮತ್ತು ಅಧಿಕಾರಕ್ಕೆ ಭಯಪಡಲು ಕಲಿಸುತ್ತದೆ.

ಸಾಮಾನ್ಯವಾಗಿ ಹುಟ್ಟಿನಿಂದ ಪ್ರೌಢಾವಸ್ಥೆಯ ತನಕದ ವರ್ಷಗಳಲ್ಲಿ ಅಧಿಕಾರವನ್ನು ಪ್ರತಿನಿಧಿಸುವವರು ಹೆತ್ತವರಾಗಿರುತ್ತಾರೆ ಮತ್ತು ಅದು ಇಬ್ಬಗೆಯ ಆಯಾಮಗಳನ್ನು ಹೊಂದಿರುತ್ತದೆ: ನೆರವಾಗುವುದು ಮತ್ತು ಶಿಕ್ಷಿಸುವುದು. ಒಬ್ಬ ಎಳೆಯ ವ್ಯಕ್ತಿ ಪ್ರೌಢಾವಸ್ಥೆಗೆ ತಲಪುವ ಕಾಲದ ಆಸುಪಾಸಿನಲ್ಲಿ ತನ್ನನ್ನು ತಾನೇ ರಕ್ಷಿಸಿಕೊಳ್ಳಬಲ್ಲಂತ ಅಭಿವೃದ್ಧಿಯ ಹಂತ ತಲಪಿರುತ್ತಾನೆ (ಖಂಡಿತವಾಗಿಯೂ, ಸರಳ ಬೇಸಾಯಗಾರ ಸಮಾಜಗಳಲ್ಲಿ.) ಮತ್ತು ಇನ್ನೂ ತನ್ನ ಸಾಮಾಜಿಕ ಅಸ್ತಿತ್ವಕ್ಕಾಗಿ ಹೆತ್ತವರ ಋಣದಲ್ಲಿ ಇರಬೇಕಾದ ಅಗತ್ಯವಿರುವುದಿಲ್ಲ. ಆತ ಆರ್ಥಿಕವಾಗಿ ಅವರಿಂದ ಸ್ವತಂತ್ರನಾಗಿರಬಹುದು. ಹಲವು ಪ್ರಾಚೀನ ಸಮಾಜಗಳಲ್ಲಿ ಈ ಸ್ವಾತಂತ್ರ್ಯವನ್ನು (ಮುಖ್ಯವಾಗಿ ತಾಯಿಯಿಂದ) ದೀಕ್ಷೆಯ ವಿಧಿವಿಧಾನಗಳ ಮೂಲಕ ಅಭಿವ್ಯಕ್ತಿಸಲಾಗುತ್ತದೆ. ಆದರೆ, ಅವು ತನ್ನ ಕುಲದ ಮೇಲಿನ ಅಥವಾ ಅದರ ಗಂಡು ಅಂಶದ ಮೇಲಿನ ಅವಲಂಬನೆಯನ್ನು ಮುಟ್ಟಲು ಹೋಗುವುದಿಲ್ಲ. ಲೈಂಗಿಕವಾಗಿ ಪ್ರೌಢವಾಗುವುದು ಕೂಡಾ ಹೆತ್ತವರಿಂದ ಬಿಡುಗಡೆಯ ಪ್ರಕ್ರಿಯೆಯನ್ನು ಮುನ್ನಡೆಸುವ ಇನ್ನೊಂದು ಅಂಶವಾಗಿದೆ. ಲೈಂಗಿಕ ಬಯಕೆ ಮತ್ತು ಲೈಂಗಿಕ ತೃಪ್ತಿಯು ಒಬ್ಬ ವ್ಯಕ್ತಿಯನ್ನು ತನ್ನ ಕುಟುಂಬದ ಹೊರಗಿನವರ ಜೊತೆಗೆ ಕಟ್ಟಿಹಾಕುತ್ತದೆ. ಸ್ವತಃ ಲೈಂಗಿಕ ಕ್ರಿಯೆಯಲ್ಲಿ ಮಾತ್ರ- ತಂದೆಯಾಗಲೀ, ತಾಯಿಯಾಗಲೀ ನೆರವಾಗಲು ಸಾಧ್ಯವಿಲ್ಲ ಮತ್ತು ಇದರಲ್ಲಿ ಯುವ ವ್ಯಕ್ತಿ ತನ್ನ ದಾರಿ ಹುಡುಕಿಕೊಳ್ಳುತ್ತಾನೆ.

ಇದನ್ನೂ ಓದಿ: EWS: ದಲಿತ-ಶೂದ್ರರ ಮೀಸಲಾತಿಯ ಕ್ರಾಂತಿಗೆ ಬ್ರಾಹ್ಮಣ್ಯದ ಪ್ರತಿಕ್ರಾಂತಿ

ಪ್ರೌಢಾವಸ್ಥೆಗೆ ತಲಪಿದ ನಂತರದ ಐದು ಅಥವಾ ಹತ್ತು ವರ್ಷಗಳ ತನಕ ಲೈಂಗಿಕ ತೃಪ್ತಿಯನ್ನು ಮುಂದೂಡಲಾಗುವ ಸಮಾಜಗಳಲ್ಲಿ ಕೂಡಾ, ಎಚ್ಚೆತ್ತ ಲೈಂಗಿಕ ಬಯಕೆಯು ಸ್ವಾತಂತ್ರ್ಯಕ್ಕಾಗಿ ಹಂಬಲವನ್ನು ಹುಟ್ಟಿಸುತ್ತದೆ ಮತ್ತು ಹೆತ್ತವರ ಮತ್ತು ಸಾಮಾಜಿಕ ಅಧಿಕಾರಗಳ ಜೊತೆಗೆ ಸಂಘರ್ಷಗಳನ್ನುಂಟುಮಾಡುತ್ತದೆ. ಸಹಜ ವ್ಯಕ್ತಿಗಳು ಪ್ರೌಢಾವಸ್ಥೆಯ ನಂತರದ ಈ ವರ್ಷಗಳಲ್ಲಿ ಈ ಮಟ್ಟದ ಸ್ವಾತಂತ್ರ್ಯವನ್ನು ಪಡೆಯುತ್ತಾರೆ. ಆದರೆ, ಆತ ಸ್ವಂತ ಸಂಪಾದನೆ ಮಾಡಿ ಜೀವನ ನಡೆಸಿದರೂ, ಮದುವೆಯಾಗಿ ಸ್ವಂತ ಮಕ್ಕಳನ್ನು ಸಾಕಿದರೂ, ಆತ ನಿಜವಾಗಿಯೂ ಮುಕ್ತ ಮತ್ತು ಸ್ವತಂತ್ರನಾಗುವುದಿಲ್ಲ.

ಅವನು ಇನ್ನೂ ಬಹುತೇಕ ಅಸಹಾಯಕನಾದ ಮತ್ತು ತನ್ನನ್ನು ರಕ್ಷಿಸಿಕೊಳ್ಳಲು, ತನಗೊಂದು ಖಾತರಿ, ಸ್ಥಿರತೆ ನೀಡುವಂತ ಅಧಿಕಾರವನ್ನು ಹುಡುಕಲು ಯತ್ನಿಸುತ್ತಿರುವ ಒಬ್ಬ ವಯಸ್ಕ ವ್ಯಕ್ತಿ ಮಾತ್ರ. ಈ ಸಹಾಯಕ್ಕೆ ಬದಲಾಗಿ ನೀಡುವ ಬೆಲೆಯಾಗಿ- ಆತ ತನ್ನನ್ನು ಅವರ (ಅಧಿಕಾರಸ್ಥರ) ಅವಲಂಬಿತನನ್ನಾಗಿ ಮಾಡಿಕೊಳ್ಳುತ್ತಾನೆ, ತನ್ನ ಸ್ವಾತಂತ್ರ್ಯವನ್ನು ಕಳೆದುಕೊಳ್ಳುತ್ತಾನೆ ಮತ್ತು ತನ್ನ ಬೆಳವಣಿಗೆಯ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತಾನೆ. ಅವನು ತನ್ನ ಯೋಚನೆ, ಚಿಂತನೆಗಳನ್ನು ಅವರಿಂದ ಎರವಲು ಪಡೆಯುತ್ತಾನೆ- ತನ್ನ ಭಾವನೆಗಳು, ತನ್ನ ಗುರಿಗಳು, ತನ್ನ ಮೌಲ್ಯಗಳನ್ನು ಕೂಡಾ; ಯೋಚನೆ ಮಾಡುತ್ತಿರುವುದು, ಭಾವನೆಗಳನ್ನು ಹೊಂದಿರುವುದು ತಾನೇ ಮತ್ತು ತನ್ನ ನಿರ್ಧಾರಗಳನ್ನು ತಾನೇ ಮಾಡುತ್ತಿದ್ದೇನೆ ಎಂಬ ಭ್ರಮೆಯಲ್ಲಿ ಬದುಕುತ್ತಿದ್ದರೂ ಕೂಡಾ.

(ಮುಂದುವರಿಯುತ್ತದೆ…)

ಕನ್ನಡಕ್ಕೆ: ನಿಖಿಲ್ ಕೋಲ್ಪೆ

ಎರಿಕ್ ಫ್ರಾಮ್

ಎರಿಕ್ ಫ್ರಾಮ್
20ನೇ ಶತಮಾನದ ಖ್ಯಾತ ಚಿಂತಕ ಮತ್ತು ಸಾಮಾಜಿಕ ಮನಃಶಾಸ್ತ್ರಜ್ಞ. ’ದ ಆರ್ಟ್ ಆಫ್ ಲವಿಂಗ್’, ’ಎಸ್ಕೇಪ್ ಫ್ರಂ ಫ್ರೀಡಂ’ ಅವರ ಪುಸ್ತಕಗಳಲ್ಲಿ ಕೆಲವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...