Homeಕವನ’ಬಿಸಿಲಿನ ಷಡ್ಯಂತ್ರದ ವಿರುದ್ಧ’ ಕವನ ಸಂಕಲನದಿಂದ ಆಯ್ದ ಪದ್ಯಗಳು

’ಬಿಸಿಲಿನ ಷಡ್ಯಂತ್ರದ ವಿರುದ್ಧ’ ಕವನ ಸಂಕಲನದಿಂದ ಆಯ್ದ ಪದ್ಯಗಳು

- Advertisement -
- Advertisement -

1.

ಲೇಖನಿ ಇಲ್ಲದೆ ಹೋಗಿದ್ದಲ್ಲಿ
ಒಂದು ವೇಳೆ
ನನ್ನ ಕೈಯಲ್ಲಿ
ಲೇಖನಿ ಇಲ್ಲದೆ ಹೋಗಿದ್ದರೆ
ಬಹುಶಃ
ಉಳಿ ಇರುತ್ತಿತ್ತು
ಇಲ್ಲ
ಸಿತಾರ್, ಕೊಳಲು,
ಕುಂಚ ಇರುತ್ತಿತ್ತೋ ಏನೋ.
ಏನಿರುತ್ತಿತ್ತೋ ಅದನ್ನು ಬಳಸಿ
ನನ್ನೊಳಗಿನ ಅತೀವ ಕೋಲಾಹಲವನ್ನು
ಅಗೆದು ಹೊರಹಾಕುತಿದ್ದೆ.

2.

ಪೋಣಿಸು
ಅದೆಲ್ಲಿಯ ತನಕ
ಒಳಗಿನ ಕೂಗನ್ನು
ತುಟಿಗಳೊಳಗೆ ಒತ್ತಿಟ್ಟಿರಲಿ
ಕವಿತೆಯ ಸೂಜಿ ಹಿಡಿದು
ಅದೆಷ್ಟು ಹೊಲಿಗೆ ಹಾಕಲಿ
ಸೂಜಿಗಣ್ಣಿನೊಳಕ್ಕೆ ಅದ್ಯಾರು
ಆಕಾಶವನ್ನೇ ಪೋಣಿಸುತ್ತಾರೆ
ಹಾಕಿದ ಹೊಲಿಗೆಗಳಿಂದಲೇ
ಕಿತ್ತು ಬರುತ್ತಿದೆ ಗಾಯ.

3.

ಅ ಮತ್ತು ಆ

ಕಾಣೆಯಾದವರ ಮನೆಯಲ್ಲಿ
ಜಾಹಿರಾತಿಗೆ ನೀಡಲು
ಇರುವುದೇ ಇಲ್ಲ
ಒಂದೇ ಒಂದು ಒಳ್ಳೆಯ ಭಾವಚಿತ್ರ


ಜಾಹಿರಾತಿಗೆ ನೀಡಲು
ಯಾರ ಒಂದೊಳ್ಳೆ
ಭಾವಚಿತ್ರವೂ ಇರುವುದಿಲ್ಲವೋ
ಅಂಥವರೇ ಮತ್ತೆ ಮತ್ತೆ
ಕಾಣೆಯಾಗುತ್ತಾರೆ.

.

ಆನೆ ಮತ್ತು ಮಾವುತ
ಸಾಧು ಆನೆಯೊಂದು
ಭಿಕ್ಷೆ ಬೇಡುತ್ತಾ
ಬಾಗಿಲಿನಿಂದ ಬಾಗಿಲಿಗೆ
ಸಾಗುತ್ತಿದೆ
ವಿಕ್ಷಿಪ್ತ ಮಾವುತನನ್ನು
ಬೆನ್ನ ಮೇಲೆ ಹೊತ್ತು

ಮಾವುತ ಮಾನವ
ಮತ್ತು ಆನೆ ಒಂದು ಪ್ರಾಣಿ
ಆ ಆನೆಗೆ ನಾವು ಕ್ರೂರ ಮೃಗಗಳು
ಅದರ ಮಟ್ಟಿಗೆ ನಮ್ಮ ಶಹರವೂ ಕಾಡೇ

ಇಂಬಳದಂತೆ ಮಾವುತ
ಆನೆಯ ಮೇಲೆ ಕೂತಿದ್ದಾನೆ
ಮತ್ತು ಗುಡ್ಡದಂತಹ ಆನೆ
ತನ್ನದೇ ಪ್ರತಿಭೆಯಿಂದ
ನಾಣ್ಯ ಮತ್ತು ಕಲ್ಲಿನ ನಡುವೆ
ವ್ಯತ್ಯಾಸ ತಿಳಿದುಕೊಂಡಿದೆ
ಅನಾಥನಂತೆ ಆನೆ
ಮಾವುತನಿಗಾಗಿ ಭಿಕ್ಷೆ ಬೇಡುತ್ತಾ
ಬೀದಿ ಬೀದಿ ಅಲೆದಾಡುತ್ತಿದೆ
ಮಾವುತನೋ
ತನ್ನ ನಸೀಬನ್ನು
ಆನೆಯ ವಿಶಾಲ ಹಣೆಯ ಮೇಲೆ
ಬರೆದಿದ್ದಾನೆ: ಓಂ ಶ್ರೀ ಗಣೇಶಾಯ ನಮಃ!

ಮರಾಠಿ ಮೂಲ: ನಾಗರಾಜ್ ಮಂಜುಳೆ
ಕನ್ನಡಕ್ಕೆ: ಸಂವರ್ಥ ಸಾಹಿಲ್

(’ಬಿಸಿಲಿನ ಷಡ್ಯಂತ್ರದ ವಿರುದ್ಧ’ ಕವನ ಸಂಕಲನ ಏಪ್ರಿಲ್ 16ರಂದು  ’ತಲ್ಲೂರು ನುಡಿಮಾಲೆ-2022’ ಕಾರ್ಯಕ್ರಮದಲ್ಲಿ ಬಿಡುಗಡೆಯಾಗಿದೆ.)


ಇದನ್ನೂ ಓದಿ: ಗುರುತುಧಾರಣೆಯ ವಿರುದ್ಧ; ನಾಗರಾಜ್ ಮಂಜುಳೆಯವರ ಕಲಾ ಮೀಮಾಂಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...