Homeಅಂಕಣಗಳುಫ್ಯೋದರ್ ದಾಸ್ತೋವ್‌ಸ್ಕಿಯವರ ’ದ ಈಡಿಯಟ್' ಅನುವಾದ; ಶತಮೂರ್ಖ (ಅಧ್ಯಾಯ-4; ಭಾಗ-4)

ಫ್ಯೋದರ್ ದಾಸ್ತೋವ್‌ಸ್ಕಿಯವರ ’ದ ಈಡಿಯಟ್’ ಅನುವಾದ; ಶತಮೂರ್ಖ (ಅಧ್ಯಾಯ-4; ಭಾಗ-4)

- Advertisement -
- Advertisement -

ಜನರಲ್ ಎಪಾಂಚಿನ್ ಈಗ ಕುಟುಂಬದ ತಂದೆಯ ಸ್ಥಾನದಲ್ಲಿ ನಿಂತು ಮಾತನಾಡಿದ; ಅವನು ಬಹಳ ವಿವೇಚನಾಶೀಲತೆಯಿಂದ ಮಾತನಾಡಿದ. ಯಾವುದೇ ರೀತಿಯ ಭಾವಾತಿರೇಕದ ಪದಗಳನ್ನ ಉಪಯೋಗಿಸದೆ, ಈ ಸಂದರ್ಭದಲ್ಲಿ ಟೋಟ್ಸ್ಕಿಯ ಭವಿಷ್ಯದ ಬಗ್ಗೆ ನಿರ್ಣಾಯಕವಾದ ತೀರ್ಪು ನೀಡುವ ಅವಳ ಹಕ್ಕನ್ನು ತಾನೇ ಪ್ರತಿಪಾದಿಸಿ ದಾಖಲಿಸಿದ. ಅವನ ಮಗಳ ಭವಿಷ್ಯ ಮತ್ತು ಇನ್ನಿಬ್ಬರ ಮಕ್ಕಳದ್ದೂ ಕೂಡ ಅವಳ ಉತ್ತರದ ಮೇಲೆ ಅವಲಂಬಿಸಿದೆ ಎಂದು ಅವನು ನಂತರ ಹೇಳಿದ.

ತಾನು ಏನು ಮಾಡಬೇಕೆಂದು ನೀವು ಇಚ್ಛಿಸುತ್ತೀರ ಅನ್ನುವ ನಸ್ಟಾಸಿಯಾಳ ಪ್ರಶ್ನೆಗೆ, ಐದು ವರ್ಷದ ಹಿಂದೆ, ಅವಳ ಬಗ್ಗೆ ಅವನು ಎಷ್ಟು ಭಯಭೀತನಾಗಿದ್ದನೆಂದರೆ, ಈಗ ಅವಳು ಮದುವೆಯಾಗುವವರೆಗೂ ಅವನು ಸಂಪೂರ್ಣವಾದ ನಿರಾಳತೆಯಿಂದ ಇರುವುದು ಅಸಾಧ್ಯ ಎಂದು ಟೋಟ್ಸ್ಕಿ ಬಿನ್ನವಿಸಿಕೊಂಡ. ನಿಖರತೆಯುಳ್ಳ ಪ್ರತಿಕ್ರಿಯೆಯ ಮಾತುಗಳನ್ನು ಸೇರಿಸದ ಹೊರತು, ಅವನಿಂದ ಬರುವ ಈ ರೀತಿಯ ಸಲಹೆ ಖಂಡಿತವಾಗಿಯೂ ಅಸಂಬದ್ಧವಾದದ್ದಾಗುತ್ತದೆ ಎಂದು ಕೂಡ ಹೇಳಿದ. ಒಳ್ಳೆಯ ಕುಟುಂಬದಿಂದ ಬಂದಿರುವ ಯುವಕ, ಅವನ ಹೆಸರು ಗಾವ್ರಿಲ ಅರ್ಡಾಲಿಯೊನೊವಿಚ್ ಇವೊಲ್ಜಿನ್, ಅವಳೀಗೆ ಪರಿಚಯ ಆಗಿರುವುದನ್ನು ತಾನು ತಿಳಿದಿರುವುದಾಗಿ ಹೇಳಿದ; ಅವನು ಅವಳ ಮನೆಗೆ ಆಗಾಗ್ಗೆ ಭೇಟಿಕೊಡುತ್ತಿರುತ್ತಾನೆ, ಅವಳನ್ನು ಬಹಳ ದಿನದಿಂದ ಭಾವೋದ್ರಿಕ್ತತೆಯಿಂದ ಪ್ರೀತಿಸುತ್ತಿದ್ದಾನೆ, ಅವಳಿಂದ ಸಕಾರಾತ್ಮಕವಾದ ಉತ್ತರವೇನಾದರೂ ಬಂದರೆ ತನ್ನ ಜೀವನವನ್ನ ತ್ಯಾಗ ಮಾಡಲೂ ಸಿದ್ಧನಿದ್ದಾನೆ ಎಂದು ಕೂಡ ತಿಳಿದಿರುವುದಾಗಿ ಹೇಳಿದ. ಈ ಯುವಕ ಅವಳ ಬಗ್ಗೆಯ ತನ್ನ ಪ್ರೀತಿಯನ್ನ ಅವನ (ಟೋಟ್ಸ್ಕಿ) ಬಳಿ ನಿವೇದಿಸಿಕೊಂಡಿದ್ದು, ಅದನ್ನು ಅವನ ಹಿತೈಶಿ ಜನರಲ್ ಎಪಾಂಚಿನ್ ಜತೆ ಕೂಡ ಒಪ್ಪಿಕೊಂಡಿದ್ದಾನೆ; ಅವನು (ಟೋಟ್ಸ್ಕಿ) ಅದರ ಬಗ್ಗೆ ತಪ್ಪು ತಿಳಿಯದೇ ಇದ್ದರೆ, ತಾನು ಅವಳನ್ನು ಪ್ರೀತಿಸುತ್ತಿದ್ದುದರ ಬಗ್ಗೆ ನಸ್ಟಾಸಿಯ ಕೂಡ ತಿಳಿದಿದ್ದಾಳೆ ಎಂದು ಕೂಡ ಅವನಲ್ಲಿ ಹೇಳಿದ್ದ; ಅವಳ ಈಗಿನ ಏಕಾಂಗಿ ಜೀವನ ಅವಳಿಗೆ ಸಾಕಾಗಿ ಹೋಗಿರುವ ಕಾರಣ, ತನ್ನ ಪ್ರೀತಿಯ ಬಗ್ಗೆ ಅವಳು ಸ್ವಲ್ಪ ಒಲವನ್ನೂ ತೋರಿಸಿದ್ದಾಳೆ ಎಂದೂ ಹೇಳಿದ್ದ. ಈ ವಿಷಯಗಳ ಬಗ್ಗೆ ಎಲ್ಲರಿಗಿಂತಲೂ ಅವಳ ಜೊತೆಗೆ ಮಾತನಾಡುವುದು ತನಗೆಷ್ಟು ಕಷ್ಟಕರ ಎಂದು ಅವನು ಸೂಚಿಸಿದ ನಂತರ, ತಾನೇನಾದರೂ ಆಕೆ ಸುಖ ಜೀವನವನ್ನು ಸಾಗಿಸುವುದಕ್ಕೆ ಎಪ್ಪತ್ತೈದು ಸಾವಿರ ರೂಬಲ್ಲುಗಳನ್ನು ಉಡುಗೊರೆಯ ರೀತಿ ಕೋಡುತ್ತೇನೆಂದರೆ ನಸ್ಟಾಸಿಯಾ ಫಿಲಿಪೊವ್ನ ತನ್ನನ್ನು ತಿರಸ್ಕಾರದಿಂದ ಕಾಣುವುದಿಲ್ಲ ಎಂದು ನಂಬಿದ್ದೇನೆ ಎಂದು ಟೋಟ್ಸ್ಕಿ ತನ್ನ ಮಾತನ್ನು ಮುಗಿಸುತ್ತಾ ಹೇಳಿದ. ಏನೇ ಆದರೂ ತನ್ನ ಉಯಿಲಿನಲ್ಲಿ ಎಪ್ಪತ್ತೈದು ಸಾವಿರ ರೂಬಲ್ಲುಗಳನ್ನು ಅವಳಿಗೆ ಬರೆದೇ ತೀರುತ್ತಿದ್ದೆ ಎಂದು ತನ್ನ ಮಾತಿನ ಜೊತೆಗೆ ಸೇರಿಸಿದ; ಆದುದರಿಂದ ಈ ಹಣವನ್ನು ಯಾವುದೇ ರೀತಿಯ ನಷ್ಟಪರಿಹಾರಕ್ಕೋಸ್ಕರ ಕೊಡುತ್ತಿರುವುದಲ್ಲ ಎಂದು ಪರಿಗಣಿಸಬೇಕೆಂದು ಅವಳನ್ನು ಕೇಳಿಕೊಂಡ, ಆದರೆ ಒಬ್ಬ ಮನುಷ್ಯ ಪಾಪಪ್ರಜ್ಞೆಯಿಂದ ತುಂಬಿ ಭಾರವಾದ ತನ್ನ ಆತ್ಮಸಾಕ್ಷಿಯನ್ನ ಸ್ವಲ್ಪ ಹಗೂರ ಮಾಡಿಕೊಳ್ಳುವುದರಲ್ಲಿ ಯಾವುದೇ ರೀತಿಯ ತಕರಾರು ಇರಬಾರದು ಇತ್ಯಾದಿ ಇತ್ಯಾದಿ ಎಂದು ಹೇಳಿದ; ಈಗಿನ ಪರಿಸ್ಥಿತಿಯನ್ನ ಪರಿಗಣಿಸಿದರೆ ಇವೆಲ್ಲವೂ ಸ್ವಾಭಾವಿಕವಾಗಿ ಹೇಳುವಂತಹವೇ. ತನ್ನ ಮಾತುಗಳನ್ನು ಟೋಟ್ಸ್ಕಿ ಬಹಳ ನಿರರ್ಗಳವಾಗಿ ಹೇಳಿದ; ತನ್ನ ಮಾತನ್ನು ಮುಗಿಸುತ್ತಾ, ಪ್ರಪಂಚದಲ್ಲಿನ ಒಂದೇ ಒಂದು ಜೀವಿಗೂ, ಜನರಲ್ ಎಪಾಂಚಿನ್‌ನನ್ನೂ ಸೇರಿಸಿ, ಮೇಲೆ ಹೇಳಿದ ಎಪ್ಪತ್ತೈದು ಸಾವಿರ ರೂಬಲ್ಲಿನ ಬಗ್ಗೆ ತಿಳಿದಿಲ್ಲ, ಅದರ ಬಗೆಗಿನ ತನ್ನ ಇಚ್ಛೆಯನ್ನ ಇದೇ ಮೊದಲ ಬಾರಿಗೆ ತಾನು ಪ್ರಕಟಿಸಿದ್ದು ಎಂದು ತನ್ನ ಪ್ರಸ್ತಾವನೆಯ ಬಗ್ಗೆ ಹೇಳಿದ.

ಈ ಸುದೀರ್ಘವಾದ ಭಾಷಣಕ್ಕೆ ನಸ್ಟಾಸಿಯ ಫಿಲಿಪೊವ್ನ ಕೊಟ್ಟ ಉತ್ತರ ಇಬ್ಬರೂ ಸ್ನೇಹಿತರನ್ನ ಸಾಕಷ್ಟು ಆಶ್ಚರ್ಯಗೊಳಿಸಿತು.

ಅವಳ ಹಿಂದಿನ ವ್ಯಂಗ್ಯದ ಭಾವ ಸುಳಿವಿಲ್ಲದಿರುವುದೊಂದೇ ಅಲ್ಲ, ಅವಳ ಹಳೆಯ ದ್ವೇಷ ಮತ್ತು ವೈರತ್ವ, ಆ ವಿಕಟವಾದ ನಗು- ಯಾವುದೆಲ್ಲದರ ಬರಿಯ ಸ್ಮರಣೆಯೊಂದೇ ಟೋಟ್ಸ್ಕಿಯ ಇಡೀ ದೇಹದಲ್ಲಿ ಈ ದಿನದವರೆಗೂ ನಡುಕ ಹುಟ್ಟಿಸುತ್ತಿತ್ತೊ ಅದ್ಯಾವುದರ ಕುರುಹೂ ಇರಲಿಲ್ಲ; ಅವಳೀಗ ಮುದಗೊಂಡಂತಿದ್ದಳು ಮತ್ತು ಯಾವಾಗಲೋ ಒಮ್ಮೆ ಆತನೊಂದಿಗೆ ಗಂಭೀರವಾಗಿ ಮಾತನಾಡುವುದಕ್ಕೆ ಅವಕಾಶ ಸಿಕ್ಕಿದ್ದಕ್ಕೆ ಸಂತೋಷಗೊಂಡಿದ್ದಳು. ತಾನು ಬಹಳ ದಿನಗಳಿಂದ ಮನಬಿಚ್ಚಿ ಸಂಭಾಷಿಸಬೇಕು ಮತ್ತು ಸ್ನೇಹಪರವಾದ ಸಲಹೆಗಳನ್ನ ಕೇಳಬೇಕೆಂದು ಇಚ್ಛಿಸಿದ್ದೆ ಎಂದೂ, ಅವಳ ಅಹಂ ಅವಳನ್ನು ತಡೆದಿತ್ತೆಂದೂ ಅವಳು ನಿವೇದಿಸಿಕೊಂಡಳು. ಈಗ ಏನೇ ಆದರೂ ಅವರಿಬ್ಬರಲ್ಲಿದ್ದ ತಡೆಗೋಡೆ ಉರುಳಿಹೋದ ನಂತರ, ಅವಳಿಗೆ ಈ ಅವಕಾಶವನ್ನು ಬಿಟ್ಟು ಇನ್ನ್ಯಾವುದೂ ಕೂಡ ಸ್ವಾಗತಾರ್ಹವಾಗಿರಲಿಲ್ಲ.

ಇದನ್ನೂ ಓದಿ: ಫ್ಯೋದರ್ ದಾಸ್ತೋವ್‌ಸ್ಕಿಯವರ ’ದ ಈಡಿಯಟ್’ ಅನುವಾದ; ಶತಮೂರ್ಖ (ಅಧ್ಯಾಯ-4; ಭಾಗ-3)

ಮೊದಲು, ದುಃಖದಿಂದ ಕೂಡಿದ ನಗುವಿನೊಂದಿಗೆ ಮತ್ತು ನಂತರ ಕಣ್ಣಿನಲ್ಲಿನ ಉಲ್ಲಾಸದ ಮಿನುಗಿನೊಂದಿಗೆ, ಐದು ವರ್ಷದ ಹಿಂದೆ ಉಂಟಾದಂತಹ ಚಂಡಮಾರುತ ಪುನಃ ಏಳುವುದು ಅಸಾಧ್ಯ ಎಂದು ಅವಳು ಒಪ್ಪಿಕೊಂಡಳು. ತಾನು ಬಹಳ ಹಿಂದಿನಿಂದಲೇ ಅನೇಕ ವಿಷಯಗಳ ಬಗ್ಗೆ ತನ್ನ ಅಭಿಪ್ರಾಯಗಳನ್ನ ಬದಲಾಯಿಸಿಕೊಂಡಿದ್ದೇನೆಂದು, ಅವಳು ಗುರುತಿಸಿದ್ದ ಸತ್ಯಗಳನ್ನ ಪರಿಗಣನೆಗೆ ತೆಗೆದುಕೊಳ್ಳಬೇಕೇ ಹೊರತು ಹೃದಯದಲ್ಲಿನ ಭಾವನೆಗಳನ್ನಲ್ಲ ಎಂದು ಕೂಡ ಅವಳು ಹೇಳಿದಳು. ಆದದ್ದೆಲ್ಲಾ ಆಗಿಹೋಯಿತು ಮತ್ತು ಕೊನೆಗೊಂಡಿತು, ಇನ್ನೂ ಯಾಕೆ ಟೋಟ್ಸ್ಕಿ ಸದಾಕಾಲ ಎಚ್ಚರಿಕೆಯ ಮನಸ್ಸಿನಿಂದ ತೊಳಲಾಡುತ್ತಾ ಇರಬೇಕು ಎನ್ನುವುದು ತನಗೆ ಅರ್ಥವಾಗುತ್ತಿಲ್ಲವೆಂದಳು.

ಅವಳು ನಂತರ ಜನರಲ್ ಎಪಾಂಚಿನ್ ಕಡೆಗೆ ತಿರುಗಿ ಅವಲೋಕಿಸಿದಳು; ಬಹಳವಾದ ಸೌಜನ್ಯದಿಂದ, ಅವಳು ಅವನ ಹೆಣ್ಣುಮಕ್ಕಳ ಬಗ್ಗೆ ಮೊದಲಿನಿಂದಲೇ ಬಲ್ಲಳೆಂದು, ಅವರ ಬಗ್ಗೆ ಒಳ್ಳೆಯ ಸಕಾರಾತ್ಮಕವಾದ ವರದಿಗಳನ್ನಲ್ಲದೇ ಬೇರೇನನ್ನೂ ಕೇಳಿಲ್ಲವೆಂದು; ಅವರುಗಳ ಬಗ್ಗೆ ಆಳವಾದ ಗೌರವವನ್ನ ಬೆಳೆಸಿಕೊಂಡಿದ್ದಾಳೆಂದು ಹೇಳಿದಳು. ಅವರಿಗೆ ಯಾವುದೇ ರೀತಿಯಲ್ಲಿ ತನ್ನ ಸೇವೆ ಸಲ್ಲಿಸುವುದು ತನಗೆ ಹೆಮ್ಮೆಯ ಸಂಗತಿ ಮತ್ತು ನಿಜವಾದ ಸಂತೊಷದ ಮೂಲವೆಂದಳು.

ಕೆ. ಶ್ರೀನಾಥ್

ಕೆ. ಶ್ರೀನಾಥ್
ಮಾಜಿ ಕೈಗಾರಿಕೋದ್ಯಮಿ ಮತ್ತು ಹಾಲಿ ನಟ ಶ್ರೀನಾಥ್ ಈಗ ಸಾಹಿತ್ಯ ಕೃಷಿಯಲ್ಲಿ ನಿರತರಾಗಿದ್ದು, ಇತ್ತೀಚೆಗಷ್ಟೇ ಅವರು ಅನುವಾದಿಸಿರುವ ದಾಸ್ತೋವ್‌ಸ್ಕಿಯ ’ಕರಮಜೋವ್ ಸಹೋದರರು’ ಪ್ರಕಟವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...