Homeಅಂಕಣಗಳುಫ್ಯೋದರ್ ದಾಸ್ತೋವ್‌ಸ್ಕಿಯವರ ’ದ ಈಡಿಯಟ್' ಅನುವಾದ; ಶತಮೂರ್ಖ (ಅಧ್ಯಾಯ-4; ಭಾಗ-4)

ಫ್ಯೋದರ್ ದಾಸ್ತೋವ್‌ಸ್ಕಿಯವರ ’ದ ಈಡಿಯಟ್’ ಅನುವಾದ; ಶತಮೂರ್ಖ (ಅಧ್ಯಾಯ-4; ಭಾಗ-4)

- Advertisement -
- Advertisement -

ಜನರಲ್ ಎಪಾಂಚಿನ್ ಈಗ ಕುಟುಂಬದ ತಂದೆಯ ಸ್ಥಾನದಲ್ಲಿ ನಿಂತು ಮಾತನಾಡಿದ; ಅವನು ಬಹಳ ವಿವೇಚನಾಶೀಲತೆಯಿಂದ ಮಾತನಾಡಿದ. ಯಾವುದೇ ರೀತಿಯ ಭಾವಾತಿರೇಕದ ಪದಗಳನ್ನ ಉಪಯೋಗಿಸದೆ, ಈ ಸಂದರ್ಭದಲ್ಲಿ ಟೋಟ್ಸ್ಕಿಯ ಭವಿಷ್ಯದ ಬಗ್ಗೆ ನಿರ್ಣಾಯಕವಾದ ತೀರ್ಪು ನೀಡುವ ಅವಳ ಹಕ್ಕನ್ನು ತಾನೇ ಪ್ರತಿಪಾದಿಸಿ ದಾಖಲಿಸಿದ. ಅವನ ಮಗಳ ಭವಿಷ್ಯ ಮತ್ತು ಇನ್ನಿಬ್ಬರ ಮಕ್ಕಳದ್ದೂ ಕೂಡ ಅವಳ ಉತ್ತರದ ಮೇಲೆ ಅವಲಂಬಿಸಿದೆ ಎಂದು ಅವನು ನಂತರ ಹೇಳಿದ.

ತಾನು ಏನು ಮಾಡಬೇಕೆಂದು ನೀವು ಇಚ್ಛಿಸುತ್ತೀರ ಅನ್ನುವ ನಸ್ಟಾಸಿಯಾಳ ಪ್ರಶ್ನೆಗೆ, ಐದು ವರ್ಷದ ಹಿಂದೆ, ಅವಳ ಬಗ್ಗೆ ಅವನು ಎಷ್ಟು ಭಯಭೀತನಾಗಿದ್ದನೆಂದರೆ, ಈಗ ಅವಳು ಮದುವೆಯಾಗುವವರೆಗೂ ಅವನು ಸಂಪೂರ್ಣವಾದ ನಿರಾಳತೆಯಿಂದ ಇರುವುದು ಅಸಾಧ್ಯ ಎಂದು ಟೋಟ್ಸ್ಕಿ ಬಿನ್ನವಿಸಿಕೊಂಡ. ನಿಖರತೆಯುಳ್ಳ ಪ್ರತಿಕ್ರಿಯೆಯ ಮಾತುಗಳನ್ನು ಸೇರಿಸದ ಹೊರತು, ಅವನಿಂದ ಬರುವ ಈ ರೀತಿಯ ಸಲಹೆ ಖಂಡಿತವಾಗಿಯೂ ಅಸಂಬದ್ಧವಾದದ್ದಾಗುತ್ತದೆ ಎಂದು ಕೂಡ ಹೇಳಿದ. ಒಳ್ಳೆಯ ಕುಟುಂಬದಿಂದ ಬಂದಿರುವ ಯುವಕ, ಅವನ ಹೆಸರು ಗಾವ್ರಿಲ ಅರ್ಡಾಲಿಯೊನೊವಿಚ್ ಇವೊಲ್ಜಿನ್, ಅವಳೀಗೆ ಪರಿಚಯ ಆಗಿರುವುದನ್ನು ತಾನು ತಿಳಿದಿರುವುದಾಗಿ ಹೇಳಿದ; ಅವನು ಅವಳ ಮನೆಗೆ ಆಗಾಗ್ಗೆ ಭೇಟಿಕೊಡುತ್ತಿರುತ್ತಾನೆ, ಅವಳನ್ನು ಬಹಳ ದಿನದಿಂದ ಭಾವೋದ್ರಿಕ್ತತೆಯಿಂದ ಪ್ರೀತಿಸುತ್ತಿದ್ದಾನೆ, ಅವಳಿಂದ ಸಕಾರಾತ್ಮಕವಾದ ಉತ್ತರವೇನಾದರೂ ಬಂದರೆ ತನ್ನ ಜೀವನವನ್ನ ತ್ಯಾಗ ಮಾಡಲೂ ಸಿದ್ಧನಿದ್ದಾನೆ ಎಂದು ಕೂಡ ತಿಳಿದಿರುವುದಾಗಿ ಹೇಳಿದ. ಈ ಯುವಕ ಅವಳ ಬಗ್ಗೆಯ ತನ್ನ ಪ್ರೀತಿಯನ್ನ ಅವನ (ಟೋಟ್ಸ್ಕಿ) ಬಳಿ ನಿವೇದಿಸಿಕೊಂಡಿದ್ದು, ಅದನ್ನು ಅವನ ಹಿತೈಶಿ ಜನರಲ್ ಎಪಾಂಚಿನ್ ಜತೆ ಕೂಡ ಒಪ್ಪಿಕೊಂಡಿದ್ದಾನೆ; ಅವನು (ಟೋಟ್ಸ್ಕಿ) ಅದರ ಬಗ್ಗೆ ತಪ್ಪು ತಿಳಿಯದೇ ಇದ್ದರೆ, ತಾನು ಅವಳನ್ನು ಪ್ರೀತಿಸುತ್ತಿದ್ದುದರ ಬಗ್ಗೆ ನಸ್ಟಾಸಿಯ ಕೂಡ ತಿಳಿದಿದ್ದಾಳೆ ಎಂದು ಕೂಡ ಅವನಲ್ಲಿ ಹೇಳಿದ್ದ; ಅವಳ ಈಗಿನ ಏಕಾಂಗಿ ಜೀವನ ಅವಳಿಗೆ ಸಾಕಾಗಿ ಹೋಗಿರುವ ಕಾರಣ, ತನ್ನ ಪ್ರೀತಿಯ ಬಗ್ಗೆ ಅವಳು ಸ್ವಲ್ಪ ಒಲವನ್ನೂ ತೋರಿಸಿದ್ದಾಳೆ ಎಂದೂ ಹೇಳಿದ್ದ. ಈ ವಿಷಯಗಳ ಬಗ್ಗೆ ಎಲ್ಲರಿಗಿಂತಲೂ ಅವಳ ಜೊತೆಗೆ ಮಾತನಾಡುವುದು ತನಗೆಷ್ಟು ಕಷ್ಟಕರ ಎಂದು ಅವನು ಸೂಚಿಸಿದ ನಂತರ, ತಾನೇನಾದರೂ ಆಕೆ ಸುಖ ಜೀವನವನ್ನು ಸಾಗಿಸುವುದಕ್ಕೆ ಎಪ್ಪತ್ತೈದು ಸಾವಿರ ರೂಬಲ್ಲುಗಳನ್ನು ಉಡುಗೊರೆಯ ರೀತಿ ಕೋಡುತ್ತೇನೆಂದರೆ ನಸ್ಟಾಸಿಯಾ ಫಿಲಿಪೊವ್ನ ತನ್ನನ್ನು ತಿರಸ್ಕಾರದಿಂದ ಕಾಣುವುದಿಲ್ಲ ಎಂದು ನಂಬಿದ್ದೇನೆ ಎಂದು ಟೋಟ್ಸ್ಕಿ ತನ್ನ ಮಾತನ್ನು ಮುಗಿಸುತ್ತಾ ಹೇಳಿದ. ಏನೇ ಆದರೂ ತನ್ನ ಉಯಿಲಿನಲ್ಲಿ ಎಪ್ಪತ್ತೈದು ಸಾವಿರ ರೂಬಲ್ಲುಗಳನ್ನು ಅವಳಿಗೆ ಬರೆದೇ ತೀರುತ್ತಿದ್ದೆ ಎಂದು ತನ್ನ ಮಾತಿನ ಜೊತೆಗೆ ಸೇರಿಸಿದ; ಆದುದರಿಂದ ಈ ಹಣವನ್ನು ಯಾವುದೇ ರೀತಿಯ ನಷ್ಟಪರಿಹಾರಕ್ಕೋಸ್ಕರ ಕೊಡುತ್ತಿರುವುದಲ್ಲ ಎಂದು ಪರಿಗಣಿಸಬೇಕೆಂದು ಅವಳನ್ನು ಕೇಳಿಕೊಂಡ, ಆದರೆ ಒಬ್ಬ ಮನುಷ್ಯ ಪಾಪಪ್ರಜ್ಞೆಯಿಂದ ತುಂಬಿ ಭಾರವಾದ ತನ್ನ ಆತ್ಮಸಾಕ್ಷಿಯನ್ನ ಸ್ವಲ್ಪ ಹಗೂರ ಮಾಡಿಕೊಳ್ಳುವುದರಲ್ಲಿ ಯಾವುದೇ ರೀತಿಯ ತಕರಾರು ಇರಬಾರದು ಇತ್ಯಾದಿ ಇತ್ಯಾದಿ ಎಂದು ಹೇಳಿದ; ಈಗಿನ ಪರಿಸ್ಥಿತಿಯನ್ನ ಪರಿಗಣಿಸಿದರೆ ಇವೆಲ್ಲವೂ ಸ್ವಾಭಾವಿಕವಾಗಿ ಹೇಳುವಂತಹವೇ. ತನ್ನ ಮಾತುಗಳನ್ನು ಟೋಟ್ಸ್ಕಿ ಬಹಳ ನಿರರ್ಗಳವಾಗಿ ಹೇಳಿದ; ತನ್ನ ಮಾತನ್ನು ಮುಗಿಸುತ್ತಾ, ಪ್ರಪಂಚದಲ್ಲಿನ ಒಂದೇ ಒಂದು ಜೀವಿಗೂ, ಜನರಲ್ ಎಪಾಂಚಿನ್‌ನನ್ನೂ ಸೇರಿಸಿ, ಮೇಲೆ ಹೇಳಿದ ಎಪ್ಪತ್ತೈದು ಸಾವಿರ ರೂಬಲ್ಲಿನ ಬಗ್ಗೆ ತಿಳಿದಿಲ್ಲ, ಅದರ ಬಗೆಗಿನ ತನ್ನ ಇಚ್ಛೆಯನ್ನ ಇದೇ ಮೊದಲ ಬಾರಿಗೆ ತಾನು ಪ್ರಕಟಿಸಿದ್ದು ಎಂದು ತನ್ನ ಪ್ರಸ್ತಾವನೆಯ ಬಗ್ಗೆ ಹೇಳಿದ.

ಈ ಸುದೀರ್ಘವಾದ ಭಾಷಣಕ್ಕೆ ನಸ್ಟಾಸಿಯ ಫಿಲಿಪೊವ್ನ ಕೊಟ್ಟ ಉತ್ತರ ಇಬ್ಬರೂ ಸ್ನೇಹಿತರನ್ನ ಸಾಕಷ್ಟು ಆಶ್ಚರ್ಯಗೊಳಿಸಿತು.

ಅವಳ ಹಿಂದಿನ ವ್ಯಂಗ್ಯದ ಭಾವ ಸುಳಿವಿಲ್ಲದಿರುವುದೊಂದೇ ಅಲ್ಲ, ಅವಳ ಹಳೆಯ ದ್ವೇಷ ಮತ್ತು ವೈರತ್ವ, ಆ ವಿಕಟವಾದ ನಗು- ಯಾವುದೆಲ್ಲದರ ಬರಿಯ ಸ್ಮರಣೆಯೊಂದೇ ಟೋಟ್ಸ್ಕಿಯ ಇಡೀ ದೇಹದಲ್ಲಿ ಈ ದಿನದವರೆಗೂ ನಡುಕ ಹುಟ್ಟಿಸುತ್ತಿತ್ತೊ ಅದ್ಯಾವುದರ ಕುರುಹೂ ಇರಲಿಲ್ಲ; ಅವಳೀಗ ಮುದಗೊಂಡಂತಿದ್ದಳು ಮತ್ತು ಯಾವಾಗಲೋ ಒಮ್ಮೆ ಆತನೊಂದಿಗೆ ಗಂಭೀರವಾಗಿ ಮಾತನಾಡುವುದಕ್ಕೆ ಅವಕಾಶ ಸಿಕ್ಕಿದ್ದಕ್ಕೆ ಸಂತೋಷಗೊಂಡಿದ್ದಳು. ತಾನು ಬಹಳ ದಿನಗಳಿಂದ ಮನಬಿಚ್ಚಿ ಸಂಭಾಷಿಸಬೇಕು ಮತ್ತು ಸ್ನೇಹಪರವಾದ ಸಲಹೆಗಳನ್ನ ಕೇಳಬೇಕೆಂದು ಇಚ್ಛಿಸಿದ್ದೆ ಎಂದೂ, ಅವಳ ಅಹಂ ಅವಳನ್ನು ತಡೆದಿತ್ತೆಂದೂ ಅವಳು ನಿವೇದಿಸಿಕೊಂಡಳು. ಈಗ ಏನೇ ಆದರೂ ಅವರಿಬ್ಬರಲ್ಲಿದ್ದ ತಡೆಗೋಡೆ ಉರುಳಿಹೋದ ನಂತರ, ಅವಳಿಗೆ ಈ ಅವಕಾಶವನ್ನು ಬಿಟ್ಟು ಇನ್ನ್ಯಾವುದೂ ಕೂಡ ಸ್ವಾಗತಾರ್ಹವಾಗಿರಲಿಲ್ಲ.

ಇದನ್ನೂ ಓದಿ: ಫ್ಯೋದರ್ ದಾಸ್ತೋವ್‌ಸ್ಕಿಯವರ ’ದ ಈಡಿಯಟ್’ ಅನುವಾದ; ಶತಮೂರ್ಖ (ಅಧ್ಯಾಯ-4; ಭಾಗ-3)

ಮೊದಲು, ದುಃಖದಿಂದ ಕೂಡಿದ ನಗುವಿನೊಂದಿಗೆ ಮತ್ತು ನಂತರ ಕಣ್ಣಿನಲ್ಲಿನ ಉಲ್ಲಾಸದ ಮಿನುಗಿನೊಂದಿಗೆ, ಐದು ವರ್ಷದ ಹಿಂದೆ ಉಂಟಾದಂತಹ ಚಂಡಮಾರುತ ಪುನಃ ಏಳುವುದು ಅಸಾಧ್ಯ ಎಂದು ಅವಳು ಒಪ್ಪಿಕೊಂಡಳು. ತಾನು ಬಹಳ ಹಿಂದಿನಿಂದಲೇ ಅನೇಕ ವಿಷಯಗಳ ಬಗ್ಗೆ ತನ್ನ ಅಭಿಪ್ರಾಯಗಳನ್ನ ಬದಲಾಯಿಸಿಕೊಂಡಿದ್ದೇನೆಂದು, ಅವಳು ಗುರುತಿಸಿದ್ದ ಸತ್ಯಗಳನ್ನ ಪರಿಗಣನೆಗೆ ತೆಗೆದುಕೊಳ್ಳಬೇಕೇ ಹೊರತು ಹೃದಯದಲ್ಲಿನ ಭಾವನೆಗಳನ್ನಲ್ಲ ಎಂದು ಕೂಡ ಅವಳು ಹೇಳಿದಳು. ಆದದ್ದೆಲ್ಲಾ ಆಗಿಹೋಯಿತು ಮತ್ತು ಕೊನೆಗೊಂಡಿತು, ಇನ್ನೂ ಯಾಕೆ ಟೋಟ್ಸ್ಕಿ ಸದಾಕಾಲ ಎಚ್ಚರಿಕೆಯ ಮನಸ್ಸಿನಿಂದ ತೊಳಲಾಡುತ್ತಾ ಇರಬೇಕು ಎನ್ನುವುದು ತನಗೆ ಅರ್ಥವಾಗುತ್ತಿಲ್ಲವೆಂದಳು.

ಅವಳು ನಂತರ ಜನರಲ್ ಎಪಾಂಚಿನ್ ಕಡೆಗೆ ತಿರುಗಿ ಅವಲೋಕಿಸಿದಳು; ಬಹಳವಾದ ಸೌಜನ್ಯದಿಂದ, ಅವಳು ಅವನ ಹೆಣ್ಣುಮಕ್ಕಳ ಬಗ್ಗೆ ಮೊದಲಿನಿಂದಲೇ ಬಲ್ಲಳೆಂದು, ಅವರ ಬಗ್ಗೆ ಒಳ್ಳೆಯ ಸಕಾರಾತ್ಮಕವಾದ ವರದಿಗಳನ್ನಲ್ಲದೇ ಬೇರೇನನ್ನೂ ಕೇಳಿಲ್ಲವೆಂದು; ಅವರುಗಳ ಬಗ್ಗೆ ಆಳವಾದ ಗೌರವವನ್ನ ಬೆಳೆಸಿಕೊಂಡಿದ್ದಾಳೆಂದು ಹೇಳಿದಳು. ಅವರಿಗೆ ಯಾವುದೇ ರೀತಿಯಲ್ಲಿ ತನ್ನ ಸೇವೆ ಸಲ್ಲಿಸುವುದು ತನಗೆ ಹೆಮ್ಮೆಯ ಸಂಗತಿ ಮತ್ತು ನಿಜವಾದ ಸಂತೊಷದ ಮೂಲವೆಂದಳು.

ಕೆ. ಶ್ರೀನಾಥ್

ಕೆ. ಶ್ರೀನಾಥ್
ಮಾಜಿ ಕೈಗಾರಿಕೋದ್ಯಮಿ ಮತ್ತು ಹಾಲಿ ನಟ ಶ್ರೀನಾಥ್ ಈಗ ಸಾಹಿತ್ಯ ಕೃಷಿಯಲ್ಲಿ ನಿರತರಾಗಿದ್ದು, ಇತ್ತೀಚೆಗಷ್ಟೇ ಅವರು ಅನುವಾದಿಸಿರುವ ದಾಸ್ತೋವ್‌ಸ್ಕಿಯ ’ಕರಮಜೋವ್ ಸಹೋದರರು’ ಪ್ರಕಟವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...