Homeಕವನಗೌಹರ್ ರಾಜ಼ ಅವರ ‘ಮೈ ಲಾರ್ಡ್’ ಕನ್ನಡಾನುವಾದ

ಗೌಹರ್ ರಾಜ಼ ಅವರ ‘ಮೈ ಲಾರ್ಡ್’ ಕನ್ನಡಾನುವಾದ

- Advertisement -
- Advertisement -

ಮೈ ಲಾರ್ಡ್

ನನ್ನ ದೊರೆಯೇ

 

ನಾ ಮಾಡಿದ ಅಪರಾಧ ದೊಡ್ಡದು ದೊರೆಯೇ,

ಬಹಳ ಗಂಭೀರ.

 

ಎಲ್ಲರೂ ಬಾಯಿ ಮುಚ್ಚಿಕೊಂಡಿರಲೇಬೇಕಾದ ಈ ಕಾಲದಲ್ಲಿ

ನಾನು ಬಾಯಿ ತೆಗೆಯುವ ಉದ್ಧಟತನ ಮಾಡಿದೆ

ಅದು ಅಪರಾಧವೆ ಸರಿ

ಅದಕ್ಕೆ ನೀವು ಯಾವ ಶಿಕ್ಷೆಯಾದರೂ ಕೊಡಿ ನನ್ನ ದೊರೆಯೇ ,

ಎಷ್ಟಾದರೂ ನೀವು ದೈವೀ  ಛಾಯೆಯವರು.

 

ನ್ಯಾಯದಾನ ನಿಮ್ಮ ಕೆಲಸ, ನೀವು ಅದನ್ನು ಮಾಡಿ

ನೀವು ಸ್ವತಂತ್ರರು,

 

ನೀವು ನ್ಯಾಯಕ್ಕೆ ಯಾವುದೇ ರೂಪ ಕೊಡಬಹುದು

ಅದಕ್ಕೆ ನಮ್ಮ ಒಪ್ಪಿಗೆ ಇದೆ

ಅದನ್ನು ನೀವು ಬೇಕಾದಹಾಗೆ ಬದಲಾಯಿಸಿ,

 

ಅಥವಾ ತೆರೆದ ತುಟಿ ಹೊಲಿಯುವ ಸೂಜಿಯನ್ನಾಗಿಸಿ

ಹಗೆ ತೀರಿಸಿಕೊಳ್ಳಿ,

ನಮಗೆ ಒಪ್ಪಿಗೆ.

ಗೌಹರ್ ರಾಜ಼

 

ನ್ಯಾಯ ಖಡ್ಗದಿಂದ ನಿಮ್ಮೆಡೆ  ತೋರಿದ ಪ್ರತಿ ಬೆರಳನ್ನು ಕತ್ತರಿಸಿ ಬಿಸಾಕಿ,

ಇನ್ನೊಮ್ಮೆ ಯಾವ ನಿಯಾಮಕನ ಕಡೆ ಯಾರೂ ತೋರಿರಬಾರದು,

ಹಾಗೆ ಕತ್ತರಿಸಿ.

 

ನೀವು ಸ್ವತಂತ್ರರು

ನೀವು ನ್ಯಾಯದಾನ ಮಾಡಿ,

ಅದನ್ನು ನೀವು ಉಡಾಳ ಹುಡುಗರಿಗೆ ಪೆಟ್ಟು ಕೊಡುವ

ನಾಗರ ಬೆತ್ತವನ್ನಾಗಿಸಿ.

 

ನಾ ಮಾಡಿದ ಅಪರಾಧ ದೊಡ್ಡದು ದೊರೆಯೇ

ಬಹಳ ಗಂಭೀರ

ನೀವು ಯಾವ ಶಿಕ್ಷೆ ಯಾದರೂ ಕೊಡಿ ನನಗೆ.

 

ಆದರೆ

ನೀವು ಅವಕಾಶ ಕೊಟ್ಟರೆ

ಒಂದು ಮಾತು ಹೇಳಲೇ,

ಮೈ ಲಾರ್ಡ್,

ಇತಿಹಾಸದ ಒಂದು ಪಾಠ ನೆನಪಿಸಿಕೊಳ್ಳೋಣವೇ.

 

ಪ್ರತಿ ಶರತ್ಕಾಲದಲ್ಲಿ

ಹೂವು ಅರಳುತ್ತಲೇ ಇರುತ್ತವೆ

ಒಂದು ತುಂಡು ಮೋಡ ಎಲ್ಲಿಂದಲೋ

ಬಂದು ಬರಡು ಭೂಮಿಯ ಮೇಲೆ ಮಳೆ ಸುರಿಸುತ್ತದೆ

ನಗ್ನ ಗಿಡವೊಂದರ ಮೇಲಿನ ಮಗ್ನ  ಕೋಗಿಲೆ ಹಾಡುತ್ತಲೇ ಇರುತ್ತದೆ

ಪ್ರತಿ ದಿಕ್ಕಿನಿಂದ ಕೇಳುತ್ತಿರುತ್ತದೆ ಒಂದೇ ಕೂಗು

ನದಿ ಕೊಳ್ಳದ ತುಂಬೆಲ್ಲ ಅದೇ ಹಾಡು

ಆ ಹಾಡನ್ನು ಬಂಧಿಸಲಾದೀತೇ?

ಹಾಡು ಸ್ವತಂತ್ರ

ಎಲ್ಲ ದಿಕ್ಕಿಗೆ ಹರಿದು ಹೋದೀತು,

ಅಷ್ಟೇ.

-ಗೌಹರ್ ರಾಜ಼,
ಭಾರತೀಯ ವಿಜ್ಞಾನಿ, ಉರ್ದು ಕವಿ, ಸಾಮಾಜಿಕ ಕಾರ್ಯಕರ್ತ, ಸಾಕ್ಷ್ಯಚಿತ್ರ ನಿರ್ದೇಶಕ

ಕನ್ನಡಕ್ಕೆ: ಹೃಷಿಕೇಶ ಬಹದ್ದೂರ ದೇಸಾಯಿ

ವಿಡಿಯೊ ನೋಡಿ:

Gauhar Raza ki Nayi nazm – my lord #HumDekhenge #PrashantBhushan

Posted by Gauhar Raza on Thursday, August 20, 2020


ಓದಿ:

“ಕೇಳುವಿರೇನು ನೀವು ನಾ ಹುಚ್ಚನಾದದ್ದು ಹೇಗೆಂದು?”- ಖಲೀಲ್ ಗಿಬ್ರಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...