Homeಕವನಗೌಹರ್ ರಾಜ಼ ಅವರ ‘ಮೈ ಲಾರ್ಡ್’ ಕನ್ನಡಾನುವಾದ

ಗೌಹರ್ ರಾಜ಼ ಅವರ ‘ಮೈ ಲಾರ್ಡ್’ ಕನ್ನಡಾನುವಾದ

- Advertisement -
- Advertisement -

ಮೈ ಲಾರ್ಡ್

ನನ್ನ ದೊರೆಯೇ

 

ನಾ ಮಾಡಿದ ಅಪರಾಧ ದೊಡ್ಡದು ದೊರೆಯೇ,

ಬಹಳ ಗಂಭೀರ.

 

ಎಲ್ಲರೂ ಬಾಯಿ ಮುಚ್ಚಿಕೊಂಡಿರಲೇಬೇಕಾದ ಈ ಕಾಲದಲ್ಲಿ

ನಾನು ಬಾಯಿ ತೆಗೆಯುವ ಉದ್ಧಟತನ ಮಾಡಿದೆ

ಅದು ಅಪರಾಧವೆ ಸರಿ

ಅದಕ್ಕೆ ನೀವು ಯಾವ ಶಿಕ್ಷೆಯಾದರೂ ಕೊಡಿ ನನ್ನ ದೊರೆಯೇ ,

ಎಷ್ಟಾದರೂ ನೀವು ದೈವೀ  ಛಾಯೆಯವರು.

 

ನ್ಯಾಯದಾನ ನಿಮ್ಮ ಕೆಲಸ, ನೀವು ಅದನ್ನು ಮಾಡಿ

ನೀವು ಸ್ವತಂತ್ರರು,

 

ನೀವು ನ್ಯಾಯಕ್ಕೆ ಯಾವುದೇ ರೂಪ ಕೊಡಬಹುದು

ಅದಕ್ಕೆ ನಮ್ಮ ಒಪ್ಪಿಗೆ ಇದೆ

ಅದನ್ನು ನೀವು ಬೇಕಾದಹಾಗೆ ಬದಲಾಯಿಸಿ,

 

ಅಥವಾ ತೆರೆದ ತುಟಿ ಹೊಲಿಯುವ ಸೂಜಿಯನ್ನಾಗಿಸಿ

ಹಗೆ ತೀರಿಸಿಕೊಳ್ಳಿ,

ನಮಗೆ ಒಪ್ಪಿಗೆ.

ಗೌಹರ್ ರಾಜ಼

 

ನ್ಯಾಯ ಖಡ್ಗದಿಂದ ನಿಮ್ಮೆಡೆ  ತೋರಿದ ಪ್ರತಿ ಬೆರಳನ್ನು ಕತ್ತರಿಸಿ ಬಿಸಾಕಿ,

ಇನ್ನೊಮ್ಮೆ ಯಾವ ನಿಯಾಮಕನ ಕಡೆ ಯಾರೂ ತೋರಿರಬಾರದು,

ಹಾಗೆ ಕತ್ತರಿಸಿ.

 

ನೀವು ಸ್ವತಂತ್ರರು

ನೀವು ನ್ಯಾಯದಾನ ಮಾಡಿ,

ಅದನ್ನು ನೀವು ಉಡಾಳ ಹುಡುಗರಿಗೆ ಪೆಟ್ಟು ಕೊಡುವ

ನಾಗರ ಬೆತ್ತವನ್ನಾಗಿಸಿ.

 

ನಾ ಮಾಡಿದ ಅಪರಾಧ ದೊಡ್ಡದು ದೊರೆಯೇ

ಬಹಳ ಗಂಭೀರ

ನೀವು ಯಾವ ಶಿಕ್ಷೆ ಯಾದರೂ ಕೊಡಿ ನನಗೆ.

 

ಆದರೆ

ನೀವು ಅವಕಾಶ ಕೊಟ್ಟರೆ

ಒಂದು ಮಾತು ಹೇಳಲೇ,

ಮೈ ಲಾರ್ಡ್,

ಇತಿಹಾಸದ ಒಂದು ಪಾಠ ನೆನಪಿಸಿಕೊಳ್ಳೋಣವೇ.

 

ಪ್ರತಿ ಶರತ್ಕಾಲದಲ್ಲಿ

ಹೂವು ಅರಳುತ್ತಲೇ ಇರುತ್ತವೆ

ಒಂದು ತುಂಡು ಮೋಡ ಎಲ್ಲಿಂದಲೋ

ಬಂದು ಬರಡು ಭೂಮಿಯ ಮೇಲೆ ಮಳೆ ಸುರಿಸುತ್ತದೆ

ನಗ್ನ ಗಿಡವೊಂದರ ಮೇಲಿನ ಮಗ್ನ  ಕೋಗಿಲೆ ಹಾಡುತ್ತಲೇ ಇರುತ್ತದೆ

ಪ್ರತಿ ದಿಕ್ಕಿನಿಂದ ಕೇಳುತ್ತಿರುತ್ತದೆ ಒಂದೇ ಕೂಗು

ನದಿ ಕೊಳ್ಳದ ತುಂಬೆಲ್ಲ ಅದೇ ಹಾಡು

ಆ ಹಾಡನ್ನು ಬಂಧಿಸಲಾದೀತೇ?

ಹಾಡು ಸ್ವತಂತ್ರ

ಎಲ್ಲ ದಿಕ್ಕಿಗೆ ಹರಿದು ಹೋದೀತು,

ಅಷ್ಟೇ.

-ಗೌಹರ್ ರಾಜ಼,
ಭಾರತೀಯ ವಿಜ್ಞಾನಿ, ಉರ್ದು ಕವಿ, ಸಾಮಾಜಿಕ ಕಾರ್ಯಕರ್ತ, ಸಾಕ್ಷ್ಯಚಿತ್ರ ನಿರ್ದೇಶಕ

ಕನ್ನಡಕ್ಕೆ: ಹೃಷಿಕೇಶ ಬಹದ್ದೂರ ದೇಸಾಯಿ

ವಿಡಿಯೊ ನೋಡಿ:

Gauhar Raza ki Nayi nazm – my lord #HumDekhenge #PrashantBhushan

Posted by Gauhar Raza on Thursday, August 20, 2020


ಓದಿ:

“ಕೇಳುವಿರೇನು ನೀವು ನಾ ಹುಚ್ಚನಾದದ್ದು ಹೇಗೆಂದು?”- ಖಲೀಲ್ ಗಿಬ್ರಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...