Homeಕವನಗೌಹರ್ ರಾಜ಼ ಅವರ ‘ಮೈ ಲಾರ್ಡ್’ ಕನ್ನಡಾನುವಾದ

ಗೌಹರ್ ರಾಜ಼ ಅವರ ‘ಮೈ ಲಾರ್ಡ್’ ಕನ್ನಡಾನುವಾದ

- Advertisement -
- Advertisement -

ಮೈ ಲಾರ್ಡ್

ನನ್ನ ದೊರೆಯೇ

 

ನಾ ಮಾಡಿದ ಅಪರಾಧ ದೊಡ್ಡದು ದೊರೆಯೇ,

ಬಹಳ ಗಂಭೀರ.

 

ಎಲ್ಲರೂ ಬಾಯಿ ಮುಚ್ಚಿಕೊಂಡಿರಲೇಬೇಕಾದ ಈ ಕಾಲದಲ್ಲಿ

ನಾನು ಬಾಯಿ ತೆಗೆಯುವ ಉದ್ಧಟತನ ಮಾಡಿದೆ

ಅದು ಅಪರಾಧವೆ ಸರಿ

ಅದಕ್ಕೆ ನೀವು ಯಾವ ಶಿಕ್ಷೆಯಾದರೂ ಕೊಡಿ ನನ್ನ ದೊರೆಯೇ ,

ಎಷ್ಟಾದರೂ ನೀವು ದೈವೀ  ಛಾಯೆಯವರು.

 

ನ್ಯಾಯದಾನ ನಿಮ್ಮ ಕೆಲಸ, ನೀವು ಅದನ್ನು ಮಾಡಿ

ನೀವು ಸ್ವತಂತ್ರರು,

 

ನೀವು ನ್ಯಾಯಕ್ಕೆ ಯಾವುದೇ ರೂಪ ಕೊಡಬಹುದು

ಅದಕ್ಕೆ ನಮ್ಮ ಒಪ್ಪಿಗೆ ಇದೆ

ಅದನ್ನು ನೀವು ಬೇಕಾದಹಾಗೆ ಬದಲಾಯಿಸಿ,

 

ಅಥವಾ ತೆರೆದ ತುಟಿ ಹೊಲಿಯುವ ಸೂಜಿಯನ್ನಾಗಿಸಿ

ಹಗೆ ತೀರಿಸಿಕೊಳ್ಳಿ,

ನಮಗೆ ಒಪ್ಪಿಗೆ.

ಗೌಹರ್ ರಾಜ಼

 

ನ್ಯಾಯ ಖಡ್ಗದಿಂದ ನಿಮ್ಮೆಡೆ  ತೋರಿದ ಪ್ರತಿ ಬೆರಳನ್ನು ಕತ್ತರಿಸಿ ಬಿಸಾಕಿ,

ಇನ್ನೊಮ್ಮೆ ಯಾವ ನಿಯಾಮಕನ ಕಡೆ ಯಾರೂ ತೋರಿರಬಾರದು,

ಹಾಗೆ ಕತ್ತರಿಸಿ.

 

ನೀವು ಸ್ವತಂತ್ರರು

ನೀವು ನ್ಯಾಯದಾನ ಮಾಡಿ,

ಅದನ್ನು ನೀವು ಉಡಾಳ ಹುಡುಗರಿಗೆ ಪೆಟ್ಟು ಕೊಡುವ

ನಾಗರ ಬೆತ್ತವನ್ನಾಗಿಸಿ.

 

ನಾ ಮಾಡಿದ ಅಪರಾಧ ದೊಡ್ಡದು ದೊರೆಯೇ

ಬಹಳ ಗಂಭೀರ

ನೀವು ಯಾವ ಶಿಕ್ಷೆ ಯಾದರೂ ಕೊಡಿ ನನಗೆ.

 

ಆದರೆ

ನೀವು ಅವಕಾಶ ಕೊಟ್ಟರೆ

ಒಂದು ಮಾತು ಹೇಳಲೇ,

ಮೈ ಲಾರ್ಡ್,

ಇತಿಹಾಸದ ಒಂದು ಪಾಠ ನೆನಪಿಸಿಕೊಳ್ಳೋಣವೇ.

 

ಪ್ರತಿ ಶರತ್ಕಾಲದಲ್ಲಿ

ಹೂವು ಅರಳುತ್ತಲೇ ಇರುತ್ತವೆ

ಒಂದು ತುಂಡು ಮೋಡ ಎಲ್ಲಿಂದಲೋ

ಬಂದು ಬರಡು ಭೂಮಿಯ ಮೇಲೆ ಮಳೆ ಸುರಿಸುತ್ತದೆ

ನಗ್ನ ಗಿಡವೊಂದರ ಮೇಲಿನ ಮಗ್ನ  ಕೋಗಿಲೆ ಹಾಡುತ್ತಲೇ ಇರುತ್ತದೆ

ಪ್ರತಿ ದಿಕ್ಕಿನಿಂದ ಕೇಳುತ್ತಿರುತ್ತದೆ ಒಂದೇ ಕೂಗು

ನದಿ ಕೊಳ್ಳದ ತುಂಬೆಲ್ಲ ಅದೇ ಹಾಡು

ಆ ಹಾಡನ್ನು ಬಂಧಿಸಲಾದೀತೇ?

ಹಾಡು ಸ್ವತಂತ್ರ

ಎಲ್ಲ ದಿಕ್ಕಿಗೆ ಹರಿದು ಹೋದೀತು,

ಅಷ್ಟೇ.

-ಗೌಹರ್ ರಾಜ಼,
ಭಾರತೀಯ ವಿಜ್ಞಾನಿ, ಉರ್ದು ಕವಿ, ಸಾಮಾಜಿಕ ಕಾರ್ಯಕರ್ತ, ಸಾಕ್ಷ್ಯಚಿತ್ರ ನಿರ್ದೇಶಕ

ಕನ್ನಡಕ್ಕೆ: ಹೃಷಿಕೇಶ ಬಹದ್ದೂರ ದೇಸಾಯಿ

ವಿಡಿಯೊ ನೋಡಿ:

Gauhar Raza ki Nayi nazm – my lord #HumDekhenge #PrashantBhushan

Posted by Gauhar Raza on Thursday, August 20, 2020


ಓದಿ:

“ಕೇಳುವಿರೇನು ನೀವು ನಾ ಹುಚ್ಚನಾದದ್ದು ಹೇಗೆಂದು?”- ಖಲೀಲ್ ಗಿಬ್ರಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....