Homeಕವನಗೌಹರ್ ರಾಜ಼ ಅವರ ‘ಮೈ ಲಾರ್ಡ್’ ಕನ್ನಡಾನುವಾದ

ಗೌಹರ್ ರಾಜ಼ ಅವರ ‘ಮೈ ಲಾರ್ಡ್’ ಕನ್ನಡಾನುವಾದ

- Advertisement -
- Advertisement -

ಮೈ ಲಾರ್ಡ್

ನನ್ನ ದೊರೆಯೇ

 

ನಾ ಮಾಡಿದ ಅಪರಾಧ ದೊಡ್ಡದು ದೊರೆಯೇ,

ಬಹಳ ಗಂಭೀರ.

 

ಎಲ್ಲರೂ ಬಾಯಿ ಮುಚ್ಚಿಕೊಂಡಿರಲೇಬೇಕಾದ ಈ ಕಾಲದಲ್ಲಿ

ನಾನು ಬಾಯಿ ತೆಗೆಯುವ ಉದ್ಧಟತನ ಮಾಡಿದೆ

ಅದು ಅಪರಾಧವೆ ಸರಿ

ಅದಕ್ಕೆ ನೀವು ಯಾವ ಶಿಕ್ಷೆಯಾದರೂ ಕೊಡಿ ನನ್ನ ದೊರೆಯೇ ,

ಎಷ್ಟಾದರೂ ನೀವು ದೈವೀ  ಛಾಯೆಯವರು.

 

ನ್ಯಾಯದಾನ ನಿಮ್ಮ ಕೆಲಸ, ನೀವು ಅದನ್ನು ಮಾಡಿ

ನೀವು ಸ್ವತಂತ್ರರು,

 

ನೀವು ನ್ಯಾಯಕ್ಕೆ ಯಾವುದೇ ರೂಪ ಕೊಡಬಹುದು

ಅದಕ್ಕೆ ನಮ್ಮ ಒಪ್ಪಿಗೆ ಇದೆ

ಅದನ್ನು ನೀವು ಬೇಕಾದಹಾಗೆ ಬದಲಾಯಿಸಿ,

 

ಅಥವಾ ತೆರೆದ ತುಟಿ ಹೊಲಿಯುವ ಸೂಜಿಯನ್ನಾಗಿಸಿ

ಹಗೆ ತೀರಿಸಿಕೊಳ್ಳಿ,

ನಮಗೆ ಒಪ್ಪಿಗೆ.

ಗೌಹರ್ ರಾಜ಼

 

ನ್ಯಾಯ ಖಡ್ಗದಿಂದ ನಿಮ್ಮೆಡೆ  ತೋರಿದ ಪ್ರತಿ ಬೆರಳನ್ನು ಕತ್ತರಿಸಿ ಬಿಸಾಕಿ,

ಇನ್ನೊಮ್ಮೆ ಯಾವ ನಿಯಾಮಕನ ಕಡೆ ಯಾರೂ ತೋರಿರಬಾರದು,

ಹಾಗೆ ಕತ್ತರಿಸಿ.

 

ನೀವು ಸ್ವತಂತ್ರರು

ನೀವು ನ್ಯಾಯದಾನ ಮಾಡಿ,

ಅದನ್ನು ನೀವು ಉಡಾಳ ಹುಡುಗರಿಗೆ ಪೆಟ್ಟು ಕೊಡುವ

ನಾಗರ ಬೆತ್ತವನ್ನಾಗಿಸಿ.

 

ನಾ ಮಾಡಿದ ಅಪರಾಧ ದೊಡ್ಡದು ದೊರೆಯೇ

ಬಹಳ ಗಂಭೀರ

ನೀವು ಯಾವ ಶಿಕ್ಷೆ ಯಾದರೂ ಕೊಡಿ ನನಗೆ.

 

ಆದರೆ

ನೀವು ಅವಕಾಶ ಕೊಟ್ಟರೆ

ಒಂದು ಮಾತು ಹೇಳಲೇ,

ಮೈ ಲಾರ್ಡ್,

ಇತಿಹಾಸದ ಒಂದು ಪಾಠ ನೆನಪಿಸಿಕೊಳ್ಳೋಣವೇ.

 

ಪ್ರತಿ ಶರತ್ಕಾಲದಲ್ಲಿ

ಹೂವು ಅರಳುತ್ತಲೇ ಇರುತ್ತವೆ

ಒಂದು ತುಂಡು ಮೋಡ ಎಲ್ಲಿಂದಲೋ

ಬಂದು ಬರಡು ಭೂಮಿಯ ಮೇಲೆ ಮಳೆ ಸುರಿಸುತ್ತದೆ

ನಗ್ನ ಗಿಡವೊಂದರ ಮೇಲಿನ ಮಗ್ನ  ಕೋಗಿಲೆ ಹಾಡುತ್ತಲೇ ಇರುತ್ತದೆ

ಪ್ರತಿ ದಿಕ್ಕಿನಿಂದ ಕೇಳುತ್ತಿರುತ್ತದೆ ಒಂದೇ ಕೂಗು

ನದಿ ಕೊಳ್ಳದ ತುಂಬೆಲ್ಲ ಅದೇ ಹಾಡು

ಆ ಹಾಡನ್ನು ಬಂಧಿಸಲಾದೀತೇ?

ಹಾಡು ಸ್ವತಂತ್ರ

ಎಲ್ಲ ದಿಕ್ಕಿಗೆ ಹರಿದು ಹೋದೀತು,

ಅಷ್ಟೇ.

-ಗೌಹರ್ ರಾಜ಼,
ಭಾರತೀಯ ವಿಜ್ಞಾನಿ, ಉರ್ದು ಕವಿ, ಸಾಮಾಜಿಕ ಕಾರ್ಯಕರ್ತ, ಸಾಕ್ಷ್ಯಚಿತ್ರ ನಿರ್ದೇಶಕ

ಕನ್ನಡಕ್ಕೆ: ಹೃಷಿಕೇಶ ಬಹದ್ದೂರ ದೇಸಾಯಿ

ವಿಡಿಯೊ ನೋಡಿ:

Gauhar Raza ki Nayi nazm – my lord #HumDekhenge #PrashantBhushan

Posted by Gauhar Raza on Thursday, August 20, 2020


ಓದಿ:

“ಕೇಳುವಿರೇನು ನೀವು ನಾ ಹುಚ್ಚನಾದದ್ದು ಹೇಗೆಂದು?”- ಖಲೀಲ್ ಗಿಬ್ರಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...