Homeಪುಸ್ತಕ ವಿಮರ್ಶೆ’ಸಾವಿತ್ರಿಬಾಯಿ ಫುಲೆ ಮತ್ತು ನಾನು’: ಶೋಷಿತ ಶಬರಿಗಳ ಕಥನಗಳಿಗೆ ಕನ್ನಡಿ

’ಸಾವಿತ್ರಿಬಾಯಿ ಫುಲೆ ಮತ್ತು ನಾನು’: ಶೋಷಿತ ಶಬರಿಗಳ ಕಥನಗಳಿಗೆ ಕನ್ನಡಿ

- Advertisement -
- Advertisement -

ಶೌಚಾಲಯದಂತಹ ಕನಿಷ್ಟ ಮೂಲಸೌಕರ್ಯಗಳೂ ಇಲ್ಲದ ಒಂದು ಹಳ್ಳಿಯಲ್ಲಿ ಬದುಕುತ್ತಿರುವ, ನಗರದ ಕಲ್ಪನೆಯೇ ಇಲ್ಲದ ತಳಸಮುದಾಯದ ಒಬ್ಬ ಹುಡುಗಿ ಶಬರಿ ತನ್ನ ಸಾಹಸದಿಂದ ನಗರದ ಒಂದು ಪ್ರತಿಷ್ಠಿತ ಕಾಲೇಜಿನಲ್ಲಿ ಪ್ರವೇಶ ಪಡೆದು, ಆನಂತರ ಆ ಶಿಕ್ಷಣ ಸಂಸ್ಥೆಯಲ್ಲಿ ಎದುರಾಗುವ ಅವಮಾನ, ನಿರ್ಲಕ್ಷ್ಯ, ಏಕಾಂಗಿತನದಂತಹ ಸವಾಲುಗಳ ನಡುವೆ ಕುಗ್ಗಿ, ಮತ್ತೆ ಎದ್ದುನಿಂತು ಅಂದುಕೊಂಡಿದ್ದನ್ನು ಸಾಧಿಸಿ, ಒಬ್ಬ ಆಕ್ಟಿವಿಸ್ಟ್ ಆದ ಪ್ರಗತಿಯ ಹಾದಿಯನ್ನು ’ಸಾವಿತ್ರಿಬಾಯಿ ಫುಲೆ ಮತ್ತು ನಾನು’ ಎಂಬ ಕಥನ (ಕಿರು ಕಾದಂಬರಿ) ನಿರೂಪಿಸುತ್ತದೆ.

ಶಬರಿಯ ಈ ಹಾದಿ ಅಷ್ಟು ಸುಲಭದ್ದಾಗಿರಲಿಲ್ಲ. ಪಿತೃಪ್ರಧಾನ ವ್ಯವಸ್ಥೆಯಲ್ಲಿ ಕೆಳಜಾತಿಯ ಹೆಣ್ಣು, ಜಾತಿಯ ಕಾರಣಕ್ಕೆ ಮಾತ್ರವಲ್ಲದೆ ಹೆಣ್ಣೆಂಬ ಕಾರಣವೂ ಸೇರಿ ಇನ್ನೂ ಹೆಚ್ಚು ತುಳಿಯಲ್ಪಟ್ಟವಳಾಗಿದ್ದಾಳೆ. ಈ ವ್ಯವಸ್ಥೆಯು ’ಮಾದರಿ ಹೆಣ್ಣು’ ಎಂದರೆ ಹೀಗೇ ಎಂದು ಶತಮಾನಗಳಿಂದ ಬಿಂಬಿಸಿದೆ. ಈ ಗುಂಪಿಗೆ ಸೇರಲು ಸೋ ಕಾಲ್ಡ್ ಮಾನದಂಡಗಳೆನಿಸಿಕೊಂಡಿರುವ ಮೇಲ್ಜಾತಿ, ಬಿಳಿಬಣ್ಣ, ಶುದ್ಧ ಭಾಷೆ, ಬಣ್ಣಬಣ್ಣದ ಬಟ್ಟೆ ಈ ಯಾವುವೂ ಶಬರಿಯ ಬಳಿಯಿಲ್ಲ. ತಳಜಾತಿಯಿಂದ ಬಂದ ಅವಳು ನಗರವನ್ನೇ ನೋಡಿರದ, ಕಪ್ಪು ಬಣ್ಣದ, ಜಿಡ್ಡು ಮುಖದ, ಇಂಗ್ಲಿಷ್ ಬಾರದ, ಮೀಸಲಾತಿಯಿಂದ ಮುಂದೆಬಂದ ಹುಡುಗಿ. ಅವಳನ್ನು ಪ್ರತ್ಯೇಕಿಸಲು ಈ ವ್ಯವಸ್ಥೆಗೆ ಇದಕ್ಕಿಂತ ಹೆಚ್ಚಿನ ಕಾರಣಗಳು ಬೇಕೇ? ಧರ್ಮ, ಜಾತಿ, ಲಿಂಗ, ಭಾಷೆ, ಬಣ್ಣ, ಆಹಾರ, ಉಡುಗೆ ಇತ್ಯಾದಿಯಾಗಿ ಯಾವುದೋ ಒಂದು ಭಿನ್ನತೆಯ ಕಾರಣಕ್ಕೆ ಎಲ್ಲರಿಂದಲೂ, ಎಲ್ಲಾ ಕಡೆಯೂ ಹೊರಗಿಡುವಿಕೆ ಕ್ರೌರ್ಯದ ಪರಮಾವಧಿ. ಈ ಕ್ರೌರ್ಯ ಅಂತಿಂತದ್ದಲ್ಲಾ. ಇದು ಒಂದು ವ್ಯಕ್ತಿತ್ವವನ್ನೇ ಕೊಂದುಬಿಡುತ್ತದೆ. ಶಬರಿ ಈ ಪ್ರತ್ಯೇಕತೆಯಿಂದ ಖಿನ್ನತೆಗೊಳಗಾಗಿ ಇನ್ನು ಇಲ್ಲಿ ಬದುಕುಳಿಯುವುದು ಅಸಾಧ್ಯವೆಂದು ನಿರ್ಧರಿಸಿ ಆತ್ಮಹತ್ಯೆಯ ಬಗ್ಗೆ ಯೋಚಿಸುವಾಗ ಅವಳಿಗೆ ಸಿಕ್ಕ ಸಾವಿತ್ರಿಬಾಯಿ ಫುಲೆಯವರ ಡೈರಿಯು ಬದುಕಲು ಸ್ಫೂರ್ತಿ ತುಂಬುತ್ತದೆ. ಹೆಣ್ಣು ಮಕ್ಕಳು ಶಿಕ್ಷಣ ಪಡೆಯುವುದು ಅಪರಾಧವಾಗಿದ್ದ ಕಾಲದಲ್ಲಿ, ಜ್ಯೋತಿಬಾ ಫುಲೆಯವರ ಬೆಂಬಲದಿಂದ ಶಿಕ್ಷಣ ಪಡೆದು, ಇಡೀ ಸಮಾಜದ, ಕುಟುಂಬದ ಅಡಚಣೆಗಳ ನಡುವೆಯೂ ಭಾರತದಲ್ಲೇ ಮೊದಲಬಾರಿಗೆ ಹೆಣ್ಣು ಮಕ್ಕಳಿಗೆ, ದಲಿತರಿಗೆ, ದಮನಿತರಿಗೆ ಶಾಲೆಯನ್ನು ತೆರೆದ ಸಾವಿತ್ರಿಬಾಯಿ ಫುಲೆಯವರ ಸಾಧನೆ ಶಬರಿಗೆ ತಾನು ಮಾಡಬೇಕಿರುವ ಕರ್ತವ್ಯವನ್ನು, ತನಗಿರುವ ಜವಾಬ್ದಾರಿಯನ್ನು ಎಚ್ಚರಿಸುತ್ತದೆ. ಇದರಿಂದ ಶಬರಿಯ ಆತ್ಮಸ್ಥೈರ್ಯ ಹೆಚ್ಚುತ್ತದೆ. ತನ್ನ ಗುರಿಯು ಸ್ಪಷ್ಟವಾಗುತ್ತದೆ. ಆದರೆ, ಅದನ್ನು ಸಾಧಿಸಲು ಹೊರಟ ಶಬರಿ ಬೆದರಿಕೆಗಳನ್ನು ಎದುರಿಸಬೇಕಾಗುತ್ತದೆ. ಶತಮಾನಗಳಿಂದ ತಳಸಮುದಾಯದ ಜನರನ್ನು ಗುಲಾಮರನ್ನಾಗಿ ದುಡಿಸಿಕೊಂಡ ಈ ವ್ಯವಸ್ಥೆಗೆ ಕೆಳಜಾತಿಯ, ಅದರಲ್ಲೂ ಹೆಣ್ಣೊಬ್ಬಳ ಆತ್ಮವಿಶ್ವಾಸ ನೆಮ್ಮದಿ ಕೆಡಿಸದಿರಲು ಸಾಧ್ಯವೇ? ಇಲ್ಲಿ ಹೆಣ್ಣೊಬ್ಬಳನ್ನು ತನ್ನ ಸ್ಥಾನದಿಂದ ಮೇಲೇಳದಂತೆ ತಡೆಯಲು ಬೇಕಾದ ಎಲ್ಲಾ ನೀಚ ಕ್ರೌರ್ಯಗಳನ್ನೂ ಎಸಗಲಾಗುತ್ತದೆ ಎಂಬುದಕ್ಕೆ ಅವಳನ್ನು ಕಾರಿನಲ್ಲಿ ಅಪಹರಿಸಿ ಕಿರುಕುಳ ಕೊಟ್ಟು ಬೆದರಿಸಿದ ಘಟನೆ ಒಂದು ದುರಂತ ಉದಾಹರಣೆಯಾಗಿ, ಸಾಂಕೇತಿಕವಾಗಿ ಚಿತ್ರಿಸಲಾಗಿದೆ.


ಇಷ್ಟೆಲ್ಲಾ ಅಡಚಣೆಗಳ ಮಧ್ಯೆಯೂ ಶಬರಿ ಕುಸಿಯದೆ, ತನ್ನ ಔಪಚಾರಿಕ ಶಿಕ್ಷಣದ ಪಡೆಯುವುದರ ಜೊತೆಗೆ, ಶೋಷಿಸುವವರ ಮಧ್ಯೆ ಬದುಕಿ ಜಯಿಸುವ ಸಾಮರ್ಥ್ಯವನ್ನು ಕಲಿತುಕೊಂಡು ತನ್ನ ಗುರಿ ಮುಟ್ಟುತ್ತಾಳೆ. ಅಂತ್ಯಗೊಳಿಸಬೇಕೆಂದುಕೊಂಡಿದ್ದ ಬದುಕನ್ನು ಅರ್ಥಪೂರ್ಣವಾಗಿ ಜೀವಿಸಿ ತನ್ನ ಹೋರಾಟದಲ್ಲಿ ಗೆದ್ದ ಅವಳ ಹೋರಾಟದ ಹಾದಿ ನಮ್ಮಂತಹ ಸಾವಿರಾರು ಶಬರಿಗಳಿಗೆ ಸ್ಫೂರ್ತಿ.

ಮೀಸಲಾತಿ ಮತ್ತು ಅದನ್ನು ಪಡೆಯುತ್ತಿರುವವರ ಕುರಿತು ಮೇಲ್ಜಾತಿಗಳಲ್ಲಿ ಅಸಹನೆ, ಕೇಡಿನ ಮನೋಭಾವ ಹಾಗೂ ತಾತ್ಸಾರ ಇಂದಿಗೂ ಪ್ರಸ್ತುತವಾಗಿದೆ ಹಾಗು ಬೆಳೆಯುತ್ತಲೇ ಇದೆ. ಮೀಸಲಾತಿಯ ಬಗೆಗಿನ ಇಂತಹ ಕುತ್ಸಿತ ನೋಟಗಳಿಂದಾಗಿ ಶಿಕ್ಷಣ ಸಂಸ್ಥೆಗಳಲ್ಲಿ ಕಾದಂಬರಿಯ ಶಬರಿಯಂತೆಯೇ ನಾವೆಲ್ಲರೂ ಒಂದಲ್ಲಾ ಒಂದು ರೀತಿಯಲ್ಲಿ ತಪ್ಪದೇ ಶೋಷಣೆಯನ್ನು ಅನುಭವಿಸಿರುವುದು ವಾಸ್ತವ. ನಾವ್ಯಾರೂ ಈ ಅವಮಾನದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ. ಆದ್ದರಿಂದ ಮೀಸಲಾತಿಯ ನಿಜವಾದ ಅರ್ಥ ಎಲ್ಲರಿಗೂ ತಿಳಿಯಬೇಕಿದೆ. ನಿಮಗೆ ಮೀಸಲಾತಿಯನ್ನು ಪಡೆಯುತ್ತಿರುವವರ ಬಗ್ಗೆ ಅಸೂಯೆ, ದ್ವೇಷ ಇದ್ದರೆ ಅಥವಾ ಮೀಸಲಾತಿಯಿಂದಾಗಿ ಪ್ರತಿಭಾವಂತರಿಗೆ ಅನ್ಯಾಯವಾಗುತ್ತಿದೆ ಎಂಬ ನಿಲುವಿದ್ದರೆ ಅಥವಾ ಈಗ ಜಾತಿಯೆಂಬುದೇ ಇಲ್ಲ, ಮೀಸಲಾತಿಯನ್ನು ಬಡತನದ ಆಧಾರದ ಮೇಲೆ ನೀಡಬೇಕು ಎಂಬೆಲ್ಲಾ ತಕರಾರುಗಳಿದ್ದರೆ ಈ ಪುಸ್ತಕ ನಿಮ್ಮೆಲ್ಲಾ ತಕರಾರುಗಳಿಗೆ ಸ್ಪಷ್ಟನೆ ಕೊಡುತ್ತದೆ. ಈ ಕಥನವು ಮೇಲ್ಜಾತಿಯಲ್ಲಿ ಹುಟ್ಟಿದವರು ತಮ್ಮ ಜಾತಿಯ ಕಾರಣಕ್ಕೆ ಪಡೆಯುವ ಎಲ್ಲಾ ರೀತಿಯ ಸಾಮಾಜಿಕ ಬಂಡವಾಳಗಳನ್ನು ಮನಗಾಣಿಸಿ, ಮೀಸಲಾತಿ ಯಾಕೆ ಬೇಕು ಎಂಬುದನ್ನೂ ಅರ್ಥ ಮಾಡಿಸುತ್ತದೆ. ಜೊತೆಗೆ, ಶಿಕ್ಷಿತರಾದ ನಮ್ಮ ಜವಾಬ್ದಾರಿಗಳೇನು, ನಾವೇಗೆ ಸಂಘಟಿತರಾಗಬೇಕು ಮತ್ತು ಅಂಚಿಗೆ ತಳ್ಳಲ್ಪಟ್ಟ ಸಮುದಾಯಗಳಿಂದ, ಹಳ್ಳಿಗಳಿಂದ ನಗರಕ್ಕೆ ಬರುವ ದಲಿತ, ದಮನಿತ ವಿದ್ಯಾರ್ಥಿನಿ/ವಿದ್ಯಾರ್ಥಿಯು ನಗರದ ಉಳ್ಳವರ ಮಧ್ಯೆ ಏಕಾಂಗಿಯಾಗಿ ಪ್ರತ್ಯೇಕಗೊಳ್ಳುವುದನ್ನು ತಡೆಯಲು ನಾವು ಮಾಡಬೇಕಾದ ಕರ್ತವ್ಯಗಳೇನು ಎಂಬುದನ್ನೂ ಹೇಳುತ್ತದೆ.

ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸಲು ನೆರವಾಗುವ ಈ ಪುಸ್ತಕವನ್ನು ಕೊಟ್ಟ ಸಂಗೀತಾ ಮುಳೆಯವರಿಗೆ ಹಾಗೂ ಅದನ್ನು ಕನ್ನಡಕ್ಕೆ ತಂದಿರುವ ಕೆಸ್ತಾರ ವಿ ಮೌರ್ಯ ಮತ್ತು ವಿಕಾಸ್ ಆರ್ ಮೌರ್ಯರವರಿಗೆ
ಅಭಿನಂದನೆಗಳು.

ಕಾವ್ಯ .ಸಿ

ಕಾವ್ಯ .ಸಿ
ಭೌತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕಾವ್ಯ ಸದ್ಯಕ್ಕೆ ಬೆಂಗಳೂರು ನಿವಾಸಿ. ದಲಿತ-ಬಹುಜನ ಚಳವಳಿ ಮತ್ತು ಸ್ತ್ರೀವಾದಿ ಚಿಂತನೆಗಳ ಬಗ್ಗೆ ಆಸಕ್ತಿ ಹೊಂದಿದ್ದಾರೆ.


ಇದನ್ನೂ ಓದಿ: ನೊಂದವರ ಘನತೆಗೆ ಮಾರ್ಗ ತೋರಿದ ಸಾವಿತ್ರಿಬಾಯಿ ಫುಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಧನ್ಯವಾದಗಳು ಮೇಡಂ ನಿಮ್ಮ ಲೇಖನ ತುಂಬಾ ಚೆನ್ನಾಗಿದೆ.
    ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ.
    ಜೈ ಸಾವಿತ್ರಿಬಾಯಿ ಫುಲೆ 🌹
    ಜೈ ಭೀಮ್ 🙏

    💯ಮಾರುತಿ ಕೆಳಗೇರಿ 🙏

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...