Homeಮುಖಪುಟಒಂದಿಷ್ಟು ಶಾಯರಿಗಳು

ಒಂದಿಷ್ಟು ಶಾಯರಿಗಳು

- Advertisement -
- Advertisement -

1.
ಬದುಕು ನಡೆಯುವುದು
ತನ್ನ ಕಾಲುಗಳ ಮೇಲೆ ಫರಾಜ್,

ಬೇರೆಯವರ ಸಹಾಯದಿಂದ ಸಾಗುವುದು
ಶವಯಾತ್ರೆ ಮಾತ್ರ.
– ಫರಾಜ್ ಅಹ್ಮದ್

2.
ಎಷ್ಟೊಂದು ಜನರಿಗೆ ಪ್ರೀತಿಸುವೆನೆಂದು
ಮಾತು ಕೊಟ್ಟಿದ್ದೀಯ ಫರಾಜ್?

ಪ್ರತಿದಿನ ಹೊಸಬರೊಬ್ಬರು
ನಿನ್ನ ವಿಳಾಸ ಕೇಳುತ್ತಿದ್ದಾರೆ.
– ಫರಾಜ್ ಅಹ್ಮದ್

3.
ಕೇವಲ ದ್ವೇಷವಷ್ಟೇ ಅಲ್ಲ
ಜಗತ್ತಿನ ದುಃಖಕ್ಕೆ ಕಾರಣ ಫರಾಜ್,

ಪ್ರೇಮವೂ ಸಮಾಧಾನಿಗಳಿಗೆ ಕೊಡುತ್ತದೆ
ಬಹಳ ಕಷ್ಟ.
– ಫರಾಜ್ ಅಹ್ಮದ್

4.
ಯಾರು ಯಾಕೆ ಅಳುತ್ತಾರೆ ಗೆಳೆಯ
ಬೇರೆ ಯಾರದೋ ಸಲುವಾಗಿ,

ಎಲ್ಲ ಅಳುತ್ತಿರುವುದು
ತಮ್ಮದೇ ಯಾವುದೋ ಮಾತಿನ ಕಾರಣವಾಗಿ.
– ಸಾಹಿರ್ ಲುಧಿಯಾನ್ವಿ

5.
ತಾನೇ ಸ್ವತಃ ಒಂದು
ಸಮಸ್ಯೆಯಾಗಿರುವಾಗ,

ಬೇರೆ ಯಾವ ಸಮಸ್ಯೆಗಳಿಗೆ ತಾನೇ
ಪರಿಹಾರವಾದೀತು ಯುದ್ಧ?
– ಸಾಹಿರ್ ಲುಧಿಯಾನ್ವಿ

6.
ಅಕಸ್ಮಾತ್ ಬದುಕಿನಲ್ಲಿ
ಮತ್ತೆ ಭೇಟಿಯಾದರೆ,

ವಿಚಾರಿಸುತ್ತೇನೆ ನನ್ನ ಹತಾಶೆಯ ಬಗ್ಗೆ
ನಿನ್ನ ವಿವಶತೆಯನ್ನ.
– ಸಾಹಿರ್ ಲುಧಿಯಾನ್ವಿ

7.
ಬಿರುಗಾಳಿಯ ದೋಣಿ
ಬದುಕಿಸಿತು ನನ್ನ,

ಮುಳುಗಿಸಿಬಿಡುತ್ತಿದ್ದರು ತೀರದ ಜನ
ನನ್ನ ಹಡಗನ್ನ.
– ಮಜ್ರೂಹ್ ಸುಲ್ತಾನ್‌ಪುರಿ

8.
ನಿನ್ನ ಹೊರತಾಗಿಯೂ ಇದ್ದವು
ಶರಣಾಗುವ ಜಾಗಗಳು, ಮರೆತುಹೋದೆ,

ಹೊರಬಿದ್ದ ಮೇಲೆ ನಿನ್ನ ಸುಂದರ ಸಂಜೆಯಿಂದ
ಎಲ್ಲ ದಾರಿಗಳ ನಾನು, ಮರೆತುಹೋದೆ.
– ಮಜ್ರೂಹ್ ಸುಲ್ತಾನ್‌ಪುರಿ

9.
ದೂರ ಕುಳಿತಿದ್ದೆ ಆದರೂ ಬಿತ್ತು
ನನ್ನ ಮೇಲೆ ಸಾಕಿಯ ಕಣ್ಣು,

ದಾಹ ನಿಜವಾಗಿದ್ದರೆ ಬಂದೇ ಬರುತ್ತದೆ
ಮಧುಪಾತ್ರೆಯೂ ಹುಡುಕಿಕೊಂಡು.
– ಮಜ್ರೂಹ್ ಸುಲ್ತಾನ್‌ಪುರಿ

10.
ನಾನು ಸತ್ತಮೇಲೆಯೂ
ತೆರೆದುಕೊಂಡೇ ಇರಲಿ ನನ್ನ ಕಣ್ಣು,

ನಿನಗಾಗಿ ಕಾಯುವ ಹವ್ಯಾಸ
ಬಿಟ್ಟುಹೋಗಿಲ್ಲ ನನ್ನ ಇನ್ನೂ.
– ಫೈಜ್ ಅಹ್ಮದ್ ಫೈಜ್

11.
ಲೆಕ್ಕ ಹಾಕುತ್ತಿದ್ದೆ ಜಗತ್ತು ಕರುಣಿಸಿರುವ
ನೋವುಗಳ ಮತ್ತೆ ಮತ್ತೆ,

ಯಾಕೋ ನೆನಪಾಗುತ್ತಿರುವೆ ನೀನು
ಲೆಕ್ಕವಿಲ್ಲದಷ್ಟು ಬಾರಿ ಮತ್ತೆ ಮತ್ತೆ.
– ಫೈಜ್ ಅಹ್ಮದ್ ಫೈಜ್

12.
ಬಂದು ನೆಲೆಸಿದ ಮೇಲೆ ಹಿಂದೂ ಮುಸಲ್ಮಾನರು
ನಮ್ಮ ಓಣಿಯೊಳಗೆ,

ಮನುಷ್ಯರ ಮುಖಗಳನ್ನು ಕಾಣುವ ತಹತಹ
ತೀವ್ರವಾಯಿತು ಮನದೊಳಗೆ.
– ಕೈಫಿ ಅಝ್ಮಿ

13.
ಒಂದು ಹಿಂಜರಿಕೆ ಮಾತ್ರ
ಮನಸಿನ ಮಾತು ಹೇಳುವಾಗ ನನಗೆ

ನಿನ್ನ ಹೆಸರು ಬಂದೇ ಬರುವದು
ನನ್ನ ಈ ಕಥೆಯೊಳಗೆ.
– ಕೈಫಿ ಅಝ್ಮಿ

14.
ಏನಾಗಿದೆ ನಿನಗೆ, ಅಷ್ಟು ನಗುವಂಥದು
ಯಾವ ನೋವದು ನನ್ನಿಂದ ಬಚ್ಚಿಡುವಂಥದು.

ಕಣ್ಣಂಚಲ್ಲಿ ಹಸಿ, ತುಟಿ ಮೇಲೆ ನಗು
ಏನಾಗಿದೆ ನಿನಗೆ, ಏನೋ ಹಾಡುವಂಥದು.
– ಕೈಫಿ ಅಝ್ಮಿ

15.
ಒಂದಿಷ್ಟು ಸಮಯದಿಂದ
ನಿನ್ನ ನೆನಪಾಗುತ್ತಿಲ್ಲ ಎನ್ನುವುದು ನಿಜವಾದರೂ,

ನಿನ್ನ ಮರೆತುಬಿಟ್ಟಿರುವೆ ಎನ್ನುವುದು ಮಾತ್ರ
ಸಂಪೂರ್ಣ ಸುಳ್ಳು.
– ಫಿರಕ್ ಗೋರಕ್‌ಪುರಿ

16.
ಬಹಳ ಮೊದಲೇ ಆ ಹೆಜ್ಜೆಗಳ
ಸಂಕೋಚವನ್ನು ಗುರುತಿಸುತ್ತೇನೆ,

ಹೇ ಬದುಕು! ಬಹಳಷ್ಟು ದೂರದಿಂದಲೇ
ನಿನ್ನನ್ನು ಗುರುತಿಸುತ್ತೇನೆ.
– ಫಿರಕ್ ಗೋರಕ್‌ಪುರಿ

17.
ವೈರಿಯಲ್ಲೂ
ಸ್ವಾಭಿಮಾನದ ನಿರೀಕ್ಷೆ ನನಗೆ,

ತಲೆ ಯಾರದಾದರೇನು
ಕಾಲುಗಳ ಮೇಲೆ ಇಷ್ಟವಾಗುವುದಿಲ್ಲ ನನಗೆ.
– ಜಾವೇದ್ ಅಖ್ತರ್

18.
ಎಲ್ಲರಿಂದಲೂ ಖುಷಿ
ಒಂದು ಹೆಜ್ಜೆ ದೂರ ಇದೆ,

ಪ್ರತಿ ಮನೆಯಲ್ಲೂ ಕೋಣೆ
ಒಂದೇ ಒಂದು ಕಡಿಮೆ ಇದೆ.
– ಜಾವೇದ್ ಅಖ್ತರ್

19.
ಕದ್ದು ತರುತ್ತಿದ್ದೆವು ಕೂಡಲು
ನಾವಿಬ್ಬರೂ ಸಮಯವನ್ನ ಆಗ,

ಈಗ ಭೇಟಿಯಾಗುತ್ತೇವೆ
ಯಾವಾಗಲಾದರೂ ಸಮಯ ಸಿಕ್ಕಾಗ.
– ಜಾವೇದ್ ಅಖ್ತರ್

20.
ಬದುಕುವ ರೀತಿಗಳೇ ವಿಚಿತ್ರ
ಈ ಶಹರದಲ್ಲಿ,

ಮಾತುಗಳಲ್ಲೇನೋ ಭರ್ತಿ ತಮಾಶೆ
ನೋವಿನ ಗಾಯಗಳು ದನಿಯಲ್ಲಿ.
– ಜಾವೇದ್ ಅಖ್ತರ್

21.
ಹೋಗಿ ಹೇಳಿ ಯಾರಾದರೂ
ಜ್ವಾಲೆಗಳಿಗೆ, ಕಿಡಿಗಳಿಗೆ

ಪುರುಸೊತ್ತು ಮಾಡಿಕೊಂಡು,

ಅರಳಿನಿಂತಿವೆ ಹೂಗಳು
ಈ ಸಲ
ಪೂರ್ತಿ ತಯಾರಿ ಮಾಡಿಕೊಂಡು.
– ರಾಹತ್ ಇಂದೂರಿ

22.
ಪ್ರತಿರಾತ್ರಿ
ನಕ್ಷತ್ರಗಳಿಗೆ ತಮ್ಮ ಮೆರೆದಾಟದಲ್ಲಿ
ಅಡಚಣಿಯಾಗುತ್ತದೆ,

ಕತ್ತಲೆಯಾದೊಡನೆ
ತಲೆತಿರುಕ ಚಂದ್ರನ ಸವಾರಿ
ಮನೆಯಿಂದ ಹೊರಗೆ ಬೀಳುತ್ತದೆ.
– ರಾಹತ್ ಇಂದೂರಿ

23.
ನನ್ನ ಚಹರೆಯ ಬದಲಾಗುವ ಬಣ್ಣಗಳನ್ನು
ಜನ ಗಂಭೀರವಾಗಿ ಗಮನಿಸುತ್ತಾರೆ

ನಿನ್ನ ಹೆಸರ ಮುಂದೆ ಮಾಡಿ
ಜನ ನನ್ನ ತಮಾಶೆ ಮಾಡುತ್ತಾರೆ
– ರಾಹತ್ ಇಂದೂರಿ

24.
ಜನ ಮಾತಾಡಿಕೊಳ್ಳುವಂತೆ ನಿನಗೆ ಇನ್ನೂ
ನನ್ನ ಮೇಲಿನ ಮುನಿಸು ಕಡಿಮೆಯಾಗಿಲ್ಲ,

ಆದರೆ ನಿನ್ನ ಕಣ್ಣುಗಳು ಮಾತ್ರ ನನಗೆ
ಬೇರೆ ಏನೋ ಹೇಳುತ್ತಿವೆಯಲ್ಲ.
– ಜನ್ ನಿಸಾರ್ ಅಖ್ತರ್

25.
ನೂರಕ್ಕೆ ನೂರು ನಿಜ
ನನ್ನ ಕವಿತೆಗಳು ಇಡೀ ಜಗತ್ತಿಗಾಗಿ,

ಆದರೆ ಕೆಲವು ಸಾಲುಗಳು ಮಾತ್ರ
ಕೇವಲ ಅವಳಿಗಾಗಿ.
– ಜನ್ ನಿಸಾರ್ ಅಖ್ತರ್

26.
ಇವತ್ತು ಮಾತ್ರ
ನಿನ್ನ ಮುಟ್ಟಿ ಮಾತನಾಡಿಸಿದರೂ
ನೀನು ಸಿಗಲಿಲ್ಲ ನನಗೆ,

ಹಿಂದೊಮ್ಮೆ
ನಿನ್ನ ಭೇಟಿ ಮಾಡುವ ಆಲೋಚನೆಯೇ
ತಬ್ಬಿಬ್ಬು ಮಾಡುತ್ತಿತ್ತು ನನ್ನ !
– ಜನ್ ನಿಸಾರ್ ಅಖ್ತರ್

27.
ಗೊತ್ತಿರಲಿ ನಿಮಗೆ ಇಷ್ಟು
ಪ್ರೀತಿ ಅಷ್ಟು ಸುಲಭವಲ್ಲ

ಬೆಂಕಿಯ ನದಿ ಇದು
ಮುಳುಗಿ ಈಜದೆ ಬೇರೆ ದಾರಿ ಇಲ್ಲ .
– ಜಿಗರ್ ಮೊರಾದಾಬಾದಿ

28.
ಎಲ್ಲ ಕಡೆ ಮೆರೆಯುತ್ತಿವೆ
ಪ್ರೇಮದ ಸಂದೇಶಗಳಾಗಿ,

ನೋಡಿ ಹೇಗಿದೆ ನನಗಿಂತಲೂ
ನನ್ನ ಕಥೆಗಳ ಅದೃಷ್ಟವೇ
ಜಬರ್ದಸ್ತಾಗಿ.
– ಜಿಗರ್ ಮೊರಾದಾಬಾದಿ

29.
ನನ್ನ ಬದುಕೇನೋ ಕಳೆದು ಹೋಯಿತು
ನಿನ್ನ ವಿರಹದ ನೆರಳಲ್ಲಿ,

ನನ್ನ ಸಾವಿಗೂ ಒಂದು ಪ್ರಿಯವಾದ
ಕಾರಣ ಬೇಕಲ್ಲ.
-ಜಿಗರ್ ಮೊರಾದಾಬಾದಿ

 

ಇದನ್ನೂ ಓದಿ: ಗುಲ್ಜಾರ್ ಅವರ ಪದ್ಯಗಳು

 

ಚಿದಂಬರ ನರೇಂದ್ರ

ಚಿದಂಬರ ನರೇಂದ್ರ
ಕವಿ, ಅನುವಾದಕ. ‘ಚಿಕ್ಕಿ ತೋರಿಸ್ತಾವ ಚಾಚಿ ಬೆರಳ’, ‘ಹೂಬಾಣ’, ‘ಗಾಳೀ ಕೆನೆ’ ಪ್ರಕಟಿತ ಕವನ ಸಂಕಲನಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...