Homeಮುಖಪುಟಒಂದಿಷ್ಟು ಶಾಯರಿಗಳು

ಒಂದಿಷ್ಟು ಶಾಯರಿಗಳು

- Advertisement -
- Advertisement -

1.
ಬದುಕು ನಡೆಯುವುದು
ತನ್ನ ಕಾಲುಗಳ ಮೇಲೆ ಫರಾಜ್,

ಬೇರೆಯವರ ಸಹಾಯದಿಂದ ಸಾಗುವುದು
ಶವಯಾತ್ರೆ ಮಾತ್ರ.
– ಫರಾಜ್ ಅಹ್ಮದ್

2.
ಎಷ್ಟೊಂದು ಜನರಿಗೆ ಪ್ರೀತಿಸುವೆನೆಂದು
ಮಾತು ಕೊಟ್ಟಿದ್ದೀಯ ಫರಾಜ್?

ಪ್ರತಿದಿನ ಹೊಸಬರೊಬ್ಬರು
ನಿನ್ನ ವಿಳಾಸ ಕೇಳುತ್ತಿದ್ದಾರೆ.
– ಫರಾಜ್ ಅಹ್ಮದ್

3.
ಕೇವಲ ದ್ವೇಷವಷ್ಟೇ ಅಲ್ಲ
ಜಗತ್ತಿನ ದುಃಖಕ್ಕೆ ಕಾರಣ ಫರಾಜ್,

ಪ್ರೇಮವೂ ಸಮಾಧಾನಿಗಳಿಗೆ ಕೊಡುತ್ತದೆ
ಬಹಳ ಕಷ್ಟ.
– ಫರಾಜ್ ಅಹ್ಮದ್

4.
ಯಾರು ಯಾಕೆ ಅಳುತ್ತಾರೆ ಗೆಳೆಯ
ಬೇರೆ ಯಾರದೋ ಸಲುವಾಗಿ,

ಎಲ್ಲ ಅಳುತ್ತಿರುವುದು
ತಮ್ಮದೇ ಯಾವುದೋ ಮಾತಿನ ಕಾರಣವಾಗಿ.
– ಸಾಹಿರ್ ಲುಧಿಯಾನ್ವಿ

5.
ತಾನೇ ಸ್ವತಃ ಒಂದು
ಸಮಸ್ಯೆಯಾಗಿರುವಾಗ,

ಬೇರೆ ಯಾವ ಸಮಸ್ಯೆಗಳಿಗೆ ತಾನೇ
ಪರಿಹಾರವಾದೀತು ಯುದ್ಧ?
– ಸಾಹಿರ್ ಲುಧಿಯಾನ್ವಿ

6.
ಅಕಸ್ಮಾತ್ ಬದುಕಿನಲ್ಲಿ
ಮತ್ತೆ ಭೇಟಿಯಾದರೆ,

ವಿಚಾರಿಸುತ್ತೇನೆ ನನ್ನ ಹತಾಶೆಯ ಬಗ್ಗೆ
ನಿನ್ನ ವಿವಶತೆಯನ್ನ.
– ಸಾಹಿರ್ ಲುಧಿಯಾನ್ವಿ

7.
ಬಿರುಗಾಳಿಯ ದೋಣಿ
ಬದುಕಿಸಿತು ನನ್ನ,

ಮುಳುಗಿಸಿಬಿಡುತ್ತಿದ್ದರು ತೀರದ ಜನ
ನನ್ನ ಹಡಗನ್ನ.
– ಮಜ್ರೂಹ್ ಸುಲ್ತಾನ್‌ಪುರಿ

8.
ನಿನ್ನ ಹೊರತಾಗಿಯೂ ಇದ್ದವು
ಶರಣಾಗುವ ಜಾಗಗಳು, ಮರೆತುಹೋದೆ,

ಹೊರಬಿದ್ದ ಮೇಲೆ ನಿನ್ನ ಸುಂದರ ಸಂಜೆಯಿಂದ
ಎಲ್ಲ ದಾರಿಗಳ ನಾನು, ಮರೆತುಹೋದೆ.
– ಮಜ್ರೂಹ್ ಸುಲ್ತಾನ್‌ಪುರಿ

9.
ದೂರ ಕುಳಿತಿದ್ದೆ ಆದರೂ ಬಿತ್ತು
ನನ್ನ ಮೇಲೆ ಸಾಕಿಯ ಕಣ್ಣು,

ದಾಹ ನಿಜವಾಗಿದ್ದರೆ ಬಂದೇ ಬರುತ್ತದೆ
ಮಧುಪಾತ್ರೆಯೂ ಹುಡುಕಿಕೊಂಡು.
– ಮಜ್ರೂಹ್ ಸುಲ್ತಾನ್‌ಪುರಿ

10.
ನಾನು ಸತ್ತಮೇಲೆಯೂ
ತೆರೆದುಕೊಂಡೇ ಇರಲಿ ನನ್ನ ಕಣ್ಣು,

ನಿನಗಾಗಿ ಕಾಯುವ ಹವ್ಯಾಸ
ಬಿಟ್ಟುಹೋಗಿಲ್ಲ ನನ್ನ ಇನ್ನೂ.
– ಫೈಜ್ ಅಹ್ಮದ್ ಫೈಜ್

11.
ಲೆಕ್ಕ ಹಾಕುತ್ತಿದ್ದೆ ಜಗತ್ತು ಕರುಣಿಸಿರುವ
ನೋವುಗಳ ಮತ್ತೆ ಮತ್ತೆ,

ಯಾಕೋ ನೆನಪಾಗುತ್ತಿರುವೆ ನೀನು
ಲೆಕ್ಕವಿಲ್ಲದಷ್ಟು ಬಾರಿ ಮತ್ತೆ ಮತ್ತೆ.
– ಫೈಜ್ ಅಹ್ಮದ್ ಫೈಜ್

12.
ಬಂದು ನೆಲೆಸಿದ ಮೇಲೆ ಹಿಂದೂ ಮುಸಲ್ಮಾನರು
ನಮ್ಮ ಓಣಿಯೊಳಗೆ,

ಮನುಷ್ಯರ ಮುಖಗಳನ್ನು ಕಾಣುವ ತಹತಹ
ತೀವ್ರವಾಯಿತು ಮನದೊಳಗೆ.
– ಕೈಫಿ ಅಝ್ಮಿ

13.
ಒಂದು ಹಿಂಜರಿಕೆ ಮಾತ್ರ
ಮನಸಿನ ಮಾತು ಹೇಳುವಾಗ ನನಗೆ

ನಿನ್ನ ಹೆಸರು ಬಂದೇ ಬರುವದು
ನನ್ನ ಈ ಕಥೆಯೊಳಗೆ.
– ಕೈಫಿ ಅಝ್ಮಿ

14.
ಏನಾಗಿದೆ ನಿನಗೆ, ಅಷ್ಟು ನಗುವಂಥದು
ಯಾವ ನೋವದು ನನ್ನಿಂದ ಬಚ್ಚಿಡುವಂಥದು.

ಕಣ್ಣಂಚಲ್ಲಿ ಹಸಿ, ತುಟಿ ಮೇಲೆ ನಗು
ಏನಾಗಿದೆ ನಿನಗೆ, ಏನೋ ಹಾಡುವಂಥದು.
– ಕೈಫಿ ಅಝ್ಮಿ

15.
ಒಂದಿಷ್ಟು ಸಮಯದಿಂದ
ನಿನ್ನ ನೆನಪಾಗುತ್ತಿಲ್ಲ ಎನ್ನುವುದು ನಿಜವಾದರೂ,

ನಿನ್ನ ಮರೆತುಬಿಟ್ಟಿರುವೆ ಎನ್ನುವುದು ಮಾತ್ರ
ಸಂಪೂರ್ಣ ಸುಳ್ಳು.
– ಫಿರಕ್ ಗೋರಕ್‌ಪುರಿ

16.
ಬಹಳ ಮೊದಲೇ ಆ ಹೆಜ್ಜೆಗಳ
ಸಂಕೋಚವನ್ನು ಗುರುತಿಸುತ್ತೇನೆ,

ಹೇ ಬದುಕು! ಬಹಳಷ್ಟು ದೂರದಿಂದಲೇ
ನಿನ್ನನ್ನು ಗುರುತಿಸುತ್ತೇನೆ.
– ಫಿರಕ್ ಗೋರಕ್‌ಪುರಿ

17.
ವೈರಿಯಲ್ಲೂ
ಸ್ವಾಭಿಮಾನದ ನಿರೀಕ್ಷೆ ನನಗೆ,

ತಲೆ ಯಾರದಾದರೇನು
ಕಾಲುಗಳ ಮೇಲೆ ಇಷ್ಟವಾಗುವುದಿಲ್ಲ ನನಗೆ.
– ಜಾವೇದ್ ಅಖ್ತರ್

18.
ಎಲ್ಲರಿಂದಲೂ ಖುಷಿ
ಒಂದು ಹೆಜ್ಜೆ ದೂರ ಇದೆ,

ಪ್ರತಿ ಮನೆಯಲ್ಲೂ ಕೋಣೆ
ಒಂದೇ ಒಂದು ಕಡಿಮೆ ಇದೆ.
– ಜಾವೇದ್ ಅಖ್ತರ್

19.
ಕದ್ದು ತರುತ್ತಿದ್ದೆವು ಕೂಡಲು
ನಾವಿಬ್ಬರೂ ಸಮಯವನ್ನ ಆಗ,

ಈಗ ಭೇಟಿಯಾಗುತ್ತೇವೆ
ಯಾವಾಗಲಾದರೂ ಸಮಯ ಸಿಕ್ಕಾಗ.
– ಜಾವೇದ್ ಅಖ್ತರ್

20.
ಬದುಕುವ ರೀತಿಗಳೇ ವಿಚಿತ್ರ
ಈ ಶಹರದಲ್ಲಿ,

ಮಾತುಗಳಲ್ಲೇನೋ ಭರ್ತಿ ತಮಾಶೆ
ನೋವಿನ ಗಾಯಗಳು ದನಿಯಲ್ಲಿ.
– ಜಾವೇದ್ ಅಖ್ತರ್

21.
ಹೋಗಿ ಹೇಳಿ ಯಾರಾದರೂ
ಜ್ವಾಲೆಗಳಿಗೆ, ಕಿಡಿಗಳಿಗೆ

ಪುರುಸೊತ್ತು ಮಾಡಿಕೊಂಡು,

ಅರಳಿನಿಂತಿವೆ ಹೂಗಳು
ಈ ಸಲ
ಪೂರ್ತಿ ತಯಾರಿ ಮಾಡಿಕೊಂಡು.
– ರಾಹತ್ ಇಂದೂರಿ

22.
ಪ್ರತಿರಾತ್ರಿ
ನಕ್ಷತ್ರಗಳಿಗೆ ತಮ್ಮ ಮೆರೆದಾಟದಲ್ಲಿ
ಅಡಚಣಿಯಾಗುತ್ತದೆ,

ಕತ್ತಲೆಯಾದೊಡನೆ
ತಲೆತಿರುಕ ಚಂದ್ರನ ಸವಾರಿ
ಮನೆಯಿಂದ ಹೊರಗೆ ಬೀಳುತ್ತದೆ.
– ರಾಹತ್ ಇಂದೂರಿ

23.
ನನ್ನ ಚಹರೆಯ ಬದಲಾಗುವ ಬಣ್ಣಗಳನ್ನು
ಜನ ಗಂಭೀರವಾಗಿ ಗಮನಿಸುತ್ತಾರೆ

ನಿನ್ನ ಹೆಸರ ಮುಂದೆ ಮಾಡಿ
ಜನ ನನ್ನ ತಮಾಶೆ ಮಾಡುತ್ತಾರೆ
– ರಾಹತ್ ಇಂದೂರಿ

24.
ಜನ ಮಾತಾಡಿಕೊಳ್ಳುವಂತೆ ನಿನಗೆ ಇನ್ನೂ
ನನ್ನ ಮೇಲಿನ ಮುನಿಸು ಕಡಿಮೆಯಾಗಿಲ್ಲ,

ಆದರೆ ನಿನ್ನ ಕಣ್ಣುಗಳು ಮಾತ್ರ ನನಗೆ
ಬೇರೆ ಏನೋ ಹೇಳುತ್ತಿವೆಯಲ್ಲ.
– ಜನ್ ನಿಸಾರ್ ಅಖ್ತರ್

25.
ನೂರಕ್ಕೆ ನೂರು ನಿಜ
ನನ್ನ ಕವಿತೆಗಳು ಇಡೀ ಜಗತ್ತಿಗಾಗಿ,

ಆದರೆ ಕೆಲವು ಸಾಲುಗಳು ಮಾತ್ರ
ಕೇವಲ ಅವಳಿಗಾಗಿ.
– ಜನ್ ನಿಸಾರ್ ಅಖ್ತರ್

26.
ಇವತ್ತು ಮಾತ್ರ
ನಿನ್ನ ಮುಟ್ಟಿ ಮಾತನಾಡಿಸಿದರೂ
ನೀನು ಸಿಗಲಿಲ್ಲ ನನಗೆ,

ಹಿಂದೊಮ್ಮೆ
ನಿನ್ನ ಭೇಟಿ ಮಾಡುವ ಆಲೋಚನೆಯೇ
ತಬ್ಬಿಬ್ಬು ಮಾಡುತ್ತಿತ್ತು ನನ್ನ !
– ಜನ್ ನಿಸಾರ್ ಅಖ್ತರ್

27.
ಗೊತ್ತಿರಲಿ ನಿಮಗೆ ಇಷ್ಟು
ಪ್ರೀತಿ ಅಷ್ಟು ಸುಲಭವಲ್ಲ

ಬೆಂಕಿಯ ನದಿ ಇದು
ಮುಳುಗಿ ಈಜದೆ ಬೇರೆ ದಾರಿ ಇಲ್ಲ .
– ಜಿಗರ್ ಮೊರಾದಾಬಾದಿ

28.
ಎಲ್ಲ ಕಡೆ ಮೆರೆಯುತ್ತಿವೆ
ಪ್ರೇಮದ ಸಂದೇಶಗಳಾಗಿ,

ನೋಡಿ ಹೇಗಿದೆ ನನಗಿಂತಲೂ
ನನ್ನ ಕಥೆಗಳ ಅದೃಷ್ಟವೇ
ಜಬರ್ದಸ್ತಾಗಿ.
– ಜಿಗರ್ ಮೊರಾದಾಬಾದಿ

29.
ನನ್ನ ಬದುಕೇನೋ ಕಳೆದು ಹೋಯಿತು
ನಿನ್ನ ವಿರಹದ ನೆರಳಲ್ಲಿ,

ನನ್ನ ಸಾವಿಗೂ ಒಂದು ಪ್ರಿಯವಾದ
ಕಾರಣ ಬೇಕಲ್ಲ.
-ಜಿಗರ್ ಮೊರಾದಾಬಾದಿ

 

ಇದನ್ನೂ ಓದಿ: ಗುಲ್ಜಾರ್ ಅವರ ಪದ್ಯಗಳು

 

ಚಿದಂಬರ ನರೇಂದ್ರ

ಚಿದಂಬರ ನರೇಂದ್ರ
ಕವಿ, ಅನುವಾದಕ. ‘ಚಿಕ್ಕಿ ತೋರಿಸ್ತಾವ ಚಾಚಿ ಬೆರಳ’, ‘ಹೂಬಾಣ’, ‘ಗಾಳೀ ಕೆನೆ’ ಪ್ರಕಟಿತ ಕವನ ಸಂಕಲನಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...