Homeಮುಖಪುಟಒಂದಿಷ್ಟು ಶಾಯರಿಗಳು

ಒಂದಿಷ್ಟು ಶಾಯರಿಗಳು

- Advertisement -
- Advertisement -

1.
ಬದುಕು ನಡೆಯುವುದು
ತನ್ನ ಕಾಲುಗಳ ಮೇಲೆ ಫರಾಜ್,

ಬೇರೆಯವರ ಸಹಾಯದಿಂದ ಸಾಗುವುದು
ಶವಯಾತ್ರೆ ಮಾತ್ರ.
– ಫರಾಜ್ ಅಹ್ಮದ್

2.
ಎಷ್ಟೊಂದು ಜನರಿಗೆ ಪ್ರೀತಿಸುವೆನೆಂದು
ಮಾತು ಕೊಟ್ಟಿದ್ದೀಯ ಫರಾಜ್?

ಪ್ರತಿದಿನ ಹೊಸಬರೊಬ್ಬರು
ನಿನ್ನ ವಿಳಾಸ ಕೇಳುತ್ತಿದ್ದಾರೆ.
– ಫರಾಜ್ ಅಹ್ಮದ್

3.
ಕೇವಲ ದ್ವೇಷವಷ್ಟೇ ಅಲ್ಲ
ಜಗತ್ತಿನ ದುಃಖಕ್ಕೆ ಕಾರಣ ಫರಾಜ್,

ಪ್ರೇಮವೂ ಸಮಾಧಾನಿಗಳಿಗೆ ಕೊಡುತ್ತದೆ
ಬಹಳ ಕಷ್ಟ.
– ಫರಾಜ್ ಅಹ್ಮದ್

4.
ಯಾರು ಯಾಕೆ ಅಳುತ್ತಾರೆ ಗೆಳೆಯ
ಬೇರೆ ಯಾರದೋ ಸಲುವಾಗಿ,

ಎಲ್ಲ ಅಳುತ್ತಿರುವುದು
ತಮ್ಮದೇ ಯಾವುದೋ ಮಾತಿನ ಕಾರಣವಾಗಿ.
– ಸಾಹಿರ್ ಲುಧಿಯಾನ್ವಿ

5.
ತಾನೇ ಸ್ವತಃ ಒಂದು
ಸಮಸ್ಯೆಯಾಗಿರುವಾಗ,

ಬೇರೆ ಯಾವ ಸಮಸ್ಯೆಗಳಿಗೆ ತಾನೇ
ಪರಿಹಾರವಾದೀತು ಯುದ್ಧ?
– ಸಾಹಿರ್ ಲುಧಿಯಾನ್ವಿ

6.
ಅಕಸ್ಮಾತ್ ಬದುಕಿನಲ್ಲಿ
ಮತ್ತೆ ಭೇಟಿಯಾದರೆ,

ವಿಚಾರಿಸುತ್ತೇನೆ ನನ್ನ ಹತಾಶೆಯ ಬಗ್ಗೆ
ನಿನ್ನ ವಿವಶತೆಯನ್ನ.
– ಸಾಹಿರ್ ಲುಧಿಯಾನ್ವಿ

7.
ಬಿರುಗಾಳಿಯ ದೋಣಿ
ಬದುಕಿಸಿತು ನನ್ನ,

ಮುಳುಗಿಸಿಬಿಡುತ್ತಿದ್ದರು ತೀರದ ಜನ
ನನ್ನ ಹಡಗನ್ನ.
– ಮಜ್ರೂಹ್ ಸುಲ್ತಾನ್‌ಪುರಿ

8.
ನಿನ್ನ ಹೊರತಾಗಿಯೂ ಇದ್ದವು
ಶರಣಾಗುವ ಜಾಗಗಳು, ಮರೆತುಹೋದೆ,

ಹೊರಬಿದ್ದ ಮೇಲೆ ನಿನ್ನ ಸುಂದರ ಸಂಜೆಯಿಂದ
ಎಲ್ಲ ದಾರಿಗಳ ನಾನು, ಮರೆತುಹೋದೆ.
– ಮಜ್ರೂಹ್ ಸುಲ್ತಾನ್‌ಪುರಿ

9.
ದೂರ ಕುಳಿತಿದ್ದೆ ಆದರೂ ಬಿತ್ತು
ನನ್ನ ಮೇಲೆ ಸಾಕಿಯ ಕಣ್ಣು,

ದಾಹ ನಿಜವಾಗಿದ್ದರೆ ಬಂದೇ ಬರುತ್ತದೆ
ಮಧುಪಾತ್ರೆಯೂ ಹುಡುಕಿಕೊಂಡು.
– ಮಜ್ರೂಹ್ ಸುಲ್ತಾನ್‌ಪುರಿ

10.
ನಾನು ಸತ್ತಮೇಲೆಯೂ
ತೆರೆದುಕೊಂಡೇ ಇರಲಿ ನನ್ನ ಕಣ್ಣು,

ನಿನಗಾಗಿ ಕಾಯುವ ಹವ್ಯಾಸ
ಬಿಟ್ಟುಹೋಗಿಲ್ಲ ನನ್ನ ಇನ್ನೂ.
– ಫೈಜ್ ಅಹ್ಮದ್ ಫೈಜ್

11.
ಲೆಕ್ಕ ಹಾಕುತ್ತಿದ್ದೆ ಜಗತ್ತು ಕರುಣಿಸಿರುವ
ನೋವುಗಳ ಮತ್ತೆ ಮತ್ತೆ,

ಯಾಕೋ ನೆನಪಾಗುತ್ತಿರುವೆ ನೀನು
ಲೆಕ್ಕವಿಲ್ಲದಷ್ಟು ಬಾರಿ ಮತ್ತೆ ಮತ್ತೆ.
– ಫೈಜ್ ಅಹ್ಮದ್ ಫೈಜ್

12.
ಬಂದು ನೆಲೆಸಿದ ಮೇಲೆ ಹಿಂದೂ ಮುಸಲ್ಮಾನರು
ನಮ್ಮ ಓಣಿಯೊಳಗೆ,

ಮನುಷ್ಯರ ಮುಖಗಳನ್ನು ಕಾಣುವ ತಹತಹ
ತೀವ್ರವಾಯಿತು ಮನದೊಳಗೆ.
– ಕೈಫಿ ಅಝ್ಮಿ

13.
ಒಂದು ಹಿಂಜರಿಕೆ ಮಾತ್ರ
ಮನಸಿನ ಮಾತು ಹೇಳುವಾಗ ನನಗೆ

ನಿನ್ನ ಹೆಸರು ಬಂದೇ ಬರುವದು
ನನ್ನ ಈ ಕಥೆಯೊಳಗೆ.
– ಕೈಫಿ ಅಝ್ಮಿ

14.
ಏನಾಗಿದೆ ನಿನಗೆ, ಅಷ್ಟು ನಗುವಂಥದು
ಯಾವ ನೋವದು ನನ್ನಿಂದ ಬಚ್ಚಿಡುವಂಥದು.

ಕಣ್ಣಂಚಲ್ಲಿ ಹಸಿ, ತುಟಿ ಮೇಲೆ ನಗು
ಏನಾಗಿದೆ ನಿನಗೆ, ಏನೋ ಹಾಡುವಂಥದು.
– ಕೈಫಿ ಅಝ್ಮಿ

15.
ಒಂದಿಷ್ಟು ಸಮಯದಿಂದ
ನಿನ್ನ ನೆನಪಾಗುತ್ತಿಲ್ಲ ಎನ್ನುವುದು ನಿಜವಾದರೂ,

ನಿನ್ನ ಮರೆತುಬಿಟ್ಟಿರುವೆ ಎನ್ನುವುದು ಮಾತ್ರ
ಸಂಪೂರ್ಣ ಸುಳ್ಳು.
– ಫಿರಕ್ ಗೋರಕ್‌ಪುರಿ

16.
ಬಹಳ ಮೊದಲೇ ಆ ಹೆಜ್ಜೆಗಳ
ಸಂಕೋಚವನ್ನು ಗುರುತಿಸುತ್ತೇನೆ,

ಹೇ ಬದುಕು! ಬಹಳಷ್ಟು ದೂರದಿಂದಲೇ
ನಿನ್ನನ್ನು ಗುರುತಿಸುತ್ತೇನೆ.
– ಫಿರಕ್ ಗೋರಕ್‌ಪುರಿ

17.
ವೈರಿಯಲ್ಲೂ
ಸ್ವಾಭಿಮಾನದ ನಿರೀಕ್ಷೆ ನನಗೆ,

ತಲೆ ಯಾರದಾದರೇನು
ಕಾಲುಗಳ ಮೇಲೆ ಇಷ್ಟವಾಗುವುದಿಲ್ಲ ನನಗೆ.
– ಜಾವೇದ್ ಅಖ್ತರ್

18.
ಎಲ್ಲರಿಂದಲೂ ಖುಷಿ
ಒಂದು ಹೆಜ್ಜೆ ದೂರ ಇದೆ,

ಪ್ರತಿ ಮನೆಯಲ್ಲೂ ಕೋಣೆ
ಒಂದೇ ಒಂದು ಕಡಿಮೆ ಇದೆ.
– ಜಾವೇದ್ ಅಖ್ತರ್

19.
ಕದ್ದು ತರುತ್ತಿದ್ದೆವು ಕೂಡಲು
ನಾವಿಬ್ಬರೂ ಸಮಯವನ್ನ ಆಗ,

ಈಗ ಭೇಟಿಯಾಗುತ್ತೇವೆ
ಯಾವಾಗಲಾದರೂ ಸಮಯ ಸಿಕ್ಕಾಗ.
– ಜಾವೇದ್ ಅಖ್ತರ್

20.
ಬದುಕುವ ರೀತಿಗಳೇ ವಿಚಿತ್ರ
ಈ ಶಹರದಲ್ಲಿ,

ಮಾತುಗಳಲ್ಲೇನೋ ಭರ್ತಿ ತಮಾಶೆ
ನೋವಿನ ಗಾಯಗಳು ದನಿಯಲ್ಲಿ.
– ಜಾವೇದ್ ಅಖ್ತರ್

21.
ಹೋಗಿ ಹೇಳಿ ಯಾರಾದರೂ
ಜ್ವಾಲೆಗಳಿಗೆ, ಕಿಡಿಗಳಿಗೆ

ಪುರುಸೊತ್ತು ಮಾಡಿಕೊಂಡು,

ಅರಳಿನಿಂತಿವೆ ಹೂಗಳು
ಈ ಸಲ
ಪೂರ್ತಿ ತಯಾರಿ ಮಾಡಿಕೊಂಡು.
– ರಾಹತ್ ಇಂದೂರಿ

22.
ಪ್ರತಿರಾತ್ರಿ
ನಕ್ಷತ್ರಗಳಿಗೆ ತಮ್ಮ ಮೆರೆದಾಟದಲ್ಲಿ
ಅಡಚಣಿಯಾಗುತ್ತದೆ,

ಕತ್ತಲೆಯಾದೊಡನೆ
ತಲೆತಿರುಕ ಚಂದ್ರನ ಸವಾರಿ
ಮನೆಯಿಂದ ಹೊರಗೆ ಬೀಳುತ್ತದೆ.
– ರಾಹತ್ ಇಂದೂರಿ

23.
ನನ್ನ ಚಹರೆಯ ಬದಲಾಗುವ ಬಣ್ಣಗಳನ್ನು
ಜನ ಗಂಭೀರವಾಗಿ ಗಮನಿಸುತ್ತಾರೆ

ನಿನ್ನ ಹೆಸರ ಮುಂದೆ ಮಾಡಿ
ಜನ ನನ್ನ ತಮಾಶೆ ಮಾಡುತ್ತಾರೆ
– ರಾಹತ್ ಇಂದೂರಿ

24.
ಜನ ಮಾತಾಡಿಕೊಳ್ಳುವಂತೆ ನಿನಗೆ ಇನ್ನೂ
ನನ್ನ ಮೇಲಿನ ಮುನಿಸು ಕಡಿಮೆಯಾಗಿಲ್ಲ,

ಆದರೆ ನಿನ್ನ ಕಣ್ಣುಗಳು ಮಾತ್ರ ನನಗೆ
ಬೇರೆ ಏನೋ ಹೇಳುತ್ತಿವೆಯಲ್ಲ.
– ಜನ್ ನಿಸಾರ್ ಅಖ್ತರ್

25.
ನೂರಕ್ಕೆ ನೂರು ನಿಜ
ನನ್ನ ಕವಿತೆಗಳು ಇಡೀ ಜಗತ್ತಿಗಾಗಿ,

ಆದರೆ ಕೆಲವು ಸಾಲುಗಳು ಮಾತ್ರ
ಕೇವಲ ಅವಳಿಗಾಗಿ.
– ಜನ್ ನಿಸಾರ್ ಅಖ್ತರ್

26.
ಇವತ್ತು ಮಾತ್ರ
ನಿನ್ನ ಮುಟ್ಟಿ ಮಾತನಾಡಿಸಿದರೂ
ನೀನು ಸಿಗಲಿಲ್ಲ ನನಗೆ,

ಹಿಂದೊಮ್ಮೆ
ನಿನ್ನ ಭೇಟಿ ಮಾಡುವ ಆಲೋಚನೆಯೇ
ತಬ್ಬಿಬ್ಬು ಮಾಡುತ್ತಿತ್ತು ನನ್ನ !
– ಜನ್ ನಿಸಾರ್ ಅಖ್ತರ್

27.
ಗೊತ್ತಿರಲಿ ನಿಮಗೆ ಇಷ್ಟು
ಪ್ರೀತಿ ಅಷ್ಟು ಸುಲಭವಲ್ಲ

ಬೆಂಕಿಯ ನದಿ ಇದು
ಮುಳುಗಿ ಈಜದೆ ಬೇರೆ ದಾರಿ ಇಲ್ಲ .
– ಜಿಗರ್ ಮೊರಾದಾಬಾದಿ

28.
ಎಲ್ಲ ಕಡೆ ಮೆರೆಯುತ್ತಿವೆ
ಪ್ರೇಮದ ಸಂದೇಶಗಳಾಗಿ,

ನೋಡಿ ಹೇಗಿದೆ ನನಗಿಂತಲೂ
ನನ್ನ ಕಥೆಗಳ ಅದೃಷ್ಟವೇ
ಜಬರ್ದಸ್ತಾಗಿ.
– ಜಿಗರ್ ಮೊರಾದಾಬಾದಿ

29.
ನನ್ನ ಬದುಕೇನೋ ಕಳೆದು ಹೋಯಿತು
ನಿನ್ನ ವಿರಹದ ನೆರಳಲ್ಲಿ,

ನನ್ನ ಸಾವಿಗೂ ಒಂದು ಪ್ರಿಯವಾದ
ಕಾರಣ ಬೇಕಲ್ಲ.
-ಜಿಗರ್ ಮೊರಾದಾಬಾದಿ

 

ಇದನ್ನೂ ಓದಿ: ಗುಲ್ಜಾರ್ ಅವರ ಪದ್ಯಗಳು

 

ಚಿದಂಬರ ನರೇಂದ್ರ

ಚಿದಂಬರ ನರೇಂದ್ರ
ಕವಿ, ಅನುವಾದಕ. ‘ಚಿಕ್ಕಿ ತೋರಿಸ್ತಾವ ಚಾಚಿ ಬೆರಳ’, ‘ಹೂಬಾಣ’, ‘ಗಾಳೀ ಕೆನೆ’ ಪ್ರಕಟಿತ ಕವನ ಸಂಕಲನಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...