Homeಮುಖಪುಟಒಂದಿಷ್ಟು ಶಾಯರಿಗಳು

ಒಂದಿಷ್ಟು ಶಾಯರಿಗಳು

- Advertisement -
- Advertisement -

1.
ಬದುಕು ನಡೆಯುವುದು
ತನ್ನ ಕಾಲುಗಳ ಮೇಲೆ ಫರಾಜ್,

ಬೇರೆಯವರ ಸಹಾಯದಿಂದ ಸಾಗುವುದು
ಶವಯಾತ್ರೆ ಮಾತ್ರ.
– ಫರಾಜ್ ಅಹ್ಮದ್

2.
ಎಷ್ಟೊಂದು ಜನರಿಗೆ ಪ್ರೀತಿಸುವೆನೆಂದು
ಮಾತು ಕೊಟ್ಟಿದ್ದೀಯ ಫರಾಜ್?

ಪ್ರತಿದಿನ ಹೊಸಬರೊಬ್ಬರು
ನಿನ್ನ ವಿಳಾಸ ಕೇಳುತ್ತಿದ್ದಾರೆ.
– ಫರಾಜ್ ಅಹ್ಮದ್

3.
ಕೇವಲ ದ್ವೇಷವಷ್ಟೇ ಅಲ್ಲ
ಜಗತ್ತಿನ ದುಃಖಕ್ಕೆ ಕಾರಣ ಫರಾಜ್,

ಪ್ರೇಮವೂ ಸಮಾಧಾನಿಗಳಿಗೆ ಕೊಡುತ್ತದೆ
ಬಹಳ ಕಷ್ಟ.
– ಫರಾಜ್ ಅಹ್ಮದ್

4.
ಯಾರು ಯಾಕೆ ಅಳುತ್ತಾರೆ ಗೆಳೆಯ
ಬೇರೆ ಯಾರದೋ ಸಲುವಾಗಿ,

ಎಲ್ಲ ಅಳುತ್ತಿರುವುದು
ತಮ್ಮದೇ ಯಾವುದೋ ಮಾತಿನ ಕಾರಣವಾಗಿ.
– ಸಾಹಿರ್ ಲುಧಿಯಾನ್ವಿ

5.
ತಾನೇ ಸ್ವತಃ ಒಂದು
ಸಮಸ್ಯೆಯಾಗಿರುವಾಗ,

ಬೇರೆ ಯಾವ ಸಮಸ್ಯೆಗಳಿಗೆ ತಾನೇ
ಪರಿಹಾರವಾದೀತು ಯುದ್ಧ?
– ಸಾಹಿರ್ ಲುಧಿಯಾನ್ವಿ

6.
ಅಕಸ್ಮಾತ್ ಬದುಕಿನಲ್ಲಿ
ಮತ್ತೆ ಭೇಟಿಯಾದರೆ,

ವಿಚಾರಿಸುತ್ತೇನೆ ನನ್ನ ಹತಾಶೆಯ ಬಗ್ಗೆ
ನಿನ್ನ ವಿವಶತೆಯನ್ನ.
– ಸಾಹಿರ್ ಲುಧಿಯಾನ್ವಿ

7.
ಬಿರುಗಾಳಿಯ ದೋಣಿ
ಬದುಕಿಸಿತು ನನ್ನ,

ಮುಳುಗಿಸಿಬಿಡುತ್ತಿದ್ದರು ತೀರದ ಜನ
ನನ್ನ ಹಡಗನ್ನ.
– ಮಜ್ರೂಹ್ ಸುಲ್ತಾನ್‌ಪುರಿ

8.
ನಿನ್ನ ಹೊರತಾಗಿಯೂ ಇದ್ದವು
ಶರಣಾಗುವ ಜಾಗಗಳು, ಮರೆತುಹೋದೆ,

ಹೊರಬಿದ್ದ ಮೇಲೆ ನಿನ್ನ ಸುಂದರ ಸಂಜೆಯಿಂದ
ಎಲ್ಲ ದಾರಿಗಳ ನಾನು, ಮರೆತುಹೋದೆ.
– ಮಜ್ರೂಹ್ ಸುಲ್ತಾನ್‌ಪುರಿ

9.
ದೂರ ಕುಳಿತಿದ್ದೆ ಆದರೂ ಬಿತ್ತು
ನನ್ನ ಮೇಲೆ ಸಾಕಿಯ ಕಣ್ಣು,

ದಾಹ ನಿಜವಾಗಿದ್ದರೆ ಬಂದೇ ಬರುತ್ತದೆ
ಮಧುಪಾತ್ರೆಯೂ ಹುಡುಕಿಕೊಂಡು.
– ಮಜ್ರೂಹ್ ಸುಲ್ತಾನ್‌ಪುರಿ

10.
ನಾನು ಸತ್ತಮೇಲೆಯೂ
ತೆರೆದುಕೊಂಡೇ ಇರಲಿ ನನ್ನ ಕಣ್ಣು,

ನಿನಗಾಗಿ ಕಾಯುವ ಹವ್ಯಾಸ
ಬಿಟ್ಟುಹೋಗಿಲ್ಲ ನನ್ನ ಇನ್ನೂ.
– ಫೈಜ್ ಅಹ್ಮದ್ ಫೈಜ್

11.
ಲೆಕ್ಕ ಹಾಕುತ್ತಿದ್ದೆ ಜಗತ್ತು ಕರುಣಿಸಿರುವ
ನೋವುಗಳ ಮತ್ತೆ ಮತ್ತೆ,

ಯಾಕೋ ನೆನಪಾಗುತ್ತಿರುವೆ ನೀನು
ಲೆಕ್ಕವಿಲ್ಲದಷ್ಟು ಬಾರಿ ಮತ್ತೆ ಮತ್ತೆ.
– ಫೈಜ್ ಅಹ್ಮದ್ ಫೈಜ್

12.
ಬಂದು ನೆಲೆಸಿದ ಮೇಲೆ ಹಿಂದೂ ಮುಸಲ್ಮಾನರು
ನಮ್ಮ ಓಣಿಯೊಳಗೆ,

ಮನುಷ್ಯರ ಮುಖಗಳನ್ನು ಕಾಣುವ ತಹತಹ
ತೀವ್ರವಾಯಿತು ಮನದೊಳಗೆ.
– ಕೈಫಿ ಅಝ್ಮಿ

13.
ಒಂದು ಹಿಂಜರಿಕೆ ಮಾತ್ರ
ಮನಸಿನ ಮಾತು ಹೇಳುವಾಗ ನನಗೆ

ನಿನ್ನ ಹೆಸರು ಬಂದೇ ಬರುವದು
ನನ್ನ ಈ ಕಥೆಯೊಳಗೆ.
– ಕೈಫಿ ಅಝ್ಮಿ

14.
ಏನಾಗಿದೆ ನಿನಗೆ, ಅಷ್ಟು ನಗುವಂಥದು
ಯಾವ ನೋವದು ನನ್ನಿಂದ ಬಚ್ಚಿಡುವಂಥದು.

ಕಣ್ಣಂಚಲ್ಲಿ ಹಸಿ, ತುಟಿ ಮೇಲೆ ನಗು
ಏನಾಗಿದೆ ನಿನಗೆ, ಏನೋ ಹಾಡುವಂಥದು.
– ಕೈಫಿ ಅಝ್ಮಿ

15.
ಒಂದಿಷ್ಟು ಸಮಯದಿಂದ
ನಿನ್ನ ನೆನಪಾಗುತ್ತಿಲ್ಲ ಎನ್ನುವುದು ನಿಜವಾದರೂ,

ನಿನ್ನ ಮರೆತುಬಿಟ್ಟಿರುವೆ ಎನ್ನುವುದು ಮಾತ್ರ
ಸಂಪೂರ್ಣ ಸುಳ್ಳು.
– ಫಿರಕ್ ಗೋರಕ್‌ಪುರಿ

16.
ಬಹಳ ಮೊದಲೇ ಆ ಹೆಜ್ಜೆಗಳ
ಸಂಕೋಚವನ್ನು ಗುರುತಿಸುತ್ತೇನೆ,

ಹೇ ಬದುಕು! ಬಹಳಷ್ಟು ದೂರದಿಂದಲೇ
ನಿನ್ನನ್ನು ಗುರುತಿಸುತ್ತೇನೆ.
– ಫಿರಕ್ ಗೋರಕ್‌ಪುರಿ

17.
ವೈರಿಯಲ್ಲೂ
ಸ್ವಾಭಿಮಾನದ ನಿರೀಕ್ಷೆ ನನಗೆ,

ತಲೆ ಯಾರದಾದರೇನು
ಕಾಲುಗಳ ಮೇಲೆ ಇಷ್ಟವಾಗುವುದಿಲ್ಲ ನನಗೆ.
– ಜಾವೇದ್ ಅಖ್ತರ್

18.
ಎಲ್ಲರಿಂದಲೂ ಖುಷಿ
ಒಂದು ಹೆಜ್ಜೆ ದೂರ ಇದೆ,

ಪ್ರತಿ ಮನೆಯಲ್ಲೂ ಕೋಣೆ
ಒಂದೇ ಒಂದು ಕಡಿಮೆ ಇದೆ.
– ಜಾವೇದ್ ಅಖ್ತರ್

19.
ಕದ್ದು ತರುತ್ತಿದ್ದೆವು ಕೂಡಲು
ನಾವಿಬ್ಬರೂ ಸಮಯವನ್ನ ಆಗ,

ಈಗ ಭೇಟಿಯಾಗುತ್ತೇವೆ
ಯಾವಾಗಲಾದರೂ ಸಮಯ ಸಿಕ್ಕಾಗ.
– ಜಾವೇದ್ ಅಖ್ತರ್

20.
ಬದುಕುವ ರೀತಿಗಳೇ ವಿಚಿತ್ರ
ಈ ಶಹರದಲ್ಲಿ,

ಮಾತುಗಳಲ್ಲೇನೋ ಭರ್ತಿ ತಮಾಶೆ
ನೋವಿನ ಗಾಯಗಳು ದನಿಯಲ್ಲಿ.
– ಜಾವೇದ್ ಅಖ್ತರ್

21.
ಹೋಗಿ ಹೇಳಿ ಯಾರಾದರೂ
ಜ್ವಾಲೆಗಳಿಗೆ, ಕಿಡಿಗಳಿಗೆ

ಪುರುಸೊತ್ತು ಮಾಡಿಕೊಂಡು,

ಅರಳಿನಿಂತಿವೆ ಹೂಗಳು
ಈ ಸಲ
ಪೂರ್ತಿ ತಯಾರಿ ಮಾಡಿಕೊಂಡು.
– ರಾಹತ್ ಇಂದೂರಿ

22.
ಪ್ರತಿರಾತ್ರಿ
ನಕ್ಷತ್ರಗಳಿಗೆ ತಮ್ಮ ಮೆರೆದಾಟದಲ್ಲಿ
ಅಡಚಣಿಯಾಗುತ್ತದೆ,

ಕತ್ತಲೆಯಾದೊಡನೆ
ತಲೆತಿರುಕ ಚಂದ್ರನ ಸವಾರಿ
ಮನೆಯಿಂದ ಹೊರಗೆ ಬೀಳುತ್ತದೆ.
– ರಾಹತ್ ಇಂದೂರಿ

23.
ನನ್ನ ಚಹರೆಯ ಬದಲಾಗುವ ಬಣ್ಣಗಳನ್ನು
ಜನ ಗಂಭೀರವಾಗಿ ಗಮನಿಸುತ್ತಾರೆ

ನಿನ್ನ ಹೆಸರ ಮುಂದೆ ಮಾಡಿ
ಜನ ನನ್ನ ತಮಾಶೆ ಮಾಡುತ್ತಾರೆ
– ರಾಹತ್ ಇಂದೂರಿ

24.
ಜನ ಮಾತಾಡಿಕೊಳ್ಳುವಂತೆ ನಿನಗೆ ಇನ್ನೂ
ನನ್ನ ಮೇಲಿನ ಮುನಿಸು ಕಡಿಮೆಯಾಗಿಲ್ಲ,

ಆದರೆ ನಿನ್ನ ಕಣ್ಣುಗಳು ಮಾತ್ರ ನನಗೆ
ಬೇರೆ ಏನೋ ಹೇಳುತ್ತಿವೆಯಲ್ಲ.
– ಜನ್ ನಿಸಾರ್ ಅಖ್ತರ್

25.
ನೂರಕ್ಕೆ ನೂರು ನಿಜ
ನನ್ನ ಕವಿತೆಗಳು ಇಡೀ ಜಗತ್ತಿಗಾಗಿ,

ಆದರೆ ಕೆಲವು ಸಾಲುಗಳು ಮಾತ್ರ
ಕೇವಲ ಅವಳಿಗಾಗಿ.
– ಜನ್ ನಿಸಾರ್ ಅಖ್ತರ್

26.
ಇವತ್ತು ಮಾತ್ರ
ನಿನ್ನ ಮುಟ್ಟಿ ಮಾತನಾಡಿಸಿದರೂ
ನೀನು ಸಿಗಲಿಲ್ಲ ನನಗೆ,

ಹಿಂದೊಮ್ಮೆ
ನಿನ್ನ ಭೇಟಿ ಮಾಡುವ ಆಲೋಚನೆಯೇ
ತಬ್ಬಿಬ್ಬು ಮಾಡುತ್ತಿತ್ತು ನನ್ನ !
– ಜನ್ ನಿಸಾರ್ ಅಖ್ತರ್

27.
ಗೊತ್ತಿರಲಿ ನಿಮಗೆ ಇಷ್ಟು
ಪ್ರೀತಿ ಅಷ್ಟು ಸುಲಭವಲ್ಲ

ಬೆಂಕಿಯ ನದಿ ಇದು
ಮುಳುಗಿ ಈಜದೆ ಬೇರೆ ದಾರಿ ಇಲ್ಲ .
– ಜಿಗರ್ ಮೊರಾದಾಬಾದಿ

28.
ಎಲ್ಲ ಕಡೆ ಮೆರೆಯುತ್ತಿವೆ
ಪ್ರೇಮದ ಸಂದೇಶಗಳಾಗಿ,

ನೋಡಿ ಹೇಗಿದೆ ನನಗಿಂತಲೂ
ನನ್ನ ಕಥೆಗಳ ಅದೃಷ್ಟವೇ
ಜಬರ್ದಸ್ತಾಗಿ.
– ಜಿಗರ್ ಮೊರಾದಾಬಾದಿ

29.
ನನ್ನ ಬದುಕೇನೋ ಕಳೆದು ಹೋಯಿತು
ನಿನ್ನ ವಿರಹದ ನೆರಳಲ್ಲಿ,

ನನ್ನ ಸಾವಿಗೂ ಒಂದು ಪ್ರಿಯವಾದ
ಕಾರಣ ಬೇಕಲ್ಲ.
-ಜಿಗರ್ ಮೊರಾದಾಬಾದಿ

 

ಇದನ್ನೂ ಓದಿ: ಗುಲ್ಜಾರ್ ಅವರ ಪದ್ಯಗಳು

 

ಚಿದಂಬರ ನರೇಂದ್ರ

ಚಿದಂಬರ ನರೇಂದ್ರ
ಕವಿ, ಅನುವಾದಕ. ‘ಚಿಕ್ಕಿ ತೋರಿಸ್ತಾವ ಚಾಚಿ ಬೆರಳ’, ‘ಹೂಬಾಣ’, ‘ಗಾಳೀ ಕೆನೆ’ ಪ್ರಕಟಿತ ಕವನ ಸಂಕಲನಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...