Homeಕರ್ನಾಟಕಹಿರಿಯ ನಟಿ, ಅಭಿನಯ ಶಾರದೆ ಜಯಂತಿ (76) ವಿಧಿವಶ

ಹಿರಿಯ ನಟಿ, ಅಭಿನಯ ಶಾರದೆ ಜಯಂತಿ (76) ವಿಧಿವಶ

- Advertisement -
- Advertisement -

ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಶಾರದೆ ಜಯಂತಿ (76) ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸೋಮವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ತಮ್ಮ ಮನೋಜ್ಞ ಅಭಿನಯದಿಂದ ಕನ್ನಡ ಚಿತ್ರರಂಗದಲ್ಲಿ ಅಭಿನಯ ಶಾರದೆ ಎಂದೇ ಕರೆಯಲ್ಪಡುತ್ತಿದ್ದ ಜಯಂತಿಯವರು, ಚಿತ್ರರಂಗದ ಬೋಲ್ಡ್ ಅಂಡ್ ಬ್ಯೂಟಿಫುಲ್‌ ನಟಿ ಎಂದು ಗುರುತಿಸಿಕೊಂಡಿದ್ದರು.

ನಟಿ ಜಯಂತಿ ದಕ್ಷಿಣ ಭಾರತ ಚಿತ್ರರಂಗದ ಮೇರು ನಟಿ. ಇವರು ಕನ್ನಡ ಸೇರಿದಂತೆ ತಮಿಳು, ತೆಲುಗು, ಮಲಯಾಳಂ, ಹಿಂದಿ ಮತ್ತು ಮರಾಠಿ ಭಾಷೆಗಳಲ್ಲಿಯೂ ಅಭಿನಯಿಸಿದ್ದರು. ಸುಮಾರು 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಹಲವಾರು ಪ್ರಶಸ್ತಿಗಳಿಗೆ ಅಭಿನಯ ಶಾರದೆ ಭಾಜನರಾಗಿದ್ದರು.

ಇದನ್ನೂ ಓದಿ: ಪದ್ಮಶ್ರಿ ಪ್ರಶಸ್ತಿ ನೀಡಿ ಅಭಿಯಾನ: ವೈಜನಾಥ ಬಿರಾದಾರರವರ ಎರಡು ಹಾಸ್ಯ ‘ಸ್ವಗತಗಳು’

ಕನ್ನಡದ ಮೇರು ನಟ ಡಾ.ರಾಜ್‌ಕುಮಾರ್‌ ಅವರೊಂದಿಗೆ 45 ಚಿತ್ರಗಳಲ್ಲಿ ಅಭಿನಯಿಸಿದ ಕೀರ್ತಿ ನಟಿ ಜಯಂತಿಯವರದ್ದು. ವಿಷ್ಣುವರ್ಧನ್, ಉದಯ್ ಕುಮಾರ್, ಕಲ್ಯಾಣ್ ಕುಮಾರ್, ಶ್ರೀನಾಥ್, ಅನಂತ್ ನಾಗ್ ಮುಂತಾದ ನಟರ ಜೊತೆ ತೆರೆ ಹಂಚಿಕೊಂಡಿದ್ದರು.

1968 ರಲ್ಲಿ ತೆರೆ ಕಂಡ ವೈ.ಆರ್.ಸ್ವಾಮಿ ನಿರ್ದೇಶನದ “ಜೇನು ಗೂಡು” ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಜಟಿ ಜಯಂತಿ, 500ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು.

ಕರ್ನಾಟಕದ ಬಳ್ಳಾರಿಯಲ್ಲಿ ಜನವರಿ 6, 1945 ರಲ್ಲಿ ಜನಿಸಿದ ಜಯಂತಿಯವರ ಮೂಲ ಹೆಸರು ಕಮಲಾ ಕುಮಾರಿ. ತಂದೆ ಬಾಲಸುಬ್ರಹ್ಮಣ್ಯಂ, ತಾಯಿ ಸಂತಾನಲಕ್ಷ್ಮೀ ಗೃಹಿಣಿಯಾಗಿದ್ದರು.

1965ರಲ್ಲಿ ತೆರೆಕಂಡ ಮಿಸ್ ಲೀಲಾವತಿ ಚಿತ್ರದ ಅಭಿನಯಕ್ಕಾಗಿ ಜಯಂತಿಯವರಿಗೆ ರಾಷ್ಟ್ರ ಪ್ರಶಸ್ತಿ ಬಂದಿದೆ. ಈ ಚಿತ್ರಕ್ಕೆ ನಿರ್ಮಾಪಕಿಯೂ ನಿರ್ದೇಶಕಿಯೂ ಜಯಂತಿ. ಎರಡು ಮುಖ, ಮನಸ್ಸಿನಂತೆ ಮಾಂಗಲ್ಯ, ಧರ್ಮ ದಾರಿ ತಪ್ಪಿತು, ಮಸಣದ ಹೂವು, ಆನಂದ್ ಚಿತ್ರಗಳ ಅಭಿನಯಕ್ಕಾಗಿ ಐದು ಬಾರಿ ರಾಜ್ಯ ಪ್ರಶಸ್ತಿ ಗಳಿಸಿದ್ದರು.

ಇದನ್ನೂ ಓದಿ: ಹಿರಿಯ ನಟ ವೈಜನಾಥ ಬಿರಾದಾರ ಅವರಿಗೆ ‘ಪದ್ಮಶ್ರೀ’ ನೀಡಲು ಆಗ್ರಹಿಸಿ ಆನ್‌ಲೈನ್‌ ಅಭಿಯಾನ

ಎಡಕಲ್ಲು ಗುಡ್ಡದ ಮೇಲೆ ಚಿತ್ರದಲ್ಲಿ ಜಯಂತಿಯವರು ವಿಶಿಷ್ಟ ಅಭಿನಯ ನೀಡಿದ್ದಾರೆ. ಕಸ್ತೂರಿ ನಿವಾಸ, ಬ್ಯಾಂಕರ್ ಮಾರ್ಗಯ್ಯ, ಬೆಟ್ಟದ ಹುಲಿ, ಚೂರಿ ಚಿಕ್ಕಣ್ಣ, ಭಲೇ ಬಸವ, ಶ್ರೀ ಕೃಷ್ಣದೇವರಾಯ ಸೇರಿದಂತೆ ಅನೇಕ ಚಿತ್ರಗಳನ್ನು ಕನ್ನಡಕ್ಕೆ ನೀಡಿದ್ದರು.

ವಿಷ್ಣು ಮಾಯ, ಕಲೆಕ್ಟರ್ ಜಾನಕಿ, ಮಾಯದಾರಿ ಮಲ್ಲಿಗಾಡು, ಸಂಸಾರಂ ಸಾಗರಂ, ಕುಲಗೌರವಂ, ಮಾಂಗಲ್ಯ ಭಾಗ್ಯಂ, ಶ್ರೀರಾಮಾಂಜನೇಯ ಯುದ್ಧಂ,ಅಂದರೂ ಮಂಚಿವಾರೆ, ಬೊಮ್ಮರಿಲ್ಲು, ಭಲೇ ಕೊಡಲ್ಲು ಸೇರಿದಂತೆ ಅನೇಕ ತೆಲುಗು ಚಿತ್ರಗಳಲ್ಲಿ ಅಭಿನಯಿಸಿದ್ದರು.

ತಮಿಳು ಚಿತ್ರರಂಗದಲ್ಲಿಯೂ ನಟಿ ಜಯಂತಿ ತಮ್ಮದೆಯಾದ ಛಾಪು ಮೂಡಿಸಿದ್ದಾರೆ. ಗಂಗಾ ಗೌರಿ, ಎಲ್ಲೋರುಮ್ ನಲ್ಲವರೆ, ನಿಲ್ ಗವನಿ ಕಾದಲೈ, ಎದಿರ್ ನೀಚಲ್, ನೀರ್ ಕುಮಿಳಿ, ಕಾದಲ್ ಪಾಡುತುಮ್ ಪಾಡು, ಪೆಣ್ಣೈ ನಂಬುಂಗಳ್, ದೇವತೈ ಸೇರಿ ಹಲವು ಚಿತ್ರಗಳಲ್ಲಿ ಕಾಣಸಿಕೊಂಡಿದ್ದರು.

ಮಲೆಯಾಳಂನ ಕಲಿಯೋದಂ, ಕಾರುತ ಪೌರ್ಣಮಿ, ಕಾಟ್ಟು ಪೂಕ್ಕಳ್, ಲಕ್ಷಪ್ರಭು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹಿಂದಿಯ ದಾದಾ, ತೀನ್ ಬಹುರಾಣಿಯಾ, ಆಜ್ ಕೆ ಶೋಲಿ, ಮೆಹರ್ಬಾನ್, ಲಾಲ್ ಬಂಗ್ಲಾ, ತುಮ್ ಸೆ ಅಚ್ಚಾ ಕೌನ್ ಹೈ, ಗುಂಡಾ, ಏಕ್ ಫೂಲ್ ಏಕ್ ಭೂಲ್ ಚಿತ್ರಗಳಲ್ಲಿಯೂ ತಮ್ಮ ಅಭಿನಯದ ಛಾಪು ಮೂಡಿಸಿದ್ದರು ನಟಿ ಜಯಂತಿಯವರು.


ಇದನ್ನೂ ಓದಿ: ಕನ್ನಡದಲ್ಲೂ ’ಜೈ ಭೀಮ್’ ಎಂದ ತಮಿಳು ನಟ ಸೂರ್ಯ: ಹೊಸ ಚಿತ್ರಕ್ಕೆ ಕನ್ನಡಿಗರ ಸ್ವಾಗತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...