Homeಕರ್ನಾಟಕಹಿರಿಯ ನಟಿ, ಅಭಿನಯ ಶಾರದೆ ಜಯಂತಿ (76) ವಿಧಿವಶ

ಹಿರಿಯ ನಟಿ, ಅಭಿನಯ ಶಾರದೆ ಜಯಂತಿ (76) ವಿಧಿವಶ

- Advertisement -
- Advertisement -

ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಶಾರದೆ ಜಯಂತಿ (76) ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸೋಮವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ತಮ್ಮ ಮನೋಜ್ಞ ಅಭಿನಯದಿಂದ ಕನ್ನಡ ಚಿತ್ರರಂಗದಲ್ಲಿ ಅಭಿನಯ ಶಾರದೆ ಎಂದೇ ಕರೆಯಲ್ಪಡುತ್ತಿದ್ದ ಜಯಂತಿಯವರು, ಚಿತ್ರರಂಗದ ಬೋಲ್ಡ್ ಅಂಡ್ ಬ್ಯೂಟಿಫುಲ್‌ ನಟಿ ಎಂದು ಗುರುತಿಸಿಕೊಂಡಿದ್ದರು.

ನಟಿ ಜಯಂತಿ ದಕ್ಷಿಣ ಭಾರತ ಚಿತ್ರರಂಗದ ಮೇರು ನಟಿ. ಇವರು ಕನ್ನಡ ಸೇರಿದಂತೆ ತಮಿಳು, ತೆಲುಗು, ಮಲಯಾಳಂ, ಹಿಂದಿ ಮತ್ತು ಮರಾಠಿ ಭಾಷೆಗಳಲ್ಲಿಯೂ ಅಭಿನಯಿಸಿದ್ದರು. ಸುಮಾರು 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಹಲವಾರು ಪ್ರಶಸ್ತಿಗಳಿಗೆ ಅಭಿನಯ ಶಾರದೆ ಭಾಜನರಾಗಿದ್ದರು.

ಇದನ್ನೂ ಓದಿ: ಪದ್ಮಶ್ರಿ ಪ್ರಶಸ್ತಿ ನೀಡಿ ಅಭಿಯಾನ: ವೈಜನಾಥ ಬಿರಾದಾರರವರ ಎರಡು ಹಾಸ್ಯ ‘ಸ್ವಗತಗಳು’

ಕನ್ನಡದ ಮೇರು ನಟ ಡಾ.ರಾಜ್‌ಕುಮಾರ್‌ ಅವರೊಂದಿಗೆ 45 ಚಿತ್ರಗಳಲ್ಲಿ ಅಭಿನಯಿಸಿದ ಕೀರ್ತಿ ನಟಿ ಜಯಂತಿಯವರದ್ದು. ವಿಷ್ಣುವರ್ಧನ್, ಉದಯ್ ಕುಮಾರ್, ಕಲ್ಯಾಣ್ ಕುಮಾರ್, ಶ್ರೀನಾಥ್, ಅನಂತ್ ನಾಗ್ ಮುಂತಾದ ನಟರ ಜೊತೆ ತೆರೆ ಹಂಚಿಕೊಂಡಿದ್ದರು.

1968 ರಲ್ಲಿ ತೆರೆ ಕಂಡ ವೈ.ಆರ್.ಸ್ವಾಮಿ ನಿರ್ದೇಶನದ “ಜೇನು ಗೂಡು” ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಜಟಿ ಜಯಂತಿ, 500ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು.

ಕರ್ನಾಟಕದ ಬಳ್ಳಾರಿಯಲ್ಲಿ ಜನವರಿ 6, 1945 ರಲ್ಲಿ ಜನಿಸಿದ ಜಯಂತಿಯವರ ಮೂಲ ಹೆಸರು ಕಮಲಾ ಕುಮಾರಿ. ತಂದೆ ಬಾಲಸುಬ್ರಹ್ಮಣ್ಯಂ, ತಾಯಿ ಸಂತಾನಲಕ್ಷ್ಮೀ ಗೃಹಿಣಿಯಾಗಿದ್ದರು.

1965ರಲ್ಲಿ ತೆರೆಕಂಡ ಮಿಸ್ ಲೀಲಾವತಿ ಚಿತ್ರದ ಅಭಿನಯಕ್ಕಾಗಿ ಜಯಂತಿಯವರಿಗೆ ರಾಷ್ಟ್ರ ಪ್ರಶಸ್ತಿ ಬಂದಿದೆ. ಈ ಚಿತ್ರಕ್ಕೆ ನಿರ್ಮಾಪಕಿಯೂ ನಿರ್ದೇಶಕಿಯೂ ಜಯಂತಿ. ಎರಡು ಮುಖ, ಮನಸ್ಸಿನಂತೆ ಮಾಂಗಲ್ಯ, ಧರ್ಮ ದಾರಿ ತಪ್ಪಿತು, ಮಸಣದ ಹೂವು, ಆನಂದ್ ಚಿತ್ರಗಳ ಅಭಿನಯಕ್ಕಾಗಿ ಐದು ಬಾರಿ ರಾಜ್ಯ ಪ್ರಶಸ್ತಿ ಗಳಿಸಿದ್ದರು.

ಇದನ್ನೂ ಓದಿ: ಹಿರಿಯ ನಟ ವೈಜನಾಥ ಬಿರಾದಾರ ಅವರಿಗೆ ‘ಪದ್ಮಶ್ರೀ’ ನೀಡಲು ಆಗ್ರಹಿಸಿ ಆನ್‌ಲೈನ್‌ ಅಭಿಯಾನ

ಎಡಕಲ್ಲು ಗುಡ್ಡದ ಮೇಲೆ ಚಿತ್ರದಲ್ಲಿ ಜಯಂತಿಯವರು ವಿಶಿಷ್ಟ ಅಭಿನಯ ನೀಡಿದ್ದಾರೆ. ಕಸ್ತೂರಿ ನಿವಾಸ, ಬ್ಯಾಂಕರ್ ಮಾರ್ಗಯ್ಯ, ಬೆಟ್ಟದ ಹುಲಿ, ಚೂರಿ ಚಿಕ್ಕಣ್ಣ, ಭಲೇ ಬಸವ, ಶ್ರೀ ಕೃಷ್ಣದೇವರಾಯ ಸೇರಿದಂತೆ ಅನೇಕ ಚಿತ್ರಗಳನ್ನು ಕನ್ನಡಕ್ಕೆ ನೀಡಿದ್ದರು.

ವಿಷ್ಣು ಮಾಯ, ಕಲೆಕ್ಟರ್ ಜಾನಕಿ, ಮಾಯದಾರಿ ಮಲ್ಲಿಗಾಡು, ಸಂಸಾರಂ ಸಾಗರಂ, ಕುಲಗೌರವಂ, ಮಾಂಗಲ್ಯ ಭಾಗ್ಯಂ, ಶ್ರೀರಾಮಾಂಜನೇಯ ಯುದ್ಧಂ,ಅಂದರೂ ಮಂಚಿವಾರೆ, ಬೊಮ್ಮರಿಲ್ಲು, ಭಲೇ ಕೊಡಲ್ಲು ಸೇರಿದಂತೆ ಅನೇಕ ತೆಲುಗು ಚಿತ್ರಗಳಲ್ಲಿ ಅಭಿನಯಿಸಿದ್ದರು.

ತಮಿಳು ಚಿತ್ರರಂಗದಲ್ಲಿಯೂ ನಟಿ ಜಯಂತಿ ತಮ್ಮದೆಯಾದ ಛಾಪು ಮೂಡಿಸಿದ್ದಾರೆ. ಗಂಗಾ ಗೌರಿ, ಎಲ್ಲೋರುಮ್ ನಲ್ಲವರೆ, ನಿಲ್ ಗವನಿ ಕಾದಲೈ, ಎದಿರ್ ನೀಚಲ್, ನೀರ್ ಕುಮಿಳಿ, ಕಾದಲ್ ಪಾಡುತುಮ್ ಪಾಡು, ಪೆಣ್ಣೈ ನಂಬುಂಗಳ್, ದೇವತೈ ಸೇರಿ ಹಲವು ಚಿತ್ರಗಳಲ್ಲಿ ಕಾಣಸಿಕೊಂಡಿದ್ದರು.

ಮಲೆಯಾಳಂನ ಕಲಿಯೋದಂ, ಕಾರುತ ಪೌರ್ಣಮಿ, ಕಾಟ್ಟು ಪೂಕ್ಕಳ್, ಲಕ್ಷಪ್ರಭು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹಿಂದಿಯ ದಾದಾ, ತೀನ್ ಬಹುರಾಣಿಯಾ, ಆಜ್ ಕೆ ಶೋಲಿ, ಮೆಹರ್ಬಾನ್, ಲಾಲ್ ಬಂಗ್ಲಾ, ತುಮ್ ಸೆ ಅಚ್ಚಾ ಕೌನ್ ಹೈ, ಗುಂಡಾ, ಏಕ್ ಫೂಲ್ ಏಕ್ ಭೂಲ್ ಚಿತ್ರಗಳಲ್ಲಿಯೂ ತಮ್ಮ ಅಭಿನಯದ ಛಾಪು ಮೂಡಿಸಿದ್ದರು ನಟಿ ಜಯಂತಿಯವರು.


ಇದನ್ನೂ ಓದಿ: ಕನ್ನಡದಲ್ಲೂ ’ಜೈ ಭೀಮ್’ ಎಂದ ತಮಿಳು ನಟ ಸೂರ್ಯ: ಹೊಸ ಚಿತ್ರಕ್ಕೆ ಕನ್ನಡಿಗರ ಸ್ವಾಗತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...