Homeಕರ್ನಾಟಕಹಿರಿಯ ನಟಿ, ಅಭಿನಯ ಶಾರದೆ ಜಯಂತಿ (76) ವಿಧಿವಶ

ಹಿರಿಯ ನಟಿ, ಅಭಿನಯ ಶಾರದೆ ಜಯಂತಿ (76) ವಿಧಿವಶ

- Advertisement -
- Advertisement -

ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಶಾರದೆ ಜಯಂತಿ (76) ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸೋಮವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ತಮ್ಮ ಮನೋಜ್ಞ ಅಭಿನಯದಿಂದ ಕನ್ನಡ ಚಿತ್ರರಂಗದಲ್ಲಿ ಅಭಿನಯ ಶಾರದೆ ಎಂದೇ ಕರೆಯಲ್ಪಡುತ್ತಿದ್ದ ಜಯಂತಿಯವರು, ಚಿತ್ರರಂಗದ ಬೋಲ್ಡ್ ಅಂಡ್ ಬ್ಯೂಟಿಫುಲ್‌ ನಟಿ ಎಂದು ಗುರುತಿಸಿಕೊಂಡಿದ್ದರು.

ನಟಿ ಜಯಂತಿ ದಕ್ಷಿಣ ಭಾರತ ಚಿತ್ರರಂಗದ ಮೇರು ನಟಿ. ಇವರು ಕನ್ನಡ ಸೇರಿದಂತೆ ತಮಿಳು, ತೆಲುಗು, ಮಲಯಾಳಂ, ಹಿಂದಿ ಮತ್ತು ಮರಾಠಿ ಭಾಷೆಗಳಲ್ಲಿಯೂ ಅಭಿನಯಿಸಿದ್ದರು. ಸುಮಾರು 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಹಲವಾರು ಪ್ರಶಸ್ತಿಗಳಿಗೆ ಅಭಿನಯ ಶಾರದೆ ಭಾಜನರಾಗಿದ್ದರು.

ಇದನ್ನೂ ಓದಿ: ಪದ್ಮಶ್ರಿ ಪ್ರಶಸ್ತಿ ನೀಡಿ ಅಭಿಯಾನ: ವೈಜನಾಥ ಬಿರಾದಾರರವರ ಎರಡು ಹಾಸ್ಯ ‘ಸ್ವಗತಗಳು’

ಕನ್ನಡದ ಮೇರು ನಟ ಡಾ.ರಾಜ್‌ಕುಮಾರ್‌ ಅವರೊಂದಿಗೆ 45 ಚಿತ್ರಗಳಲ್ಲಿ ಅಭಿನಯಿಸಿದ ಕೀರ್ತಿ ನಟಿ ಜಯಂತಿಯವರದ್ದು. ವಿಷ್ಣುವರ್ಧನ್, ಉದಯ್ ಕುಮಾರ್, ಕಲ್ಯಾಣ್ ಕುಮಾರ್, ಶ್ರೀನಾಥ್, ಅನಂತ್ ನಾಗ್ ಮುಂತಾದ ನಟರ ಜೊತೆ ತೆರೆ ಹಂಚಿಕೊಂಡಿದ್ದರು.

1968 ರಲ್ಲಿ ತೆರೆ ಕಂಡ ವೈ.ಆರ್.ಸ್ವಾಮಿ ನಿರ್ದೇಶನದ “ಜೇನು ಗೂಡು” ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಜಟಿ ಜಯಂತಿ, 500ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು.

ಕರ್ನಾಟಕದ ಬಳ್ಳಾರಿಯಲ್ಲಿ ಜನವರಿ 6, 1945 ರಲ್ಲಿ ಜನಿಸಿದ ಜಯಂತಿಯವರ ಮೂಲ ಹೆಸರು ಕಮಲಾ ಕುಮಾರಿ. ತಂದೆ ಬಾಲಸುಬ್ರಹ್ಮಣ್ಯಂ, ತಾಯಿ ಸಂತಾನಲಕ್ಷ್ಮೀ ಗೃಹಿಣಿಯಾಗಿದ್ದರು.

1965ರಲ್ಲಿ ತೆರೆಕಂಡ ಮಿಸ್ ಲೀಲಾವತಿ ಚಿತ್ರದ ಅಭಿನಯಕ್ಕಾಗಿ ಜಯಂತಿಯವರಿಗೆ ರಾಷ್ಟ್ರ ಪ್ರಶಸ್ತಿ ಬಂದಿದೆ. ಈ ಚಿತ್ರಕ್ಕೆ ನಿರ್ಮಾಪಕಿಯೂ ನಿರ್ದೇಶಕಿಯೂ ಜಯಂತಿ. ಎರಡು ಮುಖ, ಮನಸ್ಸಿನಂತೆ ಮಾಂಗಲ್ಯ, ಧರ್ಮ ದಾರಿ ತಪ್ಪಿತು, ಮಸಣದ ಹೂವು, ಆನಂದ್ ಚಿತ್ರಗಳ ಅಭಿನಯಕ್ಕಾಗಿ ಐದು ಬಾರಿ ರಾಜ್ಯ ಪ್ರಶಸ್ತಿ ಗಳಿಸಿದ್ದರು.

ಇದನ್ನೂ ಓದಿ: ಹಿರಿಯ ನಟ ವೈಜನಾಥ ಬಿರಾದಾರ ಅವರಿಗೆ ‘ಪದ್ಮಶ್ರೀ’ ನೀಡಲು ಆಗ್ರಹಿಸಿ ಆನ್‌ಲೈನ್‌ ಅಭಿಯಾನ

ಎಡಕಲ್ಲು ಗುಡ್ಡದ ಮೇಲೆ ಚಿತ್ರದಲ್ಲಿ ಜಯಂತಿಯವರು ವಿಶಿಷ್ಟ ಅಭಿನಯ ನೀಡಿದ್ದಾರೆ. ಕಸ್ತೂರಿ ನಿವಾಸ, ಬ್ಯಾಂಕರ್ ಮಾರ್ಗಯ್ಯ, ಬೆಟ್ಟದ ಹುಲಿ, ಚೂರಿ ಚಿಕ್ಕಣ್ಣ, ಭಲೇ ಬಸವ, ಶ್ರೀ ಕೃಷ್ಣದೇವರಾಯ ಸೇರಿದಂತೆ ಅನೇಕ ಚಿತ್ರಗಳನ್ನು ಕನ್ನಡಕ್ಕೆ ನೀಡಿದ್ದರು.

ವಿಷ್ಣು ಮಾಯ, ಕಲೆಕ್ಟರ್ ಜಾನಕಿ, ಮಾಯದಾರಿ ಮಲ್ಲಿಗಾಡು, ಸಂಸಾರಂ ಸಾಗರಂ, ಕುಲಗೌರವಂ, ಮಾಂಗಲ್ಯ ಭಾಗ್ಯಂ, ಶ್ರೀರಾಮಾಂಜನೇಯ ಯುದ್ಧಂ,ಅಂದರೂ ಮಂಚಿವಾರೆ, ಬೊಮ್ಮರಿಲ್ಲು, ಭಲೇ ಕೊಡಲ್ಲು ಸೇರಿದಂತೆ ಅನೇಕ ತೆಲುಗು ಚಿತ್ರಗಳಲ್ಲಿ ಅಭಿನಯಿಸಿದ್ದರು.

ತಮಿಳು ಚಿತ್ರರಂಗದಲ್ಲಿಯೂ ನಟಿ ಜಯಂತಿ ತಮ್ಮದೆಯಾದ ಛಾಪು ಮೂಡಿಸಿದ್ದಾರೆ. ಗಂಗಾ ಗೌರಿ, ಎಲ್ಲೋರುಮ್ ನಲ್ಲವರೆ, ನಿಲ್ ಗವನಿ ಕಾದಲೈ, ಎದಿರ್ ನೀಚಲ್, ನೀರ್ ಕುಮಿಳಿ, ಕಾದಲ್ ಪಾಡುತುಮ್ ಪಾಡು, ಪೆಣ್ಣೈ ನಂಬುಂಗಳ್, ದೇವತೈ ಸೇರಿ ಹಲವು ಚಿತ್ರಗಳಲ್ಲಿ ಕಾಣಸಿಕೊಂಡಿದ್ದರು.

ಮಲೆಯಾಳಂನ ಕಲಿಯೋದಂ, ಕಾರುತ ಪೌರ್ಣಮಿ, ಕಾಟ್ಟು ಪೂಕ್ಕಳ್, ಲಕ್ಷಪ್ರಭು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹಿಂದಿಯ ದಾದಾ, ತೀನ್ ಬಹುರಾಣಿಯಾ, ಆಜ್ ಕೆ ಶೋಲಿ, ಮೆಹರ್ಬಾನ್, ಲಾಲ್ ಬಂಗ್ಲಾ, ತುಮ್ ಸೆ ಅಚ್ಚಾ ಕೌನ್ ಹೈ, ಗುಂಡಾ, ಏಕ್ ಫೂಲ್ ಏಕ್ ಭೂಲ್ ಚಿತ್ರಗಳಲ್ಲಿಯೂ ತಮ್ಮ ಅಭಿನಯದ ಛಾಪು ಮೂಡಿಸಿದ್ದರು ನಟಿ ಜಯಂತಿಯವರು.


ಇದನ್ನೂ ಓದಿ: ಕನ್ನಡದಲ್ಲೂ ’ಜೈ ಭೀಮ್’ ಎಂದ ತಮಿಳು ನಟ ಸೂರ್ಯ: ಹೊಸ ಚಿತ್ರಕ್ಕೆ ಕನ್ನಡಿಗರ ಸ್ವಾಗತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...