Homeಕರ್ನಾಟಕಹಿರಿಯ ನಟಿ, ಅಭಿನಯ ಶಾರದೆ ಜಯಂತಿ (76) ವಿಧಿವಶ

ಹಿರಿಯ ನಟಿ, ಅಭಿನಯ ಶಾರದೆ ಜಯಂತಿ (76) ವಿಧಿವಶ

- Advertisement -
- Advertisement -

ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಶಾರದೆ ಜಯಂತಿ (76) ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸೋಮವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ತಮ್ಮ ಮನೋಜ್ಞ ಅಭಿನಯದಿಂದ ಕನ್ನಡ ಚಿತ್ರರಂಗದಲ್ಲಿ ಅಭಿನಯ ಶಾರದೆ ಎಂದೇ ಕರೆಯಲ್ಪಡುತ್ತಿದ್ದ ಜಯಂತಿಯವರು, ಚಿತ್ರರಂಗದ ಬೋಲ್ಡ್ ಅಂಡ್ ಬ್ಯೂಟಿಫುಲ್‌ ನಟಿ ಎಂದು ಗುರುತಿಸಿಕೊಂಡಿದ್ದರು.

ನಟಿ ಜಯಂತಿ ದಕ್ಷಿಣ ಭಾರತ ಚಿತ್ರರಂಗದ ಮೇರು ನಟಿ. ಇವರು ಕನ್ನಡ ಸೇರಿದಂತೆ ತಮಿಳು, ತೆಲುಗು, ಮಲಯಾಳಂ, ಹಿಂದಿ ಮತ್ತು ಮರಾಠಿ ಭಾಷೆಗಳಲ್ಲಿಯೂ ಅಭಿನಯಿಸಿದ್ದರು. ಸುಮಾರು 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಹಲವಾರು ಪ್ರಶಸ್ತಿಗಳಿಗೆ ಅಭಿನಯ ಶಾರದೆ ಭಾಜನರಾಗಿದ್ದರು.

ಇದನ್ನೂ ಓದಿ: ಪದ್ಮಶ್ರಿ ಪ್ರಶಸ್ತಿ ನೀಡಿ ಅಭಿಯಾನ: ವೈಜನಾಥ ಬಿರಾದಾರರವರ ಎರಡು ಹಾಸ್ಯ ‘ಸ್ವಗತಗಳು’

ಕನ್ನಡದ ಮೇರು ನಟ ಡಾ.ರಾಜ್‌ಕುಮಾರ್‌ ಅವರೊಂದಿಗೆ 45 ಚಿತ್ರಗಳಲ್ಲಿ ಅಭಿನಯಿಸಿದ ಕೀರ್ತಿ ನಟಿ ಜಯಂತಿಯವರದ್ದು. ವಿಷ್ಣುವರ್ಧನ್, ಉದಯ್ ಕುಮಾರ್, ಕಲ್ಯಾಣ್ ಕುಮಾರ್, ಶ್ರೀನಾಥ್, ಅನಂತ್ ನಾಗ್ ಮುಂತಾದ ನಟರ ಜೊತೆ ತೆರೆ ಹಂಚಿಕೊಂಡಿದ್ದರು.

1968 ರಲ್ಲಿ ತೆರೆ ಕಂಡ ವೈ.ಆರ್.ಸ್ವಾಮಿ ನಿರ್ದೇಶನದ “ಜೇನು ಗೂಡು” ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಜಟಿ ಜಯಂತಿ, 500ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು.

ಕರ್ನಾಟಕದ ಬಳ್ಳಾರಿಯಲ್ಲಿ ಜನವರಿ 6, 1945 ರಲ್ಲಿ ಜನಿಸಿದ ಜಯಂತಿಯವರ ಮೂಲ ಹೆಸರು ಕಮಲಾ ಕುಮಾರಿ. ತಂದೆ ಬಾಲಸುಬ್ರಹ್ಮಣ್ಯಂ, ತಾಯಿ ಸಂತಾನಲಕ್ಷ್ಮೀ ಗೃಹಿಣಿಯಾಗಿದ್ದರು.

1965ರಲ್ಲಿ ತೆರೆಕಂಡ ಮಿಸ್ ಲೀಲಾವತಿ ಚಿತ್ರದ ಅಭಿನಯಕ್ಕಾಗಿ ಜಯಂತಿಯವರಿಗೆ ರಾಷ್ಟ್ರ ಪ್ರಶಸ್ತಿ ಬಂದಿದೆ. ಈ ಚಿತ್ರಕ್ಕೆ ನಿರ್ಮಾಪಕಿಯೂ ನಿರ್ದೇಶಕಿಯೂ ಜಯಂತಿ. ಎರಡು ಮುಖ, ಮನಸ್ಸಿನಂತೆ ಮಾಂಗಲ್ಯ, ಧರ್ಮ ದಾರಿ ತಪ್ಪಿತು, ಮಸಣದ ಹೂವು, ಆನಂದ್ ಚಿತ್ರಗಳ ಅಭಿನಯಕ್ಕಾಗಿ ಐದು ಬಾರಿ ರಾಜ್ಯ ಪ್ರಶಸ್ತಿ ಗಳಿಸಿದ್ದರು.

ಇದನ್ನೂ ಓದಿ: ಹಿರಿಯ ನಟ ವೈಜನಾಥ ಬಿರಾದಾರ ಅವರಿಗೆ ‘ಪದ್ಮಶ್ರೀ’ ನೀಡಲು ಆಗ್ರಹಿಸಿ ಆನ್‌ಲೈನ್‌ ಅಭಿಯಾನ

ಎಡಕಲ್ಲು ಗುಡ್ಡದ ಮೇಲೆ ಚಿತ್ರದಲ್ಲಿ ಜಯಂತಿಯವರು ವಿಶಿಷ್ಟ ಅಭಿನಯ ನೀಡಿದ್ದಾರೆ. ಕಸ್ತೂರಿ ನಿವಾಸ, ಬ್ಯಾಂಕರ್ ಮಾರ್ಗಯ್ಯ, ಬೆಟ್ಟದ ಹುಲಿ, ಚೂರಿ ಚಿಕ್ಕಣ್ಣ, ಭಲೇ ಬಸವ, ಶ್ರೀ ಕೃಷ್ಣದೇವರಾಯ ಸೇರಿದಂತೆ ಅನೇಕ ಚಿತ್ರಗಳನ್ನು ಕನ್ನಡಕ್ಕೆ ನೀಡಿದ್ದರು.

ವಿಷ್ಣು ಮಾಯ, ಕಲೆಕ್ಟರ್ ಜಾನಕಿ, ಮಾಯದಾರಿ ಮಲ್ಲಿಗಾಡು, ಸಂಸಾರಂ ಸಾಗರಂ, ಕುಲಗೌರವಂ, ಮಾಂಗಲ್ಯ ಭಾಗ್ಯಂ, ಶ್ರೀರಾಮಾಂಜನೇಯ ಯುದ್ಧಂ,ಅಂದರೂ ಮಂಚಿವಾರೆ, ಬೊಮ್ಮರಿಲ್ಲು, ಭಲೇ ಕೊಡಲ್ಲು ಸೇರಿದಂತೆ ಅನೇಕ ತೆಲುಗು ಚಿತ್ರಗಳಲ್ಲಿ ಅಭಿನಯಿಸಿದ್ದರು.

ತಮಿಳು ಚಿತ್ರರಂಗದಲ್ಲಿಯೂ ನಟಿ ಜಯಂತಿ ತಮ್ಮದೆಯಾದ ಛಾಪು ಮೂಡಿಸಿದ್ದಾರೆ. ಗಂಗಾ ಗೌರಿ, ಎಲ್ಲೋರುಮ್ ನಲ್ಲವರೆ, ನಿಲ್ ಗವನಿ ಕಾದಲೈ, ಎದಿರ್ ನೀಚಲ್, ನೀರ್ ಕುಮಿಳಿ, ಕಾದಲ್ ಪಾಡುತುಮ್ ಪಾಡು, ಪೆಣ್ಣೈ ನಂಬುಂಗಳ್, ದೇವತೈ ಸೇರಿ ಹಲವು ಚಿತ್ರಗಳಲ್ಲಿ ಕಾಣಸಿಕೊಂಡಿದ್ದರು.

ಮಲೆಯಾಳಂನ ಕಲಿಯೋದಂ, ಕಾರುತ ಪೌರ್ಣಮಿ, ಕಾಟ್ಟು ಪೂಕ್ಕಳ್, ಲಕ್ಷಪ್ರಭು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹಿಂದಿಯ ದಾದಾ, ತೀನ್ ಬಹುರಾಣಿಯಾ, ಆಜ್ ಕೆ ಶೋಲಿ, ಮೆಹರ್ಬಾನ್, ಲಾಲ್ ಬಂಗ್ಲಾ, ತುಮ್ ಸೆ ಅಚ್ಚಾ ಕೌನ್ ಹೈ, ಗುಂಡಾ, ಏಕ್ ಫೂಲ್ ಏಕ್ ಭೂಲ್ ಚಿತ್ರಗಳಲ್ಲಿಯೂ ತಮ್ಮ ಅಭಿನಯದ ಛಾಪು ಮೂಡಿಸಿದ್ದರು ನಟಿ ಜಯಂತಿಯವರು.


ಇದನ್ನೂ ಓದಿ: ಕನ್ನಡದಲ್ಲೂ ’ಜೈ ಭೀಮ್’ ಎಂದ ತಮಿಳು ನಟ ಸೂರ್ಯ: ಹೊಸ ಚಿತ್ರಕ್ಕೆ ಕನ್ನಡಿಗರ ಸ್ವಾಗತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...