Homeಅಂಕಣಗಳುಹಂಪನಾ ಅವರ ಪ್ರತಿರೋಧ ಮತ್ತು ವಿಸ್ತಾರವಾದ ವ್ಯಾಪ್ತಿ ಪಡೆಯಬೇಕಿರುವ ಕನ್ನಡದ ಕೆಲಸ

ಹಂಪನಾ ಅವರ ಪ್ರತಿರೋಧ ಮತ್ತು ವಿಸ್ತಾರವಾದ ವ್ಯಾಪ್ತಿ ಪಡೆಯಬೇಕಿರುವ ಕನ್ನಡದ ಕೆಲಸ

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಯ್ಕೆ ಆಗಿರುವ ಕವಿ ದೊಡ್ಡರಂಗೇಗೌಡರು, ಮೇಲಿನ ಈ ವಿದ್ಯಮಾನದ ಬಗ್ಗೆ ತುಟಿಕ್‌ಪಿಟಿಕ್ ಎಂದಿಲ್ಲ. ಪ್ರಧಾನಿ ಮೋದಿಯವರ ಬಗ್ಗೆ ಪತ್ರಿಕೆಯೊಂದರಲ್ಲಿ ದೀರ್ಘ ಪದ್ಯವನ್ನು ಬರೆದಿದ್ದ ದೊಡ್ಡರಂಗೇಗೌಡರಿಂದ ದೊಡ್ಡ ಮಟ್ಟದ ನಿರೀಕ್ಷೆಗಳೇನೂ ಇರದಿದ್ದರೂ, ’ಹಿಂದಿ ಹೇರಿಕೆ’ಯಂತಹ ಪ್ರಾಥಮಿಕ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳದೆ, ಹಿಂದಿ ರಾಷ್ಟ್ರಭಾಷೆ ಎಂಬ ತಪ್ಪು ಕಲ್ಪನೆಗಳನ್ನು ಮತ್ತೆ ಪಸರಿಸುತ್ತಿರುವುದು ಆತಂಕಕಾರಿ ವಿಷಯವಂತೂ ಹೌದು

- Advertisement -
- Advertisement -

ಕೇಂದ್ರ ಸರ್ಕಾರ ಜಾರಿ ಮಾಡಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟಿಸುತ್ತಿರುವ ರೈತರ ಮಾತನ್ನು ಆಲಿಸದ ಪ್ರಧಾನಿ ನರೇಂದ್ರ ಮೋದಿಯವರನ್ನು ಹಿರಿಯ ಸಾಹಿತಿ-ಸಂಶೋಧಕ ಹಂ.ಪ.ನಾಗರಾಜಯ್ಯ ಅವರು ಬಹಳ ಸಂಯಮದಿಂದ ಮತ್ತು ಜವಾಬ್ದಾರಿಯುತ ಮಾತುಗಳಿಂದಲೇ ಟೀಕೆ ಮಾಡಿದ್ದರು. ಆದರೂ ಯಾರೋ ಒಬ್ಬ ವ್ಯಕ್ತಿ ಕುತ್ಸಿತ ಉದ್ದೇಶದಿಂದ ನೀಡಿದ ದೂರಿನ ಹಿನ್ನಲೆಯಲ್ಲಿ ಮಂಡ್ಯದ ಪೊಲೀಸರು, ದೂರಿನ ಅರ್ಹತೆಯ ಬಗ್ಗೆ ಯಾವುದೇ ಪ್ರಾಥಮಿಕ ತನಿಖೆ ನಡೆಸದೆ ಅಥವಾ ಬೇಕಂತಲೇ, ಹಂಪನಾರವರನ್ನು ಕರೆಸಿ ವಿಚಾರಣೆ ಮಾಡಿದ್ದು ನಾವು ಬದುಕುತ್ತಿರುವ ಇವತ್ತಿನ ಭಯಾನಕ ದಿನಗಳ ಬಗ್ಗೆ ಮತ್ತೊಂದು ಎಚ್ಚರಿಕೆಯನ್ನು ನೀಡುತ್ತಿರುವಂತೆ ಭಾಸವಾಗುತ್ತದೆ.

ಜನವರಿ 25ರಂದು ಕನ್ನಡ ರಕ್ಷಣಾ ವೇದಿಕೆ (ಕರವೇ) ಈ ವಿದ್ಯಮಾನವನ್ನು ಖಂಡಿಸಲು, ಈ ನಾಡಿನ ಹಲವು ಪ್ರಾಜ್ಞರನ್ನು ಆಹ್ವಾನಿಸಿ ಆಯೋಜಿಸಿದ್ದ ಸಭೆ ಹಲವು ಕಾರಣಗಳಿಗೆ ಮುಖ್ಯವಾಗಿತ್ತು. ನೆಲ, ಜಲ, ಭಾಷೆಯ ಕುರಿತು ಹಲವು ವರ್ಷಗಳಿಂದ ಹಲವಾರು ಹೋರಾಟಗಳನ್ನು ರೂಪಿಸಿಕೊಂಡು ಬಂದಿರುವ ಕರವೇ, ಈಗ ವಿಶಾಲವಾದ ಅರ್ಥದಲ್ಲಿ ಇವೆಲ್ಲ ಸಮಸ್ಯೆಗಳಿಗೂ ಕಾರಣವಾಗುವ ದಮನಕಾರಿ ಪ್ರಭುತ್ವವನ್ನು ಮತ್ತು ಅದರ ನಡೆಗಳನ್ನು ಇಂತಹ ಕಾರ್ಯಕ್ರಮಗಳ ಮೂಲಕ ಪ್ರಶ್ನಿಸಲು ಮುಂದಾಗಿರುವುದು ಬಹಳ ಆಶಾದಾಯಕ ಮತ್ತು ಸ್ಫೂರ್ತಿದಾಯಕ ಸಂಗತಿ. ಸಾಹಿತಿ ಕಲ್ಬುರ್ಗಿಯವರ ಹತ್ಯೆಯ ನಂತರವೂ ಕರವೇ ಇಂತಹ ಕಾರ್ಯಕ್ರಮ ಹಮ್ಮಿಕೊಂಡಿತ್ತು. ರಾಜ್ಯಾದ್ಯಂತ ವಿಶಾಲವಾಗಿ ಹರಡಿರುವ ಸಂಘಟನೆಯಾಗಿರುವ ಕರವೇ, ಜಾತಿ, ಧರ್ಮಗಳ ಮತ್ತು ಕೋಮುರಾಜಕಾರಣದ ಸಲುವಾಗಿ ರಾಜ್ಯದಲ್ಲಿ ದುರ್ಬಲ ಸಮುದಾಯಗಳ ಮೇಲೆ ಆಗುವ ಯಾವುದೇ ರೀತಿಯ ದೌರ್ಜನ್ಯದ ವಿರುದ್ಧ ಕೂಡ ದೊಡ್ಡ ಮಟ್ಟದಲ್ಲಿ ಹೋರಾಟ ರೂಪಿಸಬೇಕು ಎಂಬುದು ಹಲವರ ಅಪೇಕ್ಷೆ. ಆ ನಿಟ್ಟಿನಲ್ಲಿ ಈ ಕಾರ್ಯಕ್ರಮ ನಡೆದ ಸಂದರ್ಭ ಮತ್ತು ಅದರಲ್ಲಿ ಭಾಗಿಯಾದವರಲ್ಲಿದ್ದ ವೈವಿಧ್ಯತೆಯ ಪ್ರಾತಿನಿಧ್ಯದ ದೃಷ್ಟಿಯಿಂದಲೂ ಇದು ಪ್ರಮುಖವಾಗಿತ್ತು.

ಹಂಪನಾ

ಈ ಕಾರ್ಯಕ್ರಮದಲ್ಲಿ ಕವಿ-ಸಾಮಾಜಿಕ ಕಾರ್ಯಕರ್ತ ಹುಲಿಕುಂಟೆ ಮೂರ್ತಿ ಅವರು ಆಡಿದ ಮಾತುಗಳನ್ನು ನೆನೆಯುವುದು ಇಲ್ಲಿ ಮುಖ್ಯ. ಹಂಪನಾ ಅವರಿಗೆ ಬೆಂಬಲ ನೀಡುತ್ತಿರುವುದರ ವಿರುದ್ಧ ಏಳುತ್ತಿರುವ ಹಲವು ರೀತಿಯ ತರಹೇವಾರಿ ಪ್ರಶ್ನೆಗಳಿಗೆ ಅದು ಸಮರ್ಪಕ ಉತ್ತರವಾಗಿತ್ತು. ಹಂಪನಾ ಅವರು ಈ ಹಿಂದೆ ಪ್ರಭುತ್ವದ ಯಾವುದೇ ದೌರ್ಜನ್ಯಗಳಿಗೆ ಸ್ಪಂದಿಸದೆ ಇರುವವರು. ಅವರಿಗೆ ಈ ಮಟ್ಟದ ಬೆಂಬಲ ಬೇಕೆ ಎಂಬ ಪ್ರಶ್ನೆಗೆ ಉತ್ತರಿಸಿದ ಮೂರ್ತಿ, ನಾನು ಓದಲು ಇಷ್ಟ ಪಡದ, ಅವರ ಸಾಹಿತ್ಯವನ್ನು ಮೆಚ್ಚದ ಎಸ್ ಎಲ್ ಭೈರಪ್ಪನವರ ಮೇಲೆ ಪ್ರಭುತ್ವ ಈ ರೀತಿಯ ದಾಳಿ ನಡೆಸಿದರೆ, ಅದರ ವಿರುದ್ಧ ಕೂಡ ಧ್ವನಿ ಎತ್ತುತ್ತೇನೆ ಎಂದರು. ಇಷ್ಟು ದಿನ ತಮಗೆ ಅಪಾಯಕಾರಿ ಎಂದು ಎಂದಿಗೂ ಅನಿಸದ ಹಂಪನಾ ಅವರು, ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ನೀಡಿದ ಒಂದೇ ಒಂದು ಹೇಳಿಕೆಗಾಗಿ ಖಳನಾಯಕರಾಗಿ ಹೋದರು. ಇವತ್ತು ಮೋದಿ ಮತ್ತು ಅವರ ಆಡಳಿತದ ಬಗ್ಗೆ ಭಜನೆ ಮಾಡುತ್ತಿರುವ ಭೈರಪ್ಪ ಕೂಡ ಮುಂದೊಂದು ದಿನ ಇದೇ ಅಥವಾ ಇದಕ್ಕೂ ಘೋರವಾದ (ಉತ್ತರಪ್ರದೇಶ ನೆನಪಿಸಿಕೊಳ್ಳಿ) ಪ್ರಭುತ್ವಕ್ಕೆ ಮತ್ತು ಅವರ ಬೆಂಬಲಿಗರಿಗೆ ಎದುರಾಳಿಯಾಗಬಹುದು. ಆಗ, ಅವರು ದೈವತ್ವದಿಂದ ಮಾನವತ್ವಕ್ಕೆ ಇಳಿಸಿ ಬರೆದಿರುವ ಮಹಾಭಾರತದ ಕಥೆಯ ’ಪರ್ವ ಕಾದಂಬರಿಯೇ ಅಪಾಯಕಾರಿ ಪಠ್ಯವಾಗಿ ಕಾಣಿಸಬಹದು. ಧಾರ್ಮಿಕ ಅಮಲಿನಲ್ಲಿ ಕಟ್ಟುವ ರಾಷ್ಟ್ರೀಯತೆ ಯಾರ ಯಾರ ಬಾಗಿಲಿಗೆ ಬಂದು, ಯಾವ ಕಾರಣಕ್ಕೆ ಯಾರನ್ನೆಲ್ಲ ಅಮರಿಕೊಳ್ಳುತ್ತದೋ ಬಲ್ಲವರು ಯಾರು?

PC : IUCAA page, (ಜಯಂತ್ ನಾರ್ಲೀಕರ್)

ಅದೇನೇ ಇರಲಿ, 84 ವರ್ಷಗಳ ವಯೋವೃದ್ಧರಾದ ಸಾಹಿತಿ ಹಂಪನಾ ಅವರಿಗೂ ಪ್ರಸಕ್ತ ಕೇಂದ್ರ ಸರ್ಕಾರದ ಕೆಲವಾದರೂ ನೀತಿಗಳು ಆಕ್ರೋಶ ತಂದಿವೆ ಮತ್ತು ಅವರು ಈ ವಯಸ್ಸಿನಲ್ಲಿಯೂ ಪ್ರತಿರೋಧಿಸಬೇಕು ಎಂದು ಮನಗಂಡು ಗಟ್ಟಿ ಧ್ವನಿಯಲ್ಲಿ ಮಾತನಾಡುತ್ತಿರುವುದು, ಬದಲಾಗುತ್ತಿರುವ ಒಂದು ದೊಡ್ಡ ವರ್ಗದ ಪ್ರತಿನಿಧಿಯಂತೆ ಅವರು ಕಾಣುವುದಂತೂ ನಿಜ. ಜಾರ್ಜ್ ಆರ್ವೆಲ್ ತನ್ನ ’1984’ ಕಾದಂಬರಿಯಲ್ಲಿ ನಿರೂಪಿಸಿದಂತಹ ನಿರಂಕುಶ ಮತ್ತು ಸರ್ವಾಧಿಕಾರಿ ವ್ಯವಸ್ಥೆಗೆ ಈ ದೇಶ ಜಾರುವುದಕ್ಕೆ ಇನ್ನೂ ಹಲವು ಅಡೆತಡೆಗಳಿವೆ ಎಂಬುದನ್ನೂ ಇದು ನೆನಪಿಸುತ್ತದ್ದಲ್ಲದೆ, ಸಕ್ರಿಯವಾದ ನಾಗರಿಕ ಸಮಾಜ ಅಪಾಯಗಳನ್ನು ಮೆಟ್ಟಿ ನಿಲ್ಲಬಹುದು ಎಂಬುದನ್ನೂ ತೋರಿಸುತ್ತದೆ. ಹಂಪನಾ ಅವರನ್ನು ಕರೆಸಿ ವಿಚಾರಣೆ ನಡೆಸಿರುವುದಕ್ಕೆ ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಕೋರಿದ ಕ್ಷಮೆಯೂ ಇದಕ್ಕೆ ಸಾಕ್ಷಿಯಾಗಿದೆ.

ಪ್ರಜಾಸತ್ತಾತ್ಮಕ ಮತ್ತು ಜವಾಬ್ದಾರಿಯುತ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುವ ಸಲುವಾಗಿ ಎಲ್ಲ ರಂಗದ ಪ್ರಾಜ್ಞರೂ ಇಂದು ದೊಡ್ಡ ಮಟ್ಟದಲ್ಲಿ ಪ್ರತಿರೋಧ ದಾಖಲಿಸಬೇಕಿದೆ. ಇದರಲ್ಲಿ ಕನ್ನಡದ ಸಾಹಿತ್ಯ-ಸಿನಿಮಾ-ರಂಗಭೂಮಿ ಲೋಕದವರ ಪಾತ್ರ ದೊಡ್ಡದಾಗಿರಬೇಕಿತ್ತು. ಆದರೆ ಅವರೆಲ್ಲರ ಅಭಾವ ದೊಡ್ಡದಾಗಿದೆ. ಇದೇ ಸಮಯದಲ್ಲಿ ಫೆಬ್ರವರಿ ಕೊನೆಯ ಭಾಗದಲ್ಲಿ ನಡೆಯಲು ನಿಯೋಜಿಸಲಾಗಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಯ್ಕೆ ಆಗಿರುವ ಕವಿ ದೊಡ್ಡರಂಗೇಗೌಡರು, ಮೇಲಿನ ಈ ವಿದ್ಯಮಾನದ ಬಗ್ಗೆ ತುಟಿಕ್‌ಪಿಟಿಕ್ ಎಂದಿಲ್ಲ. ಪ್ರಧಾನಿ ಮೋದಿಯವರ ಬಗ್ಗೆ ಪತ್ರಿಕೆಯೊಂದರಲ್ಲಿ ದೀರ್ಘ ಪದ್ಯವನ್ನು ಬರೆದಿದ್ದ ದೊಡ್ಡರಂಗೇಗೌಡರಿಂದ ದೊಡ್ಡ ಮಟ್ಟದ ನಿರೀಕ್ಷೆಗಳೇನೂ ಇರದಿದ್ದರೂ, ’ಹಿಂದಿ ಹೇರಿಕೆ’ಯಂತಹ ಪ್ರಾಥಮಿಕ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳದೆ, ಹಿಂದಿ ರಾಷ್ಟ್ರಭಾಷೆ ಎಂಬ ತಪ್ಪು ಕಲ್ಪನೆಗಳನ್ನು ಮತ್ತೆ ಪಸರಿಸುತ್ತಿರುವುದು ಆತಂಕಕಾರಿ ವಿಷಯವಂತೂ ಹೌದು. ಕನ್ನಡ ನಾಡಿನ ಪ್ರಮುಖ ಸಾಹಿತ್ಯ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತು ದಿಕ್ಕು ತಪ್ಪುತ್ತಿರುವುದನ್ನು ಇದು ಎತ್ತಿ ತೋರಿಸುತ್ತದೆ ಕೂಡ.

ಇದರ ನಡುವೆ ಮಹಾರಾಷ್ಟ್ರದಲ್ಲಿ ಮಾರ್ಚ್ ಕೊನೆಯ ಭಾಗದಲ್ಲಿ ನಡೆಯಲಿರುವ 94ನೇ ಮರಾಠಿ ಸಾಹಿತ್ಯ ಸಮ್ಮೇಳನಕ್ಕೆ ’ಜಯಂತ್ ನಾರ್ಲೀಕರ್ ಅವರನ್ನು ಅಧ್ಯಕ್ಷರನ್ನಾಗಿ ನಿಯೋಜಿಸಲಾಗಿದೆ. ಕನ್ನಡ ಸಾಹಿತ್ಯ ಸಮ್ಮೇಳನದಂತೆಯೇ ಬಹಳ ಪ್ರತಿಷ್ಠಿತ ಸಾಹಿತ್ಯ ಕೂಟ ಇದು. ಈ ಬಾರಿಯ ವಿಶೇಷ ಎಂದರೆ ಸಮ್ಮೇಳನದ ಅಧ್ಯಕ್ಷರಾಗಲಿರುವ ಪದ್ಮ ವಿಭೂಷಣ ಜಯಂತ್ ನಾರ್ಲೀಕರ್ ಅವರು ವಿಜ್ಞಾನಿಗಳು. ಅಂತಾರಾಷ್ಟ್ರೀಯ ಖ್ಯಾತಿಯ ಆಸ್ಟ್ರೋಫಿಸಿಸಿಸ್ಟ್. ಇಂಗ್ಲಿಷ್‌ನಲ್ಲಿ ಜನಪ್ರಿಯ ವಿಜ್ಞಾನಕ್ಕೆ ಸಂಬಂಧಿಸಿದಂತೆ ಹತ್ತಾರು ಕೃತಿಗಳನ್ನು ಜಯಂತ್ ಅವರು ರಚಿಸಿದ್ದಾರಲ್ಲದೆ, ಮರಾಠಿಯಲ್ಲಿಯೂ ವಿಜ್ಞಾನದ ಪುಸ್ತಕಗಳನ್ನು, ಹಾಗು ವಿಜ್ಞಾನಕ್ಕೆ ಸಂಬಂಧಿಸಿದ ಕಥೆ-ಕಾದಂಬರಿಗಳನ್ನು ಬರೆದಿದ್ದಾರೆ. ಇಂಗ್ಲಿಷ್‌ನಲ್ಲಿ ಸೈ-ಫೈ ಎಂದು ಕರೆಯಲ್ಪಡುವ ಈ ಜನಪ್ರಿಯ ಸಾಹಿತ್ಯ ಪ್ರಕಾರ ವಿಶ್ವದಾದ್ಯಂತ ಮಕ್ಕಳು ಮತ್ತು ಯುವಜನರಿಗೆ ಭಾರಿ ಆಕರ್ಷಣೆ. ಕನ್ನಡದಲ್ಲಿ ಮನು, ರಾಜಶೇಖರ ಭೂಸನೂರಮಠ ಅವರನ್ನು ಒಳಗೊಂಡಂತೆ ಕೆಲವೇ ಕೆಲವು ಸಾಹಿತಿಗಳು ಈ ಪ್ರಕಾರದಲ್ಲಿ ಬರೆದಿದ್ದಾರೆ. ಕನ್ನಡದಲ್ಲಿ ಈ ಪ್ರಕಾರ ಏಕೆ ಹೆಚ್ಚು ಜನಪ್ರಿಯವಾಗಲಿಲ್ಲ ಎಂಬುದು ಒಳ್ಳೆಯ ಅಧ್ಯಯನವಾದೀತು. ಇಂತಹ ಸಾಹಿತ್ಯ ಬೆಳೆದು, ವಿಜ್ಞಾನಿಯೊಬ್ಬರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗುವ ಸುಸಂದರ್ಭ ಮುಂದೊಂದು ದಿನ ಒದಗಿ ಬರಲಿ. ವೈಜ್ಞಾನಿಕ ಭಾವನೆ ಜನರಲ್ಲಿ ಹೆಚ್ಚಾಗಲಿ. ವೈಚಾರಿಕತೆಯ ಉಳಿವಿಗೆ ಜನ ತಮ್ಮನ್ನು ಅರ್ಪಿಸಿಕೊಳ್ಳಲಿ.


ಇದನ್ನೂ ಓದಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...