Homeಅಂಕಣಗಳುಹಂಪನಾ ಅವರ ಪ್ರತಿರೋಧ ಮತ್ತು ವಿಸ್ತಾರವಾದ ವ್ಯಾಪ್ತಿ ಪಡೆಯಬೇಕಿರುವ ಕನ್ನಡದ ಕೆಲಸ

ಹಂಪನಾ ಅವರ ಪ್ರತಿರೋಧ ಮತ್ತು ವಿಸ್ತಾರವಾದ ವ್ಯಾಪ್ತಿ ಪಡೆಯಬೇಕಿರುವ ಕನ್ನಡದ ಕೆಲಸ

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಯ್ಕೆ ಆಗಿರುವ ಕವಿ ದೊಡ್ಡರಂಗೇಗೌಡರು, ಮೇಲಿನ ಈ ವಿದ್ಯಮಾನದ ಬಗ್ಗೆ ತುಟಿಕ್‌ಪಿಟಿಕ್ ಎಂದಿಲ್ಲ. ಪ್ರಧಾನಿ ಮೋದಿಯವರ ಬಗ್ಗೆ ಪತ್ರಿಕೆಯೊಂದರಲ್ಲಿ ದೀರ್ಘ ಪದ್ಯವನ್ನು ಬರೆದಿದ್ದ ದೊಡ್ಡರಂಗೇಗೌಡರಿಂದ ದೊಡ್ಡ ಮಟ್ಟದ ನಿರೀಕ್ಷೆಗಳೇನೂ ಇರದಿದ್ದರೂ, ’ಹಿಂದಿ ಹೇರಿಕೆ’ಯಂತಹ ಪ್ರಾಥಮಿಕ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳದೆ, ಹಿಂದಿ ರಾಷ್ಟ್ರಭಾಷೆ ಎಂಬ ತಪ್ಪು ಕಲ್ಪನೆಗಳನ್ನು ಮತ್ತೆ ಪಸರಿಸುತ್ತಿರುವುದು ಆತಂಕಕಾರಿ ವಿಷಯವಂತೂ ಹೌದು

- Advertisement -
- Advertisement -

ಕೇಂದ್ರ ಸರ್ಕಾರ ಜಾರಿ ಮಾಡಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟಿಸುತ್ತಿರುವ ರೈತರ ಮಾತನ್ನು ಆಲಿಸದ ಪ್ರಧಾನಿ ನರೇಂದ್ರ ಮೋದಿಯವರನ್ನು ಹಿರಿಯ ಸಾಹಿತಿ-ಸಂಶೋಧಕ ಹಂ.ಪ.ನಾಗರಾಜಯ್ಯ ಅವರು ಬಹಳ ಸಂಯಮದಿಂದ ಮತ್ತು ಜವಾಬ್ದಾರಿಯುತ ಮಾತುಗಳಿಂದಲೇ ಟೀಕೆ ಮಾಡಿದ್ದರು. ಆದರೂ ಯಾರೋ ಒಬ್ಬ ವ್ಯಕ್ತಿ ಕುತ್ಸಿತ ಉದ್ದೇಶದಿಂದ ನೀಡಿದ ದೂರಿನ ಹಿನ್ನಲೆಯಲ್ಲಿ ಮಂಡ್ಯದ ಪೊಲೀಸರು, ದೂರಿನ ಅರ್ಹತೆಯ ಬಗ್ಗೆ ಯಾವುದೇ ಪ್ರಾಥಮಿಕ ತನಿಖೆ ನಡೆಸದೆ ಅಥವಾ ಬೇಕಂತಲೇ, ಹಂಪನಾರವರನ್ನು ಕರೆಸಿ ವಿಚಾರಣೆ ಮಾಡಿದ್ದು ನಾವು ಬದುಕುತ್ತಿರುವ ಇವತ್ತಿನ ಭಯಾನಕ ದಿನಗಳ ಬಗ್ಗೆ ಮತ್ತೊಂದು ಎಚ್ಚರಿಕೆಯನ್ನು ನೀಡುತ್ತಿರುವಂತೆ ಭಾಸವಾಗುತ್ತದೆ.

ಜನವರಿ 25ರಂದು ಕನ್ನಡ ರಕ್ಷಣಾ ವೇದಿಕೆ (ಕರವೇ) ಈ ವಿದ್ಯಮಾನವನ್ನು ಖಂಡಿಸಲು, ಈ ನಾಡಿನ ಹಲವು ಪ್ರಾಜ್ಞರನ್ನು ಆಹ್ವಾನಿಸಿ ಆಯೋಜಿಸಿದ್ದ ಸಭೆ ಹಲವು ಕಾರಣಗಳಿಗೆ ಮುಖ್ಯವಾಗಿತ್ತು. ನೆಲ, ಜಲ, ಭಾಷೆಯ ಕುರಿತು ಹಲವು ವರ್ಷಗಳಿಂದ ಹಲವಾರು ಹೋರಾಟಗಳನ್ನು ರೂಪಿಸಿಕೊಂಡು ಬಂದಿರುವ ಕರವೇ, ಈಗ ವಿಶಾಲವಾದ ಅರ್ಥದಲ್ಲಿ ಇವೆಲ್ಲ ಸಮಸ್ಯೆಗಳಿಗೂ ಕಾರಣವಾಗುವ ದಮನಕಾರಿ ಪ್ರಭುತ್ವವನ್ನು ಮತ್ತು ಅದರ ನಡೆಗಳನ್ನು ಇಂತಹ ಕಾರ್ಯಕ್ರಮಗಳ ಮೂಲಕ ಪ್ರಶ್ನಿಸಲು ಮುಂದಾಗಿರುವುದು ಬಹಳ ಆಶಾದಾಯಕ ಮತ್ತು ಸ್ಫೂರ್ತಿದಾಯಕ ಸಂಗತಿ. ಸಾಹಿತಿ ಕಲ್ಬುರ್ಗಿಯವರ ಹತ್ಯೆಯ ನಂತರವೂ ಕರವೇ ಇಂತಹ ಕಾರ್ಯಕ್ರಮ ಹಮ್ಮಿಕೊಂಡಿತ್ತು. ರಾಜ್ಯಾದ್ಯಂತ ವಿಶಾಲವಾಗಿ ಹರಡಿರುವ ಸಂಘಟನೆಯಾಗಿರುವ ಕರವೇ, ಜಾತಿ, ಧರ್ಮಗಳ ಮತ್ತು ಕೋಮುರಾಜಕಾರಣದ ಸಲುವಾಗಿ ರಾಜ್ಯದಲ್ಲಿ ದುರ್ಬಲ ಸಮುದಾಯಗಳ ಮೇಲೆ ಆಗುವ ಯಾವುದೇ ರೀತಿಯ ದೌರ್ಜನ್ಯದ ವಿರುದ್ಧ ಕೂಡ ದೊಡ್ಡ ಮಟ್ಟದಲ್ಲಿ ಹೋರಾಟ ರೂಪಿಸಬೇಕು ಎಂಬುದು ಹಲವರ ಅಪೇಕ್ಷೆ. ಆ ನಿಟ್ಟಿನಲ್ಲಿ ಈ ಕಾರ್ಯಕ್ರಮ ನಡೆದ ಸಂದರ್ಭ ಮತ್ತು ಅದರಲ್ಲಿ ಭಾಗಿಯಾದವರಲ್ಲಿದ್ದ ವೈವಿಧ್ಯತೆಯ ಪ್ರಾತಿನಿಧ್ಯದ ದೃಷ್ಟಿಯಿಂದಲೂ ಇದು ಪ್ರಮುಖವಾಗಿತ್ತು.

ಹಂಪನಾ

ಈ ಕಾರ್ಯಕ್ರಮದಲ್ಲಿ ಕವಿ-ಸಾಮಾಜಿಕ ಕಾರ್ಯಕರ್ತ ಹುಲಿಕುಂಟೆ ಮೂರ್ತಿ ಅವರು ಆಡಿದ ಮಾತುಗಳನ್ನು ನೆನೆಯುವುದು ಇಲ್ಲಿ ಮುಖ್ಯ. ಹಂಪನಾ ಅವರಿಗೆ ಬೆಂಬಲ ನೀಡುತ್ತಿರುವುದರ ವಿರುದ್ಧ ಏಳುತ್ತಿರುವ ಹಲವು ರೀತಿಯ ತರಹೇವಾರಿ ಪ್ರಶ್ನೆಗಳಿಗೆ ಅದು ಸಮರ್ಪಕ ಉತ್ತರವಾಗಿತ್ತು. ಹಂಪನಾ ಅವರು ಈ ಹಿಂದೆ ಪ್ರಭುತ್ವದ ಯಾವುದೇ ದೌರ್ಜನ್ಯಗಳಿಗೆ ಸ್ಪಂದಿಸದೆ ಇರುವವರು. ಅವರಿಗೆ ಈ ಮಟ್ಟದ ಬೆಂಬಲ ಬೇಕೆ ಎಂಬ ಪ್ರಶ್ನೆಗೆ ಉತ್ತರಿಸಿದ ಮೂರ್ತಿ, ನಾನು ಓದಲು ಇಷ್ಟ ಪಡದ, ಅವರ ಸಾಹಿತ್ಯವನ್ನು ಮೆಚ್ಚದ ಎಸ್ ಎಲ್ ಭೈರಪ್ಪನವರ ಮೇಲೆ ಪ್ರಭುತ್ವ ಈ ರೀತಿಯ ದಾಳಿ ನಡೆಸಿದರೆ, ಅದರ ವಿರುದ್ಧ ಕೂಡ ಧ್ವನಿ ಎತ್ತುತ್ತೇನೆ ಎಂದರು. ಇಷ್ಟು ದಿನ ತಮಗೆ ಅಪಾಯಕಾರಿ ಎಂದು ಎಂದಿಗೂ ಅನಿಸದ ಹಂಪನಾ ಅವರು, ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ನೀಡಿದ ಒಂದೇ ಒಂದು ಹೇಳಿಕೆಗಾಗಿ ಖಳನಾಯಕರಾಗಿ ಹೋದರು. ಇವತ್ತು ಮೋದಿ ಮತ್ತು ಅವರ ಆಡಳಿತದ ಬಗ್ಗೆ ಭಜನೆ ಮಾಡುತ್ತಿರುವ ಭೈರಪ್ಪ ಕೂಡ ಮುಂದೊಂದು ದಿನ ಇದೇ ಅಥವಾ ಇದಕ್ಕೂ ಘೋರವಾದ (ಉತ್ತರಪ್ರದೇಶ ನೆನಪಿಸಿಕೊಳ್ಳಿ) ಪ್ರಭುತ್ವಕ್ಕೆ ಮತ್ತು ಅವರ ಬೆಂಬಲಿಗರಿಗೆ ಎದುರಾಳಿಯಾಗಬಹುದು. ಆಗ, ಅವರು ದೈವತ್ವದಿಂದ ಮಾನವತ್ವಕ್ಕೆ ಇಳಿಸಿ ಬರೆದಿರುವ ಮಹಾಭಾರತದ ಕಥೆಯ ’ಪರ್ವ ಕಾದಂಬರಿಯೇ ಅಪಾಯಕಾರಿ ಪಠ್ಯವಾಗಿ ಕಾಣಿಸಬಹದು. ಧಾರ್ಮಿಕ ಅಮಲಿನಲ್ಲಿ ಕಟ್ಟುವ ರಾಷ್ಟ್ರೀಯತೆ ಯಾರ ಯಾರ ಬಾಗಿಲಿಗೆ ಬಂದು, ಯಾವ ಕಾರಣಕ್ಕೆ ಯಾರನ್ನೆಲ್ಲ ಅಮರಿಕೊಳ್ಳುತ್ತದೋ ಬಲ್ಲವರು ಯಾರು?

PC : IUCAA page, (ಜಯಂತ್ ನಾರ್ಲೀಕರ್)

ಅದೇನೇ ಇರಲಿ, 84 ವರ್ಷಗಳ ವಯೋವೃದ್ಧರಾದ ಸಾಹಿತಿ ಹಂಪನಾ ಅವರಿಗೂ ಪ್ರಸಕ್ತ ಕೇಂದ್ರ ಸರ್ಕಾರದ ಕೆಲವಾದರೂ ನೀತಿಗಳು ಆಕ್ರೋಶ ತಂದಿವೆ ಮತ್ತು ಅವರು ಈ ವಯಸ್ಸಿನಲ್ಲಿಯೂ ಪ್ರತಿರೋಧಿಸಬೇಕು ಎಂದು ಮನಗಂಡು ಗಟ್ಟಿ ಧ್ವನಿಯಲ್ಲಿ ಮಾತನಾಡುತ್ತಿರುವುದು, ಬದಲಾಗುತ್ತಿರುವ ಒಂದು ದೊಡ್ಡ ವರ್ಗದ ಪ್ರತಿನಿಧಿಯಂತೆ ಅವರು ಕಾಣುವುದಂತೂ ನಿಜ. ಜಾರ್ಜ್ ಆರ್ವೆಲ್ ತನ್ನ ’1984’ ಕಾದಂಬರಿಯಲ್ಲಿ ನಿರೂಪಿಸಿದಂತಹ ನಿರಂಕುಶ ಮತ್ತು ಸರ್ವಾಧಿಕಾರಿ ವ್ಯವಸ್ಥೆಗೆ ಈ ದೇಶ ಜಾರುವುದಕ್ಕೆ ಇನ್ನೂ ಹಲವು ಅಡೆತಡೆಗಳಿವೆ ಎಂಬುದನ್ನೂ ಇದು ನೆನಪಿಸುತ್ತದ್ದಲ್ಲದೆ, ಸಕ್ರಿಯವಾದ ನಾಗರಿಕ ಸಮಾಜ ಅಪಾಯಗಳನ್ನು ಮೆಟ್ಟಿ ನಿಲ್ಲಬಹುದು ಎಂಬುದನ್ನೂ ತೋರಿಸುತ್ತದೆ. ಹಂಪನಾ ಅವರನ್ನು ಕರೆಸಿ ವಿಚಾರಣೆ ನಡೆಸಿರುವುದಕ್ಕೆ ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಕೋರಿದ ಕ್ಷಮೆಯೂ ಇದಕ್ಕೆ ಸಾಕ್ಷಿಯಾಗಿದೆ.

ಪ್ರಜಾಸತ್ತಾತ್ಮಕ ಮತ್ತು ಜವಾಬ್ದಾರಿಯುತ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುವ ಸಲುವಾಗಿ ಎಲ್ಲ ರಂಗದ ಪ್ರಾಜ್ಞರೂ ಇಂದು ದೊಡ್ಡ ಮಟ್ಟದಲ್ಲಿ ಪ್ರತಿರೋಧ ದಾಖಲಿಸಬೇಕಿದೆ. ಇದರಲ್ಲಿ ಕನ್ನಡದ ಸಾಹಿತ್ಯ-ಸಿನಿಮಾ-ರಂಗಭೂಮಿ ಲೋಕದವರ ಪಾತ್ರ ದೊಡ್ಡದಾಗಿರಬೇಕಿತ್ತು. ಆದರೆ ಅವರೆಲ್ಲರ ಅಭಾವ ದೊಡ್ಡದಾಗಿದೆ. ಇದೇ ಸಮಯದಲ್ಲಿ ಫೆಬ್ರವರಿ ಕೊನೆಯ ಭಾಗದಲ್ಲಿ ನಡೆಯಲು ನಿಯೋಜಿಸಲಾಗಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಯ್ಕೆ ಆಗಿರುವ ಕವಿ ದೊಡ್ಡರಂಗೇಗೌಡರು, ಮೇಲಿನ ಈ ವಿದ್ಯಮಾನದ ಬಗ್ಗೆ ತುಟಿಕ್‌ಪಿಟಿಕ್ ಎಂದಿಲ್ಲ. ಪ್ರಧಾನಿ ಮೋದಿಯವರ ಬಗ್ಗೆ ಪತ್ರಿಕೆಯೊಂದರಲ್ಲಿ ದೀರ್ಘ ಪದ್ಯವನ್ನು ಬರೆದಿದ್ದ ದೊಡ್ಡರಂಗೇಗೌಡರಿಂದ ದೊಡ್ಡ ಮಟ್ಟದ ನಿರೀಕ್ಷೆಗಳೇನೂ ಇರದಿದ್ದರೂ, ’ಹಿಂದಿ ಹೇರಿಕೆ’ಯಂತಹ ಪ್ರಾಥಮಿಕ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳದೆ, ಹಿಂದಿ ರಾಷ್ಟ್ರಭಾಷೆ ಎಂಬ ತಪ್ಪು ಕಲ್ಪನೆಗಳನ್ನು ಮತ್ತೆ ಪಸರಿಸುತ್ತಿರುವುದು ಆತಂಕಕಾರಿ ವಿಷಯವಂತೂ ಹೌದು. ಕನ್ನಡ ನಾಡಿನ ಪ್ರಮುಖ ಸಾಹಿತ್ಯ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತು ದಿಕ್ಕು ತಪ್ಪುತ್ತಿರುವುದನ್ನು ಇದು ಎತ್ತಿ ತೋರಿಸುತ್ತದೆ ಕೂಡ.

ಇದರ ನಡುವೆ ಮಹಾರಾಷ್ಟ್ರದಲ್ಲಿ ಮಾರ್ಚ್ ಕೊನೆಯ ಭಾಗದಲ್ಲಿ ನಡೆಯಲಿರುವ 94ನೇ ಮರಾಠಿ ಸಾಹಿತ್ಯ ಸಮ್ಮೇಳನಕ್ಕೆ ’ಜಯಂತ್ ನಾರ್ಲೀಕರ್ ಅವರನ್ನು ಅಧ್ಯಕ್ಷರನ್ನಾಗಿ ನಿಯೋಜಿಸಲಾಗಿದೆ. ಕನ್ನಡ ಸಾಹಿತ್ಯ ಸಮ್ಮೇಳನದಂತೆಯೇ ಬಹಳ ಪ್ರತಿಷ್ಠಿತ ಸಾಹಿತ್ಯ ಕೂಟ ಇದು. ಈ ಬಾರಿಯ ವಿಶೇಷ ಎಂದರೆ ಸಮ್ಮೇಳನದ ಅಧ್ಯಕ್ಷರಾಗಲಿರುವ ಪದ್ಮ ವಿಭೂಷಣ ಜಯಂತ್ ನಾರ್ಲೀಕರ್ ಅವರು ವಿಜ್ಞಾನಿಗಳು. ಅಂತಾರಾಷ್ಟ್ರೀಯ ಖ್ಯಾತಿಯ ಆಸ್ಟ್ರೋಫಿಸಿಸಿಸ್ಟ್. ಇಂಗ್ಲಿಷ್‌ನಲ್ಲಿ ಜನಪ್ರಿಯ ವಿಜ್ಞಾನಕ್ಕೆ ಸಂಬಂಧಿಸಿದಂತೆ ಹತ್ತಾರು ಕೃತಿಗಳನ್ನು ಜಯಂತ್ ಅವರು ರಚಿಸಿದ್ದಾರಲ್ಲದೆ, ಮರಾಠಿಯಲ್ಲಿಯೂ ವಿಜ್ಞಾನದ ಪುಸ್ತಕಗಳನ್ನು, ಹಾಗು ವಿಜ್ಞಾನಕ್ಕೆ ಸಂಬಂಧಿಸಿದ ಕಥೆ-ಕಾದಂಬರಿಗಳನ್ನು ಬರೆದಿದ್ದಾರೆ. ಇಂಗ್ಲಿಷ್‌ನಲ್ಲಿ ಸೈ-ಫೈ ಎಂದು ಕರೆಯಲ್ಪಡುವ ಈ ಜನಪ್ರಿಯ ಸಾಹಿತ್ಯ ಪ್ರಕಾರ ವಿಶ್ವದಾದ್ಯಂತ ಮಕ್ಕಳು ಮತ್ತು ಯುವಜನರಿಗೆ ಭಾರಿ ಆಕರ್ಷಣೆ. ಕನ್ನಡದಲ್ಲಿ ಮನು, ರಾಜಶೇಖರ ಭೂಸನೂರಮಠ ಅವರನ್ನು ಒಳಗೊಂಡಂತೆ ಕೆಲವೇ ಕೆಲವು ಸಾಹಿತಿಗಳು ಈ ಪ್ರಕಾರದಲ್ಲಿ ಬರೆದಿದ್ದಾರೆ. ಕನ್ನಡದಲ್ಲಿ ಈ ಪ್ರಕಾರ ಏಕೆ ಹೆಚ್ಚು ಜನಪ್ರಿಯವಾಗಲಿಲ್ಲ ಎಂಬುದು ಒಳ್ಳೆಯ ಅಧ್ಯಯನವಾದೀತು. ಇಂತಹ ಸಾಹಿತ್ಯ ಬೆಳೆದು, ವಿಜ್ಞಾನಿಯೊಬ್ಬರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗುವ ಸುಸಂದರ್ಭ ಮುಂದೊಂದು ದಿನ ಒದಗಿ ಬರಲಿ. ವೈಜ್ಞಾನಿಕ ಭಾವನೆ ಜನರಲ್ಲಿ ಹೆಚ್ಚಾಗಲಿ. ವೈಚಾರಿಕತೆಯ ಉಳಿವಿಗೆ ಜನ ತಮ್ಮನ್ನು ಅರ್ಪಿಸಿಕೊಳ್ಳಲಿ.


ಇದನ್ನೂ ಓದಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....