Homeಕರ್ನಾಟಕಕೋಟ್ಯಧಿಪತಿಯಲ್ಲಿ ಡ್ರಾಮಾ ಜ್ಯೂನಿಯರ್ಸ್!: ಪ್ರವಾಹ ಪರಿಹಾರಕ್ಕೆ ಪ್ರತಾಪ್, ತೇಜಸ್ವಿ ಗೆದ್ದ 12 ಲಕ್ಷ ಸಾಕೇ?

ಕೋಟ್ಯಧಿಪತಿಯಲ್ಲಿ ಡ್ರಾಮಾ ಜ್ಯೂನಿಯರ್ಸ್!: ಪ್ರವಾಹ ಪರಿಹಾರಕ್ಕೆ ಪ್ರತಾಪ್, ತೇಜಸ್ವಿ ಗೆದ್ದ 12 ಲಕ್ಷ ಸಾಕೇ?

ರವಿವಾರ ಕಲರ್ಸ್ ಕನ್ನಡ ಟಿವಿಯ ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಲ್ಲಿ ಸಂಸದರಾದ ಪ್ರತಾಪ್ ಸಿಂಹ ಮತ್ತು ತೇಜಸ್ವಿ ಸೂರ್ಯ ಪಾಲ್ಗೊಂಡಿದ್ದರು. ಒಂಥರಾ ಇವರಿಬ್ಬರ ನಾಟಕೀಯತ ನೋಡಿದಾಗ ‘ಡ್ರಾಮಾ ಜ್ಯೂನಿಯರ್ಸ್’ ನೆನಪಾಗಿತು.

- Advertisement -
- Advertisement -

ಕೋಟ್ಯಧಿಪತಿಯಲ್ಲಿ ಡ್ರಾಮಾ ಜ್ಯೂನಿಯರ್ಸ್ ! – ಹೆಡ್ಡಿಂಗ್ ನೋಡಿ ನಿಮಗೆ ಅನಿಸಬಹುದು: ಇದೇನಿದು ಕಲರ್ಸ್ ಟಿವಿ ಕಾರ್ಯಕ್ರಮಕ್ಕೆ ಝೀ ಟಿವಿಯ ಕಾರ್ಯಕ್ರಮದ ಟೈಟಲ್ಲು ಸೇರಿಸಿದ್ದಾರೆಂದು? ಕಲರ್ಸ್, ಝೀ ಎಲ್ಲ ಮೋದಿಯ ಆರಾಧಕರೇ ಎಂಬುದನ್ನು ಸೂಚ್ಯವಾಗಿ ಹೇಳಲಷ್ಟೇ ಇದನ್ನು ಬಳಸಿದ್ದೇವೆ ಅಷ್ಟೇ.

ಈಗ ವಿಷಯಕ್ಕೆ ಬರೋಣ. ಮೈಸೂರು-ಕೊಡಗಿನ ಸಂಸದ ಪ್ರತಾಪ್‍ಸಿಂಹ ಮತ್ತು ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ ನಿನ್ನೆ ರವಿವಾರ ಕಲರ್ಸ್ ಟಿವಿಯ ಕೋಟ್ಯಧಿಪತಿಯಲ್ಲಿ ಸಿಕ್ಕಾಪಟ್ಟೆ ಟ್ಯಾಲೆಂಟ್ ತೋರಿಸಿ ಹನ್ನೆರಡೂವರೆ ಲಕ್ಷ ಗೆದ್ದಿದ್ದಾರೆ ಮತ್ತು ಅದನ್ನು ನೆರೆಪ್ರವಾಹ ಪೀಡಿತರಿಗಾಗಿ ಮುಖ್ಯಮಂತ್ರಿ ನಿಧಿಗೆ ಕೊಡುವುದಾಗಿ ಘೋಷಿಸಿದ್ದಾರೆ. ಓಕ, ವೆಲ್ ಡನ್!

ಆದರೆ, ನಾವು ಇಲ್ಲಿ ಪ್ರಸ್ತಾಪಿಸುತ್ತಿರುವುದು ಇಡೀ ಕಾರ್ಯಕ್ರಮದ ಹಿಂದೆ ಒಂದು ಹಿಡನ್ ಅಜೆಂಡಾ ಇತ್ತು ಮತ್ತು ಈ ಇಬ್ಬರು ಸಂಸದರು ಕಾರ್ಯಕ್ರಮದ ಉದ್ದಕ್ಕೂ ಡ್ರಾಮಾ ಮಾಡುತ್ತಲೇ ಬಂದರು ಎನ್ನುವುದು. ಇಲ್ಲಿ ಕಾರ್ಯಕ್ರಮದ ಸಂಯೋಜಕ ಪುನೀತ್ ರಾಜಕುಮಾರ್ ಕೇವಲ ಒಬ್ಬ ನಿರೂಪಕರಷ್ಟೇ. ಇಡೀ ಕಾರ್ಯಕ್ರಮದ ಸ್ಕ್ರಿಪ್ಟ್ ಮೊದಲೇ ರೆಡಿ ಆಗಿತ್ತು (ಸೆಲೆಬ್ರಿಟಿಗಳು ಭಾಗವಹಿಸುವ ಎಲ್ಲ ರಿಯಾಲಿಟಿ ಶೋ ಗಳ ಸ್ಕ್ರಿಪ್ಟ್ ಕೂಡ ಮೊದಲೇ ಸಿದ್ದವಾಗಿರುತ್ತವೆ).

ಹಾಳಾಗಿ ಹೋಗಲಿ ಇವರೆಲ್ಲ. ನಮ್ಮ ಪ್ರಶ್ನೆಗಳಿಷ್ಟೇ:
1. ನೆರೆಪೀಡಿತರಿಗೆ ಸೌಕರ್ಯ ಕಲ್ಪಿಸಲು ಕೇಂದ್ರ ಸರ್ಕಾರ ಉದಾಸೀನ ತೋರುತ್ತಿರುವಾಗ ಈ ಇಬ್ಬರು ಸಂಸದರು ಕೋಟ್ಯಧಿಪತಿಯಲ್ಲಿ ಬಂದು 12 ಚಿಲ್ಲರೆ ಲಕ್ಷ ಗೆಲ್ಲುವುದು ಸಾಕೇ? ತಮ್ಮದೇ ಕೇಂದ್ರ ಸರ್ಕಾರದ ಮೇಲೆ, ಅದೂ ನಮ್ಮದೇ ರಾಜ್ಯದ ನಾಲ್ಕು ಕೇಂದ್ರ ಸಚಿವರಿರುವ ಕೇಂದ್ರಕ್ಕೆ ಮನವಿ ಮಾಡಿ ಅನುದಾನ ತರಲು ಇಲ್ಲಿವರೆಗೂ ಶ್ರಮಿಸಲಿಲ್ಲವೇಕೆ?

2. ಕಾರ್ಯಕ್ರಮದ ಒಂದು ಹಂತದಲ್ಲಿ ಸಂಸದ ಪ್ರತಾಪಸಿಂಹ ಹೇಳಿದರು: ‘ಪ್ರಾಮಾಣಿಕ ಮತ್ತು ಗೌರವಾನ್ವಿತ ಸಂಸದರಿಗೆ ನೀಡುವ ಸಂಬಳ ಯಾತಕ್ಕೂ ಸಾಲುತ್ತಿರಲಿಲ್ಲ. ಆಗ 2.09 ಲಕ್ಷವಿತ್ತು. ನಾನು ಇದನ್ನು ಹೆಚ್ಚಿಸಬೇಕೆಂದು 85 ಸಂಸದರ ಸಹಿ ಮಾಡಿಸಿ ಮೋದಿಯವರಿಗೆ ಸಲ್ಲಿಸಿದ್ದೆ. ಅವರು 80 ಸಾವಿರ ಹೆಚ್ಚುವರಿ ಮಾಡಿದರು. ಈಗ ಸಂಸದರ ಸಂಭಾವನೆ 2.89 ಲಕ್ಷ.  ಅಯ್ಯೋ ಪ್ರತಾಪ ಮತ್ತು ತೇಜಸ್ವಿ 85 ಸಂಸದರನ್ನು ಬಿಡಿ, ನೀವಿಬ್ದರು ಸೇರಿದಂತೆ ಕರ್ನಾಟದಕ 28 ಸಂಸದರ ಸಹಿ ಮಾಡಿಸಿಕೊಂಡು ನೆರೆ ಪರಿಹಾರಕ್ಕೆ ‘ಚಂದ್ರಮುಖಿ’ ಪ್ರಧಾನಿಯ ಮುಂದೆ ಒಂದು ಪ್ರಸ್ತಾಪ ಇಡಬಹುದಿತ್ತಲ್ಲ? ಇಂತಹ ಪ್ರಶ್ನೆಯನ್ನು ಕೋಟ್ಯಾಧಿಪತಿಯ ತೆರೆ ಹಿಂದೆ ಕೆಲಸ ಮಾಡುವವವರು ಸೃಷ್ಟಿಸಲಿಲ್ಲವೇಕೆ?

3. ಕಲರ್ಸ್ ಕನ್ನಡದವರೇ, ನಿಮಗೆ ನಿಜಕ್ಕೂ ಕರ್ನಾಟಕದ ನೆರಪೀಡಿತರಿಗೆ ಸಹಾಯ ಮಾಡುವ ಉದ್ದೇಶವಿದ್ದರೆ ಇಡೀ ಬಹುಮಾನದ ಮೊತ್ತ ಒಂದು ಕೋಟಿಯನ್ನೇ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಬಹುದಿತ್ತು ಅಲ್ಲವಾ? ಆದರೆ, ನಿಮ್ಮ ಉದ್ದೇಶ ಇಬ್ಬರು ಹೋಪ್‍ ಲೆಸ್ ಸಂಸದರು ಮತ್ತು ಅವರ ಗುರು ಮೋದಿಗೆ ಪ್ರಚಾರ ಕೊಡುವುದೇ ಆಗಿತ್ತಲ್ಲವಾ?

ಒಟ್ಟಿನಲ್ಲಿ ಇಬ್ಬರು ಸಂಸದರನ್ನು ಇಟ್ಟುಕೊಂಡು ಕಾರ್ಯಕ್ರಮ ಮಾಡಲು ಹೋಗಿ ಕಲರ್ಸ್ ಬಣ್ಣ ಬಯಲಾಗಿದೆ. ಝೀ ಟಿವಿ ಡ್ರಾಮಾ ಜ್ಯೂನಿಯರ್ಸ್‍ನಲ್ಲಿ ಹಲವಾದರೂ ಪುಟ್ಟ ಮಕ್ಕಳ ಟ್ಯಾಲೆಂಟು ಗುರುತಿಸಲ್ಪಡುತ್ತಿದೆ. ಆದರೆ, ಕಲರ್ಸ್‍ನವರೇ ನೀವು ಈ ಇಬ್ಬರು ‘ಪಟ್ಟ’ ಸಂಸದರ ಹಿಂದೆ ಬೀಳುವ ಮೂಲಕ ಕೋಟ್ಯಧಿಪತಿಯಲ್ಲಿ ಡ್ರಾಮಾ ಜ್ಯೂನಿಯರ್ಸ್ ತಂದು ಬಿಟ್ಟಿರಲ್ಲ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...