Homeಕರ್ನಾಟಕಕೋಟ್ಯಧಿಪತಿಯಲ್ಲಿ ಡ್ರಾಮಾ ಜ್ಯೂನಿಯರ್ಸ್!: ಪ್ರವಾಹ ಪರಿಹಾರಕ್ಕೆ ಪ್ರತಾಪ್, ತೇಜಸ್ವಿ ಗೆದ್ದ 12 ಲಕ್ಷ ಸಾಕೇ?

ಕೋಟ್ಯಧಿಪತಿಯಲ್ಲಿ ಡ್ರಾಮಾ ಜ್ಯೂನಿಯರ್ಸ್!: ಪ್ರವಾಹ ಪರಿಹಾರಕ್ಕೆ ಪ್ರತಾಪ್, ತೇಜಸ್ವಿ ಗೆದ್ದ 12 ಲಕ್ಷ ಸಾಕೇ?

ರವಿವಾರ ಕಲರ್ಸ್ ಕನ್ನಡ ಟಿವಿಯ ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಲ್ಲಿ ಸಂಸದರಾದ ಪ್ರತಾಪ್ ಸಿಂಹ ಮತ್ತು ತೇಜಸ್ವಿ ಸೂರ್ಯ ಪಾಲ್ಗೊಂಡಿದ್ದರು. ಒಂಥರಾ ಇವರಿಬ್ಬರ ನಾಟಕೀಯತ ನೋಡಿದಾಗ ‘ಡ್ರಾಮಾ ಜ್ಯೂನಿಯರ್ಸ್’ ನೆನಪಾಗಿತು.

- Advertisement -
- Advertisement -

ಕೋಟ್ಯಧಿಪತಿಯಲ್ಲಿ ಡ್ರಾಮಾ ಜ್ಯೂನಿಯರ್ಸ್ ! – ಹೆಡ್ಡಿಂಗ್ ನೋಡಿ ನಿಮಗೆ ಅನಿಸಬಹುದು: ಇದೇನಿದು ಕಲರ್ಸ್ ಟಿವಿ ಕಾರ್ಯಕ್ರಮಕ್ಕೆ ಝೀ ಟಿವಿಯ ಕಾರ್ಯಕ್ರಮದ ಟೈಟಲ್ಲು ಸೇರಿಸಿದ್ದಾರೆಂದು? ಕಲರ್ಸ್, ಝೀ ಎಲ್ಲ ಮೋದಿಯ ಆರಾಧಕರೇ ಎಂಬುದನ್ನು ಸೂಚ್ಯವಾಗಿ ಹೇಳಲಷ್ಟೇ ಇದನ್ನು ಬಳಸಿದ್ದೇವೆ ಅಷ್ಟೇ.

ಈಗ ವಿಷಯಕ್ಕೆ ಬರೋಣ. ಮೈಸೂರು-ಕೊಡಗಿನ ಸಂಸದ ಪ್ರತಾಪ್‍ಸಿಂಹ ಮತ್ತು ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ ನಿನ್ನೆ ರವಿವಾರ ಕಲರ್ಸ್ ಟಿವಿಯ ಕೋಟ್ಯಧಿಪತಿಯಲ್ಲಿ ಸಿಕ್ಕಾಪಟ್ಟೆ ಟ್ಯಾಲೆಂಟ್ ತೋರಿಸಿ ಹನ್ನೆರಡೂವರೆ ಲಕ್ಷ ಗೆದ್ದಿದ್ದಾರೆ ಮತ್ತು ಅದನ್ನು ನೆರೆಪ್ರವಾಹ ಪೀಡಿತರಿಗಾಗಿ ಮುಖ್ಯಮಂತ್ರಿ ನಿಧಿಗೆ ಕೊಡುವುದಾಗಿ ಘೋಷಿಸಿದ್ದಾರೆ. ಓಕ, ವೆಲ್ ಡನ್!

ಆದರೆ, ನಾವು ಇಲ್ಲಿ ಪ್ರಸ್ತಾಪಿಸುತ್ತಿರುವುದು ಇಡೀ ಕಾರ್ಯಕ್ರಮದ ಹಿಂದೆ ಒಂದು ಹಿಡನ್ ಅಜೆಂಡಾ ಇತ್ತು ಮತ್ತು ಈ ಇಬ್ಬರು ಸಂಸದರು ಕಾರ್ಯಕ್ರಮದ ಉದ್ದಕ್ಕೂ ಡ್ರಾಮಾ ಮಾಡುತ್ತಲೇ ಬಂದರು ಎನ್ನುವುದು. ಇಲ್ಲಿ ಕಾರ್ಯಕ್ರಮದ ಸಂಯೋಜಕ ಪುನೀತ್ ರಾಜಕುಮಾರ್ ಕೇವಲ ಒಬ್ಬ ನಿರೂಪಕರಷ್ಟೇ. ಇಡೀ ಕಾರ್ಯಕ್ರಮದ ಸ್ಕ್ರಿಪ್ಟ್ ಮೊದಲೇ ರೆಡಿ ಆಗಿತ್ತು (ಸೆಲೆಬ್ರಿಟಿಗಳು ಭಾಗವಹಿಸುವ ಎಲ್ಲ ರಿಯಾಲಿಟಿ ಶೋ ಗಳ ಸ್ಕ್ರಿಪ್ಟ್ ಕೂಡ ಮೊದಲೇ ಸಿದ್ದವಾಗಿರುತ್ತವೆ).

ಹಾಳಾಗಿ ಹೋಗಲಿ ಇವರೆಲ್ಲ. ನಮ್ಮ ಪ್ರಶ್ನೆಗಳಿಷ್ಟೇ:
1. ನೆರೆಪೀಡಿತರಿಗೆ ಸೌಕರ್ಯ ಕಲ್ಪಿಸಲು ಕೇಂದ್ರ ಸರ್ಕಾರ ಉದಾಸೀನ ತೋರುತ್ತಿರುವಾಗ ಈ ಇಬ್ಬರು ಸಂಸದರು ಕೋಟ್ಯಧಿಪತಿಯಲ್ಲಿ ಬಂದು 12 ಚಿಲ್ಲರೆ ಲಕ್ಷ ಗೆಲ್ಲುವುದು ಸಾಕೇ? ತಮ್ಮದೇ ಕೇಂದ್ರ ಸರ್ಕಾರದ ಮೇಲೆ, ಅದೂ ನಮ್ಮದೇ ರಾಜ್ಯದ ನಾಲ್ಕು ಕೇಂದ್ರ ಸಚಿವರಿರುವ ಕೇಂದ್ರಕ್ಕೆ ಮನವಿ ಮಾಡಿ ಅನುದಾನ ತರಲು ಇಲ್ಲಿವರೆಗೂ ಶ್ರಮಿಸಲಿಲ್ಲವೇಕೆ?

2. ಕಾರ್ಯಕ್ರಮದ ಒಂದು ಹಂತದಲ್ಲಿ ಸಂಸದ ಪ್ರತಾಪಸಿಂಹ ಹೇಳಿದರು: ‘ಪ್ರಾಮಾಣಿಕ ಮತ್ತು ಗೌರವಾನ್ವಿತ ಸಂಸದರಿಗೆ ನೀಡುವ ಸಂಬಳ ಯಾತಕ್ಕೂ ಸಾಲುತ್ತಿರಲಿಲ್ಲ. ಆಗ 2.09 ಲಕ್ಷವಿತ್ತು. ನಾನು ಇದನ್ನು ಹೆಚ್ಚಿಸಬೇಕೆಂದು 85 ಸಂಸದರ ಸಹಿ ಮಾಡಿಸಿ ಮೋದಿಯವರಿಗೆ ಸಲ್ಲಿಸಿದ್ದೆ. ಅವರು 80 ಸಾವಿರ ಹೆಚ್ಚುವರಿ ಮಾಡಿದರು. ಈಗ ಸಂಸದರ ಸಂಭಾವನೆ 2.89 ಲಕ್ಷ.  ಅಯ್ಯೋ ಪ್ರತಾಪ ಮತ್ತು ತೇಜಸ್ವಿ 85 ಸಂಸದರನ್ನು ಬಿಡಿ, ನೀವಿಬ್ದರು ಸೇರಿದಂತೆ ಕರ್ನಾಟದಕ 28 ಸಂಸದರ ಸಹಿ ಮಾಡಿಸಿಕೊಂಡು ನೆರೆ ಪರಿಹಾರಕ್ಕೆ ‘ಚಂದ್ರಮುಖಿ’ ಪ್ರಧಾನಿಯ ಮುಂದೆ ಒಂದು ಪ್ರಸ್ತಾಪ ಇಡಬಹುದಿತ್ತಲ್ಲ? ಇಂತಹ ಪ್ರಶ್ನೆಯನ್ನು ಕೋಟ್ಯಾಧಿಪತಿಯ ತೆರೆ ಹಿಂದೆ ಕೆಲಸ ಮಾಡುವವವರು ಸೃಷ್ಟಿಸಲಿಲ್ಲವೇಕೆ?

3. ಕಲರ್ಸ್ ಕನ್ನಡದವರೇ, ನಿಮಗೆ ನಿಜಕ್ಕೂ ಕರ್ನಾಟಕದ ನೆರಪೀಡಿತರಿಗೆ ಸಹಾಯ ಮಾಡುವ ಉದ್ದೇಶವಿದ್ದರೆ ಇಡೀ ಬಹುಮಾನದ ಮೊತ್ತ ಒಂದು ಕೋಟಿಯನ್ನೇ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಬಹುದಿತ್ತು ಅಲ್ಲವಾ? ಆದರೆ, ನಿಮ್ಮ ಉದ್ದೇಶ ಇಬ್ಬರು ಹೋಪ್‍ ಲೆಸ್ ಸಂಸದರು ಮತ್ತು ಅವರ ಗುರು ಮೋದಿಗೆ ಪ್ರಚಾರ ಕೊಡುವುದೇ ಆಗಿತ್ತಲ್ಲವಾ?

ಒಟ್ಟಿನಲ್ಲಿ ಇಬ್ಬರು ಸಂಸದರನ್ನು ಇಟ್ಟುಕೊಂಡು ಕಾರ್ಯಕ್ರಮ ಮಾಡಲು ಹೋಗಿ ಕಲರ್ಸ್ ಬಣ್ಣ ಬಯಲಾಗಿದೆ. ಝೀ ಟಿವಿ ಡ್ರಾಮಾ ಜ್ಯೂನಿಯರ್ಸ್‍ನಲ್ಲಿ ಹಲವಾದರೂ ಪುಟ್ಟ ಮಕ್ಕಳ ಟ್ಯಾಲೆಂಟು ಗುರುತಿಸಲ್ಪಡುತ್ತಿದೆ. ಆದರೆ, ಕಲರ್ಸ್‍ನವರೇ ನೀವು ಈ ಇಬ್ಬರು ‘ಪಟ್ಟ’ ಸಂಸದರ ಹಿಂದೆ ಬೀಳುವ ಮೂಲಕ ಕೋಟ್ಯಧಿಪತಿಯಲ್ಲಿ ಡ್ರಾಮಾ ಜ್ಯೂನಿಯರ್ಸ್ ತಂದು ಬಿಟ್ಟಿರಲ್ಲ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...