Homeಕರ್ನಾಟಕಕೋಟ್ಯಧಿಪತಿಯಲ್ಲಿ ಡ್ರಾಮಾ ಜ್ಯೂನಿಯರ್ಸ್!: ಪ್ರವಾಹ ಪರಿಹಾರಕ್ಕೆ ಪ್ರತಾಪ್, ತೇಜಸ್ವಿ ಗೆದ್ದ 12 ಲಕ್ಷ ಸಾಕೇ?

ಕೋಟ್ಯಧಿಪತಿಯಲ್ಲಿ ಡ್ರಾಮಾ ಜ್ಯೂನಿಯರ್ಸ್!: ಪ್ರವಾಹ ಪರಿಹಾರಕ್ಕೆ ಪ್ರತಾಪ್, ತೇಜಸ್ವಿ ಗೆದ್ದ 12 ಲಕ್ಷ ಸಾಕೇ?

ರವಿವಾರ ಕಲರ್ಸ್ ಕನ್ನಡ ಟಿವಿಯ ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಲ್ಲಿ ಸಂಸದರಾದ ಪ್ರತಾಪ್ ಸಿಂಹ ಮತ್ತು ತೇಜಸ್ವಿ ಸೂರ್ಯ ಪಾಲ್ಗೊಂಡಿದ್ದರು. ಒಂಥರಾ ಇವರಿಬ್ಬರ ನಾಟಕೀಯತ ನೋಡಿದಾಗ ‘ಡ್ರಾಮಾ ಜ್ಯೂನಿಯರ್ಸ್’ ನೆನಪಾಗಿತು.

- Advertisement -
- Advertisement -

ಕೋಟ್ಯಧಿಪತಿಯಲ್ಲಿ ಡ್ರಾಮಾ ಜ್ಯೂನಿಯರ್ಸ್ ! – ಹೆಡ್ಡಿಂಗ್ ನೋಡಿ ನಿಮಗೆ ಅನಿಸಬಹುದು: ಇದೇನಿದು ಕಲರ್ಸ್ ಟಿವಿ ಕಾರ್ಯಕ್ರಮಕ್ಕೆ ಝೀ ಟಿವಿಯ ಕಾರ್ಯಕ್ರಮದ ಟೈಟಲ್ಲು ಸೇರಿಸಿದ್ದಾರೆಂದು? ಕಲರ್ಸ್, ಝೀ ಎಲ್ಲ ಮೋದಿಯ ಆರಾಧಕರೇ ಎಂಬುದನ್ನು ಸೂಚ್ಯವಾಗಿ ಹೇಳಲಷ್ಟೇ ಇದನ್ನು ಬಳಸಿದ್ದೇವೆ ಅಷ್ಟೇ.

ಈಗ ವಿಷಯಕ್ಕೆ ಬರೋಣ. ಮೈಸೂರು-ಕೊಡಗಿನ ಸಂಸದ ಪ್ರತಾಪ್‍ಸಿಂಹ ಮತ್ತು ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ ನಿನ್ನೆ ರವಿವಾರ ಕಲರ್ಸ್ ಟಿವಿಯ ಕೋಟ್ಯಧಿಪತಿಯಲ್ಲಿ ಸಿಕ್ಕಾಪಟ್ಟೆ ಟ್ಯಾಲೆಂಟ್ ತೋರಿಸಿ ಹನ್ನೆರಡೂವರೆ ಲಕ್ಷ ಗೆದ್ದಿದ್ದಾರೆ ಮತ್ತು ಅದನ್ನು ನೆರೆಪ್ರವಾಹ ಪೀಡಿತರಿಗಾಗಿ ಮುಖ್ಯಮಂತ್ರಿ ನಿಧಿಗೆ ಕೊಡುವುದಾಗಿ ಘೋಷಿಸಿದ್ದಾರೆ. ಓಕ, ವೆಲ್ ಡನ್!

ಆದರೆ, ನಾವು ಇಲ್ಲಿ ಪ್ರಸ್ತಾಪಿಸುತ್ತಿರುವುದು ಇಡೀ ಕಾರ್ಯಕ್ರಮದ ಹಿಂದೆ ಒಂದು ಹಿಡನ್ ಅಜೆಂಡಾ ಇತ್ತು ಮತ್ತು ಈ ಇಬ್ಬರು ಸಂಸದರು ಕಾರ್ಯಕ್ರಮದ ಉದ್ದಕ್ಕೂ ಡ್ರಾಮಾ ಮಾಡುತ್ತಲೇ ಬಂದರು ಎನ್ನುವುದು. ಇಲ್ಲಿ ಕಾರ್ಯಕ್ರಮದ ಸಂಯೋಜಕ ಪುನೀತ್ ರಾಜಕುಮಾರ್ ಕೇವಲ ಒಬ್ಬ ನಿರೂಪಕರಷ್ಟೇ. ಇಡೀ ಕಾರ್ಯಕ್ರಮದ ಸ್ಕ್ರಿಪ್ಟ್ ಮೊದಲೇ ರೆಡಿ ಆಗಿತ್ತು (ಸೆಲೆಬ್ರಿಟಿಗಳು ಭಾಗವಹಿಸುವ ಎಲ್ಲ ರಿಯಾಲಿಟಿ ಶೋ ಗಳ ಸ್ಕ್ರಿಪ್ಟ್ ಕೂಡ ಮೊದಲೇ ಸಿದ್ದವಾಗಿರುತ್ತವೆ).

ಹಾಳಾಗಿ ಹೋಗಲಿ ಇವರೆಲ್ಲ. ನಮ್ಮ ಪ್ರಶ್ನೆಗಳಿಷ್ಟೇ:
1. ನೆರೆಪೀಡಿತರಿಗೆ ಸೌಕರ್ಯ ಕಲ್ಪಿಸಲು ಕೇಂದ್ರ ಸರ್ಕಾರ ಉದಾಸೀನ ತೋರುತ್ತಿರುವಾಗ ಈ ಇಬ್ಬರು ಸಂಸದರು ಕೋಟ್ಯಧಿಪತಿಯಲ್ಲಿ ಬಂದು 12 ಚಿಲ್ಲರೆ ಲಕ್ಷ ಗೆಲ್ಲುವುದು ಸಾಕೇ? ತಮ್ಮದೇ ಕೇಂದ್ರ ಸರ್ಕಾರದ ಮೇಲೆ, ಅದೂ ನಮ್ಮದೇ ರಾಜ್ಯದ ನಾಲ್ಕು ಕೇಂದ್ರ ಸಚಿವರಿರುವ ಕೇಂದ್ರಕ್ಕೆ ಮನವಿ ಮಾಡಿ ಅನುದಾನ ತರಲು ಇಲ್ಲಿವರೆಗೂ ಶ್ರಮಿಸಲಿಲ್ಲವೇಕೆ?

2. ಕಾರ್ಯಕ್ರಮದ ಒಂದು ಹಂತದಲ್ಲಿ ಸಂಸದ ಪ್ರತಾಪಸಿಂಹ ಹೇಳಿದರು: ‘ಪ್ರಾಮಾಣಿಕ ಮತ್ತು ಗೌರವಾನ್ವಿತ ಸಂಸದರಿಗೆ ನೀಡುವ ಸಂಬಳ ಯಾತಕ್ಕೂ ಸಾಲುತ್ತಿರಲಿಲ್ಲ. ಆಗ 2.09 ಲಕ್ಷವಿತ್ತು. ನಾನು ಇದನ್ನು ಹೆಚ್ಚಿಸಬೇಕೆಂದು 85 ಸಂಸದರ ಸಹಿ ಮಾಡಿಸಿ ಮೋದಿಯವರಿಗೆ ಸಲ್ಲಿಸಿದ್ದೆ. ಅವರು 80 ಸಾವಿರ ಹೆಚ್ಚುವರಿ ಮಾಡಿದರು. ಈಗ ಸಂಸದರ ಸಂಭಾವನೆ 2.89 ಲಕ್ಷ.  ಅಯ್ಯೋ ಪ್ರತಾಪ ಮತ್ತು ತೇಜಸ್ವಿ 85 ಸಂಸದರನ್ನು ಬಿಡಿ, ನೀವಿಬ್ದರು ಸೇರಿದಂತೆ ಕರ್ನಾಟದಕ 28 ಸಂಸದರ ಸಹಿ ಮಾಡಿಸಿಕೊಂಡು ನೆರೆ ಪರಿಹಾರಕ್ಕೆ ‘ಚಂದ್ರಮುಖಿ’ ಪ್ರಧಾನಿಯ ಮುಂದೆ ಒಂದು ಪ್ರಸ್ತಾಪ ಇಡಬಹುದಿತ್ತಲ್ಲ? ಇಂತಹ ಪ್ರಶ್ನೆಯನ್ನು ಕೋಟ್ಯಾಧಿಪತಿಯ ತೆರೆ ಹಿಂದೆ ಕೆಲಸ ಮಾಡುವವವರು ಸೃಷ್ಟಿಸಲಿಲ್ಲವೇಕೆ?

3. ಕಲರ್ಸ್ ಕನ್ನಡದವರೇ, ನಿಮಗೆ ನಿಜಕ್ಕೂ ಕರ್ನಾಟಕದ ನೆರಪೀಡಿತರಿಗೆ ಸಹಾಯ ಮಾಡುವ ಉದ್ದೇಶವಿದ್ದರೆ ಇಡೀ ಬಹುಮಾನದ ಮೊತ್ತ ಒಂದು ಕೋಟಿಯನ್ನೇ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಬಹುದಿತ್ತು ಅಲ್ಲವಾ? ಆದರೆ, ನಿಮ್ಮ ಉದ್ದೇಶ ಇಬ್ಬರು ಹೋಪ್‍ ಲೆಸ್ ಸಂಸದರು ಮತ್ತು ಅವರ ಗುರು ಮೋದಿಗೆ ಪ್ರಚಾರ ಕೊಡುವುದೇ ಆಗಿತ್ತಲ್ಲವಾ?

ಒಟ್ಟಿನಲ್ಲಿ ಇಬ್ಬರು ಸಂಸದರನ್ನು ಇಟ್ಟುಕೊಂಡು ಕಾರ್ಯಕ್ರಮ ಮಾಡಲು ಹೋಗಿ ಕಲರ್ಸ್ ಬಣ್ಣ ಬಯಲಾಗಿದೆ. ಝೀ ಟಿವಿ ಡ್ರಾಮಾ ಜ್ಯೂನಿಯರ್ಸ್‍ನಲ್ಲಿ ಹಲವಾದರೂ ಪುಟ್ಟ ಮಕ್ಕಳ ಟ್ಯಾಲೆಂಟು ಗುರುತಿಸಲ್ಪಡುತ್ತಿದೆ. ಆದರೆ, ಕಲರ್ಸ್‍ನವರೇ ನೀವು ಈ ಇಬ್ಬರು ‘ಪಟ್ಟ’ ಸಂಸದರ ಹಿಂದೆ ಬೀಳುವ ಮೂಲಕ ಕೋಟ್ಯಧಿಪತಿಯಲ್ಲಿ ಡ್ರಾಮಾ ಜ್ಯೂನಿಯರ್ಸ್ ತಂದು ಬಿಟ್ಟಿರಲ್ಲ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...