Homeಕರ್ನಾಟಕಕೋಟ್ಯಧಿಪತಿಯಲ್ಲಿ ಡ್ರಾಮಾ ಜ್ಯೂನಿಯರ್ಸ್!: ಪ್ರವಾಹ ಪರಿಹಾರಕ್ಕೆ ಪ್ರತಾಪ್, ತೇಜಸ್ವಿ ಗೆದ್ದ 12 ಲಕ್ಷ ಸಾಕೇ?

ಕೋಟ್ಯಧಿಪತಿಯಲ್ಲಿ ಡ್ರಾಮಾ ಜ್ಯೂನಿಯರ್ಸ್!: ಪ್ರವಾಹ ಪರಿಹಾರಕ್ಕೆ ಪ್ರತಾಪ್, ತೇಜಸ್ವಿ ಗೆದ್ದ 12 ಲಕ್ಷ ಸಾಕೇ?

ರವಿವಾರ ಕಲರ್ಸ್ ಕನ್ನಡ ಟಿವಿಯ ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಲ್ಲಿ ಸಂಸದರಾದ ಪ್ರತಾಪ್ ಸಿಂಹ ಮತ್ತು ತೇಜಸ್ವಿ ಸೂರ್ಯ ಪಾಲ್ಗೊಂಡಿದ್ದರು. ಒಂಥರಾ ಇವರಿಬ್ಬರ ನಾಟಕೀಯತ ನೋಡಿದಾಗ ‘ಡ್ರಾಮಾ ಜ್ಯೂನಿಯರ್ಸ್’ ನೆನಪಾಗಿತು.

- Advertisement -
- Advertisement -

ಕೋಟ್ಯಧಿಪತಿಯಲ್ಲಿ ಡ್ರಾಮಾ ಜ್ಯೂನಿಯರ್ಸ್ ! – ಹೆಡ್ಡಿಂಗ್ ನೋಡಿ ನಿಮಗೆ ಅನಿಸಬಹುದು: ಇದೇನಿದು ಕಲರ್ಸ್ ಟಿವಿ ಕಾರ್ಯಕ್ರಮಕ್ಕೆ ಝೀ ಟಿವಿಯ ಕಾರ್ಯಕ್ರಮದ ಟೈಟಲ್ಲು ಸೇರಿಸಿದ್ದಾರೆಂದು? ಕಲರ್ಸ್, ಝೀ ಎಲ್ಲ ಮೋದಿಯ ಆರಾಧಕರೇ ಎಂಬುದನ್ನು ಸೂಚ್ಯವಾಗಿ ಹೇಳಲಷ್ಟೇ ಇದನ್ನು ಬಳಸಿದ್ದೇವೆ ಅಷ್ಟೇ.

ಈಗ ವಿಷಯಕ್ಕೆ ಬರೋಣ. ಮೈಸೂರು-ಕೊಡಗಿನ ಸಂಸದ ಪ್ರತಾಪ್‍ಸಿಂಹ ಮತ್ತು ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ ನಿನ್ನೆ ರವಿವಾರ ಕಲರ್ಸ್ ಟಿವಿಯ ಕೋಟ್ಯಧಿಪತಿಯಲ್ಲಿ ಸಿಕ್ಕಾಪಟ್ಟೆ ಟ್ಯಾಲೆಂಟ್ ತೋರಿಸಿ ಹನ್ನೆರಡೂವರೆ ಲಕ್ಷ ಗೆದ್ದಿದ್ದಾರೆ ಮತ್ತು ಅದನ್ನು ನೆರೆಪ್ರವಾಹ ಪೀಡಿತರಿಗಾಗಿ ಮುಖ್ಯಮಂತ್ರಿ ನಿಧಿಗೆ ಕೊಡುವುದಾಗಿ ಘೋಷಿಸಿದ್ದಾರೆ. ಓಕ, ವೆಲ್ ಡನ್!

ಆದರೆ, ನಾವು ಇಲ್ಲಿ ಪ್ರಸ್ತಾಪಿಸುತ್ತಿರುವುದು ಇಡೀ ಕಾರ್ಯಕ್ರಮದ ಹಿಂದೆ ಒಂದು ಹಿಡನ್ ಅಜೆಂಡಾ ಇತ್ತು ಮತ್ತು ಈ ಇಬ್ಬರು ಸಂಸದರು ಕಾರ್ಯಕ್ರಮದ ಉದ್ದಕ್ಕೂ ಡ್ರಾಮಾ ಮಾಡುತ್ತಲೇ ಬಂದರು ಎನ್ನುವುದು. ಇಲ್ಲಿ ಕಾರ್ಯಕ್ರಮದ ಸಂಯೋಜಕ ಪುನೀತ್ ರಾಜಕುಮಾರ್ ಕೇವಲ ಒಬ್ಬ ನಿರೂಪಕರಷ್ಟೇ. ಇಡೀ ಕಾರ್ಯಕ್ರಮದ ಸ್ಕ್ರಿಪ್ಟ್ ಮೊದಲೇ ರೆಡಿ ಆಗಿತ್ತು (ಸೆಲೆಬ್ರಿಟಿಗಳು ಭಾಗವಹಿಸುವ ಎಲ್ಲ ರಿಯಾಲಿಟಿ ಶೋ ಗಳ ಸ್ಕ್ರಿಪ್ಟ್ ಕೂಡ ಮೊದಲೇ ಸಿದ್ದವಾಗಿರುತ್ತವೆ).

ಹಾಳಾಗಿ ಹೋಗಲಿ ಇವರೆಲ್ಲ. ನಮ್ಮ ಪ್ರಶ್ನೆಗಳಿಷ್ಟೇ:
1. ನೆರೆಪೀಡಿತರಿಗೆ ಸೌಕರ್ಯ ಕಲ್ಪಿಸಲು ಕೇಂದ್ರ ಸರ್ಕಾರ ಉದಾಸೀನ ತೋರುತ್ತಿರುವಾಗ ಈ ಇಬ್ಬರು ಸಂಸದರು ಕೋಟ್ಯಧಿಪತಿಯಲ್ಲಿ ಬಂದು 12 ಚಿಲ್ಲರೆ ಲಕ್ಷ ಗೆಲ್ಲುವುದು ಸಾಕೇ? ತಮ್ಮದೇ ಕೇಂದ್ರ ಸರ್ಕಾರದ ಮೇಲೆ, ಅದೂ ನಮ್ಮದೇ ರಾಜ್ಯದ ನಾಲ್ಕು ಕೇಂದ್ರ ಸಚಿವರಿರುವ ಕೇಂದ್ರಕ್ಕೆ ಮನವಿ ಮಾಡಿ ಅನುದಾನ ತರಲು ಇಲ್ಲಿವರೆಗೂ ಶ್ರಮಿಸಲಿಲ್ಲವೇಕೆ?

2. ಕಾರ್ಯಕ್ರಮದ ಒಂದು ಹಂತದಲ್ಲಿ ಸಂಸದ ಪ್ರತಾಪಸಿಂಹ ಹೇಳಿದರು: ‘ಪ್ರಾಮಾಣಿಕ ಮತ್ತು ಗೌರವಾನ್ವಿತ ಸಂಸದರಿಗೆ ನೀಡುವ ಸಂಬಳ ಯಾತಕ್ಕೂ ಸಾಲುತ್ತಿರಲಿಲ್ಲ. ಆಗ 2.09 ಲಕ್ಷವಿತ್ತು. ನಾನು ಇದನ್ನು ಹೆಚ್ಚಿಸಬೇಕೆಂದು 85 ಸಂಸದರ ಸಹಿ ಮಾಡಿಸಿ ಮೋದಿಯವರಿಗೆ ಸಲ್ಲಿಸಿದ್ದೆ. ಅವರು 80 ಸಾವಿರ ಹೆಚ್ಚುವರಿ ಮಾಡಿದರು. ಈಗ ಸಂಸದರ ಸಂಭಾವನೆ 2.89 ಲಕ್ಷ.  ಅಯ್ಯೋ ಪ್ರತಾಪ ಮತ್ತು ತೇಜಸ್ವಿ 85 ಸಂಸದರನ್ನು ಬಿಡಿ, ನೀವಿಬ್ದರು ಸೇರಿದಂತೆ ಕರ್ನಾಟದಕ 28 ಸಂಸದರ ಸಹಿ ಮಾಡಿಸಿಕೊಂಡು ನೆರೆ ಪರಿಹಾರಕ್ಕೆ ‘ಚಂದ್ರಮುಖಿ’ ಪ್ರಧಾನಿಯ ಮುಂದೆ ಒಂದು ಪ್ರಸ್ತಾಪ ಇಡಬಹುದಿತ್ತಲ್ಲ? ಇಂತಹ ಪ್ರಶ್ನೆಯನ್ನು ಕೋಟ್ಯಾಧಿಪತಿಯ ತೆರೆ ಹಿಂದೆ ಕೆಲಸ ಮಾಡುವವವರು ಸೃಷ್ಟಿಸಲಿಲ್ಲವೇಕೆ?

3. ಕಲರ್ಸ್ ಕನ್ನಡದವರೇ, ನಿಮಗೆ ನಿಜಕ್ಕೂ ಕರ್ನಾಟಕದ ನೆರಪೀಡಿತರಿಗೆ ಸಹಾಯ ಮಾಡುವ ಉದ್ದೇಶವಿದ್ದರೆ ಇಡೀ ಬಹುಮಾನದ ಮೊತ್ತ ಒಂದು ಕೋಟಿಯನ್ನೇ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಬಹುದಿತ್ತು ಅಲ್ಲವಾ? ಆದರೆ, ನಿಮ್ಮ ಉದ್ದೇಶ ಇಬ್ಬರು ಹೋಪ್‍ ಲೆಸ್ ಸಂಸದರು ಮತ್ತು ಅವರ ಗುರು ಮೋದಿಗೆ ಪ್ರಚಾರ ಕೊಡುವುದೇ ಆಗಿತ್ತಲ್ಲವಾ?

ಒಟ್ಟಿನಲ್ಲಿ ಇಬ್ಬರು ಸಂಸದರನ್ನು ಇಟ್ಟುಕೊಂಡು ಕಾರ್ಯಕ್ರಮ ಮಾಡಲು ಹೋಗಿ ಕಲರ್ಸ್ ಬಣ್ಣ ಬಯಲಾಗಿದೆ. ಝೀ ಟಿವಿ ಡ್ರಾಮಾ ಜ್ಯೂನಿಯರ್ಸ್‍ನಲ್ಲಿ ಹಲವಾದರೂ ಪುಟ್ಟ ಮಕ್ಕಳ ಟ್ಯಾಲೆಂಟು ಗುರುತಿಸಲ್ಪಡುತ್ತಿದೆ. ಆದರೆ, ಕಲರ್ಸ್‍ನವರೇ ನೀವು ಈ ಇಬ್ಬರು ‘ಪಟ್ಟ’ ಸಂಸದರ ಹಿಂದೆ ಬೀಳುವ ಮೂಲಕ ಕೋಟ್ಯಧಿಪತಿಯಲ್ಲಿ ಡ್ರಾಮಾ ಜ್ಯೂನಿಯರ್ಸ್ ತಂದು ಬಿಟ್ಟಿರಲ್ಲ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...