Homeಕರ್ನಾಟಕಕೋಟ್ಯಧಿಪತಿಯಲ್ಲಿ ಡ್ರಾಮಾ ಜ್ಯೂನಿಯರ್ಸ್!: ಪ್ರವಾಹ ಪರಿಹಾರಕ್ಕೆ ಪ್ರತಾಪ್, ತೇಜಸ್ವಿ ಗೆದ್ದ 12 ಲಕ್ಷ ಸಾಕೇ?

ಕೋಟ್ಯಧಿಪತಿಯಲ್ಲಿ ಡ್ರಾಮಾ ಜ್ಯೂನಿಯರ್ಸ್!: ಪ್ರವಾಹ ಪರಿಹಾರಕ್ಕೆ ಪ್ರತಾಪ್, ತೇಜಸ್ವಿ ಗೆದ್ದ 12 ಲಕ್ಷ ಸಾಕೇ?

ರವಿವಾರ ಕಲರ್ಸ್ ಕನ್ನಡ ಟಿವಿಯ ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಲ್ಲಿ ಸಂಸದರಾದ ಪ್ರತಾಪ್ ಸಿಂಹ ಮತ್ತು ತೇಜಸ್ವಿ ಸೂರ್ಯ ಪಾಲ್ಗೊಂಡಿದ್ದರು. ಒಂಥರಾ ಇವರಿಬ್ಬರ ನಾಟಕೀಯತ ನೋಡಿದಾಗ ‘ಡ್ರಾಮಾ ಜ್ಯೂನಿಯರ್ಸ್’ ನೆನಪಾಗಿತು.

- Advertisement -
- Advertisement -

ಕೋಟ್ಯಧಿಪತಿಯಲ್ಲಿ ಡ್ರಾಮಾ ಜ್ಯೂನಿಯರ್ಸ್ ! – ಹೆಡ್ಡಿಂಗ್ ನೋಡಿ ನಿಮಗೆ ಅನಿಸಬಹುದು: ಇದೇನಿದು ಕಲರ್ಸ್ ಟಿವಿ ಕಾರ್ಯಕ್ರಮಕ್ಕೆ ಝೀ ಟಿವಿಯ ಕಾರ್ಯಕ್ರಮದ ಟೈಟಲ್ಲು ಸೇರಿಸಿದ್ದಾರೆಂದು? ಕಲರ್ಸ್, ಝೀ ಎಲ್ಲ ಮೋದಿಯ ಆರಾಧಕರೇ ಎಂಬುದನ್ನು ಸೂಚ್ಯವಾಗಿ ಹೇಳಲಷ್ಟೇ ಇದನ್ನು ಬಳಸಿದ್ದೇವೆ ಅಷ್ಟೇ.

ಈಗ ವಿಷಯಕ್ಕೆ ಬರೋಣ. ಮೈಸೂರು-ಕೊಡಗಿನ ಸಂಸದ ಪ್ರತಾಪ್‍ಸಿಂಹ ಮತ್ತು ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ ನಿನ್ನೆ ರವಿವಾರ ಕಲರ್ಸ್ ಟಿವಿಯ ಕೋಟ್ಯಧಿಪತಿಯಲ್ಲಿ ಸಿಕ್ಕಾಪಟ್ಟೆ ಟ್ಯಾಲೆಂಟ್ ತೋರಿಸಿ ಹನ್ನೆರಡೂವರೆ ಲಕ್ಷ ಗೆದ್ದಿದ್ದಾರೆ ಮತ್ತು ಅದನ್ನು ನೆರೆಪ್ರವಾಹ ಪೀಡಿತರಿಗಾಗಿ ಮುಖ್ಯಮಂತ್ರಿ ನಿಧಿಗೆ ಕೊಡುವುದಾಗಿ ಘೋಷಿಸಿದ್ದಾರೆ. ಓಕ, ವೆಲ್ ಡನ್!

ಆದರೆ, ನಾವು ಇಲ್ಲಿ ಪ್ರಸ್ತಾಪಿಸುತ್ತಿರುವುದು ಇಡೀ ಕಾರ್ಯಕ್ರಮದ ಹಿಂದೆ ಒಂದು ಹಿಡನ್ ಅಜೆಂಡಾ ಇತ್ತು ಮತ್ತು ಈ ಇಬ್ಬರು ಸಂಸದರು ಕಾರ್ಯಕ್ರಮದ ಉದ್ದಕ್ಕೂ ಡ್ರಾಮಾ ಮಾಡುತ್ತಲೇ ಬಂದರು ಎನ್ನುವುದು. ಇಲ್ಲಿ ಕಾರ್ಯಕ್ರಮದ ಸಂಯೋಜಕ ಪುನೀತ್ ರಾಜಕುಮಾರ್ ಕೇವಲ ಒಬ್ಬ ನಿರೂಪಕರಷ್ಟೇ. ಇಡೀ ಕಾರ್ಯಕ್ರಮದ ಸ್ಕ್ರಿಪ್ಟ್ ಮೊದಲೇ ರೆಡಿ ಆಗಿತ್ತು (ಸೆಲೆಬ್ರಿಟಿಗಳು ಭಾಗವಹಿಸುವ ಎಲ್ಲ ರಿಯಾಲಿಟಿ ಶೋ ಗಳ ಸ್ಕ್ರಿಪ್ಟ್ ಕೂಡ ಮೊದಲೇ ಸಿದ್ದವಾಗಿರುತ್ತವೆ).

ಹಾಳಾಗಿ ಹೋಗಲಿ ಇವರೆಲ್ಲ. ನಮ್ಮ ಪ್ರಶ್ನೆಗಳಿಷ್ಟೇ:
1. ನೆರೆಪೀಡಿತರಿಗೆ ಸೌಕರ್ಯ ಕಲ್ಪಿಸಲು ಕೇಂದ್ರ ಸರ್ಕಾರ ಉದಾಸೀನ ತೋರುತ್ತಿರುವಾಗ ಈ ಇಬ್ಬರು ಸಂಸದರು ಕೋಟ್ಯಧಿಪತಿಯಲ್ಲಿ ಬಂದು 12 ಚಿಲ್ಲರೆ ಲಕ್ಷ ಗೆಲ್ಲುವುದು ಸಾಕೇ? ತಮ್ಮದೇ ಕೇಂದ್ರ ಸರ್ಕಾರದ ಮೇಲೆ, ಅದೂ ನಮ್ಮದೇ ರಾಜ್ಯದ ನಾಲ್ಕು ಕೇಂದ್ರ ಸಚಿವರಿರುವ ಕೇಂದ್ರಕ್ಕೆ ಮನವಿ ಮಾಡಿ ಅನುದಾನ ತರಲು ಇಲ್ಲಿವರೆಗೂ ಶ್ರಮಿಸಲಿಲ್ಲವೇಕೆ?

2. ಕಾರ್ಯಕ್ರಮದ ಒಂದು ಹಂತದಲ್ಲಿ ಸಂಸದ ಪ್ರತಾಪಸಿಂಹ ಹೇಳಿದರು: ‘ಪ್ರಾಮಾಣಿಕ ಮತ್ತು ಗೌರವಾನ್ವಿತ ಸಂಸದರಿಗೆ ನೀಡುವ ಸಂಬಳ ಯಾತಕ್ಕೂ ಸಾಲುತ್ತಿರಲಿಲ್ಲ. ಆಗ 2.09 ಲಕ್ಷವಿತ್ತು. ನಾನು ಇದನ್ನು ಹೆಚ್ಚಿಸಬೇಕೆಂದು 85 ಸಂಸದರ ಸಹಿ ಮಾಡಿಸಿ ಮೋದಿಯವರಿಗೆ ಸಲ್ಲಿಸಿದ್ದೆ. ಅವರು 80 ಸಾವಿರ ಹೆಚ್ಚುವರಿ ಮಾಡಿದರು. ಈಗ ಸಂಸದರ ಸಂಭಾವನೆ 2.89 ಲಕ್ಷ.  ಅಯ್ಯೋ ಪ್ರತಾಪ ಮತ್ತು ತೇಜಸ್ವಿ 85 ಸಂಸದರನ್ನು ಬಿಡಿ, ನೀವಿಬ್ದರು ಸೇರಿದಂತೆ ಕರ್ನಾಟದಕ 28 ಸಂಸದರ ಸಹಿ ಮಾಡಿಸಿಕೊಂಡು ನೆರೆ ಪರಿಹಾರಕ್ಕೆ ‘ಚಂದ್ರಮುಖಿ’ ಪ್ರಧಾನಿಯ ಮುಂದೆ ಒಂದು ಪ್ರಸ್ತಾಪ ಇಡಬಹುದಿತ್ತಲ್ಲ? ಇಂತಹ ಪ್ರಶ್ನೆಯನ್ನು ಕೋಟ್ಯಾಧಿಪತಿಯ ತೆರೆ ಹಿಂದೆ ಕೆಲಸ ಮಾಡುವವವರು ಸೃಷ್ಟಿಸಲಿಲ್ಲವೇಕೆ?

3. ಕಲರ್ಸ್ ಕನ್ನಡದವರೇ, ನಿಮಗೆ ನಿಜಕ್ಕೂ ಕರ್ನಾಟಕದ ನೆರಪೀಡಿತರಿಗೆ ಸಹಾಯ ಮಾಡುವ ಉದ್ದೇಶವಿದ್ದರೆ ಇಡೀ ಬಹುಮಾನದ ಮೊತ್ತ ಒಂದು ಕೋಟಿಯನ್ನೇ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಬಹುದಿತ್ತು ಅಲ್ಲವಾ? ಆದರೆ, ನಿಮ್ಮ ಉದ್ದೇಶ ಇಬ್ಬರು ಹೋಪ್‍ ಲೆಸ್ ಸಂಸದರು ಮತ್ತು ಅವರ ಗುರು ಮೋದಿಗೆ ಪ್ರಚಾರ ಕೊಡುವುದೇ ಆಗಿತ್ತಲ್ಲವಾ?

ಒಟ್ಟಿನಲ್ಲಿ ಇಬ್ಬರು ಸಂಸದರನ್ನು ಇಟ್ಟುಕೊಂಡು ಕಾರ್ಯಕ್ರಮ ಮಾಡಲು ಹೋಗಿ ಕಲರ್ಸ್ ಬಣ್ಣ ಬಯಲಾಗಿದೆ. ಝೀ ಟಿವಿ ಡ್ರಾಮಾ ಜ್ಯೂನಿಯರ್ಸ್‍ನಲ್ಲಿ ಹಲವಾದರೂ ಪುಟ್ಟ ಮಕ್ಕಳ ಟ್ಯಾಲೆಂಟು ಗುರುತಿಸಲ್ಪಡುತ್ತಿದೆ. ಆದರೆ, ಕಲರ್ಸ್‍ನವರೇ ನೀವು ಈ ಇಬ್ಬರು ‘ಪಟ್ಟ’ ಸಂಸದರ ಹಿಂದೆ ಬೀಳುವ ಮೂಲಕ ಕೋಟ್ಯಧಿಪತಿಯಲ್ಲಿ ಡ್ರಾಮಾ ಜ್ಯೂನಿಯರ್ಸ್ ತಂದು ಬಿಟ್ಟಿರಲ್ಲ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...