Homeಕರ್ನಾಟಕಕೋಟ್ಯಧಿಪತಿಯಲ್ಲಿ ಡ್ರಾಮಾ ಜ್ಯೂನಿಯರ್ಸ್!: ಪ್ರವಾಹ ಪರಿಹಾರಕ್ಕೆ ಪ್ರತಾಪ್, ತೇಜಸ್ವಿ ಗೆದ್ದ 12 ಲಕ್ಷ ಸಾಕೇ?

ಕೋಟ್ಯಧಿಪತಿಯಲ್ಲಿ ಡ್ರಾಮಾ ಜ್ಯೂನಿಯರ್ಸ್!: ಪ್ರವಾಹ ಪರಿಹಾರಕ್ಕೆ ಪ್ರತಾಪ್, ತೇಜಸ್ವಿ ಗೆದ್ದ 12 ಲಕ್ಷ ಸಾಕೇ?

ರವಿವಾರ ಕಲರ್ಸ್ ಕನ್ನಡ ಟಿವಿಯ ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಲ್ಲಿ ಸಂಸದರಾದ ಪ್ರತಾಪ್ ಸಿಂಹ ಮತ್ತು ತೇಜಸ್ವಿ ಸೂರ್ಯ ಪಾಲ್ಗೊಂಡಿದ್ದರು. ಒಂಥರಾ ಇವರಿಬ್ಬರ ನಾಟಕೀಯತ ನೋಡಿದಾಗ ‘ಡ್ರಾಮಾ ಜ್ಯೂನಿಯರ್ಸ್’ ನೆನಪಾಗಿತು.

- Advertisement -
- Advertisement -

ಕೋಟ್ಯಧಿಪತಿಯಲ್ಲಿ ಡ್ರಾಮಾ ಜ್ಯೂನಿಯರ್ಸ್ ! – ಹೆಡ್ಡಿಂಗ್ ನೋಡಿ ನಿಮಗೆ ಅನಿಸಬಹುದು: ಇದೇನಿದು ಕಲರ್ಸ್ ಟಿವಿ ಕಾರ್ಯಕ್ರಮಕ್ಕೆ ಝೀ ಟಿವಿಯ ಕಾರ್ಯಕ್ರಮದ ಟೈಟಲ್ಲು ಸೇರಿಸಿದ್ದಾರೆಂದು? ಕಲರ್ಸ್, ಝೀ ಎಲ್ಲ ಮೋದಿಯ ಆರಾಧಕರೇ ಎಂಬುದನ್ನು ಸೂಚ್ಯವಾಗಿ ಹೇಳಲಷ್ಟೇ ಇದನ್ನು ಬಳಸಿದ್ದೇವೆ ಅಷ್ಟೇ.

ಈಗ ವಿಷಯಕ್ಕೆ ಬರೋಣ. ಮೈಸೂರು-ಕೊಡಗಿನ ಸಂಸದ ಪ್ರತಾಪ್‍ಸಿಂಹ ಮತ್ತು ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ ನಿನ್ನೆ ರವಿವಾರ ಕಲರ್ಸ್ ಟಿವಿಯ ಕೋಟ್ಯಧಿಪತಿಯಲ್ಲಿ ಸಿಕ್ಕಾಪಟ್ಟೆ ಟ್ಯಾಲೆಂಟ್ ತೋರಿಸಿ ಹನ್ನೆರಡೂವರೆ ಲಕ್ಷ ಗೆದ್ದಿದ್ದಾರೆ ಮತ್ತು ಅದನ್ನು ನೆರೆಪ್ರವಾಹ ಪೀಡಿತರಿಗಾಗಿ ಮುಖ್ಯಮಂತ್ರಿ ನಿಧಿಗೆ ಕೊಡುವುದಾಗಿ ಘೋಷಿಸಿದ್ದಾರೆ. ಓಕ, ವೆಲ್ ಡನ್!

ಆದರೆ, ನಾವು ಇಲ್ಲಿ ಪ್ರಸ್ತಾಪಿಸುತ್ತಿರುವುದು ಇಡೀ ಕಾರ್ಯಕ್ರಮದ ಹಿಂದೆ ಒಂದು ಹಿಡನ್ ಅಜೆಂಡಾ ಇತ್ತು ಮತ್ತು ಈ ಇಬ್ಬರು ಸಂಸದರು ಕಾರ್ಯಕ್ರಮದ ಉದ್ದಕ್ಕೂ ಡ್ರಾಮಾ ಮಾಡುತ್ತಲೇ ಬಂದರು ಎನ್ನುವುದು. ಇಲ್ಲಿ ಕಾರ್ಯಕ್ರಮದ ಸಂಯೋಜಕ ಪುನೀತ್ ರಾಜಕುಮಾರ್ ಕೇವಲ ಒಬ್ಬ ನಿರೂಪಕರಷ್ಟೇ. ಇಡೀ ಕಾರ್ಯಕ್ರಮದ ಸ್ಕ್ರಿಪ್ಟ್ ಮೊದಲೇ ರೆಡಿ ಆಗಿತ್ತು (ಸೆಲೆಬ್ರಿಟಿಗಳು ಭಾಗವಹಿಸುವ ಎಲ್ಲ ರಿಯಾಲಿಟಿ ಶೋ ಗಳ ಸ್ಕ್ರಿಪ್ಟ್ ಕೂಡ ಮೊದಲೇ ಸಿದ್ದವಾಗಿರುತ್ತವೆ).

ಹಾಳಾಗಿ ಹೋಗಲಿ ಇವರೆಲ್ಲ. ನಮ್ಮ ಪ್ರಶ್ನೆಗಳಿಷ್ಟೇ:
1. ನೆರೆಪೀಡಿತರಿಗೆ ಸೌಕರ್ಯ ಕಲ್ಪಿಸಲು ಕೇಂದ್ರ ಸರ್ಕಾರ ಉದಾಸೀನ ತೋರುತ್ತಿರುವಾಗ ಈ ಇಬ್ಬರು ಸಂಸದರು ಕೋಟ್ಯಧಿಪತಿಯಲ್ಲಿ ಬಂದು 12 ಚಿಲ್ಲರೆ ಲಕ್ಷ ಗೆಲ್ಲುವುದು ಸಾಕೇ? ತಮ್ಮದೇ ಕೇಂದ್ರ ಸರ್ಕಾರದ ಮೇಲೆ, ಅದೂ ನಮ್ಮದೇ ರಾಜ್ಯದ ನಾಲ್ಕು ಕೇಂದ್ರ ಸಚಿವರಿರುವ ಕೇಂದ್ರಕ್ಕೆ ಮನವಿ ಮಾಡಿ ಅನುದಾನ ತರಲು ಇಲ್ಲಿವರೆಗೂ ಶ್ರಮಿಸಲಿಲ್ಲವೇಕೆ?

2. ಕಾರ್ಯಕ್ರಮದ ಒಂದು ಹಂತದಲ್ಲಿ ಸಂಸದ ಪ್ರತಾಪಸಿಂಹ ಹೇಳಿದರು: ‘ಪ್ರಾಮಾಣಿಕ ಮತ್ತು ಗೌರವಾನ್ವಿತ ಸಂಸದರಿಗೆ ನೀಡುವ ಸಂಬಳ ಯಾತಕ್ಕೂ ಸಾಲುತ್ತಿರಲಿಲ್ಲ. ಆಗ 2.09 ಲಕ್ಷವಿತ್ತು. ನಾನು ಇದನ್ನು ಹೆಚ್ಚಿಸಬೇಕೆಂದು 85 ಸಂಸದರ ಸಹಿ ಮಾಡಿಸಿ ಮೋದಿಯವರಿಗೆ ಸಲ್ಲಿಸಿದ್ದೆ. ಅವರು 80 ಸಾವಿರ ಹೆಚ್ಚುವರಿ ಮಾಡಿದರು. ಈಗ ಸಂಸದರ ಸಂಭಾವನೆ 2.89 ಲಕ್ಷ.  ಅಯ್ಯೋ ಪ್ರತಾಪ ಮತ್ತು ತೇಜಸ್ವಿ 85 ಸಂಸದರನ್ನು ಬಿಡಿ, ನೀವಿಬ್ದರು ಸೇರಿದಂತೆ ಕರ್ನಾಟದಕ 28 ಸಂಸದರ ಸಹಿ ಮಾಡಿಸಿಕೊಂಡು ನೆರೆ ಪರಿಹಾರಕ್ಕೆ ‘ಚಂದ್ರಮುಖಿ’ ಪ್ರಧಾನಿಯ ಮುಂದೆ ಒಂದು ಪ್ರಸ್ತಾಪ ಇಡಬಹುದಿತ್ತಲ್ಲ? ಇಂತಹ ಪ್ರಶ್ನೆಯನ್ನು ಕೋಟ್ಯಾಧಿಪತಿಯ ತೆರೆ ಹಿಂದೆ ಕೆಲಸ ಮಾಡುವವವರು ಸೃಷ್ಟಿಸಲಿಲ್ಲವೇಕೆ?

3. ಕಲರ್ಸ್ ಕನ್ನಡದವರೇ, ನಿಮಗೆ ನಿಜಕ್ಕೂ ಕರ್ನಾಟಕದ ನೆರಪೀಡಿತರಿಗೆ ಸಹಾಯ ಮಾಡುವ ಉದ್ದೇಶವಿದ್ದರೆ ಇಡೀ ಬಹುಮಾನದ ಮೊತ್ತ ಒಂದು ಕೋಟಿಯನ್ನೇ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಬಹುದಿತ್ತು ಅಲ್ಲವಾ? ಆದರೆ, ನಿಮ್ಮ ಉದ್ದೇಶ ಇಬ್ಬರು ಹೋಪ್‍ ಲೆಸ್ ಸಂಸದರು ಮತ್ತು ಅವರ ಗುರು ಮೋದಿಗೆ ಪ್ರಚಾರ ಕೊಡುವುದೇ ಆಗಿತ್ತಲ್ಲವಾ?

ಒಟ್ಟಿನಲ್ಲಿ ಇಬ್ಬರು ಸಂಸದರನ್ನು ಇಟ್ಟುಕೊಂಡು ಕಾರ್ಯಕ್ರಮ ಮಾಡಲು ಹೋಗಿ ಕಲರ್ಸ್ ಬಣ್ಣ ಬಯಲಾಗಿದೆ. ಝೀ ಟಿವಿ ಡ್ರಾಮಾ ಜ್ಯೂನಿಯರ್ಸ್‍ನಲ್ಲಿ ಹಲವಾದರೂ ಪುಟ್ಟ ಮಕ್ಕಳ ಟ್ಯಾಲೆಂಟು ಗುರುತಿಸಲ್ಪಡುತ್ತಿದೆ. ಆದರೆ, ಕಲರ್ಸ್‍ನವರೇ ನೀವು ಈ ಇಬ್ಬರು ‘ಪಟ್ಟ’ ಸಂಸದರ ಹಿಂದೆ ಬೀಳುವ ಮೂಲಕ ಕೋಟ್ಯಧಿಪತಿಯಲ್ಲಿ ಡ್ರಾಮಾ ಜ್ಯೂನಿಯರ್ಸ್ ತಂದು ಬಿಟ್ಟಿರಲ್ಲ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...