Homeಕರ್ನಾಟಕಕೋಟ್ಯಧಿಪತಿಯಲ್ಲಿ ಡ್ರಾಮಾ ಜ್ಯೂನಿಯರ್ಸ್!: ಪ್ರವಾಹ ಪರಿಹಾರಕ್ಕೆ ಪ್ರತಾಪ್, ತೇಜಸ್ವಿ ಗೆದ್ದ 12 ಲಕ್ಷ ಸಾಕೇ?

ಕೋಟ್ಯಧಿಪತಿಯಲ್ಲಿ ಡ್ರಾಮಾ ಜ್ಯೂನಿಯರ್ಸ್!: ಪ್ರವಾಹ ಪರಿಹಾರಕ್ಕೆ ಪ್ರತಾಪ್, ತೇಜಸ್ವಿ ಗೆದ್ದ 12 ಲಕ್ಷ ಸಾಕೇ?

ರವಿವಾರ ಕಲರ್ಸ್ ಕನ್ನಡ ಟಿವಿಯ ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಲ್ಲಿ ಸಂಸದರಾದ ಪ್ರತಾಪ್ ಸಿಂಹ ಮತ್ತು ತೇಜಸ್ವಿ ಸೂರ್ಯ ಪಾಲ್ಗೊಂಡಿದ್ದರು. ಒಂಥರಾ ಇವರಿಬ್ಬರ ನಾಟಕೀಯತ ನೋಡಿದಾಗ ‘ಡ್ರಾಮಾ ಜ್ಯೂನಿಯರ್ಸ್’ ನೆನಪಾಗಿತು.

- Advertisement -
- Advertisement -

ಕೋಟ್ಯಧಿಪತಿಯಲ್ಲಿ ಡ್ರಾಮಾ ಜ್ಯೂನಿಯರ್ಸ್ ! – ಹೆಡ್ಡಿಂಗ್ ನೋಡಿ ನಿಮಗೆ ಅನಿಸಬಹುದು: ಇದೇನಿದು ಕಲರ್ಸ್ ಟಿವಿ ಕಾರ್ಯಕ್ರಮಕ್ಕೆ ಝೀ ಟಿವಿಯ ಕಾರ್ಯಕ್ರಮದ ಟೈಟಲ್ಲು ಸೇರಿಸಿದ್ದಾರೆಂದು? ಕಲರ್ಸ್, ಝೀ ಎಲ್ಲ ಮೋದಿಯ ಆರಾಧಕರೇ ಎಂಬುದನ್ನು ಸೂಚ್ಯವಾಗಿ ಹೇಳಲಷ್ಟೇ ಇದನ್ನು ಬಳಸಿದ್ದೇವೆ ಅಷ್ಟೇ.

ಈಗ ವಿಷಯಕ್ಕೆ ಬರೋಣ. ಮೈಸೂರು-ಕೊಡಗಿನ ಸಂಸದ ಪ್ರತಾಪ್‍ಸಿಂಹ ಮತ್ತು ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ ನಿನ್ನೆ ರವಿವಾರ ಕಲರ್ಸ್ ಟಿವಿಯ ಕೋಟ್ಯಧಿಪತಿಯಲ್ಲಿ ಸಿಕ್ಕಾಪಟ್ಟೆ ಟ್ಯಾಲೆಂಟ್ ತೋರಿಸಿ ಹನ್ನೆರಡೂವರೆ ಲಕ್ಷ ಗೆದ್ದಿದ್ದಾರೆ ಮತ್ತು ಅದನ್ನು ನೆರೆಪ್ರವಾಹ ಪೀಡಿತರಿಗಾಗಿ ಮುಖ್ಯಮಂತ್ರಿ ನಿಧಿಗೆ ಕೊಡುವುದಾಗಿ ಘೋಷಿಸಿದ್ದಾರೆ. ಓಕ, ವೆಲ್ ಡನ್!

ಆದರೆ, ನಾವು ಇಲ್ಲಿ ಪ್ರಸ್ತಾಪಿಸುತ್ತಿರುವುದು ಇಡೀ ಕಾರ್ಯಕ್ರಮದ ಹಿಂದೆ ಒಂದು ಹಿಡನ್ ಅಜೆಂಡಾ ಇತ್ತು ಮತ್ತು ಈ ಇಬ್ಬರು ಸಂಸದರು ಕಾರ್ಯಕ್ರಮದ ಉದ್ದಕ್ಕೂ ಡ್ರಾಮಾ ಮಾಡುತ್ತಲೇ ಬಂದರು ಎನ್ನುವುದು. ಇಲ್ಲಿ ಕಾರ್ಯಕ್ರಮದ ಸಂಯೋಜಕ ಪುನೀತ್ ರಾಜಕುಮಾರ್ ಕೇವಲ ಒಬ್ಬ ನಿರೂಪಕರಷ್ಟೇ. ಇಡೀ ಕಾರ್ಯಕ್ರಮದ ಸ್ಕ್ರಿಪ್ಟ್ ಮೊದಲೇ ರೆಡಿ ಆಗಿತ್ತು (ಸೆಲೆಬ್ರಿಟಿಗಳು ಭಾಗವಹಿಸುವ ಎಲ್ಲ ರಿಯಾಲಿಟಿ ಶೋ ಗಳ ಸ್ಕ್ರಿಪ್ಟ್ ಕೂಡ ಮೊದಲೇ ಸಿದ್ದವಾಗಿರುತ್ತವೆ).

ಹಾಳಾಗಿ ಹೋಗಲಿ ಇವರೆಲ್ಲ. ನಮ್ಮ ಪ್ರಶ್ನೆಗಳಿಷ್ಟೇ:
1. ನೆರೆಪೀಡಿತರಿಗೆ ಸೌಕರ್ಯ ಕಲ್ಪಿಸಲು ಕೇಂದ್ರ ಸರ್ಕಾರ ಉದಾಸೀನ ತೋರುತ್ತಿರುವಾಗ ಈ ಇಬ್ಬರು ಸಂಸದರು ಕೋಟ್ಯಧಿಪತಿಯಲ್ಲಿ ಬಂದು 12 ಚಿಲ್ಲರೆ ಲಕ್ಷ ಗೆಲ್ಲುವುದು ಸಾಕೇ? ತಮ್ಮದೇ ಕೇಂದ್ರ ಸರ್ಕಾರದ ಮೇಲೆ, ಅದೂ ನಮ್ಮದೇ ರಾಜ್ಯದ ನಾಲ್ಕು ಕೇಂದ್ರ ಸಚಿವರಿರುವ ಕೇಂದ್ರಕ್ಕೆ ಮನವಿ ಮಾಡಿ ಅನುದಾನ ತರಲು ಇಲ್ಲಿವರೆಗೂ ಶ್ರಮಿಸಲಿಲ್ಲವೇಕೆ?

2. ಕಾರ್ಯಕ್ರಮದ ಒಂದು ಹಂತದಲ್ಲಿ ಸಂಸದ ಪ್ರತಾಪಸಿಂಹ ಹೇಳಿದರು: ‘ಪ್ರಾಮಾಣಿಕ ಮತ್ತು ಗೌರವಾನ್ವಿತ ಸಂಸದರಿಗೆ ನೀಡುವ ಸಂಬಳ ಯಾತಕ್ಕೂ ಸಾಲುತ್ತಿರಲಿಲ್ಲ. ಆಗ 2.09 ಲಕ್ಷವಿತ್ತು. ನಾನು ಇದನ್ನು ಹೆಚ್ಚಿಸಬೇಕೆಂದು 85 ಸಂಸದರ ಸಹಿ ಮಾಡಿಸಿ ಮೋದಿಯವರಿಗೆ ಸಲ್ಲಿಸಿದ್ದೆ. ಅವರು 80 ಸಾವಿರ ಹೆಚ್ಚುವರಿ ಮಾಡಿದರು. ಈಗ ಸಂಸದರ ಸಂಭಾವನೆ 2.89 ಲಕ್ಷ.  ಅಯ್ಯೋ ಪ್ರತಾಪ ಮತ್ತು ತೇಜಸ್ವಿ 85 ಸಂಸದರನ್ನು ಬಿಡಿ, ನೀವಿಬ್ದರು ಸೇರಿದಂತೆ ಕರ್ನಾಟದಕ 28 ಸಂಸದರ ಸಹಿ ಮಾಡಿಸಿಕೊಂಡು ನೆರೆ ಪರಿಹಾರಕ್ಕೆ ‘ಚಂದ್ರಮುಖಿ’ ಪ್ರಧಾನಿಯ ಮುಂದೆ ಒಂದು ಪ್ರಸ್ತಾಪ ಇಡಬಹುದಿತ್ತಲ್ಲ? ಇಂತಹ ಪ್ರಶ್ನೆಯನ್ನು ಕೋಟ್ಯಾಧಿಪತಿಯ ತೆರೆ ಹಿಂದೆ ಕೆಲಸ ಮಾಡುವವವರು ಸೃಷ್ಟಿಸಲಿಲ್ಲವೇಕೆ?

3. ಕಲರ್ಸ್ ಕನ್ನಡದವರೇ, ನಿಮಗೆ ನಿಜಕ್ಕೂ ಕರ್ನಾಟಕದ ನೆರಪೀಡಿತರಿಗೆ ಸಹಾಯ ಮಾಡುವ ಉದ್ದೇಶವಿದ್ದರೆ ಇಡೀ ಬಹುಮಾನದ ಮೊತ್ತ ಒಂದು ಕೋಟಿಯನ್ನೇ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಬಹುದಿತ್ತು ಅಲ್ಲವಾ? ಆದರೆ, ನಿಮ್ಮ ಉದ್ದೇಶ ಇಬ್ಬರು ಹೋಪ್‍ ಲೆಸ್ ಸಂಸದರು ಮತ್ತು ಅವರ ಗುರು ಮೋದಿಗೆ ಪ್ರಚಾರ ಕೊಡುವುದೇ ಆಗಿತ್ತಲ್ಲವಾ?

ಒಟ್ಟಿನಲ್ಲಿ ಇಬ್ಬರು ಸಂಸದರನ್ನು ಇಟ್ಟುಕೊಂಡು ಕಾರ್ಯಕ್ರಮ ಮಾಡಲು ಹೋಗಿ ಕಲರ್ಸ್ ಬಣ್ಣ ಬಯಲಾಗಿದೆ. ಝೀ ಟಿವಿ ಡ್ರಾಮಾ ಜ್ಯೂನಿಯರ್ಸ್‍ನಲ್ಲಿ ಹಲವಾದರೂ ಪುಟ್ಟ ಮಕ್ಕಳ ಟ್ಯಾಲೆಂಟು ಗುರುತಿಸಲ್ಪಡುತ್ತಿದೆ. ಆದರೆ, ಕಲರ್ಸ್‍ನವರೇ ನೀವು ಈ ಇಬ್ಬರು ‘ಪಟ್ಟ’ ಸಂಸದರ ಹಿಂದೆ ಬೀಳುವ ಮೂಲಕ ಕೋಟ್ಯಧಿಪತಿಯಲ್ಲಿ ಡ್ರಾಮಾ ಜ್ಯೂನಿಯರ್ಸ್ ತಂದು ಬಿಟ್ಟಿರಲ್ಲ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...