Homeಕರ್ನಾಟಕಕೋಟ್ಯಧಿಪತಿಯಲ್ಲಿ ಡ್ರಾಮಾ ಜ್ಯೂನಿಯರ್ಸ್!: ಪ್ರವಾಹ ಪರಿಹಾರಕ್ಕೆ ಪ್ರತಾಪ್, ತೇಜಸ್ವಿ ಗೆದ್ದ 12 ಲಕ್ಷ ಸಾಕೇ?

ಕೋಟ್ಯಧಿಪತಿಯಲ್ಲಿ ಡ್ರಾಮಾ ಜ್ಯೂನಿಯರ್ಸ್!: ಪ್ರವಾಹ ಪರಿಹಾರಕ್ಕೆ ಪ್ರತಾಪ್, ತೇಜಸ್ವಿ ಗೆದ್ದ 12 ಲಕ್ಷ ಸಾಕೇ?

ರವಿವಾರ ಕಲರ್ಸ್ ಕನ್ನಡ ಟಿವಿಯ ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಲ್ಲಿ ಸಂಸದರಾದ ಪ್ರತಾಪ್ ಸಿಂಹ ಮತ್ತು ತೇಜಸ್ವಿ ಸೂರ್ಯ ಪಾಲ್ಗೊಂಡಿದ್ದರು. ಒಂಥರಾ ಇವರಿಬ್ಬರ ನಾಟಕೀಯತ ನೋಡಿದಾಗ ‘ಡ್ರಾಮಾ ಜ್ಯೂನಿಯರ್ಸ್’ ನೆನಪಾಗಿತು.

- Advertisement -
- Advertisement -

ಕೋಟ್ಯಧಿಪತಿಯಲ್ಲಿ ಡ್ರಾಮಾ ಜ್ಯೂನಿಯರ್ಸ್ ! – ಹೆಡ್ಡಿಂಗ್ ನೋಡಿ ನಿಮಗೆ ಅನಿಸಬಹುದು: ಇದೇನಿದು ಕಲರ್ಸ್ ಟಿವಿ ಕಾರ್ಯಕ್ರಮಕ್ಕೆ ಝೀ ಟಿವಿಯ ಕಾರ್ಯಕ್ರಮದ ಟೈಟಲ್ಲು ಸೇರಿಸಿದ್ದಾರೆಂದು? ಕಲರ್ಸ್, ಝೀ ಎಲ್ಲ ಮೋದಿಯ ಆರಾಧಕರೇ ಎಂಬುದನ್ನು ಸೂಚ್ಯವಾಗಿ ಹೇಳಲಷ್ಟೇ ಇದನ್ನು ಬಳಸಿದ್ದೇವೆ ಅಷ್ಟೇ.

ಈಗ ವಿಷಯಕ್ಕೆ ಬರೋಣ. ಮೈಸೂರು-ಕೊಡಗಿನ ಸಂಸದ ಪ್ರತಾಪ್‍ಸಿಂಹ ಮತ್ತು ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ ನಿನ್ನೆ ರವಿವಾರ ಕಲರ್ಸ್ ಟಿವಿಯ ಕೋಟ್ಯಧಿಪತಿಯಲ್ಲಿ ಸಿಕ್ಕಾಪಟ್ಟೆ ಟ್ಯಾಲೆಂಟ್ ತೋರಿಸಿ ಹನ್ನೆರಡೂವರೆ ಲಕ್ಷ ಗೆದ್ದಿದ್ದಾರೆ ಮತ್ತು ಅದನ್ನು ನೆರೆಪ್ರವಾಹ ಪೀಡಿತರಿಗಾಗಿ ಮುಖ್ಯಮಂತ್ರಿ ನಿಧಿಗೆ ಕೊಡುವುದಾಗಿ ಘೋಷಿಸಿದ್ದಾರೆ. ಓಕ, ವೆಲ್ ಡನ್!

ಆದರೆ, ನಾವು ಇಲ್ಲಿ ಪ್ರಸ್ತಾಪಿಸುತ್ತಿರುವುದು ಇಡೀ ಕಾರ್ಯಕ್ರಮದ ಹಿಂದೆ ಒಂದು ಹಿಡನ್ ಅಜೆಂಡಾ ಇತ್ತು ಮತ್ತು ಈ ಇಬ್ಬರು ಸಂಸದರು ಕಾರ್ಯಕ್ರಮದ ಉದ್ದಕ್ಕೂ ಡ್ರಾಮಾ ಮಾಡುತ್ತಲೇ ಬಂದರು ಎನ್ನುವುದು. ಇಲ್ಲಿ ಕಾರ್ಯಕ್ರಮದ ಸಂಯೋಜಕ ಪುನೀತ್ ರಾಜಕುಮಾರ್ ಕೇವಲ ಒಬ್ಬ ನಿರೂಪಕರಷ್ಟೇ. ಇಡೀ ಕಾರ್ಯಕ್ರಮದ ಸ್ಕ್ರಿಪ್ಟ್ ಮೊದಲೇ ರೆಡಿ ಆಗಿತ್ತು (ಸೆಲೆಬ್ರಿಟಿಗಳು ಭಾಗವಹಿಸುವ ಎಲ್ಲ ರಿಯಾಲಿಟಿ ಶೋ ಗಳ ಸ್ಕ್ರಿಪ್ಟ್ ಕೂಡ ಮೊದಲೇ ಸಿದ್ದವಾಗಿರುತ್ತವೆ).

ಹಾಳಾಗಿ ಹೋಗಲಿ ಇವರೆಲ್ಲ. ನಮ್ಮ ಪ್ರಶ್ನೆಗಳಿಷ್ಟೇ:
1. ನೆರೆಪೀಡಿತರಿಗೆ ಸೌಕರ್ಯ ಕಲ್ಪಿಸಲು ಕೇಂದ್ರ ಸರ್ಕಾರ ಉದಾಸೀನ ತೋರುತ್ತಿರುವಾಗ ಈ ಇಬ್ಬರು ಸಂಸದರು ಕೋಟ್ಯಧಿಪತಿಯಲ್ಲಿ ಬಂದು 12 ಚಿಲ್ಲರೆ ಲಕ್ಷ ಗೆಲ್ಲುವುದು ಸಾಕೇ? ತಮ್ಮದೇ ಕೇಂದ್ರ ಸರ್ಕಾರದ ಮೇಲೆ, ಅದೂ ನಮ್ಮದೇ ರಾಜ್ಯದ ನಾಲ್ಕು ಕೇಂದ್ರ ಸಚಿವರಿರುವ ಕೇಂದ್ರಕ್ಕೆ ಮನವಿ ಮಾಡಿ ಅನುದಾನ ತರಲು ಇಲ್ಲಿವರೆಗೂ ಶ್ರಮಿಸಲಿಲ್ಲವೇಕೆ?

2. ಕಾರ್ಯಕ್ರಮದ ಒಂದು ಹಂತದಲ್ಲಿ ಸಂಸದ ಪ್ರತಾಪಸಿಂಹ ಹೇಳಿದರು: ‘ಪ್ರಾಮಾಣಿಕ ಮತ್ತು ಗೌರವಾನ್ವಿತ ಸಂಸದರಿಗೆ ನೀಡುವ ಸಂಬಳ ಯಾತಕ್ಕೂ ಸಾಲುತ್ತಿರಲಿಲ್ಲ. ಆಗ 2.09 ಲಕ್ಷವಿತ್ತು. ನಾನು ಇದನ್ನು ಹೆಚ್ಚಿಸಬೇಕೆಂದು 85 ಸಂಸದರ ಸಹಿ ಮಾಡಿಸಿ ಮೋದಿಯವರಿಗೆ ಸಲ್ಲಿಸಿದ್ದೆ. ಅವರು 80 ಸಾವಿರ ಹೆಚ್ಚುವರಿ ಮಾಡಿದರು. ಈಗ ಸಂಸದರ ಸಂಭಾವನೆ 2.89 ಲಕ್ಷ.  ಅಯ್ಯೋ ಪ್ರತಾಪ ಮತ್ತು ತೇಜಸ್ವಿ 85 ಸಂಸದರನ್ನು ಬಿಡಿ, ನೀವಿಬ್ದರು ಸೇರಿದಂತೆ ಕರ್ನಾಟದಕ 28 ಸಂಸದರ ಸಹಿ ಮಾಡಿಸಿಕೊಂಡು ನೆರೆ ಪರಿಹಾರಕ್ಕೆ ‘ಚಂದ್ರಮುಖಿ’ ಪ್ರಧಾನಿಯ ಮುಂದೆ ಒಂದು ಪ್ರಸ್ತಾಪ ಇಡಬಹುದಿತ್ತಲ್ಲ? ಇಂತಹ ಪ್ರಶ್ನೆಯನ್ನು ಕೋಟ್ಯಾಧಿಪತಿಯ ತೆರೆ ಹಿಂದೆ ಕೆಲಸ ಮಾಡುವವವರು ಸೃಷ್ಟಿಸಲಿಲ್ಲವೇಕೆ?

3. ಕಲರ್ಸ್ ಕನ್ನಡದವರೇ, ನಿಮಗೆ ನಿಜಕ್ಕೂ ಕರ್ನಾಟಕದ ನೆರಪೀಡಿತರಿಗೆ ಸಹಾಯ ಮಾಡುವ ಉದ್ದೇಶವಿದ್ದರೆ ಇಡೀ ಬಹುಮಾನದ ಮೊತ್ತ ಒಂದು ಕೋಟಿಯನ್ನೇ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಬಹುದಿತ್ತು ಅಲ್ಲವಾ? ಆದರೆ, ನಿಮ್ಮ ಉದ್ದೇಶ ಇಬ್ಬರು ಹೋಪ್‍ ಲೆಸ್ ಸಂಸದರು ಮತ್ತು ಅವರ ಗುರು ಮೋದಿಗೆ ಪ್ರಚಾರ ಕೊಡುವುದೇ ಆಗಿತ್ತಲ್ಲವಾ?

ಒಟ್ಟಿನಲ್ಲಿ ಇಬ್ಬರು ಸಂಸದರನ್ನು ಇಟ್ಟುಕೊಂಡು ಕಾರ್ಯಕ್ರಮ ಮಾಡಲು ಹೋಗಿ ಕಲರ್ಸ್ ಬಣ್ಣ ಬಯಲಾಗಿದೆ. ಝೀ ಟಿವಿ ಡ್ರಾಮಾ ಜ್ಯೂನಿಯರ್ಸ್‍ನಲ್ಲಿ ಹಲವಾದರೂ ಪುಟ್ಟ ಮಕ್ಕಳ ಟ್ಯಾಲೆಂಟು ಗುರುತಿಸಲ್ಪಡುತ್ತಿದೆ. ಆದರೆ, ಕಲರ್ಸ್‍ನವರೇ ನೀವು ಈ ಇಬ್ಬರು ‘ಪಟ್ಟ’ ಸಂಸದರ ಹಿಂದೆ ಬೀಳುವ ಮೂಲಕ ಕೋಟ್ಯಧಿಪತಿಯಲ್ಲಿ ಡ್ರಾಮಾ ಜ್ಯೂನಿಯರ್ಸ್ ತಂದು ಬಿಟ್ಟಿರಲ್ಲ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...