Homeಕರ್ನಾಟಕಬಸವಣ್ಣನ ಆಶೀರ್ವಾದವಿರುವಾಗ ಕನ್ನಡಿಗರಿಗೆ ಮೋದಿ ಆಶೀರ್ವಾದ ಬೇಕಿಲ್ಲ: ನಡ್ಡಾ ಹೇಳಿಕೆಗೆ ಗುಡುಗಿದ ಪ್ರಿಯಾಂಕಾ ಗಾಂಧಿ

ಬಸವಣ್ಣನ ಆಶೀರ್ವಾದವಿರುವಾಗ ಕನ್ನಡಿಗರಿಗೆ ಮೋದಿ ಆಶೀರ್ವಾದ ಬೇಕಿಲ್ಲ: ನಡ್ಡಾ ಹೇಳಿಕೆಗೆ ಗುಡುಗಿದ ಪ್ರಿಯಾಂಕಾ ಗಾಂಧಿ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಿಗ್ಗಾಂವಿಯಲ್ಲಿ ಮಾತನಾಡಿದ್ದ ಜೆ.ಪಿ ನಡ್ಡಾ, ‘ರಾಜ್ಯದ ಜನತೆ ಪ್ರಧಾನಿ ಮೋದಿ ಅವರ ಆಶೀರ್ವಾದದಿಂದ ವಂಚಿತರಾಗಬಾರದು’ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ತಿರುಗೇಟು ನೀಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಬಸವಣ್ಣನ ಆಶೀರ್ವಾದವಿರುವಾಗ ಕನ್ನಡಿಗರಿಗೆ ಮೋದಿ ಆಶೀರ್ವಾದ ಬೇಕಿಲ್ಲ ಎಂದು ಗುಡುಗಿದ್ದಾರೆ.

ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ಹೆಳವರ ಹುಂಡಿಯಲ್ಲಿ ಮಂಗಳವಾರ ನಡೆದ ಪ್ರಚಾರಸಭೆಯಲ್ಲಿ ಮಾತನಾಡಿದ ಅವರು, ”ಮತ ಹಾಕದಿದ್ದರೆ ನರೇಂದ್ರ ಮೋದಿಯವರ ಆಶೀರ್ವಾದ ಸಿಗುವುದಿಲ್ಲವೆಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಅಹಂಕಾರದಿಂದ ಹೇಳಿದ್ದಾರೆ. ಇದು ಬಸವಣ್ಣ, ಕುವೆಂಪು ಅವರ‌ ನಾಡು. ಅವರ ಆಶೀರ್ವಾದವಿರುವಾಗ ಮೋದಿ ಆಶೀರ್ವಾದ ಬೇಕಾಗಿಲ್ಲ” ಎಂದು ತಿರುಗೇಟು ನೀಡಿದ್ದಾರೆ.

”ಈ ಚುನಾವಣೆಯಲ್ಲಿ ಮೋದಿ ಸೇರಿದಂತೆ ಯಾವ ನಾಯಕರೂ ಮುಖ್ಯರಲ್ಲ. ಕರ್ನಾಟಕದ ಜನರಷ್ಟೇ ಮುಖ್ಯ. ನಿಮ್ಮ ಅನುಭವದ ಮೇಲೆ, ಯೋಚಿಸಿ ಮತ ಚಲಾಯಿಸಿ. ಲೂಟಿ‌ಕೋರ ಸರ್ಕಾರವನ್ನು ತೆಗೆದು ಹಾಕಿ. ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ” ಎಂದರು.

ನಂದಿನಿ ವರ್ಸಸ್‌ ಅಮೂಲ್‌ ಕುರಿತು ಪ್ರಸ್ತಾಪಿಸಿದ ಅವರು, ”ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ‘ನಂದಿನಿ’ ಬ್ರ್ಯಾಂಡ್‌ಗೆ ಬಲ ತುಂಬುವ ಕೆಲಸ ಮಾಡಲಾಗುವುದು. ಹೊರರಾಜ್ಯದ ಹಾಲು ಉತ್ಪಾದಕ ಸಹಕಾರಿ ಸಂಘಕ್ಕೆ ರಾಜ್ಯದಲ್ಲಿ ಹಾಲು ಮಾರಲು ಅವಕಾಶ ನೀಡುವುದಿಲ್ಲ” ಎಂದೂ ಹೇಳಿದರು.

”ರಾಜ್ಯದಲ್ಲಿ ಈ ಹಿಂದೆ ಹೆಚ್ಚುವರಿ ಹಾಲು ಉತ್ಪಾದನೆಯಾಗುತ್ತಿತ್ತು. ಕೆಎಂಎಫ್‌ ಅನ್ನು ದುರ್ಬಲಗೊಳಿಸಲು ಬೇಕಂತಲೇ ಹಾಲು ಉತ್ಪಾದನೆ ಕುಂಠಿತವಾಗುವಂತೆ ನೋಡಿಕೊಳ್ಳಲಾಗಿದೆ” ಎಂದು ಪ್ರಿಯಾಂಕಾ ದೂರಿದರು.

ಇದನ್ನೂ ಓದಿ: “ರಾಜ್ಯದ ಜನತೆ ಪ್ರಧಾನಿ ಮೋದಿ ಅವರ ಆಶೀರ್ವಾದದಿಂದ ವಂಚಿತರಾಗಬಾರದು”: ಜೆ.ಪಿ ನಡ್ಡಾ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

ಮೋದಿ ಆಶೀರ್ವಾದದ ಹೇಳಿಕೆಗೆ ಅಂದು ಕಾಂಗ್ರೆಸ್ ಕೆಂಡವಾಗಿತ್ತು. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಾರದಿದ್ದರೆ ಕೇಂದ್ರದಿಂದ ಅನುದಾನ ನೀಡುವುದಿಲ್ಲ ಎಂಬ ಅರ್ಥವೇ ಎಂದು ಕಾಂಗ್ರೆಸ್ ಪ್ರಶ್ನಿಸಿತ್ತು.

”ಮೋದಿಯ ಆಶೀರ್ವಾದ ಬೇಕೆಂದರೆ ಬಿಜೆಪಿಗೆ ಮತ ಹಾಕಿ” ಇದು ಜೆ.ಪಿ ನಡ್ಡಾ ಅವರು ಕನ್ನಡಿಗರಿಗೆ ಹಾಕುತ್ತಿರುವ ಬೆದರಿಕೆ. ಬಿಜೆಪಿ ಸರ್ವಾಧಿಕಾರವನ್ನು ಜಾರಿಗೊಳಿಸುತ್ತಿರುವುದಕ್ಕೆ ಈ ಮಾತುಗಳೇ ನಿದರ್ಶನ. ಆಶೀರ್ವಾದ ಮಾಡಬೇಕಿರುವುದು ಜನರೇ ಹೊರತು, ಮೋದಿಯಲ್ಲ. ಒಕ್ಕೂಟ ವ್ಯವಸ್ಥೆ & ಪ್ರಜಾಪ್ರಭುತ್ವದ ಮೇಲೆ ಬಿಜೆಪಿಗೆ ಕಿಂಚಿತ್ ಗೌರವವಿಲ್ಲ” ಎಂದು ಕಾಂಗ್ರೆಸ್ ಟೀಕಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...