Homeಮುಖಪುಟವಿಕಿಪೀಡಿಯಾದಲ್ಲಿ ಕನ್ನಡಿಗರು ಅತಿ ಹೆಚ್ಚು ಹುಡುಕಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ!

ವಿಕಿಪೀಡಿಯಾದಲ್ಲಿ ಕನ್ನಡಿಗರು ಅತಿ ಹೆಚ್ಚು ಹುಡುಕಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ!

ಅಂಬೇಡ್ಕರ್ ಕುರಿತು 1,39,836 ಕನ್ನಡಿಗರು ಹುಡುಕಿದ್ದಾರೆ ಎಂದು ವಿಕಿಪೀಡಿಯಾ ತಿಳಿಸಿದೆ.

- Advertisement -
- Advertisement -

ಗೂಗಲ್‌ನಲ್ಲಿ ಯಾವುದೇ ವಿಷಯ, ವ್ಯಕ್ತಿ, ಸ್ಥಳದ ಬಗ್ಗೆ ಹೆಚ್ಚಿನ ಮಾಹಿತಿ ಬಯಸುವವರು ಆಧರಿಸಿರುವುದು ವಿಕಿಪೀಡಿಯಾವನ್ನು. ಅದು ಜಾಗತಿಕವಾಗಿ ಇಂಟರ್ನೆಟ್ ಬಳಕೆದಾರರ ಕುರಿತಂತೆ ದತ್ತಾಂಶ ವಿಶ್ಲೇಷಣೆ ನಡೆಸಿ ಕುತೂಹಲಕಾರಿ ವಿಷಯಗಳನ್ನು ಹೊರಗೆಡವಿದೆ. ಅದು ಜಾಗತಿಕವಾಗಿ ಹೆಚ್ಚು ಹುಡುಕಾಟ ನಡೆಸಿದ ವಿಷಯ, ಭಾಷೆ, ಜನಸಂಖ್ಯೆ, ದೇಶಗಳ ಕುರಿತ ದತ್ತಾಂಶಗಳನ್ನು ಬಿಡುಗಡೆ ಮಾಡಿದೆ. ಅದರಂತೆ ಕನ್ನಡ ಭಾಷೆಯ ಹುಡುಕಾಟದಲ್ಲಿ ಡಾ. ಅಂಬೇಡ್ಕರ್ ಕುರಿತಂತೆ ಹೆಚ್ಚಿನ ಹುಡುಕಾಟಗಳು ನಡೆದಿವೆ ಎಂದು ಅದರ ದತ್ತಾಂಶ ತೋರಿಸುತ್ತದೆ.

ಅಸ್ಸಾಮೀಗುರು ಕೋವಿಡ್‌19 ಅಂತಲೂ, ಬಂಗಾಳಿ ಭಾಷಿಗರು ಬಾಂಗ್ಲಾದೇಶದ ಬಗ್ಗೆಯೂ, ಹಿಂದಿ ಭಾಷಿಕರು ಕೊರೊನಾ ವೈರಸ್ ಬಗ್ಗೆ, ತಮಿಳರು ಕೆ.ಕಾಮರಾಜ್‌ ಬಗ್ಗೆಯೂ ಹುಡುಕಿದರೆ ಕನ್ನಡಿಗರು ಡಾ.ಬಿ.ಆರ್ ಅಂಬೇಡ್ಕರ್‌ರವರ ಹುಡುಕುವ ಮೂಲಕ ಗಮನ ಸೆಳೆದಿದ್ದಾರೆ.

ಮರಾಠಿಗರು ಶಿವಾಜಿ ಬಗ್ಗೆಯೂ, ಪಂಜಾಬಿಗರು ಗುರು ಗ್ರಂಥ ಸಾಹೇಬ್ ಬಗ್ಗೆ, ಮಲೆಯಾಳಿಗರು ವೈಕ್ಕಂ ಮಹಮ್ಮದ್ ಬಶೀರ್ ಬಗ್ಗೆ ಮತ್ತು ಒರಿಯನ್ನರು ಫಕೀರ್ ಮೋಹನ್ ಸೆನಪತಿ ಬಗ್ಗೆ ಹುಡುಕಿದ್ದಾರೆ ಎಂದು ವಿಕಿಪೀಡಿಯಾ ತಿಳಿಸಿದೆ.

ತೆಲುಗು ಭಾಷಿಕರು ಕೋಳಿ ಪಂದ್ಯ ನಡೆಸಲು ಹೇಗೆ ಕೋಳಿಗಳನ್ನ ಸಾಕಬೇಕು ಎಂಬುದರ ಬಗ್ಗೆ ಹೆಚ್ಚು ಹುಡುಕಿದ್ದಾರೆ.

ಕನ್ನಡ ಝೀ ಕನ್ನಡ ಚಾನೆಲ್‌ನಲ್ಲಿ ಡಾ.ಅಂಬೇಡ್ಕರರ ಜೀವನ ಚರಿತ್ರೆ ಕುರಿತ ‘ಮಹಾನಾಯಕ’ ಎಂಬ ಧಾರಾವಾಹಿ ಬಿಡುಗಡೆಯಾಗಿದ್ದು ಬಹಳಷ್ಟು ಜನರ ಮೆಚ್ಚುಗೆ ಗಳಿಸಿದೆ. ಧಾರವಾಹಿಯ ಬಗ್ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬಂದಿದ್ದು ಹಲವಾರು ಜನ ಧಾರವಾಹಿಗಾಗಿ ಕಾದು ಕುಳಿತಿದ್ದಾರೆ. ಹಲವು ಗ್ರಾಮಗಳಲ್ಲಿ ಮಹಾನಾಯಕ ಧಾರವಾಹಿಯಲ್ಲಿ ಬಾಲನಟನಾಗಿ ಅಂಬೇಡ್ಕರ್ ಪಾತ್ರ ವಹಿಸಿರುವ ಆಯುದ್ ಬಾನುಶಾಲಿ ಎಂಬ ಬಾಲಕನ ಪೋಸ್ಟರ್ ಕಟೌಟ್‌ ಹಾಕಿ ಸಂಭ್ರಮಿಸಿದ್ದಾರೆ. ಸದ್ಯಕ್ಕೆ ಕನ್ನಡದಲ್ಲಿ ಅತಿ ಹೆಚ್ಚು ಟಿಆರ್‌ಪಿ ಪಡೆಯುತ್ತಿರುವ ಧಾರವಾಹಿ ಇದಾಗಿದ್ದು, ಈ ಹಿನ್ನೆಲೆಯಲ್ಲಿಯೂ ಹಲವು ಕನ್ನಡಿಗರು ಅಂಬೇಡ್ಕರ್ ಕುರಿತು ವಿಕಿಪೀಡಿಯಾದಲ್ಲಿ ಹುಡುಕಿರುವ ಸಾಧ್ಯತೆಯಿದೆ.

ಅಂಬೇಡ್ಕರ್ ಕುರಿತು 1,39,836 ಕನ್ನಡಿಗರು ಹುಡುಕಿದ್ದಾರೆ ಎಂದು ವಿಕಿಪೀಡಿಯಾ ತಿಳಿಸಿದೆ.

ಭಾರತೀಯ ಅಂತರ್ಜಾಲ ಬಳಕೆದಾರರಿಗೆ ಸಂಬಂಧಿಸಿದಂತೆ ಕೆಲವು ಸ್ವಾರಸ್ಯಕರ ವಿಷಯಗಳನ್ನು ಲೈವ್‌ ಮಿಂಟ್‌ ಪತ್ರಿಕೆ ಪ್ರಕಟಿಸಿದೆ. ಭಾರತದಲ್ಲಿ 10 ದಶಲಕ್ಷಕ್ಕೂ ಹೆಚ್ಚು ಸ್ಥಳೀಯ ಭಾಷಿಕರನ್ನು ಹೊಂದಿರುವ ಮತ್ತು ತಮ್ಮದೇ ಆದ ವಿಕಿಪೀಡಿಯಾ ಆವೃತ್ತಿಯನ್ನು ಹೊಂದಿರುವ ಎಲ್ಲಾ 14 ಭಾಷೆಗಳನ್ನು ಈ ವಿಶ್ಲೇಷಣೆಯಲ್ಲಿ ಪರಿಗಣಿಸಲಾಗಿದೆ.

ಭಾರತೀಯ ಭಾಷೆಗಳು ವೈವಿಧ್ಯಮಯ ಉನ್ನತ ವಿಕಿಪೀಡಿಯ ಲೇಖನಗಳನ್ನು ಹೊಂದಿದ್ದವು. ಅವುಗಳಲ್ಲಿ ಭಾಷಾವಾರು ಹುಡುಕಾಟ ನಡೆಸಿರುವ ವಿಷಯಗಳ ಕುರಿತ ದತ್ತಾಂಶ ಇಲ್ಲಿದೆ.

ಈ ವರ್ಷ, ಇಲ್ಲಿಯವರೆಗೆ, ಭಾರತೀಯ ಅಂತರ್ಜಾಲ ಬಳಕೆದಾರರು ವಿಕಿಪೀಡಿಯಾದ ಪುಟಗಳನ್ನು ತಮ್ಮ ಸ್ಥಳೀಯ ಭಾಷೆಗಳಲ್ಲಿ ಸುಮಾರು 500 ದಶಲಕ್ಷಕ್ಕೂ ಹೆಚ್ಚು ಬಾರಿ ಬ್ರೌಸ್ ಮಾಡಿದ್ದಾರೆ.

14 ಪ್ರಮುಖ ಭಾರತೀಯ ಭಾಷೆಗಳಲ್ಲಿ 11 ಭಾಷೆಗಳಲ್ಲಿ ವಿಕಿಪೀಡಿಯ ಓದುಗರ ಸಂಖ್ಯೆ ಈ ವರ್ಷ ಗಮನಾರ್ಹವಾಗಿ ಹೆಚ್ಚಾಗಿದೆ ಎನ್ನಲಾಗಿದೆ.

ಇದರಲ್ಲಿ ಹುಡುಕಾಟದ ವಿಷಯಗಳ ವ್ಯಾಪ್ತಿಯು ಭಾಷೆಗನುಗುಣವಾಗಿ ವ್ಯಾಪಕವಾಗಿ ಬದಲಾಗಿರುವುದು ಕಂಡುಬಂದಿದೆ. ಮರಾಠಿ ಓದುಗರು ಮಹಾರಾಷ್ಟ್ರದ ಐತಿಹಾಸಿಕ ಐಕಾನ್ ಗಳ ಬಗ್ಗೆ ಸಾಕಷ್ಟು ಓದಿದ್ದರೆ, ಪಂಜಾಬಿ ಮತ್ತು ಉರ್ದು ಓದುಗರು ಧರ್ಮದ ಬಗ್ಗೆ ಹೆಚ್ಚು ಓದಿದ್ದಾರೆ.

ತಮಿಳು, ಅಸ್ಸಾಮಿ, ಒಡಿಯಾ, ಮತ್ತು ಕನ್ನಡ ಓದುಗರು ತಮ್ಮದೇ ಭಾಷೆ ಮತ್ತು ಸಾಹಿತ್ಯದ ಬಗ್ಗೆ ಹೆಚ್ಚು ಓದುತ್ತಾರೆ. ಭೋಜ್‌ಪುರಿ ಓದುಗರು ಲೈಂಗಿಕತೆಯ ಬಗ್ಗೆ ಹೆಚ್ಚು ಹುಡುಕಾಟ ನಡೆಸಿದ್ದಾರೆ ಎಂದು ಈ ಸಮೀಕ್ಷೆಯಿಂದ ತಿಳಿದುಬಂದಿದೆ.

ಭಾರತೀಯ ಭಾಷೆಗಳಲ್ಲಿಯೇ ಅತಿಹೆಚ್ಚು ಹುಡುಕಾಟವನ್ನು ಹಿಂದಿಯಲ್ಲಿ ನಡೆಸಲಾಗಿದೆ. ಸುಮಾರು 8,53,987 ಹುಡುಕಾಟಗಳು ಕೊರೊನಾ ವೈರಸ್ ಗೆ ಸಂಬಂಧಿಸಿದಂತೆ ದಾಖಲಾಗಿವೆ. ಅತಿ ಕಡಿಮೆ ಹುಡುಕಾಟಗಳನ್ನು ಒಡಿಯಾ ಭಾಷೆಯಲ್ಲಿ ಸುಮಾರು 10,087 ಹುಡುಕಾಟಗಳು ಫಕೀರ್ ಮೋಹನ್ ಸೇನಪತಿ ಎಂಬುವವರ ಕುರಿತು ದಾಖಲಾಗಿವೆ.

ಉಳಿದ ಬೇರೆ ಬೇರೆ ರಾಜ್ಯಗಳಲ್ಲಿ  ಧರ್ಮ, ಸಾಹಿತ್ಯ, ಪ್ರಮುಖ ವ್ಯಕ್ತಿಗಳು ಮುಂತಾದ ವಿಷಯಗಳ ಬಗ್ಗೆ ಹುಡುಕಾಟ ನಡೆದಿದೆ.


ಇದನ್ನೂ ಓದಿ: ದಲಿತನೊಬ್ಬ ಗ್ರಾ.ಪಂ ಮುಖ್ಯಸ್ಥನಾದುದ್ದನ್ನು ಸಹಿಸದ ಮೇಲ್ಜಾತಿಗಳು: ಗುಂಡಿಕ್ಕಿ ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...