Homeಮುಖಪುಟವಿಕಿಪೀಡಿಯಾದಲ್ಲಿ ಕನ್ನಡಿಗರು ಅತಿ ಹೆಚ್ಚು ಹುಡುಕಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ!

ವಿಕಿಪೀಡಿಯಾದಲ್ಲಿ ಕನ್ನಡಿಗರು ಅತಿ ಹೆಚ್ಚು ಹುಡುಕಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ!

ಅಂಬೇಡ್ಕರ್ ಕುರಿತು 1,39,836 ಕನ್ನಡಿಗರು ಹುಡುಕಿದ್ದಾರೆ ಎಂದು ವಿಕಿಪೀಡಿಯಾ ತಿಳಿಸಿದೆ.

- Advertisement -
- Advertisement -

ಗೂಗಲ್‌ನಲ್ಲಿ ಯಾವುದೇ ವಿಷಯ, ವ್ಯಕ್ತಿ, ಸ್ಥಳದ ಬಗ್ಗೆ ಹೆಚ್ಚಿನ ಮಾಹಿತಿ ಬಯಸುವವರು ಆಧರಿಸಿರುವುದು ವಿಕಿಪೀಡಿಯಾವನ್ನು. ಅದು ಜಾಗತಿಕವಾಗಿ ಇಂಟರ್ನೆಟ್ ಬಳಕೆದಾರರ ಕುರಿತಂತೆ ದತ್ತಾಂಶ ವಿಶ್ಲೇಷಣೆ ನಡೆಸಿ ಕುತೂಹಲಕಾರಿ ವಿಷಯಗಳನ್ನು ಹೊರಗೆಡವಿದೆ. ಅದು ಜಾಗತಿಕವಾಗಿ ಹೆಚ್ಚು ಹುಡುಕಾಟ ನಡೆಸಿದ ವಿಷಯ, ಭಾಷೆ, ಜನಸಂಖ್ಯೆ, ದೇಶಗಳ ಕುರಿತ ದತ್ತಾಂಶಗಳನ್ನು ಬಿಡುಗಡೆ ಮಾಡಿದೆ. ಅದರಂತೆ ಕನ್ನಡ ಭಾಷೆಯ ಹುಡುಕಾಟದಲ್ಲಿ ಡಾ. ಅಂಬೇಡ್ಕರ್ ಕುರಿತಂತೆ ಹೆಚ್ಚಿನ ಹುಡುಕಾಟಗಳು ನಡೆದಿವೆ ಎಂದು ಅದರ ದತ್ತಾಂಶ ತೋರಿಸುತ್ತದೆ.

ಅಸ್ಸಾಮೀಗುರು ಕೋವಿಡ್‌19 ಅಂತಲೂ, ಬಂಗಾಳಿ ಭಾಷಿಗರು ಬಾಂಗ್ಲಾದೇಶದ ಬಗ್ಗೆಯೂ, ಹಿಂದಿ ಭಾಷಿಕರು ಕೊರೊನಾ ವೈರಸ್ ಬಗ್ಗೆ, ತಮಿಳರು ಕೆ.ಕಾಮರಾಜ್‌ ಬಗ್ಗೆಯೂ ಹುಡುಕಿದರೆ ಕನ್ನಡಿಗರು ಡಾ.ಬಿ.ಆರ್ ಅಂಬೇಡ್ಕರ್‌ರವರ ಹುಡುಕುವ ಮೂಲಕ ಗಮನ ಸೆಳೆದಿದ್ದಾರೆ.

ಮರಾಠಿಗರು ಶಿವಾಜಿ ಬಗ್ಗೆಯೂ, ಪಂಜಾಬಿಗರು ಗುರು ಗ್ರಂಥ ಸಾಹೇಬ್ ಬಗ್ಗೆ, ಮಲೆಯಾಳಿಗರು ವೈಕ್ಕಂ ಮಹಮ್ಮದ್ ಬಶೀರ್ ಬಗ್ಗೆ ಮತ್ತು ಒರಿಯನ್ನರು ಫಕೀರ್ ಮೋಹನ್ ಸೆನಪತಿ ಬಗ್ಗೆ ಹುಡುಕಿದ್ದಾರೆ ಎಂದು ವಿಕಿಪೀಡಿಯಾ ತಿಳಿಸಿದೆ.

ತೆಲುಗು ಭಾಷಿಕರು ಕೋಳಿ ಪಂದ್ಯ ನಡೆಸಲು ಹೇಗೆ ಕೋಳಿಗಳನ್ನ ಸಾಕಬೇಕು ಎಂಬುದರ ಬಗ್ಗೆ ಹೆಚ್ಚು ಹುಡುಕಿದ್ದಾರೆ.

ಕನ್ನಡ ಝೀ ಕನ್ನಡ ಚಾನೆಲ್‌ನಲ್ಲಿ ಡಾ.ಅಂಬೇಡ್ಕರರ ಜೀವನ ಚರಿತ್ರೆ ಕುರಿತ ‘ಮಹಾನಾಯಕ’ ಎಂಬ ಧಾರಾವಾಹಿ ಬಿಡುಗಡೆಯಾಗಿದ್ದು ಬಹಳಷ್ಟು ಜನರ ಮೆಚ್ಚುಗೆ ಗಳಿಸಿದೆ. ಧಾರವಾಹಿಯ ಬಗ್ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬಂದಿದ್ದು ಹಲವಾರು ಜನ ಧಾರವಾಹಿಗಾಗಿ ಕಾದು ಕುಳಿತಿದ್ದಾರೆ. ಹಲವು ಗ್ರಾಮಗಳಲ್ಲಿ ಮಹಾನಾಯಕ ಧಾರವಾಹಿಯಲ್ಲಿ ಬಾಲನಟನಾಗಿ ಅಂಬೇಡ್ಕರ್ ಪಾತ್ರ ವಹಿಸಿರುವ ಆಯುದ್ ಬಾನುಶಾಲಿ ಎಂಬ ಬಾಲಕನ ಪೋಸ್ಟರ್ ಕಟೌಟ್‌ ಹಾಕಿ ಸಂಭ್ರಮಿಸಿದ್ದಾರೆ. ಸದ್ಯಕ್ಕೆ ಕನ್ನಡದಲ್ಲಿ ಅತಿ ಹೆಚ್ಚು ಟಿಆರ್‌ಪಿ ಪಡೆಯುತ್ತಿರುವ ಧಾರವಾಹಿ ಇದಾಗಿದ್ದು, ಈ ಹಿನ್ನೆಲೆಯಲ್ಲಿಯೂ ಹಲವು ಕನ್ನಡಿಗರು ಅಂಬೇಡ್ಕರ್ ಕುರಿತು ವಿಕಿಪೀಡಿಯಾದಲ್ಲಿ ಹುಡುಕಿರುವ ಸಾಧ್ಯತೆಯಿದೆ.

ಅಂಬೇಡ್ಕರ್ ಕುರಿತು 1,39,836 ಕನ್ನಡಿಗರು ಹುಡುಕಿದ್ದಾರೆ ಎಂದು ವಿಕಿಪೀಡಿಯಾ ತಿಳಿಸಿದೆ.

ಭಾರತೀಯ ಅಂತರ್ಜಾಲ ಬಳಕೆದಾರರಿಗೆ ಸಂಬಂಧಿಸಿದಂತೆ ಕೆಲವು ಸ್ವಾರಸ್ಯಕರ ವಿಷಯಗಳನ್ನು ಲೈವ್‌ ಮಿಂಟ್‌ ಪತ್ರಿಕೆ ಪ್ರಕಟಿಸಿದೆ. ಭಾರತದಲ್ಲಿ 10 ದಶಲಕ್ಷಕ್ಕೂ ಹೆಚ್ಚು ಸ್ಥಳೀಯ ಭಾಷಿಕರನ್ನು ಹೊಂದಿರುವ ಮತ್ತು ತಮ್ಮದೇ ಆದ ವಿಕಿಪೀಡಿಯಾ ಆವೃತ್ತಿಯನ್ನು ಹೊಂದಿರುವ ಎಲ್ಲಾ 14 ಭಾಷೆಗಳನ್ನು ಈ ವಿಶ್ಲೇಷಣೆಯಲ್ಲಿ ಪರಿಗಣಿಸಲಾಗಿದೆ.

ಭಾರತೀಯ ಭಾಷೆಗಳು ವೈವಿಧ್ಯಮಯ ಉನ್ನತ ವಿಕಿಪೀಡಿಯ ಲೇಖನಗಳನ್ನು ಹೊಂದಿದ್ದವು. ಅವುಗಳಲ್ಲಿ ಭಾಷಾವಾರು ಹುಡುಕಾಟ ನಡೆಸಿರುವ ವಿಷಯಗಳ ಕುರಿತ ದತ್ತಾಂಶ ಇಲ್ಲಿದೆ.

ಈ ವರ್ಷ, ಇಲ್ಲಿಯವರೆಗೆ, ಭಾರತೀಯ ಅಂತರ್ಜಾಲ ಬಳಕೆದಾರರು ವಿಕಿಪೀಡಿಯಾದ ಪುಟಗಳನ್ನು ತಮ್ಮ ಸ್ಥಳೀಯ ಭಾಷೆಗಳಲ್ಲಿ ಸುಮಾರು 500 ದಶಲಕ್ಷಕ್ಕೂ ಹೆಚ್ಚು ಬಾರಿ ಬ್ರೌಸ್ ಮಾಡಿದ್ದಾರೆ.

14 ಪ್ರಮುಖ ಭಾರತೀಯ ಭಾಷೆಗಳಲ್ಲಿ 11 ಭಾಷೆಗಳಲ್ಲಿ ವಿಕಿಪೀಡಿಯ ಓದುಗರ ಸಂಖ್ಯೆ ಈ ವರ್ಷ ಗಮನಾರ್ಹವಾಗಿ ಹೆಚ್ಚಾಗಿದೆ ಎನ್ನಲಾಗಿದೆ.

ಇದರಲ್ಲಿ ಹುಡುಕಾಟದ ವಿಷಯಗಳ ವ್ಯಾಪ್ತಿಯು ಭಾಷೆಗನುಗುಣವಾಗಿ ವ್ಯಾಪಕವಾಗಿ ಬದಲಾಗಿರುವುದು ಕಂಡುಬಂದಿದೆ. ಮರಾಠಿ ಓದುಗರು ಮಹಾರಾಷ್ಟ್ರದ ಐತಿಹಾಸಿಕ ಐಕಾನ್ ಗಳ ಬಗ್ಗೆ ಸಾಕಷ್ಟು ಓದಿದ್ದರೆ, ಪಂಜಾಬಿ ಮತ್ತು ಉರ್ದು ಓದುಗರು ಧರ್ಮದ ಬಗ್ಗೆ ಹೆಚ್ಚು ಓದಿದ್ದಾರೆ.

ತಮಿಳು, ಅಸ್ಸಾಮಿ, ಒಡಿಯಾ, ಮತ್ತು ಕನ್ನಡ ಓದುಗರು ತಮ್ಮದೇ ಭಾಷೆ ಮತ್ತು ಸಾಹಿತ್ಯದ ಬಗ್ಗೆ ಹೆಚ್ಚು ಓದುತ್ತಾರೆ. ಭೋಜ್‌ಪುರಿ ಓದುಗರು ಲೈಂಗಿಕತೆಯ ಬಗ್ಗೆ ಹೆಚ್ಚು ಹುಡುಕಾಟ ನಡೆಸಿದ್ದಾರೆ ಎಂದು ಈ ಸಮೀಕ್ಷೆಯಿಂದ ತಿಳಿದುಬಂದಿದೆ.

ಭಾರತೀಯ ಭಾಷೆಗಳಲ್ಲಿಯೇ ಅತಿಹೆಚ್ಚು ಹುಡುಕಾಟವನ್ನು ಹಿಂದಿಯಲ್ಲಿ ನಡೆಸಲಾಗಿದೆ. ಸುಮಾರು 8,53,987 ಹುಡುಕಾಟಗಳು ಕೊರೊನಾ ವೈರಸ್ ಗೆ ಸಂಬಂಧಿಸಿದಂತೆ ದಾಖಲಾಗಿವೆ. ಅತಿ ಕಡಿಮೆ ಹುಡುಕಾಟಗಳನ್ನು ಒಡಿಯಾ ಭಾಷೆಯಲ್ಲಿ ಸುಮಾರು 10,087 ಹುಡುಕಾಟಗಳು ಫಕೀರ್ ಮೋಹನ್ ಸೇನಪತಿ ಎಂಬುವವರ ಕುರಿತು ದಾಖಲಾಗಿವೆ.

ಉಳಿದ ಬೇರೆ ಬೇರೆ ರಾಜ್ಯಗಳಲ್ಲಿ  ಧರ್ಮ, ಸಾಹಿತ್ಯ, ಪ್ರಮುಖ ವ್ಯಕ್ತಿಗಳು ಮುಂತಾದ ವಿಷಯಗಳ ಬಗ್ಗೆ ಹುಡುಕಾಟ ನಡೆದಿದೆ.


ಇದನ್ನೂ ಓದಿ: ದಲಿತನೊಬ್ಬ ಗ್ರಾ.ಪಂ ಮುಖ್ಯಸ್ಥನಾದುದ್ದನ್ನು ಸಹಿಸದ ಮೇಲ್ಜಾತಿಗಳು: ಗುಂಡಿಕ್ಕಿ ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...