Homeಮುಖಪುಟವಿಕಿಪೀಡಿಯಾದಲ್ಲಿ ಕನ್ನಡಿಗರು ಅತಿ ಹೆಚ್ಚು ಹುಡುಕಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ!

ವಿಕಿಪೀಡಿಯಾದಲ್ಲಿ ಕನ್ನಡಿಗರು ಅತಿ ಹೆಚ್ಚು ಹುಡುಕಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ!

ಅಂಬೇಡ್ಕರ್ ಕುರಿತು 1,39,836 ಕನ್ನಡಿಗರು ಹುಡುಕಿದ್ದಾರೆ ಎಂದು ವಿಕಿಪೀಡಿಯಾ ತಿಳಿಸಿದೆ.

- Advertisement -
- Advertisement -

ಗೂಗಲ್‌ನಲ್ಲಿ ಯಾವುದೇ ವಿಷಯ, ವ್ಯಕ್ತಿ, ಸ್ಥಳದ ಬಗ್ಗೆ ಹೆಚ್ಚಿನ ಮಾಹಿತಿ ಬಯಸುವವರು ಆಧರಿಸಿರುವುದು ವಿಕಿಪೀಡಿಯಾವನ್ನು. ಅದು ಜಾಗತಿಕವಾಗಿ ಇಂಟರ್ನೆಟ್ ಬಳಕೆದಾರರ ಕುರಿತಂತೆ ದತ್ತಾಂಶ ವಿಶ್ಲೇಷಣೆ ನಡೆಸಿ ಕುತೂಹಲಕಾರಿ ವಿಷಯಗಳನ್ನು ಹೊರಗೆಡವಿದೆ. ಅದು ಜಾಗತಿಕವಾಗಿ ಹೆಚ್ಚು ಹುಡುಕಾಟ ನಡೆಸಿದ ವಿಷಯ, ಭಾಷೆ, ಜನಸಂಖ್ಯೆ, ದೇಶಗಳ ಕುರಿತ ದತ್ತಾಂಶಗಳನ್ನು ಬಿಡುಗಡೆ ಮಾಡಿದೆ. ಅದರಂತೆ ಕನ್ನಡ ಭಾಷೆಯ ಹುಡುಕಾಟದಲ್ಲಿ ಡಾ. ಅಂಬೇಡ್ಕರ್ ಕುರಿತಂತೆ ಹೆಚ್ಚಿನ ಹುಡುಕಾಟಗಳು ನಡೆದಿವೆ ಎಂದು ಅದರ ದತ್ತಾಂಶ ತೋರಿಸುತ್ತದೆ.

ಅಸ್ಸಾಮೀಗುರು ಕೋವಿಡ್‌19 ಅಂತಲೂ, ಬಂಗಾಳಿ ಭಾಷಿಗರು ಬಾಂಗ್ಲಾದೇಶದ ಬಗ್ಗೆಯೂ, ಹಿಂದಿ ಭಾಷಿಕರು ಕೊರೊನಾ ವೈರಸ್ ಬಗ್ಗೆ, ತಮಿಳರು ಕೆ.ಕಾಮರಾಜ್‌ ಬಗ್ಗೆಯೂ ಹುಡುಕಿದರೆ ಕನ್ನಡಿಗರು ಡಾ.ಬಿ.ಆರ್ ಅಂಬೇಡ್ಕರ್‌ರವರ ಹುಡುಕುವ ಮೂಲಕ ಗಮನ ಸೆಳೆದಿದ್ದಾರೆ.

ಮರಾಠಿಗರು ಶಿವಾಜಿ ಬಗ್ಗೆಯೂ, ಪಂಜಾಬಿಗರು ಗುರು ಗ್ರಂಥ ಸಾಹೇಬ್ ಬಗ್ಗೆ, ಮಲೆಯಾಳಿಗರು ವೈಕ್ಕಂ ಮಹಮ್ಮದ್ ಬಶೀರ್ ಬಗ್ಗೆ ಮತ್ತು ಒರಿಯನ್ನರು ಫಕೀರ್ ಮೋಹನ್ ಸೆನಪತಿ ಬಗ್ಗೆ ಹುಡುಕಿದ್ದಾರೆ ಎಂದು ವಿಕಿಪೀಡಿಯಾ ತಿಳಿಸಿದೆ.

ತೆಲುಗು ಭಾಷಿಕರು ಕೋಳಿ ಪಂದ್ಯ ನಡೆಸಲು ಹೇಗೆ ಕೋಳಿಗಳನ್ನ ಸಾಕಬೇಕು ಎಂಬುದರ ಬಗ್ಗೆ ಹೆಚ್ಚು ಹುಡುಕಿದ್ದಾರೆ.

ಕನ್ನಡ ಝೀ ಕನ್ನಡ ಚಾನೆಲ್‌ನಲ್ಲಿ ಡಾ.ಅಂಬೇಡ್ಕರರ ಜೀವನ ಚರಿತ್ರೆ ಕುರಿತ ‘ಮಹಾನಾಯಕ’ ಎಂಬ ಧಾರಾವಾಹಿ ಬಿಡುಗಡೆಯಾಗಿದ್ದು ಬಹಳಷ್ಟು ಜನರ ಮೆಚ್ಚುಗೆ ಗಳಿಸಿದೆ. ಧಾರವಾಹಿಯ ಬಗ್ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬಂದಿದ್ದು ಹಲವಾರು ಜನ ಧಾರವಾಹಿಗಾಗಿ ಕಾದು ಕುಳಿತಿದ್ದಾರೆ. ಹಲವು ಗ್ರಾಮಗಳಲ್ಲಿ ಮಹಾನಾಯಕ ಧಾರವಾಹಿಯಲ್ಲಿ ಬಾಲನಟನಾಗಿ ಅಂಬೇಡ್ಕರ್ ಪಾತ್ರ ವಹಿಸಿರುವ ಆಯುದ್ ಬಾನುಶಾಲಿ ಎಂಬ ಬಾಲಕನ ಪೋಸ್ಟರ್ ಕಟೌಟ್‌ ಹಾಕಿ ಸಂಭ್ರಮಿಸಿದ್ದಾರೆ. ಸದ್ಯಕ್ಕೆ ಕನ್ನಡದಲ್ಲಿ ಅತಿ ಹೆಚ್ಚು ಟಿಆರ್‌ಪಿ ಪಡೆಯುತ್ತಿರುವ ಧಾರವಾಹಿ ಇದಾಗಿದ್ದು, ಈ ಹಿನ್ನೆಲೆಯಲ್ಲಿಯೂ ಹಲವು ಕನ್ನಡಿಗರು ಅಂಬೇಡ್ಕರ್ ಕುರಿತು ವಿಕಿಪೀಡಿಯಾದಲ್ಲಿ ಹುಡುಕಿರುವ ಸಾಧ್ಯತೆಯಿದೆ.

ಅಂಬೇಡ್ಕರ್ ಕುರಿತು 1,39,836 ಕನ್ನಡಿಗರು ಹುಡುಕಿದ್ದಾರೆ ಎಂದು ವಿಕಿಪೀಡಿಯಾ ತಿಳಿಸಿದೆ.

ಭಾರತೀಯ ಅಂತರ್ಜಾಲ ಬಳಕೆದಾರರಿಗೆ ಸಂಬಂಧಿಸಿದಂತೆ ಕೆಲವು ಸ್ವಾರಸ್ಯಕರ ವಿಷಯಗಳನ್ನು ಲೈವ್‌ ಮಿಂಟ್‌ ಪತ್ರಿಕೆ ಪ್ರಕಟಿಸಿದೆ. ಭಾರತದಲ್ಲಿ 10 ದಶಲಕ್ಷಕ್ಕೂ ಹೆಚ್ಚು ಸ್ಥಳೀಯ ಭಾಷಿಕರನ್ನು ಹೊಂದಿರುವ ಮತ್ತು ತಮ್ಮದೇ ಆದ ವಿಕಿಪೀಡಿಯಾ ಆವೃತ್ತಿಯನ್ನು ಹೊಂದಿರುವ ಎಲ್ಲಾ 14 ಭಾಷೆಗಳನ್ನು ಈ ವಿಶ್ಲೇಷಣೆಯಲ್ಲಿ ಪರಿಗಣಿಸಲಾಗಿದೆ.

ಭಾರತೀಯ ಭಾಷೆಗಳು ವೈವಿಧ್ಯಮಯ ಉನ್ನತ ವಿಕಿಪೀಡಿಯ ಲೇಖನಗಳನ್ನು ಹೊಂದಿದ್ದವು. ಅವುಗಳಲ್ಲಿ ಭಾಷಾವಾರು ಹುಡುಕಾಟ ನಡೆಸಿರುವ ವಿಷಯಗಳ ಕುರಿತ ದತ್ತಾಂಶ ಇಲ್ಲಿದೆ.

ಈ ವರ್ಷ, ಇಲ್ಲಿಯವರೆಗೆ, ಭಾರತೀಯ ಅಂತರ್ಜಾಲ ಬಳಕೆದಾರರು ವಿಕಿಪೀಡಿಯಾದ ಪುಟಗಳನ್ನು ತಮ್ಮ ಸ್ಥಳೀಯ ಭಾಷೆಗಳಲ್ಲಿ ಸುಮಾರು 500 ದಶಲಕ್ಷಕ್ಕೂ ಹೆಚ್ಚು ಬಾರಿ ಬ್ರೌಸ್ ಮಾಡಿದ್ದಾರೆ.

14 ಪ್ರಮುಖ ಭಾರತೀಯ ಭಾಷೆಗಳಲ್ಲಿ 11 ಭಾಷೆಗಳಲ್ಲಿ ವಿಕಿಪೀಡಿಯ ಓದುಗರ ಸಂಖ್ಯೆ ಈ ವರ್ಷ ಗಮನಾರ್ಹವಾಗಿ ಹೆಚ್ಚಾಗಿದೆ ಎನ್ನಲಾಗಿದೆ.

ಇದರಲ್ಲಿ ಹುಡುಕಾಟದ ವಿಷಯಗಳ ವ್ಯಾಪ್ತಿಯು ಭಾಷೆಗನುಗುಣವಾಗಿ ವ್ಯಾಪಕವಾಗಿ ಬದಲಾಗಿರುವುದು ಕಂಡುಬಂದಿದೆ. ಮರಾಠಿ ಓದುಗರು ಮಹಾರಾಷ್ಟ್ರದ ಐತಿಹಾಸಿಕ ಐಕಾನ್ ಗಳ ಬಗ್ಗೆ ಸಾಕಷ್ಟು ಓದಿದ್ದರೆ, ಪಂಜಾಬಿ ಮತ್ತು ಉರ್ದು ಓದುಗರು ಧರ್ಮದ ಬಗ್ಗೆ ಹೆಚ್ಚು ಓದಿದ್ದಾರೆ.

ತಮಿಳು, ಅಸ್ಸಾಮಿ, ಒಡಿಯಾ, ಮತ್ತು ಕನ್ನಡ ಓದುಗರು ತಮ್ಮದೇ ಭಾಷೆ ಮತ್ತು ಸಾಹಿತ್ಯದ ಬಗ್ಗೆ ಹೆಚ್ಚು ಓದುತ್ತಾರೆ. ಭೋಜ್‌ಪುರಿ ಓದುಗರು ಲೈಂಗಿಕತೆಯ ಬಗ್ಗೆ ಹೆಚ್ಚು ಹುಡುಕಾಟ ನಡೆಸಿದ್ದಾರೆ ಎಂದು ಈ ಸಮೀಕ್ಷೆಯಿಂದ ತಿಳಿದುಬಂದಿದೆ.

ಭಾರತೀಯ ಭಾಷೆಗಳಲ್ಲಿಯೇ ಅತಿಹೆಚ್ಚು ಹುಡುಕಾಟವನ್ನು ಹಿಂದಿಯಲ್ಲಿ ನಡೆಸಲಾಗಿದೆ. ಸುಮಾರು 8,53,987 ಹುಡುಕಾಟಗಳು ಕೊರೊನಾ ವೈರಸ್ ಗೆ ಸಂಬಂಧಿಸಿದಂತೆ ದಾಖಲಾಗಿವೆ. ಅತಿ ಕಡಿಮೆ ಹುಡುಕಾಟಗಳನ್ನು ಒಡಿಯಾ ಭಾಷೆಯಲ್ಲಿ ಸುಮಾರು 10,087 ಹುಡುಕಾಟಗಳು ಫಕೀರ್ ಮೋಹನ್ ಸೇನಪತಿ ಎಂಬುವವರ ಕುರಿತು ದಾಖಲಾಗಿವೆ.

ಉಳಿದ ಬೇರೆ ಬೇರೆ ರಾಜ್ಯಗಳಲ್ಲಿ  ಧರ್ಮ, ಸಾಹಿತ್ಯ, ಪ್ರಮುಖ ವ್ಯಕ್ತಿಗಳು ಮುಂತಾದ ವಿಷಯಗಳ ಬಗ್ಗೆ ಹುಡುಕಾಟ ನಡೆದಿದೆ.


ಇದನ್ನೂ ಓದಿ: ದಲಿತನೊಬ್ಬ ಗ್ರಾ.ಪಂ ಮುಖ್ಯಸ್ಥನಾದುದ್ದನ್ನು ಸಹಿಸದ ಮೇಲ್ಜಾತಿಗಳು: ಗುಂಡಿಕ್ಕಿ ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...