Homeಮುಖಪುಟವಿಕಿಪೀಡಿಯಾದಲ್ಲಿ ಕನ್ನಡಿಗರು ಅತಿ ಹೆಚ್ಚು ಹುಡುಕಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ!

ವಿಕಿಪೀಡಿಯಾದಲ್ಲಿ ಕನ್ನಡಿಗರು ಅತಿ ಹೆಚ್ಚು ಹುಡುಕಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ!

ಅಂಬೇಡ್ಕರ್ ಕುರಿತು 1,39,836 ಕನ್ನಡಿಗರು ಹುಡುಕಿದ್ದಾರೆ ಎಂದು ವಿಕಿಪೀಡಿಯಾ ತಿಳಿಸಿದೆ.

- Advertisement -
- Advertisement -

ಗೂಗಲ್‌ನಲ್ಲಿ ಯಾವುದೇ ವಿಷಯ, ವ್ಯಕ್ತಿ, ಸ್ಥಳದ ಬಗ್ಗೆ ಹೆಚ್ಚಿನ ಮಾಹಿತಿ ಬಯಸುವವರು ಆಧರಿಸಿರುವುದು ವಿಕಿಪೀಡಿಯಾವನ್ನು. ಅದು ಜಾಗತಿಕವಾಗಿ ಇಂಟರ್ನೆಟ್ ಬಳಕೆದಾರರ ಕುರಿತಂತೆ ದತ್ತಾಂಶ ವಿಶ್ಲೇಷಣೆ ನಡೆಸಿ ಕುತೂಹಲಕಾರಿ ವಿಷಯಗಳನ್ನು ಹೊರಗೆಡವಿದೆ. ಅದು ಜಾಗತಿಕವಾಗಿ ಹೆಚ್ಚು ಹುಡುಕಾಟ ನಡೆಸಿದ ವಿಷಯ, ಭಾಷೆ, ಜನಸಂಖ್ಯೆ, ದೇಶಗಳ ಕುರಿತ ದತ್ತಾಂಶಗಳನ್ನು ಬಿಡುಗಡೆ ಮಾಡಿದೆ. ಅದರಂತೆ ಕನ್ನಡ ಭಾಷೆಯ ಹುಡುಕಾಟದಲ್ಲಿ ಡಾ. ಅಂಬೇಡ್ಕರ್ ಕುರಿತಂತೆ ಹೆಚ್ಚಿನ ಹುಡುಕಾಟಗಳು ನಡೆದಿವೆ ಎಂದು ಅದರ ದತ್ತಾಂಶ ತೋರಿಸುತ್ತದೆ.

ಅಸ್ಸಾಮೀಗುರು ಕೋವಿಡ್‌19 ಅಂತಲೂ, ಬಂಗಾಳಿ ಭಾಷಿಗರು ಬಾಂಗ್ಲಾದೇಶದ ಬಗ್ಗೆಯೂ, ಹಿಂದಿ ಭಾಷಿಕರು ಕೊರೊನಾ ವೈರಸ್ ಬಗ್ಗೆ, ತಮಿಳರು ಕೆ.ಕಾಮರಾಜ್‌ ಬಗ್ಗೆಯೂ ಹುಡುಕಿದರೆ ಕನ್ನಡಿಗರು ಡಾ.ಬಿ.ಆರ್ ಅಂಬೇಡ್ಕರ್‌ರವರ ಹುಡುಕುವ ಮೂಲಕ ಗಮನ ಸೆಳೆದಿದ್ದಾರೆ.

ಮರಾಠಿಗರು ಶಿವಾಜಿ ಬಗ್ಗೆಯೂ, ಪಂಜಾಬಿಗರು ಗುರು ಗ್ರಂಥ ಸಾಹೇಬ್ ಬಗ್ಗೆ, ಮಲೆಯಾಳಿಗರು ವೈಕ್ಕಂ ಮಹಮ್ಮದ್ ಬಶೀರ್ ಬಗ್ಗೆ ಮತ್ತು ಒರಿಯನ್ನರು ಫಕೀರ್ ಮೋಹನ್ ಸೆನಪತಿ ಬಗ್ಗೆ ಹುಡುಕಿದ್ದಾರೆ ಎಂದು ವಿಕಿಪೀಡಿಯಾ ತಿಳಿಸಿದೆ.

ತೆಲುಗು ಭಾಷಿಕರು ಕೋಳಿ ಪಂದ್ಯ ನಡೆಸಲು ಹೇಗೆ ಕೋಳಿಗಳನ್ನ ಸಾಕಬೇಕು ಎಂಬುದರ ಬಗ್ಗೆ ಹೆಚ್ಚು ಹುಡುಕಿದ್ದಾರೆ.

ಕನ್ನಡ ಝೀ ಕನ್ನಡ ಚಾನೆಲ್‌ನಲ್ಲಿ ಡಾ.ಅಂಬೇಡ್ಕರರ ಜೀವನ ಚರಿತ್ರೆ ಕುರಿತ ‘ಮಹಾನಾಯಕ’ ಎಂಬ ಧಾರಾವಾಹಿ ಬಿಡುಗಡೆಯಾಗಿದ್ದು ಬಹಳಷ್ಟು ಜನರ ಮೆಚ್ಚುಗೆ ಗಳಿಸಿದೆ. ಧಾರವಾಹಿಯ ಬಗ್ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬಂದಿದ್ದು ಹಲವಾರು ಜನ ಧಾರವಾಹಿಗಾಗಿ ಕಾದು ಕುಳಿತಿದ್ದಾರೆ. ಹಲವು ಗ್ರಾಮಗಳಲ್ಲಿ ಮಹಾನಾಯಕ ಧಾರವಾಹಿಯಲ್ಲಿ ಬಾಲನಟನಾಗಿ ಅಂಬೇಡ್ಕರ್ ಪಾತ್ರ ವಹಿಸಿರುವ ಆಯುದ್ ಬಾನುಶಾಲಿ ಎಂಬ ಬಾಲಕನ ಪೋಸ್ಟರ್ ಕಟೌಟ್‌ ಹಾಕಿ ಸಂಭ್ರಮಿಸಿದ್ದಾರೆ. ಸದ್ಯಕ್ಕೆ ಕನ್ನಡದಲ್ಲಿ ಅತಿ ಹೆಚ್ಚು ಟಿಆರ್‌ಪಿ ಪಡೆಯುತ್ತಿರುವ ಧಾರವಾಹಿ ಇದಾಗಿದ್ದು, ಈ ಹಿನ್ನೆಲೆಯಲ್ಲಿಯೂ ಹಲವು ಕನ್ನಡಿಗರು ಅಂಬೇಡ್ಕರ್ ಕುರಿತು ವಿಕಿಪೀಡಿಯಾದಲ್ಲಿ ಹುಡುಕಿರುವ ಸಾಧ್ಯತೆಯಿದೆ.

ಅಂಬೇಡ್ಕರ್ ಕುರಿತು 1,39,836 ಕನ್ನಡಿಗರು ಹುಡುಕಿದ್ದಾರೆ ಎಂದು ವಿಕಿಪೀಡಿಯಾ ತಿಳಿಸಿದೆ.

ಭಾರತೀಯ ಅಂತರ್ಜಾಲ ಬಳಕೆದಾರರಿಗೆ ಸಂಬಂಧಿಸಿದಂತೆ ಕೆಲವು ಸ್ವಾರಸ್ಯಕರ ವಿಷಯಗಳನ್ನು ಲೈವ್‌ ಮಿಂಟ್‌ ಪತ್ರಿಕೆ ಪ್ರಕಟಿಸಿದೆ. ಭಾರತದಲ್ಲಿ 10 ದಶಲಕ್ಷಕ್ಕೂ ಹೆಚ್ಚು ಸ್ಥಳೀಯ ಭಾಷಿಕರನ್ನು ಹೊಂದಿರುವ ಮತ್ತು ತಮ್ಮದೇ ಆದ ವಿಕಿಪೀಡಿಯಾ ಆವೃತ್ತಿಯನ್ನು ಹೊಂದಿರುವ ಎಲ್ಲಾ 14 ಭಾಷೆಗಳನ್ನು ಈ ವಿಶ್ಲೇಷಣೆಯಲ್ಲಿ ಪರಿಗಣಿಸಲಾಗಿದೆ.

ಭಾರತೀಯ ಭಾಷೆಗಳು ವೈವಿಧ್ಯಮಯ ಉನ್ನತ ವಿಕಿಪೀಡಿಯ ಲೇಖನಗಳನ್ನು ಹೊಂದಿದ್ದವು. ಅವುಗಳಲ್ಲಿ ಭಾಷಾವಾರು ಹುಡುಕಾಟ ನಡೆಸಿರುವ ವಿಷಯಗಳ ಕುರಿತ ದತ್ತಾಂಶ ಇಲ್ಲಿದೆ.

ಈ ವರ್ಷ, ಇಲ್ಲಿಯವರೆಗೆ, ಭಾರತೀಯ ಅಂತರ್ಜಾಲ ಬಳಕೆದಾರರು ವಿಕಿಪೀಡಿಯಾದ ಪುಟಗಳನ್ನು ತಮ್ಮ ಸ್ಥಳೀಯ ಭಾಷೆಗಳಲ್ಲಿ ಸುಮಾರು 500 ದಶಲಕ್ಷಕ್ಕೂ ಹೆಚ್ಚು ಬಾರಿ ಬ್ರೌಸ್ ಮಾಡಿದ್ದಾರೆ.

14 ಪ್ರಮುಖ ಭಾರತೀಯ ಭಾಷೆಗಳಲ್ಲಿ 11 ಭಾಷೆಗಳಲ್ಲಿ ವಿಕಿಪೀಡಿಯ ಓದುಗರ ಸಂಖ್ಯೆ ಈ ವರ್ಷ ಗಮನಾರ್ಹವಾಗಿ ಹೆಚ್ಚಾಗಿದೆ ಎನ್ನಲಾಗಿದೆ.

ಇದರಲ್ಲಿ ಹುಡುಕಾಟದ ವಿಷಯಗಳ ವ್ಯಾಪ್ತಿಯು ಭಾಷೆಗನುಗುಣವಾಗಿ ವ್ಯಾಪಕವಾಗಿ ಬದಲಾಗಿರುವುದು ಕಂಡುಬಂದಿದೆ. ಮರಾಠಿ ಓದುಗರು ಮಹಾರಾಷ್ಟ್ರದ ಐತಿಹಾಸಿಕ ಐಕಾನ್ ಗಳ ಬಗ್ಗೆ ಸಾಕಷ್ಟು ಓದಿದ್ದರೆ, ಪಂಜಾಬಿ ಮತ್ತು ಉರ್ದು ಓದುಗರು ಧರ್ಮದ ಬಗ್ಗೆ ಹೆಚ್ಚು ಓದಿದ್ದಾರೆ.

ತಮಿಳು, ಅಸ್ಸಾಮಿ, ಒಡಿಯಾ, ಮತ್ತು ಕನ್ನಡ ಓದುಗರು ತಮ್ಮದೇ ಭಾಷೆ ಮತ್ತು ಸಾಹಿತ್ಯದ ಬಗ್ಗೆ ಹೆಚ್ಚು ಓದುತ್ತಾರೆ. ಭೋಜ್‌ಪುರಿ ಓದುಗರು ಲೈಂಗಿಕತೆಯ ಬಗ್ಗೆ ಹೆಚ್ಚು ಹುಡುಕಾಟ ನಡೆಸಿದ್ದಾರೆ ಎಂದು ಈ ಸಮೀಕ್ಷೆಯಿಂದ ತಿಳಿದುಬಂದಿದೆ.

ಭಾರತೀಯ ಭಾಷೆಗಳಲ್ಲಿಯೇ ಅತಿಹೆಚ್ಚು ಹುಡುಕಾಟವನ್ನು ಹಿಂದಿಯಲ್ಲಿ ನಡೆಸಲಾಗಿದೆ. ಸುಮಾರು 8,53,987 ಹುಡುಕಾಟಗಳು ಕೊರೊನಾ ವೈರಸ್ ಗೆ ಸಂಬಂಧಿಸಿದಂತೆ ದಾಖಲಾಗಿವೆ. ಅತಿ ಕಡಿಮೆ ಹುಡುಕಾಟಗಳನ್ನು ಒಡಿಯಾ ಭಾಷೆಯಲ್ಲಿ ಸುಮಾರು 10,087 ಹುಡುಕಾಟಗಳು ಫಕೀರ್ ಮೋಹನ್ ಸೇನಪತಿ ಎಂಬುವವರ ಕುರಿತು ದಾಖಲಾಗಿವೆ.

ಉಳಿದ ಬೇರೆ ಬೇರೆ ರಾಜ್ಯಗಳಲ್ಲಿ  ಧರ್ಮ, ಸಾಹಿತ್ಯ, ಪ್ರಮುಖ ವ್ಯಕ್ತಿಗಳು ಮುಂತಾದ ವಿಷಯಗಳ ಬಗ್ಗೆ ಹುಡುಕಾಟ ನಡೆದಿದೆ.


ಇದನ್ನೂ ಓದಿ: ದಲಿತನೊಬ್ಬ ಗ್ರಾ.ಪಂ ಮುಖ್ಯಸ್ಥನಾದುದ್ದನ್ನು ಸಹಿಸದ ಮೇಲ್ಜಾತಿಗಳು: ಗುಂಡಿಕ್ಕಿ ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...