Homeಮುಖಪುಟವಿಕಿಪೀಡಿಯಾದಲ್ಲಿ ಕನ್ನಡಿಗರು ಅತಿ ಹೆಚ್ಚು ಹುಡುಕಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ!

ವಿಕಿಪೀಡಿಯಾದಲ್ಲಿ ಕನ್ನಡಿಗರು ಅತಿ ಹೆಚ್ಚು ಹುಡುಕಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ!

ಅಂಬೇಡ್ಕರ್ ಕುರಿತು 1,39,836 ಕನ್ನಡಿಗರು ಹುಡುಕಿದ್ದಾರೆ ಎಂದು ವಿಕಿಪೀಡಿಯಾ ತಿಳಿಸಿದೆ.

- Advertisement -
- Advertisement -

ಗೂಗಲ್‌ನಲ್ಲಿ ಯಾವುದೇ ವಿಷಯ, ವ್ಯಕ್ತಿ, ಸ್ಥಳದ ಬಗ್ಗೆ ಹೆಚ್ಚಿನ ಮಾಹಿತಿ ಬಯಸುವವರು ಆಧರಿಸಿರುವುದು ವಿಕಿಪೀಡಿಯಾವನ್ನು. ಅದು ಜಾಗತಿಕವಾಗಿ ಇಂಟರ್ನೆಟ್ ಬಳಕೆದಾರರ ಕುರಿತಂತೆ ದತ್ತಾಂಶ ವಿಶ್ಲೇಷಣೆ ನಡೆಸಿ ಕುತೂಹಲಕಾರಿ ವಿಷಯಗಳನ್ನು ಹೊರಗೆಡವಿದೆ. ಅದು ಜಾಗತಿಕವಾಗಿ ಹೆಚ್ಚು ಹುಡುಕಾಟ ನಡೆಸಿದ ವಿಷಯ, ಭಾಷೆ, ಜನಸಂಖ್ಯೆ, ದೇಶಗಳ ಕುರಿತ ದತ್ತಾಂಶಗಳನ್ನು ಬಿಡುಗಡೆ ಮಾಡಿದೆ. ಅದರಂತೆ ಕನ್ನಡ ಭಾಷೆಯ ಹುಡುಕಾಟದಲ್ಲಿ ಡಾ. ಅಂಬೇಡ್ಕರ್ ಕುರಿತಂತೆ ಹೆಚ್ಚಿನ ಹುಡುಕಾಟಗಳು ನಡೆದಿವೆ ಎಂದು ಅದರ ದತ್ತಾಂಶ ತೋರಿಸುತ್ತದೆ.

ಅಸ್ಸಾಮೀಗುರು ಕೋವಿಡ್‌19 ಅಂತಲೂ, ಬಂಗಾಳಿ ಭಾಷಿಗರು ಬಾಂಗ್ಲಾದೇಶದ ಬಗ್ಗೆಯೂ, ಹಿಂದಿ ಭಾಷಿಕರು ಕೊರೊನಾ ವೈರಸ್ ಬಗ್ಗೆ, ತಮಿಳರು ಕೆ.ಕಾಮರಾಜ್‌ ಬಗ್ಗೆಯೂ ಹುಡುಕಿದರೆ ಕನ್ನಡಿಗರು ಡಾ.ಬಿ.ಆರ್ ಅಂಬೇಡ್ಕರ್‌ರವರ ಹುಡುಕುವ ಮೂಲಕ ಗಮನ ಸೆಳೆದಿದ್ದಾರೆ.

ಮರಾಠಿಗರು ಶಿವಾಜಿ ಬಗ್ಗೆಯೂ, ಪಂಜಾಬಿಗರು ಗುರು ಗ್ರಂಥ ಸಾಹೇಬ್ ಬಗ್ಗೆ, ಮಲೆಯಾಳಿಗರು ವೈಕ್ಕಂ ಮಹಮ್ಮದ್ ಬಶೀರ್ ಬಗ್ಗೆ ಮತ್ತು ಒರಿಯನ್ನರು ಫಕೀರ್ ಮೋಹನ್ ಸೆನಪತಿ ಬಗ್ಗೆ ಹುಡುಕಿದ್ದಾರೆ ಎಂದು ವಿಕಿಪೀಡಿಯಾ ತಿಳಿಸಿದೆ.

ತೆಲುಗು ಭಾಷಿಕರು ಕೋಳಿ ಪಂದ್ಯ ನಡೆಸಲು ಹೇಗೆ ಕೋಳಿಗಳನ್ನ ಸಾಕಬೇಕು ಎಂಬುದರ ಬಗ್ಗೆ ಹೆಚ್ಚು ಹುಡುಕಿದ್ದಾರೆ.

ಕನ್ನಡ ಝೀ ಕನ್ನಡ ಚಾನೆಲ್‌ನಲ್ಲಿ ಡಾ.ಅಂಬೇಡ್ಕರರ ಜೀವನ ಚರಿತ್ರೆ ಕುರಿತ ‘ಮಹಾನಾಯಕ’ ಎಂಬ ಧಾರಾವಾಹಿ ಬಿಡುಗಡೆಯಾಗಿದ್ದು ಬಹಳಷ್ಟು ಜನರ ಮೆಚ್ಚುಗೆ ಗಳಿಸಿದೆ. ಧಾರವಾಹಿಯ ಬಗ್ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬಂದಿದ್ದು ಹಲವಾರು ಜನ ಧಾರವಾಹಿಗಾಗಿ ಕಾದು ಕುಳಿತಿದ್ದಾರೆ. ಹಲವು ಗ್ರಾಮಗಳಲ್ಲಿ ಮಹಾನಾಯಕ ಧಾರವಾಹಿಯಲ್ಲಿ ಬಾಲನಟನಾಗಿ ಅಂಬೇಡ್ಕರ್ ಪಾತ್ರ ವಹಿಸಿರುವ ಆಯುದ್ ಬಾನುಶಾಲಿ ಎಂಬ ಬಾಲಕನ ಪೋಸ್ಟರ್ ಕಟೌಟ್‌ ಹಾಕಿ ಸಂಭ್ರಮಿಸಿದ್ದಾರೆ. ಸದ್ಯಕ್ಕೆ ಕನ್ನಡದಲ್ಲಿ ಅತಿ ಹೆಚ್ಚು ಟಿಆರ್‌ಪಿ ಪಡೆಯುತ್ತಿರುವ ಧಾರವಾಹಿ ಇದಾಗಿದ್ದು, ಈ ಹಿನ್ನೆಲೆಯಲ್ಲಿಯೂ ಹಲವು ಕನ್ನಡಿಗರು ಅಂಬೇಡ್ಕರ್ ಕುರಿತು ವಿಕಿಪೀಡಿಯಾದಲ್ಲಿ ಹುಡುಕಿರುವ ಸಾಧ್ಯತೆಯಿದೆ.

ಅಂಬೇಡ್ಕರ್ ಕುರಿತು 1,39,836 ಕನ್ನಡಿಗರು ಹುಡುಕಿದ್ದಾರೆ ಎಂದು ವಿಕಿಪೀಡಿಯಾ ತಿಳಿಸಿದೆ.

ಭಾರತೀಯ ಅಂತರ್ಜಾಲ ಬಳಕೆದಾರರಿಗೆ ಸಂಬಂಧಿಸಿದಂತೆ ಕೆಲವು ಸ್ವಾರಸ್ಯಕರ ವಿಷಯಗಳನ್ನು ಲೈವ್‌ ಮಿಂಟ್‌ ಪತ್ರಿಕೆ ಪ್ರಕಟಿಸಿದೆ. ಭಾರತದಲ್ಲಿ 10 ದಶಲಕ್ಷಕ್ಕೂ ಹೆಚ್ಚು ಸ್ಥಳೀಯ ಭಾಷಿಕರನ್ನು ಹೊಂದಿರುವ ಮತ್ತು ತಮ್ಮದೇ ಆದ ವಿಕಿಪೀಡಿಯಾ ಆವೃತ್ತಿಯನ್ನು ಹೊಂದಿರುವ ಎಲ್ಲಾ 14 ಭಾಷೆಗಳನ್ನು ಈ ವಿಶ್ಲೇಷಣೆಯಲ್ಲಿ ಪರಿಗಣಿಸಲಾಗಿದೆ.

ಭಾರತೀಯ ಭಾಷೆಗಳು ವೈವಿಧ್ಯಮಯ ಉನ್ನತ ವಿಕಿಪೀಡಿಯ ಲೇಖನಗಳನ್ನು ಹೊಂದಿದ್ದವು. ಅವುಗಳಲ್ಲಿ ಭಾಷಾವಾರು ಹುಡುಕಾಟ ನಡೆಸಿರುವ ವಿಷಯಗಳ ಕುರಿತ ದತ್ತಾಂಶ ಇಲ್ಲಿದೆ.

ಈ ವರ್ಷ, ಇಲ್ಲಿಯವರೆಗೆ, ಭಾರತೀಯ ಅಂತರ್ಜಾಲ ಬಳಕೆದಾರರು ವಿಕಿಪೀಡಿಯಾದ ಪುಟಗಳನ್ನು ತಮ್ಮ ಸ್ಥಳೀಯ ಭಾಷೆಗಳಲ್ಲಿ ಸುಮಾರು 500 ದಶಲಕ್ಷಕ್ಕೂ ಹೆಚ್ಚು ಬಾರಿ ಬ್ರೌಸ್ ಮಾಡಿದ್ದಾರೆ.

14 ಪ್ರಮುಖ ಭಾರತೀಯ ಭಾಷೆಗಳಲ್ಲಿ 11 ಭಾಷೆಗಳಲ್ಲಿ ವಿಕಿಪೀಡಿಯ ಓದುಗರ ಸಂಖ್ಯೆ ಈ ವರ್ಷ ಗಮನಾರ್ಹವಾಗಿ ಹೆಚ್ಚಾಗಿದೆ ಎನ್ನಲಾಗಿದೆ.

ಇದರಲ್ಲಿ ಹುಡುಕಾಟದ ವಿಷಯಗಳ ವ್ಯಾಪ್ತಿಯು ಭಾಷೆಗನುಗುಣವಾಗಿ ವ್ಯಾಪಕವಾಗಿ ಬದಲಾಗಿರುವುದು ಕಂಡುಬಂದಿದೆ. ಮರಾಠಿ ಓದುಗರು ಮಹಾರಾಷ್ಟ್ರದ ಐತಿಹಾಸಿಕ ಐಕಾನ್ ಗಳ ಬಗ್ಗೆ ಸಾಕಷ್ಟು ಓದಿದ್ದರೆ, ಪಂಜಾಬಿ ಮತ್ತು ಉರ್ದು ಓದುಗರು ಧರ್ಮದ ಬಗ್ಗೆ ಹೆಚ್ಚು ಓದಿದ್ದಾರೆ.

ತಮಿಳು, ಅಸ್ಸಾಮಿ, ಒಡಿಯಾ, ಮತ್ತು ಕನ್ನಡ ಓದುಗರು ತಮ್ಮದೇ ಭಾಷೆ ಮತ್ತು ಸಾಹಿತ್ಯದ ಬಗ್ಗೆ ಹೆಚ್ಚು ಓದುತ್ತಾರೆ. ಭೋಜ್‌ಪುರಿ ಓದುಗರು ಲೈಂಗಿಕತೆಯ ಬಗ್ಗೆ ಹೆಚ್ಚು ಹುಡುಕಾಟ ನಡೆಸಿದ್ದಾರೆ ಎಂದು ಈ ಸಮೀಕ್ಷೆಯಿಂದ ತಿಳಿದುಬಂದಿದೆ.

ಭಾರತೀಯ ಭಾಷೆಗಳಲ್ಲಿಯೇ ಅತಿಹೆಚ್ಚು ಹುಡುಕಾಟವನ್ನು ಹಿಂದಿಯಲ್ಲಿ ನಡೆಸಲಾಗಿದೆ. ಸುಮಾರು 8,53,987 ಹುಡುಕಾಟಗಳು ಕೊರೊನಾ ವೈರಸ್ ಗೆ ಸಂಬಂಧಿಸಿದಂತೆ ದಾಖಲಾಗಿವೆ. ಅತಿ ಕಡಿಮೆ ಹುಡುಕಾಟಗಳನ್ನು ಒಡಿಯಾ ಭಾಷೆಯಲ್ಲಿ ಸುಮಾರು 10,087 ಹುಡುಕಾಟಗಳು ಫಕೀರ್ ಮೋಹನ್ ಸೇನಪತಿ ಎಂಬುವವರ ಕುರಿತು ದಾಖಲಾಗಿವೆ.

ಉಳಿದ ಬೇರೆ ಬೇರೆ ರಾಜ್ಯಗಳಲ್ಲಿ  ಧರ್ಮ, ಸಾಹಿತ್ಯ, ಪ್ರಮುಖ ವ್ಯಕ್ತಿಗಳು ಮುಂತಾದ ವಿಷಯಗಳ ಬಗ್ಗೆ ಹುಡುಕಾಟ ನಡೆದಿದೆ.


ಇದನ್ನೂ ಓದಿ: ದಲಿತನೊಬ್ಬ ಗ್ರಾ.ಪಂ ಮುಖ್ಯಸ್ಥನಾದುದ್ದನ್ನು ಸಹಿಸದ ಮೇಲ್ಜಾತಿಗಳು: ಗುಂಡಿಕ್ಕಿ ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...