Homeಚಳವಳಿಡಬಲ್ ಇಂಜಿನ್ ಸರ್ಕಾರದಿಂದ ಲಸಿಕೆಯಲ್ಲೂ ಮೋಸ: ಭುಗಿಲೆದ್ದ ಕನ್ನಡಿಗರ ಆಕ್ರೋಶ

ಡಬಲ್ ಇಂಜಿನ್ ಸರ್ಕಾರದಿಂದ ಲಸಿಕೆಯಲ್ಲೂ ಮೋಸ: ಭುಗಿಲೆದ್ದ ಕನ್ನಡಿಗರ ಆಕ್ರೋಶ

#ಲಸಿಕೆಯಲ್ಲೂಮೋಸ ಹ್ಯಾಷ್‌ಟ್ಯಾಗ್‌ ಬೆಂಗಳೂರಿನಲ್ಲಿ ನಂಬರ್ ಒನ್ ಸ್ಥಾನದಲ್ಲಿ ಟ್ರೆಂಡ್‌ ಆಗುವುದಲ್ಲದೇ ಕೇವಲ 45 ನಿಮಿಷಗಳಲ್ಲಿ 10 ಸಾವಿರಕ್ಕೂ ಹೆಚ್ಚು ಟ್ವೀಟ್‌ಗಳನ್ನು ದಾಖಲಿಸಿತ್ತು.

- Advertisement -
- Advertisement -

“ವಿಶ್ವ ನಾಯಕ ಎನಿಸಿಕೊಳ್ಳಲು ತನ್ನ ಜನರನ್ನು ಲಸಿಕೆ ನೀಡದೆ ಬಲಿ ಕೊಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಭಾರತದ ಇತಿಹಾಸದಲ್ಲಿ ಕರಾಳ ವ್ಯಕ್ತಿಯಾಗಿ ದಾಖಲಾಗುತ್ತಾರೆ! ಜನತೆ ಕೇಳುತ್ತಿದ್ದಾರೆ, ಎಲ್ಲಿ ನಮ್ಮ ಲಸಿಕೆ! #ಲಸಿಕೆಯಲ್ಲೂಮೋಸ #DoubleEngineMosa”.. ಇದು ಮೋದಿ ಸರ್ಕಾರದ ವಿರುದ್ಧ ಪಲ್ಲವಿ ಚಿದಂಬರ್ ಎಂಬುವವರು ಟ್ವಿಟರ್‌ನಲ್ಲಿ ದಾಖಲಿಸಿದ ಆಕ್ರೋಶದ ನುಡಿ..

ಖಾಸಗಿ ಆಸ್ಪತ್ರೆಗಳ ವ್ಯಾಕ್ಸಿನ್ ಮಾರಾಟ ದಂಧೆಗೆ ಸಂಸದ ತೇಜಸ್ವಿ ಸೂರ್ಯನೇ ಬ್ರಾಂಡ್ ಅಂಬಾಸಿಡರ್. ಶಾಸಕ ರವಿ ಸುಬ್ರಹ್ಮಣ್ಯ ಕಮೀಷನ್ ಏಜೆಂಟ್. ಮಾವ ಅಳಿಯನ ಕಳ್ಳಾಟದಲ್ಲಿ ಬಿಜೆಪಿ ಸರ್ಕಾರಕ್ಕೆ ಪಾಲೆಷ್ಟು? ಲಸಿಕೆ ಹಂಚಿಕೆಯಲ್ಲಿ ಕಮೀಷನ್ ದಂಧೆ ನಡೆದಿಲ್ಲ ಎಂಬುದಾದರೆ ರಾಜ್ಯ ಸರ್ಕಾರ ಈ ಕೂಡಲೇ ಈ ಹಗರಣದ ಬಗ್ಗೆ ಕೇಸು ದಾಖಲಿಸಿ, ಸೂಕ್ತ ತನಿಖೆಗೆ ಒಪ್ಪಿಸಬೇಕು. ಇಲ್ಲವಾದರೆ ಕಮೀಷನ್ ದಂಧೆಯಲ್ಲಿ ಸರ್ಕಾರದ್ದೂ ಪಾಲಿದೆ ಎಂದು ಒಪ್ಪಿಕೊಂಡಂತೆ ಎಂಬ ತೀಕ್ಷ್ಣ ಪ್ರತಿಕ್ರಿಯೆಗಳು ಕರ್ನಾಟಕ ರಕ್ಷಣಾ ವೇದಿಕೆ ಕರೆ ನೀಡಿದ್ದ #ಲಸಿಕೆಯಲ್ಲೂಮೋಸ ಟ್ವಿಟರ್ ಅಭಿಯಾನದಲ್ಲಿ ಕೇಳಿಬಂದಿವೆ.

ಆಕ್ಸಿಜನ್ ಕೊಡಲಿಲ್ಲ, ರೆಮ್ಡಿಸಿವಿರ್ ಕೊಡಲಿಲ್ಲ, ಆಂಫೋಟೆರಿಸಿನ್ ಕೊಡಲಿಲ್ಲ. ಈಗ ಲಸಿಕೆಯೂ ಇಲ್ಲ‌. ಇಂಥ ಜನವಿರೋಧಿ ಒಕ್ಕೂಟ ಸರ್ಕಾರ ಹಿಂದೆಂದೂ ಇರಲಿಲ್ಲ ಎಂದು ಆರೋಪಿಸಿ ಇಂದು ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿತ್ತು. ಈ ಕರೆಗೆ ಸಾವಿರಾರು ಜನರು ಕೈಜೋಡಿಸಿದ್ದು ಕೇಂದ್ರ ಸರ್ಕಾರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. #ಲಸಿಕೆಯಲ್ಲೂಮೋಸ ಹ್ಯಾಷ್‌ಟ್ಯಾಗ್‌ ಬೆಂಗಳೂರಿನಲ್ಲಿ ನಂಬರ್ ಒನ್ ಸ್ಥಾನದಲ್ಲಿ ಟ್ರೆಂಡ್‌ ಆಗುವುದಲ್ಲದೇ ಕೇವಲ 45 ನಿಮಿಷಗಳಲ್ಲಿ 10 ಸಾವಿರಕ್ಕೂ ಹೆಚ್ಚು ಟ್ವೀಟ್‌ಗಳನ್ನು ದಾಖಲಿಸಿತ್ತು.

ಇಷ್ಟು ದಿನ ಕೇಂದ್ರದಿಂದ ಕರ್ನಾಟಕಕ್ಕೆ ನಿರಂತರವಾಗಿ ನಡೆಯುತ್ತಿರುವ ಎಲ್ಲಾ ಬಗೆಯ ತಾರತಮ್ಯಗಳನ್ನು ಪ್ರಶ್ನಿಸದೇ ಇದ್ದುದ್ದಕ್ಕೆ ಇಂದು ನಮಗೆ ಜೀವ ಉಳಿಸೋ ಲಸಿಕೆಯಲ್ಲೂ ಮೋಸ ನಡೆದಿದೆ. ಈಗಲೂ ಪ್ರಶ್ನಿಸದೆ ಇದ್ದರೆ ನಮ್ಮ ಅಳಿವು ಖಂಡಿತ ಎಂದು ರಾಮಚಂದ್ರ ಎಮ್ ಎಂಬುವವರು ಆತಂಕ ವ್ಯಕ್ತಪಡಿಸಿದ್ದಾರೆ.

ಕೋವಿಡ್‍ನಿಂದ ಈಗಾಗಲೇ ಆರ್ಥಿಕತೆ ತತ್ತರಿಸಿದೆ. ಸರಿಯಾದ ಸಮಯಕ್ಕೆ ಲಸಿಕೆ ನೀಡದಿದ್ದರೆ ಲಾಕ್ಡೌನುಗಳು ಹೆಚ್ಚಾಗುತ್ತವೆ. ಹೆಚ್ಚಿದ ಆರ್ಥಿಕ ಹೊರೆ ನಾಗರಿಕರ ಮೇಲೆಯೇ.ಹಸಿವು-ನೋವುಗಳು ಹೆಚ್ಚುತ್ತವೆ. ಈಗಾಗಲೇ ಹೊಡೆತ ಬಿದ್ದಿರುವ ಆರ್ಥಿಕತೆಯಿಂದ ಮೇಲೇಳುವುದು ಸಾಹಸವೇ. ಒಕ್ಕೂಟ ಮತ್ತು ರಾಜ್ಯ ಸರಕಾರಗಳು ಬೇಗನೆ ಲಸಿಕೆ ಒದಗಿಸಬೇಕು ಎಂದು ಶ್ರುತಿ ಎಚ್.ಎಂ ಒತ್ತಾಯಿಸಿದ್ದಾರೆ.

ಹಾಸಿಗೆ ಬ್ಲಾಕಿಂಗ್ ದಂಧೆಯಲ್ಲಿ ಹೀರೋ ಆಗಲು ಹೊರಟಿದ್ದ ಸಂಸದ ತೇಜಸ್ವಿ ಸೂರ್ಯ ಈ ಕಡೆ ಲಸಿಕೆ ಹಂಚಿಕೆಯ ದಂಧೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ. ಉಚಿತವಾಗಿ ಸಾರ್ವಜನಿಕರಿಗೆ ಸಿಗಬೇಕಾದ ಲಸಿಕೆ 900 ರೂಪಾಯಿಗೆ ಬಿಕರಿಯಾಗುತ್ತಿದೆ. ಸಂಸದ ತೇಜಸ್ವಿ ಸೂರ್ಯನಿಂದ #ಲಸಿಕೆಯಲ್ಲೂಮೋಸ ನಡೆದಿದೆ. ಎಂದು ಸರೋವರ್ ಬೆಂಕಿಕೆರೆ ಆರೋಪಿಸಿದ್ದಾರೆ.

ಬಹಳ ದೇಶಗಳಲ್ಲಿ ನಾಗರೀಕರಿಗೆ ಲಸಿಕೆ ನೀಡುವ ಮೂಲಕ ಪರಿಸ್ಥಿತಿಯನ್ನು normal ಮಾಡಲು ಪ್ರಯತ್ನ ನಡೆಸಲಾಗುತ್ತಿದೆ. ಶಾಲಾ ಕಾಲೇಜು ಪ್ರಾರಂಭ ಮಾಡಲಾಗಿದೆ, ವ್ಯಾಪಾರ ವಹಿವಾಟುಗಳು ಮತ್ತೆ ಹಿಂದಿನ ಸ್ತಿತಿಗೆ ಮರಳಲು ಬೇಕಾದ ಕ್ರಮ ಕೈಗೊಳ್ಳುತ್ತಿದ್ದಾರೆ. ನಾವು ಭಾರತ ಸರಕಾರದ ಅಧಿಕಾರ ಹಪಹಪಿಗೆ ಸಿಲುಕಿ ಒದ್ದಾಡುತ್ತಿದ್ದೇವೆ #ಲಸಿಕೆಯಲ್ಲೂಮೋಸ ಎಂದು ಅರುಣ್ ಜಾವಗಲ್ ಟ್ವೀಟ್ ಮಾಡಿದ್ದಾರೆ.

ಒಂದು ಕಡೆ ನಮಗ್ಯಾಕೆ ಲಸಿಕೆ ಸಿಗುತ್ತಿಲ್ಲ, ಹೆಚ್ಚು ತೆರಿಗೆ ಕಟ್ಟುವ ಕರ್ನಾಟಕಕ್ಕೆ ಅನ್ಯಾಯ ಎಂದು ಕನ್ನಡಿಗರು ಪ್ರಶ್ನಿಸಿದರೆ, ಅದೇ ಸಮಯದಲ್ಲಿ ಇನ್ನೊಂದು ಕಡೆ ಕರ್ನಾಟಕದ ಆರೋಗ್ಯ ಸಚಿವ ಸುಧಾಕರ್ “ಲಸಿಕಾ ಅಭಿಯಾನದಲ್ಲಿ ಕರ್ನಾಟಕ ದಕ್ಷಿಣ ಭಾರತದ ನಂ .1 ರಾಜ್ಯವಾಗಿದೆ. ಕೇಂದ್ರದಿಂದ ಲಸಿಕೆ ಪೂರೈಕೆ ಚುರುಕುಗೊಳ್ಳುತ್ತಿರುವುದರಿಂದ, ಲಸಿಕಾ ಅಭಿಯಾನ ಇನ್ನಷ್ಟು ಬೇಗ ಮುನ್ನಡೆಯಲಿದೆ. ರಾಜ್ಯಕ್ಕೆ ನಿನ್ನೆ 80,000 ಡೋಸ್ ಕೋವಾಕ್ಸಿನ್ ಹಾಗೂ 2,17,310 ಡೋಸ್ ಕೊವಿಶೀಲ್ಡ್ ಪೂರೈಸಿದ ಕೇಂದ್ರಕ್ಕೆ ಧನ್ಯವಾದಗಳು” ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಮಾನ್ಯ ಪ್ರಧಾನಿಗಳೇ ಕೊರೋನಾ ಲಸಿಕೆಗಳೆಲ್ಲಿ? ಎಲ್ಲಿ ನೀವು ಹೇಳಿದ ಕೊರೋನಾ ವಿರುದ್ಧದ ಜಯ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Dear readers we are very sorry to say that the development it reveals in all state almost all similar the central government decided to administer the vaccine very long back but due to lack of awareness and also so the confusion of many doctors who are not ready to take shots there why I people refuse to at same time same time government of India produced whose number of vials but people rejected and misunderstanding the the information to take revenge government did not pay any attention towards taking necessary action to control the spreading of this virus and automatically e the vaccine demand increased the pharmaceutical company also artificially created shortage therefore death increased this is nothing but a revenge what I feel it is my personal opinion about the notion about the vaccination thank you very much.
    Ravi Kumar.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...