Homeಮುಖಪುಟಕನ್ನಡಿಗರು ₹4 ಲಕ್ಷ ಕೋಟಿ ತೆರಿಗೆ ಕಟ್ಟುತ್ತಿದ್ದಾರೆ, ಕೇಂದ್ರ ಕೇವಲ ₹50 ಸಾವಿರ ಕೋಟಿ ವಾಪಸ್...

ಕನ್ನಡಿಗರು ₹4 ಲಕ್ಷ ಕೋಟಿ ತೆರಿಗೆ ಕಟ್ಟುತ್ತಿದ್ದಾರೆ, ಕೇಂದ್ರ ಕೇವಲ ₹50 ಸಾವಿರ ಕೋಟಿ ವಾಪಸ್ ಕೊಡ್ತಿದೆ: ಸಿದ್ದರಾಮಯ್ಯ

- Advertisement -
- Advertisement -

ಕರ್ನಾಟಕದ ಜನರು ಕೇಂದ್ರ ಸರ್ಕಾರಕ್ಕೆ ನಾಲ್ಕು ಲಕ್ಷ ಕೋಟಿ ರೂಪಾಯಿ ತೆರಿಗೆ ಕಟ್ಟುತ್ತಿದ್ದಾರೆ. ಆದರೆ, ಕೇಂದ್ರ ನಮಗೆ ಕೊಡುತ್ತಿರುವುದು ಕೇವಲ ಐವತ್ತು ಸಾವಿರ ಕೋಟಿ ರೂ. ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಭಾನುವಾರ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ(ಎನ್‌ಡಿಆರ್‌ಎಫ್) ಕೇಂದ್ರ ಸರ್ಕಾರದ ಹಣವಲ್ಲ, ನಾವೇ ಕಟ್ಟಿದ ತೆರಿಗೆ ಎಂದರು.

“ನಮ್ಮ ರಾಜ್ಯದಿಂದ 4 ಲಕ್ಷ ಕೋಟಿ ರೂ. ತೆರಿಗೆ ಕೇಂದ್ರಕ್ಕೆ ಹೋಗ್ತಿದೆ. ಅದರಲ್ಲಿ 37 ಸಾವಿರ ರೂ. ಕೋಟಿ ತೆರಿಗೆ ಪಾಲು, ಕೇಂದ್ರ ಪುರಸ್ಕೃತ ಯೋಜನೆಗೆ 13 ಸಾವಿರ ಕೋಟಿ ರೂ. ಬರುತ್ತಿದೆ. ಇದು ನ್ಯಾಯವೇ? ಇದನ್ನು ಕೇಳಿದರೆ ಬಿಜೆಪಿಯವರು ಕೇಂದ್ರದ ಹಣ ಎಂದು ಜಗಳಕ್ಕೆ ಬರುತ್ತಾರೆ. ಇದು ಕನ್ನಡಿಗರು ಪಾವತಿಸಿದ ತೆರಿಗೆಯ ಹಣ” ಎಂದು ಸಿಎಂ ಹೇಳಿದರು.

ತೆರಿಗೆ ಸಂಗ್ರಹದಲ್ಲಿ ದೇಶದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದ್ದು, ಮಹಾರಾಷ್ಟ್ರದ ನಂತರದಲ್ಲಿ ಸ್ಥಾನದಲ್ಲಿದೆ. ಆದರೆ ನಮಗೆ ಸಿಕ್ಕಿದ್ದೇನು? ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿನ ಬರ ಪರಿಸ್ಥಿತಿಯ ಬಗ್ಗೆ ಚರ್ಚಿಸಲು ನಾನು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದೇನೆ. ಅವರು ಇನ್ನೂ ಅಪಾಯಿಂಟ್‌ಮೆಂಟ್ ನೀಡಿಲ್ಲ. ಮುಖ್ಯಮಂತ್ರಿಯ ಪರಿಸ್ಥಿತಿ ಇದು. ನಮ್ಮ ಸಚಿವರಿಗೂ ಭೇಟಿ ಮಾಡಲು ಅವಕಾಶ ನೀಡಿಲ್ಲ ಎಂದರು.

ಸೋಮವಾರ (ಡಿಸೆಂಬರ್ 18) ಕೇಂದ್ರ ಸಚಿವರನ್ನು ಭೇಟಿ ಮಾಡಲು ದೆಹಲಿಗೆ ಹೋಗುತ್ತಿದ್ದೇನೆ. 35,000 ಕೋಟಿಗೂ ಹೆಚ್ಚು ಬೆಳೆ ನಷ್ಟವಾಗಿದೆ. ನಾವು ನಿಯಮಾನುಸಾರ ಪರಿಹಾರ ಪಡೆಯಬೇಕಾಗಿದೆ ಎಂದು ಸಿಎಂ ಹೇಳಿದರು.

ವಿಧಾನಪರಿಷತ್ ಸದಸ್ಯ ಜಗದೀಶ್‌ ಶೆಟ್ಟರ್‌ ಅವರ 68ನೇ ಹುಟ್ಟುಹಬ್ಬದ ಅಂಗವಾಗಿ ಅವರ ನಿವಾಸಕ್ಕೆ ಭೇಟಿ ನೀಡಿದ್ದ ಸಿದ್ದರಾಮಯ್ಯ , ಶೆಟ್ಟರ್ ನಿವಾಸದಲ್ಲಿ ಉಪಹಾರ ಸೇವಿಸಿದರು.

ಲೋಕಸಭೆ ಚುನಾವಣೆಗೆ ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಶೆಟ್ಟರ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಕೇಳಿದ್ದಕ್ಕೆ, ಶೆಟ್ಟರ್ ಕೂಡ ಆಕಾಂಕ್ಷಿ ಎಂದು ನಾವು ಭಾವಿಸುತ್ತೇವೆ ಎಂದರು. ಈ ವೇಳೆ ಮಧ್ಯಪ್ರವೇಶಿಸಿದ ಶೆಟ್ಟರ್, ನಾನು ಆಕಾಂಕ್ಷಿ ಅಲ್ಲ ಎಂದು ಹೇಳಿದರು.

ಶಾಸಕರು, ಪರಾಜಿತ ಅಭ್ಯರ್ಥಿಗಳು ಮತ್ತು ಪಕ್ಷದ ಕಾರ್ಯಕರ್ತರ ಅಭಿಪ್ರಾಯಗಳನ್ನು ಆಧರಿಸಿ ಟಿಕೆಟ್ ನೀಡಲಾಗುವುದು. ಪ್ರತಿ ಜಿಲ್ಲೆಗೆ ನಿಯೋಜಿಸಲಾದ ಸಚಿವರು ಮೂರು ಆಕಾಂಕ್ಷಿಗಳ ಹೆಸರನ್ನು ನೀಡಲಿದ್ದಾರೆ. ಹೆಚ್ಚು ಸೂಕ್ತವಾಗಿರುವವರನ್ನು ಆಯ್ಕೆ ಮಾಡಲಾಗುವುದು ಎಂದು ಸಿಎಂ ತಿಳಿಸಿದರು.

ಈ ಬಾರಿಯೂ ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡುತ್ತೇವೆ. ಬಿಜೆಪಿಯವರು ಮುಸ್ಲಿಮರ ಮತ ಬೇಡ ಎನ್ನುತ್ತಾರೆ. ಮುಸ್ಲಿಮರು ಭಾರತೀಯರಲ್ಲವೇ? ನಮ್ಮದು ಬಹುಸಂಸ್ಕೃತಿಯ ದೇಶವಾಗಿದ್ದು, ಎಲ್ಲ ನಾಗರಿಕರನ್ನು ರಕ್ಷಿಸುವುದು ಸರ್ಕಾರದ ಜವಾಬ್ದಾರಿ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ಬೆಳಗಾವಿ: ಮಹಿಳೆ ಮೇಲೆ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆಗೆ ವಹಿಸಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...