Homeಮುಖಪುಟಕನ್ನಡಿಗರು ₹4 ಲಕ್ಷ ಕೋಟಿ ತೆರಿಗೆ ಕಟ್ಟುತ್ತಿದ್ದಾರೆ, ಕೇಂದ್ರ ಕೇವಲ ₹50 ಸಾವಿರ ಕೋಟಿ ವಾಪಸ್...

ಕನ್ನಡಿಗರು ₹4 ಲಕ್ಷ ಕೋಟಿ ತೆರಿಗೆ ಕಟ್ಟುತ್ತಿದ್ದಾರೆ, ಕೇಂದ್ರ ಕೇವಲ ₹50 ಸಾವಿರ ಕೋಟಿ ವಾಪಸ್ ಕೊಡ್ತಿದೆ: ಸಿದ್ದರಾಮಯ್ಯ

- Advertisement -
- Advertisement -

ಕರ್ನಾಟಕದ ಜನರು ಕೇಂದ್ರ ಸರ್ಕಾರಕ್ಕೆ ನಾಲ್ಕು ಲಕ್ಷ ಕೋಟಿ ರೂಪಾಯಿ ತೆರಿಗೆ ಕಟ್ಟುತ್ತಿದ್ದಾರೆ. ಆದರೆ, ಕೇಂದ್ರ ನಮಗೆ ಕೊಡುತ್ತಿರುವುದು ಕೇವಲ ಐವತ್ತು ಸಾವಿರ ಕೋಟಿ ರೂ. ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಭಾನುವಾರ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ(ಎನ್‌ಡಿಆರ್‌ಎಫ್) ಕೇಂದ್ರ ಸರ್ಕಾರದ ಹಣವಲ್ಲ, ನಾವೇ ಕಟ್ಟಿದ ತೆರಿಗೆ ಎಂದರು.

“ನಮ್ಮ ರಾಜ್ಯದಿಂದ 4 ಲಕ್ಷ ಕೋಟಿ ರೂ. ತೆರಿಗೆ ಕೇಂದ್ರಕ್ಕೆ ಹೋಗ್ತಿದೆ. ಅದರಲ್ಲಿ 37 ಸಾವಿರ ರೂ. ಕೋಟಿ ತೆರಿಗೆ ಪಾಲು, ಕೇಂದ್ರ ಪುರಸ್ಕೃತ ಯೋಜನೆಗೆ 13 ಸಾವಿರ ಕೋಟಿ ರೂ. ಬರುತ್ತಿದೆ. ಇದು ನ್ಯಾಯವೇ? ಇದನ್ನು ಕೇಳಿದರೆ ಬಿಜೆಪಿಯವರು ಕೇಂದ್ರದ ಹಣ ಎಂದು ಜಗಳಕ್ಕೆ ಬರುತ್ತಾರೆ. ಇದು ಕನ್ನಡಿಗರು ಪಾವತಿಸಿದ ತೆರಿಗೆಯ ಹಣ” ಎಂದು ಸಿಎಂ ಹೇಳಿದರು.

ತೆರಿಗೆ ಸಂಗ್ರಹದಲ್ಲಿ ದೇಶದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದ್ದು, ಮಹಾರಾಷ್ಟ್ರದ ನಂತರದಲ್ಲಿ ಸ್ಥಾನದಲ್ಲಿದೆ. ಆದರೆ ನಮಗೆ ಸಿಕ್ಕಿದ್ದೇನು? ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿನ ಬರ ಪರಿಸ್ಥಿತಿಯ ಬಗ್ಗೆ ಚರ್ಚಿಸಲು ನಾನು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದೇನೆ. ಅವರು ಇನ್ನೂ ಅಪಾಯಿಂಟ್‌ಮೆಂಟ್ ನೀಡಿಲ್ಲ. ಮುಖ್ಯಮಂತ್ರಿಯ ಪರಿಸ್ಥಿತಿ ಇದು. ನಮ್ಮ ಸಚಿವರಿಗೂ ಭೇಟಿ ಮಾಡಲು ಅವಕಾಶ ನೀಡಿಲ್ಲ ಎಂದರು.

ಸೋಮವಾರ (ಡಿಸೆಂಬರ್ 18) ಕೇಂದ್ರ ಸಚಿವರನ್ನು ಭೇಟಿ ಮಾಡಲು ದೆಹಲಿಗೆ ಹೋಗುತ್ತಿದ್ದೇನೆ. 35,000 ಕೋಟಿಗೂ ಹೆಚ್ಚು ಬೆಳೆ ನಷ್ಟವಾಗಿದೆ. ನಾವು ನಿಯಮಾನುಸಾರ ಪರಿಹಾರ ಪಡೆಯಬೇಕಾಗಿದೆ ಎಂದು ಸಿಎಂ ಹೇಳಿದರು.

ವಿಧಾನಪರಿಷತ್ ಸದಸ್ಯ ಜಗದೀಶ್‌ ಶೆಟ್ಟರ್‌ ಅವರ 68ನೇ ಹುಟ್ಟುಹಬ್ಬದ ಅಂಗವಾಗಿ ಅವರ ನಿವಾಸಕ್ಕೆ ಭೇಟಿ ನೀಡಿದ್ದ ಸಿದ್ದರಾಮಯ್ಯ , ಶೆಟ್ಟರ್ ನಿವಾಸದಲ್ಲಿ ಉಪಹಾರ ಸೇವಿಸಿದರು.

ಲೋಕಸಭೆ ಚುನಾವಣೆಗೆ ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಶೆಟ್ಟರ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಕೇಳಿದ್ದಕ್ಕೆ, ಶೆಟ್ಟರ್ ಕೂಡ ಆಕಾಂಕ್ಷಿ ಎಂದು ನಾವು ಭಾವಿಸುತ್ತೇವೆ ಎಂದರು. ಈ ವೇಳೆ ಮಧ್ಯಪ್ರವೇಶಿಸಿದ ಶೆಟ್ಟರ್, ನಾನು ಆಕಾಂಕ್ಷಿ ಅಲ್ಲ ಎಂದು ಹೇಳಿದರು.

ಶಾಸಕರು, ಪರಾಜಿತ ಅಭ್ಯರ್ಥಿಗಳು ಮತ್ತು ಪಕ್ಷದ ಕಾರ್ಯಕರ್ತರ ಅಭಿಪ್ರಾಯಗಳನ್ನು ಆಧರಿಸಿ ಟಿಕೆಟ್ ನೀಡಲಾಗುವುದು. ಪ್ರತಿ ಜಿಲ್ಲೆಗೆ ನಿಯೋಜಿಸಲಾದ ಸಚಿವರು ಮೂರು ಆಕಾಂಕ್ಷಿಗಳ ಹೆಸರನ್ನು ನೀಡಲಿದ್ದಾರೆ. ಹೆಚ್ಚು ಸೂಕ್ತವಾಗಿರುವವರನ್ನು ಆಯ್ಕೆ ಮಾಡಲಾಗುವುದು ಎಂದು ಸಿಎಂ ತಿಳಿಸಿದರು.

ಈ ಬಾರಿಯೂ ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡುತ್ತೇವೆ. ಬಿಜೆಪಿಯವರು ಮುಸ್ಲಿಮರ ಮತ ಬೇಡ ಎನ್ನುತ್ತಾರೆ. ಮುಸ್ಲಿಮರು ಭಾರತೀಯರಲ್ಲವೇ? ನಮ್ಮದು ಬಹುಸಂಸ್ಕೃತಿಯ ದೇಶವಾಗಿದ್ದು, ಎಲ್ಲ ನಾಗರಿಕರನ್ನು ರಕ್ಷಿಸುವುದು ಸರ್ಕಾರದ ಜವಾಬ್ದಾರಿ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ಬೆಳಗಾವಿ: ಮಹಿಳೆ ಮೇಲೆ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆಗೆ ವಹಿಸಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...