Homeಮುಖಪುಟಕನ್ನಡಿಗರು ₹4 ಲಕ್ಷ ಕೋಟಿ ತೆರಿಗೆ ಕಟ್ಟುತ್ತಿದ್ದಾರೆ, ಕೇಂದ್ರ ಕೇವಲ ₹50 ಸಾವಿರ ಕೋಟಿ ವಾಪಸ್...

ಕನ್ನಡಿಗರು ₹4 ಲಕ್ಷ ಕೋಟಿ ತೆರಿಗೆ ಕಟ್ಟುತ್ತಿದ್ದಾರೆ, ಕೇಂದ್ರ ಕೇವಲ ₹50 ಸಾವಿರ ಕೋಟಿ ವಾಪಸ್ ಕೊಡ್ತಿದೆ: ಸಿದ್ದರಾಮಯ್ಯ

- Advertisement -
- Advertisement -

ಕರ್ನಾಟಕದ ಜನರು ಕೇಂದ್ರ ಸರ್ಕಾರಕ್ಕೆ ನಾಲ್ಕು ಲಕ್ಷ ಕೋಟಿ ರೂಪಾಯಿ ತೆರಿಗೆ ಕಟ್ಟುತ್ತಿದ್ದಾರೆ. ಆದರೆ, ಕೇಂದ್ರ ನಮಗೆ ಕೊಡುತ್ತಿರುವುದು ಕೇವಲ ಐವತ್ತು ಸಾವಿರ ಕೋಟಿ ರೂ. ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಭಾನುವಾರ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ(ಎನ್‌ಡಿಆರ್‌ಎಫ್) ಕೇಂದ್ರ ಸರ್ಕಾರದ ಹಣವಲ್ಲ, ನಾವೇ ಕಟ್ಟಿದ ತೆರಿಗೆ ಎಂದರು.

“ನಮ್ಮ ರಾಜ್ಯದಿಂದ 4 ಲಕ್ಷ ಕೋಟಿ ರೂ. ತೆರಿಗೆ ಕೇಂದ್ರಕ್ಕೆ ಹೋಗ್ತಿದೆ. ಅದರಲ್ಲಿ 37 ಸಾವಿರ ರೂ. ಕೋಟಿ ತೆರಿಗೆ ಪಾಲು, ಕೇಂದ್ರ ಪುರಸ್ಕೃತ ಯೋಜನೆಗೆ 13 ಸಾವಿರ ಕೋಟಿ ರೂ. ಬರುತ್ತಿದೆ. ಇದು ನ್ಯಾಯವೇ? ಇದನ್ನು ಕೇಳಿದರೆ ಬಿಜೆಪಿಯವರು ಕೇಂದ್ರದ ಹಣ ಎಂದು ಜಗಳಕ್ಕೆ ಬರುತ್ತಾರೆ. ಇದು ಕನ್ನಡಿಗರು ಪಾವತಿಸಿದ ತೆರಿಗೆಯ ಹಣ” ಎಂದು ಸಿಎಂ ಹೇಳಿದರು.

ತೆರಿಗೆ ಸಂಗ್ರಹದಲ್ಲಿ ದೇಶದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದ್ದು, ಮಹಾರಾಷ್ಟ್ರದ ನಂತರದಲ್ಲಿ ಸ್ಥಾನದಲ್ಲಿದೆ. ಆದರೆ ನಮಗೆ ಸಿಕ್ಕಿದ್ದೇನು? ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿನ ಬರ ಪರಿಸ್ಥಿತಿಯ ಬಗ್ಗೆ ಚರ್ಚಿಸಲು ನಾನು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದೇನೆ. ಅವರು ಇನ್ನೂ ಅಪಾಯಿಂಟ್‌ಮೆಂಟ್ ನೀಡಿಲ್ಲ. ಮುಖ್ಯಮಂತ್ರಿಯ ಪರಿಸ್ಥಿತಿ ಇದು. ನಮ್ಮ ಸಚಿವರಿಗೂ ಭೇಟಿ ಮಾಡಲು ಅವಕಾಶ ನೀಡಿಲ್ಲ ಎಂದರು.

ಸೋಮವಾರ (ಡಿಸೆಂಬರ್ 18) ಕೇಂದ್ರ ಸಚಿವರನ್ನು ಭೇಟಿ ಮಾಡಲು ದೆಹಲಿಗೆ ಹೋಗುತ್ತಿದ್ದೇನೆ. 35,000 ಕೋಟಿಗೂ ಹೆಚ್ಚು ಬೆಳೆ ನಷ್ಟವಾಗಿದೆ. ನಾವು ನಿಯಮಾನುಸಾರ ಪರಿಹಾರ ಪಡೆಯಬೇಕಾಗಿದೆ ಎಂದು ಸಿಎಂ ಹೇಳಿದರು.

ವಿಧಾನಪರಿಷತ್ ಸದಸ್ಯ ಜಗದೀಶ್‌ ಶೆಟ್ಟರ್‌ ಅವರ 68ನೇ ಹುಟ್ಟುಹಬ್ಬದ ಅಂಗವಾಗಿ ಅವರ ನಿವಾಸಕ್ಕೆ ಭೇಟಿ ನೀಡಿದ್ದ ಸಿದ್ದರಾಮಯ್ಯ , ಶೆಟ್ಟರ್ ನಿವಾಸದಲ್ಲಿ ಉಪಹಾರ ಸೇವಿಸಿದರು.

ಲೋಕಸಭೆ ಚುನಾವಣೆಗೆ ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಶೆಟ್ಟರ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಕೇಳಿದ್ದಕ್ಕೆ, ಶೆಟ್ಟರ್ ಕೂಡ ಆಕಾಂಕ್ಷಿ ಎಂದು ನಾವು ಭಾವಿಸುತ್ತೇವೆ ಎಂದರು. ಈ ವೇಳೆ ಮಧ್ಯಪ್ರವೇಶಿಸಿದ ಶೆಟ್ಟರ್, ನಾನು ಆಕಾಂಕ್ಷಿ ಅಲ್ಲ ಎಂದು ಹೇಳಿದರು.

ಶಾಸಕರು, ಪರಾಜಿತ ಅಭ್ಯರ್ಥಿಗಳು ಮತ್ತು ಪಕ್ಷದ ಕಾರ್ಯಕರ್ತರ ಅಭಿಪ್ರಾಯಗಳನ್ನು ಆಧರಿಸಿ ಟಿಕೆಟ್ ನೀಡಲಾಗುವುದು. ಪ್ರತಿ ಜಿಲ್ಲೆಗೆ ನಿಯೋಜಿಸಲಾದ ಸಚಿವರು ಮೂರು ಆಕಾಂಕ್ಷಿಗಳ ಹೆಸರನ್ನು ನೀಡಲಿದ್ದಾರೆ. ಹೆಚ್ಚು ಸೂಕ್ತವಾಗಿರುವವರನ್ನು ಆಯ್ಕೆ ಮಾಡಲಾಗುವುದು ಎಂದು ಸಿಎಂ ತಿಳಿಸಿದರು.

ಈ ಬಾರಿಯೂ ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡುತ್ತೇವೆ. ಬಿಜೆಪಿಯವರು ಮುಸ್ಲಿಮರ ಮತ ಬೇಡ ಎನ್ನುತ್ತಾರೆ. ಮುಸ್ಲಿಮರು ಭಾರತೀಯರಲ್ಲವೇ? ನಮ್ಮದು ಬಹುಸಂಸ್ಕೃತಿಯ ದೇಶವಾಗಿದ್ದು, ಎಲ್ಲ ನಾಗರಿಕರನ್ನು ರಕ್ಷಿಸುವುದು ಸರ್ಕಾರದ ಜವಾಬ್ದಾರಿ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ಬೆಳಗಾವಿ: ಮಹಿಳೆ ಮೇಲೆ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆಗೆ ವಹಿಸಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...