Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಮಾಸ್ಕ್ ಧರಿಸದ ಮೇಕೆ ಬಂಧಿಸಿದ ಕಾನ್ಪುರ ಪೊಲೀಸರು?- ತಪ್ಪು ವರದಿ ಮಾಡಿದ ಮಾಧ್ಯಮಗಳು

ಫ್ಯಾಕ್ಟ್‌ಚೆಕ್: ಮಾಸ್ಕ್ ಧರಿಸದ ಮೇಕೆ ಬಂಧಿಸಿದ ಕಾನ್ಪುರ ಪೊಲೀಸರು?- ತಪ್ಪು ವರದಿ ಮಾಡಿದ ಮಾಧ್ಯಮಗಳು

- Advertisement -
- Advertisement -

ಮಾಸ್ಕ್ ಧರಿಸದ ಮೇಕೆ ಒಂದನ್ನು ಕಾನ್ಪುರ ಪೊಲೀಸರು ಬಂಧಿಸಿದ್ದಾರೆ ಎಂಬ ವಿಲಕ್ಷಣ ಸುದ್ದಿ ಜುಲೈ 27 ರಂದು ಹಲವು ಮಾಧ್ಯಮಗಳಲ್ಲಿ ಪ್ರಕಟವಾಯಿತು. ಕನ್ನಡದ ಸುವರ್ಣ ಟಿವಿ ಸೇರಿದಂತೆ, ನ್ಯಾಷನಲ್ ಹೆರಾಲ್ಡ್, ಒರಿಸ್ಸಾ ಪೋಸ್ಟ್ ಮತ್ತು ನ್ಯೂಸ್ 18 ಇಂಗ್ಲಿಷ್‌ ಸೇರಿದಂತೆ ಹಲವು ಪತ್ರಿಕೆಗಳು ಇದೇ ಸುದ್ದಿಯನ್ನು ವರದಿ ಮಾಡಿವೆ.

ಸುದ್ದಿ ಸಂಸ್ಥೆ ಐಎಎನ್‌ಎಸ್ ಪ್ರಕಾರ “ಈ ಘಟನೆ ವಾರಾಂತ್ಯದಲ್ಲಿ ನಡೆಯಿತು ಮತ್ತು ಬೆಕೊಂಗಂಜ್ ಪೊಲೀಸರು ಜೀಪ್‌ನಲ್ಲಿ ಮೇಕೆ ಎತ್ತಿಕೊಂಡು ಪೊಲೀಸ್ ಠಾಣೆಗೆ ಕರೆದೊಯ್ದರು ಎಂದು ಪೊಲೀಸರು ತಮ್ಮ ಜೀಪಿನಲ್ಲಿ ಮೇಕೆ ತುಂಬುವ ವಿಡಿಯೋವನ್ನು ಹಲವರು ಪ್ರಸಾರ ಮಾಡಿದ್ದಾರೆ.

ಟೈಮ್ಸ್ ನೌ, ರಿಪಬ್ಲಿಕ್ ಮತ್ತು ಇಂಡಿಯಾ ಟೈಮ್ಸ್ ಇದೇ ರೀತಿಯ ವರದಿಗಳನ್ನು ಮಾಡಿವೆ. ಕೆಲ ಮಾಧ್ಯಮಗಳು ವ್ಯಕ್ತಿಯೊಬ್ಬ ಮಾಸ್ಕ್ ಧರಿಸದೆ ಮೇಕೆಯೊಂದನ್ನು ಹಿಡಿದು ಹೋಗುತ್ತಿದ್ದ, ಪೊಲೀಸರು ಬಂದ ತಕ್ಷಣ ಮೇಕೆ ಬಿಟ್ಟು ಓಡಿ ಹೋಗಿದ್ದಾನೆ. ಪೊಲೀಸರು ಮೇಕೆಯನ್ನು ಬಂಧಿಸಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ತಪ್ಪು ವರದಿ

ಮೇಲ್ನೋಟಕ್ಕೆ ಇದು ಹಾಸ್ಯದ ಸಂಗತಿಯಾಗಿ ಗೋಚರಿಸುತ್ತದೆ. ಸಾಮಾನ್ಯ ಜ್ಞಾನವಿರುವ ಯಾರೂ ಕೂಡ ಇದನ್ನು ನಂಬಲು ಸಾಧ್ಯವಿಲ್ಲ. ಆದರೆ ಹಲವು ಮಾಧ್ಯಮಗಳು ಇದನ್ನು ‘ಸುದ್ದಿ’ಯನ್ನಾಗಿ ಪ್ರಕಟ ಮಾಡಿವೆ. ಜನರಲ್ಲಿ ಗೊಂದಲ ಹುಟ್ಟಿಸುವುದು ಆ ಮೂಲಕ ಅವರು ಈ ಸುದ್ದಿಯನ್ನು ಓದುವಂತೆ ಮಾಡುವುದು ಅವರ ಉದ್ದೇಶವಾಗಿದೆ. ಪೊಲೀಸ್ ಜೀಪ್‌ಗೆ ಮೇಕೆ ತುಂಬುವ ವಿಡಿಯೋವನ್ನು ಮಾಧ್ಯಮಗಳು ಪದೇ ಪದೇ ತೋರಿಸಿವೆ. ಇನ್ನು ಕೆಲವರು ತನ್ನ ಮೇಕೆಯನ್ನು ಪೊಲೀಸರು ಬಲವಂತವಾಗಿ ತೆಗೆದುಕೊಂಡು ಹೋಗಿದ್ದಾರೆ ಎಂದು ವ್ಯಕ್ತಿಯೊಬ್ಬರು ಆರೋಪಿಸಿದ್ದಾರೆ ಎಂದು ಟ್ವಿಟ್ಟರ್‌ನಲ್ಲಿ ದೂರಿದ್ದಾರೆ. ಒಟ್ಟಿನಲ್ಲಿ ಗಾಸಿಪ್ ಹುಟ್ಟುಹಾಕುವಲ್ಲಿ ಮಾಧ್ಯಮಗಳು ಯಶಸ್ವಿಯಾಗಿವೆ. ಆದರೆ ಈ ಎಲ್ಲಾ ವರದಿಗಳು ತಪ್ಪಾಗಿವೆ.

ವಾಸ್ತವವೇನು?

ಲಾಕ್‌ಡೌನ್ ಸಮಯದಲ್ಲಿ ದಾದಾ ಮಿಯಾನ್ ಎಂಬ ಪ್ರದೇಶದಲ್ಲಿ ಮಾಲೀಕರಿಲ್ಲದ ಮೇಕೆಯೊಂದು ತಿರುಗಾಡುತ್ತಿದೆ. ಈ ಕುರಿತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಕಾರಣ ಬೆಕೊಂಗಂಜ್ ಪೊಲೀಸರು ಅದನ್ನು ಠಾಣೆಗೆ ಕರೆತಂದಿದ್ದಾರೆ. ಸ್ವಲ್ಪ ಸಮಯದ ಬಳಿಕ ಅದರ ಮಾಲೀಕ ಮೊಹಮ್ಮದ್ ಅಲಿಯ ಮಗ ಖಾನಿಕುಜ್ಮಾ ಅವರಿಗೆ ಹಸ್ತಾಂತರಿಸಲಾಗಿದೆ ಎಂದು ಕಾನ್ಪುರ್ ಪೊಲೀಸರು ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.

ಆಲ್ಟ್ ನ್ಯೂಸ್ ಈ ಕುರಿತು ಫ್ಯಾಕ್ಟ್‌ಚೆಕ್ ನಡೆಸಿದ್ದು, ಬೆಕೊಂಗಂಜ್ ಪೊಲೀಸರನ್ನು ಕೇಳಿದಾಗ “ಮಾಲೀಕರಿಲ್ಲದೆ ತಿರುಗಾಡುತ್ತಿದ್ದ ಮೇಕೆಯನ್ನು ಕರೆತಂದಿದ್ದವು. ನಂತರ ಅದರ ಮಾಲೀಕರಿಗೆ ಹಸ್ತಾಂತರಿಸಲಾಗಿದೆ. ಮಾಸ್ಕ್ ಧರಿಸದ ಕಾರಣ ನಾವು ಮೇಕೆಯನ್ನು ಬಂಧಿಸಿದ್ದೇವೆ ಎಂಬು ಸುದ್ದಿ ಸಂಪೂರ್ಣ ಸುಳ್ಳು” ಎಂದಿದ್ದಾರೆ.

ಮೇಕೆ ಮಾಲೀಕರಾದ ಮೊಹಮ್ಮದ್ ಅಲಿ, ಪತ್ರಿಕೆಗಳಲ್ಲಿನ ಸುದ್ದಿ ವರದಿಗಳನ್ನು ನೋಡಿ ನಕ್ಕಿದ್ದಾರೆ. “ಪೊಲೀಸರು ನಮಗೆ ಸಹಾಯ ಮಾಡಿದರು. ಅವರು ಅದನ್ನು ಪೊಲೀಸ್ ಠಾಣೆಗೆ ತಂದು ನಮಗೆ ತಿಳಿಸದಿದ್ದರೆ ನಮ್ಮ ಮೇಕೆ ಕಳೆದುಹೋಗುತ್ತದೆ” ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ Fact check : ಜನ ಮನೆಯಿಂದ ಹೊರಬರದಿರಲು ಬೀದಿಗಳಿಗೆ 800 ಸಿಂಹಗಳನ್ನು ಬಿಟ್ಟ ರಷ್ಯಾ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...