Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಮಾಸ್ಕ್ ಧರಿಸದ ಮೇಕೆ ಬಂಧಿಸಿದ ಕಾನ್ಪುರ ಪೊಲೀಸರು?- ತಪ್ಪು ವರದಿ ಮಾಡಿದ ಮಾಧ್ಯಮಗಳು

ಫ್ಯಾಕ್ಟ್‌ಚೆಕ್: ಮಾಸ್ಕ್ ಧರಿಸದ ಮೇಕೆ ಬಂಧಿಸಿದ ಕಾನ್ಪುರ ಪೊಲೀಸರು?- ತಪ್ಪು ವರದಿ ಮಾಡಿದ ಮಾಧ್ಯಮಗಳು

- Advertisement -
- Advertisement -

ಮಾಸ್ಕ್ ಧರಿಸದ ಮೇಕೆ ಒಂದನ್ನು ಕಾನ್ಪುರ ಪೊಲೀಸರು ಬಂಧಿಸಿದ್ದಾರೆ ಎಂಬ ವಿಲಕ್ಷಣ ಸುದ್ದಿ ಜುಲೈ 27 ರಂದು ಹಲವು ಮಾಧ್ಯಮಗಳಲ್ಲಿ ಪ್ರಕಟವಾಯಿತು. ಕನ್ನಡದ ಸುವರ್ಣ ಟಿವಿ ಸೇರಿದಂತೆ, ನ್ಯಾಷನಲ್ ಹೆರಾಲ್ಡ್, ಒರಿಸ್ಸಾ ಪೋಸ್ಟ್ ಮತ್ತು ನ್ಯೂಸ್ 18 ಇಂಗ್ಲಿಷ್‌ ಸೇರಿದಂತೆ ಹಲವು ಪತ್ರಿಕೆಗಳು ಇದೇ ಸುದ್ದಿಯನ್ನು ವರದಿ ಮಾಡಿವೆ.

ಸುದ್ದಿ ಸಂಸ್ಥೆ ಐಎಎನ್‌ಎಸ್ ಪ್ರಕಾರ “ಈ ಘಟನೆ ವಾರಾಂತ್ಯದಲ್ಲಿ ನಡೆಯಿತು ಮತ್ತು ಬೆಕೊಂಗಂಜ್ ಪೊಲೀಸರು ಜೀಪ್‌ನಲ್ಲಿ ಮೇಕೆ ಎತ್ತಿಕೊಂಡು ಪೊಲೀಸ್ ಠಾಣೆಗೆ ಕರೆದೊಯ್ದರು ಎಂದು ಪೊಲೀಸರು ತಮ್ಮ ಜೀಪಿನಲ್ಲಿ ಮೇಕೆ ತುಂಬುವ ವಿಡಿಯೋವನ್ನು ಹಲವರು ಪ್ರಸಾರ ಮಾಡಿದ್ದಾರೆ.

ಟೈಮ್ಸ್ ನೌ, ರಿಪಬ್ಲಿಕ್ ಮತ್ತು ಇಂಡಿಯಾ ಟೈಮ್ಸ್ ಇದೇ ರೀತಿಯ ವರದಿಗಳನ್ನು ಮಾಡಿವೆ. ಕೆಲ ಮಾಧ್ಯಮಗಳು ವ್ಯಕ್ತಿಯೊಬ್ಬ ಮಾಸ್ಕ್ ಧರಿಸದೆ ಮೇಕೆಯೊಂದನ್ನು ಹಿಡಿದು ಹೋಗುತ್ತಿದ್ದ, ಪೊಲೀಸರು ಬಂದ ತಕ್ಷಣ ಮೇಕೆ ಬಿಟ್ಟು ಓಡಿ ಹೋಗಿದ್ದಾನೆ. ಪೊಲೀಸರು ಮೇಕೆಯನ್ನು ಬಂಧಿಸಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ತಪ್ಪು ವರದಿ

ಮೇಲ್ನೋಟಕ್ಕೆ ಇದು ಹಾಸ್ಯದ ಸಂಗತಿಯಾಗಿ ಗೋಚರಿಸುತ್ತದೆ. ಸಾಮಾನ್ಯ ಜ್ಞಾನವಿರುವ ಯಾರೂ ಕೂಡ ಇದನ್ನು ನಂಬಲು ಸಾಧ್ಯವಿಲ್ಲ. ಆದರೆ ಹಲವು ಮಾಧ್ಯಮಗಳು ಇದನ್ನು ‘ಸುದ್ದಿ’ಯನ್ನಾಗಿ ಪ್ರಕಟ ಮಾಡಿವೆ. ಜನರಲ್ಲಿ ಗೊಂದಲ ಹುಟ್ಟಿಸುವುದು ಆ ಮೂಲಕ ಅವರು ಈ ಸುದ್ದಿಯನ್ನು ಓದುವಂತೆ ಮಾಡುವುದು ಅವರ ಉದ್ದೇಶವಾಗಿದೆ. ಪೊಲೀಸ್ ಜೀಪ್‌ಗೆ ಮೇಕೆ ತುಂಬುವ ವಿಡಿಯೋವನ್ನು ಮಾಧ್ಯಮಗಳು ಪದೇ ಪದೇ ತೋರಿಸಿವೆ. ಇನ್ನು ಕೆಲವರು ತನ್ನ ಮೇಕೆಯನ್ನು ಪೊಲೀಸರು ಬಲವಂತವಾಗಿ ತೆಗೆದುಕೊಂಡು ಹೋಗಿದ್ದಾರೆ ಎಂದು ವ್ಯಕ್ತಿಯೊಬ್ಬರು ಆರೋಪಿಸಿದ್ದಾರೆ ಎಂದು ಟ್ವಿಟ್ಟರ್‌ನಲ್ಲಿ ದೂರಿದ್ದಾರೆ. ಒಟ್ಟಿನಲ್ಲಿ ಗಾಸಿಪ್ ಹುಟ್ಟುಹಾಕುವಲ್ಲಿ ಮಾಧ್ಯಮಗಳು ಯಶಸ್ವಿಯಾಗಿವೆ. ಆದರೆ ಈ ಎಲ್ಲಾ ವರದಿಗಳು ತಪ್ಪಾಗಿವೆ.

ವಾಸ್ತವವೇನು?

ಲಾಕ್‌ಡೌನ್ ಸಮಯದಲ್ಲಿ ದಾದಾ ಮಿಯಾನ್ ಎಂಬ ಪ್ರದೇಶದಲ್ಲಿ ಮಾಲೀಕರಿಲ್ಲದ ಮೇಕೆಯೊಂದು ತಿರುಗಾಡುತ್ತಿದೆ. ಈ ಕುರಿತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಕಾರಣ ಬೆಕೊಂಗಂಜ್ ಪೊಲೀಸರು ಅದನ್ನು ಠಾಣೆಗೆ ಕರೆತಂದಿದ್ದಾರೆ. ಸ್ವಲ್ಪ ಸಮಯದ ಬಳಿಕ ಅದರ ಮಾಲೀಕ ಮೊಹಮ್ಮದ್ ಅಲಿಯ ಮಗ ಖಾನಿಕುಜ್ಮಾ ಅವರಿಗೆ ಹಸ್ತಾಂತರಿಸಲಾಗಿದೆ ಎಂದು ಕಾನ್ಪುರ್ ಪೊಲೀಸರು ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.

ಆಲ್ಟ್ ನ್ಯೂಸ್ ಈ ಕುರಿತು ಫ್ಯಾಕ್ಟ್‌ಚೆಕ್ ನಡೆಸಿದ್ದು, ಬೆಕೊಂಗಂಜ್ ಪೊಲೀಸರನ್ನು ಕೇಳಿದಾಗ “ಮಾಲೀಕರಿಲ್ಲದೆ ತಿರುಗಾಡುತ್ತಿದ್ದ ಮೇಕೆಯನ್ನು ಕರೆತಂದಿದ್ದವು. ನಂತರ ಅದರ ಮಾಲೀಕರಿಗೆ ಹಸ್ತಾಂತರಿಸಲಾಗಿದೆ. ಮಾಸ್ಕ್ ಧರಿಸದ ಕಾರಣ ನಾವು ಮೇಕೆಯನ್ನು ಬಂಧಿಸಿದ್ದೇವೆ ಎಂಬು ಸುದ್ದಿ ಸಂಪೂರ್ಣ ಸುಳ್ಳು” ಎಂದಿದ್ದಾರೆ.

ಮೇಕೆ ಮಾಲೀಕರಾದ ಮೊಹಮ್ಮದ್ ಅಲಿ, ಪತ್ರಿಕೆಗಳಲ್ಲಿನ ಸುದ್ದಿ ವರದಿಗಳನ್ನು ನೋಡಿ ನಕ್ಕಿದ್ದಾರೆ. “ಪೊಲೀಸರು ನಮಗೆ ಸಹಾಯ ಮಾಡಿದರು. ಅವರು ಅದನ್ನು ಪೊಲೀಸ್ ಠಾಣೆಗೆ ತಂದು ನಮಗೆ ತಿಳಿಸದಿದ್ದರೆ ನಮ್ಮ ಮೇಕೆ ಕಳೆದುಹೋಗುತ್ತದೆ” ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ Fact check : ಜನ ಮನೆಯಿಂದ ಹೊರಬರದಿರಲು ಬೀದಿಗಳಿಗೆ 800 ಸಿಂಹಗಳನ್ನು ಬಿಟ್ಟ ರಷ್ಯಾ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...