Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಮಾಸ್ಕ್ ಧರಿಸದ ಮೇಕೆ ಬಂಧಿಸಿದ ಕಾನ್ಪುರ ಪೊಲೀಸರು?- ತಪ್ಪು ವರದಿ ಮಾಡಿದ ಮಾಧ್ಯಮಗಳು

ಫ್ಯಾಕ್ಟ್‌ಚೆಕ್: ಮಾಸ್ಕ್ ಧರಿಸದ ಮೇಕೆ ಬಂಧಿಸಿದ ಕಾನ್ಪುರ ಪೊಲೀಸರು?- ತಪ್ಪು ವರದಿ ಮಾಡಿದ ಮಾಧ್ಯಮಗಳು

- Advertisement -
- Advertisement -

ಮಾಸ್ಕ್ ಧರಿಸದ ಮೇಕೆ ಒಂದನ್ನು ಕಾನ್ಪುರ ಪೊಲೀಸರು ಬಂಧಿಸಿದ್ದಾರೆ ಎಂಬ ವಿಲಕ್ಷಣ ಸುದ್ದಿ ಜುಲೈ 27 ರಂದು ಹಲವು ಮಾಧ್ಯಮಗಳಲ್ಲಿ ಪ್ರಕಟವಾಯಿತು. ಕನ್ನಡದ ಸುವರ್ಣ ಟಿವಿ ಸೇರಿದಂತೆ, ನ್ಯಾಷನಲ್ ಹೆರಾಲ್ಡ್, ಒರಿಸ್ಸಾ ಪೋಸ್ಟ್ ಮತ್ತು ನ್ಯೂಸ್ 18 ಇಂಗ್ಲಿಷ್‌ ಸೇರಿದಂತೆ ಹಲವು ಪತ್ರಿಕೆಗಳು ಇದೇ ಸುದ್ದಿಯನ್ನು ವರದಿ ಮಾಡಿವೆ.

ಸುದ್ದಿ ಸಂಸ್ಥೆ ಐಎಎನ್‌ಎಸ್ ಪ್ರಕಾರ “ಈ ಘಟನೆ ವಾರಾಂತ್ಯದಲ್ಲಿ ನಡೆಯಿತು ಮತ್ತು ಬೆಕೊಂಗಂಜ್ ಪೊಲೀಸರು ಜೀಪ್‌ನಲ್ಲಿ ಮೇಕೆ ಎತ್ತಿಕೊಂಡು ಪೊಲೀಸ್ ಠಾಣೆಗೆ ಕರೆದೊಯ್ದರು ಎಂದು ಪೊಲೀಸರು ತಮ್ಮ ಜೀಪಿನಲ್ಲಿ ಮೇಕೆ ತುಂಬುವ ವಿಡಿಯೋವನ್ನು ಹಲವರು ಪ್ರಸಾರ ಮಾಡಿದ್ದಾರೆ.

ಟೈಮ್ಸ್ ನೌ, ರಿಪಬ್ಲಿಕ್ ಮತ್ತು ಇಂಡಿಯಾ ಟೈಮ್ಸ್ ಇದೇ ರೀತಿಯ ವರದಿಗಳನ್ನು ಮಾಡಿವೆ. ಕೆಲ ಮಾಧ್ಯಮಗಳು ವ್ಯಕ್ತಿಯೊಬ್ಬ ಮಾಸ್ಕ್ ಧರಿಸದೆ ಮೇಕೆಯೊಂದನ್ನು ಹಿಡಿದು ಹೋಗುತ್ತಿದ್ದ, ಪೊಲೀಸರು ಬಂದ ತಕ್ಷಣ ಮೇಕೆ ಬಿಟ್ಟು ಓಡಿ ಹೋಗಿದ್ದಾನೆ. ಪೊಲೀಸರು ಮೇಕೆಯನ್ನು ಬಂಧಿಸಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ತಪ್ಪು ವರದಿ

ಮೇಲ್ನೋಟಕ್ಕೆ ಇದು ಹಾಸ್ಯದ ಸಂಗತಿಯಾಗಿ ಗೋಚರಿಸುತ್ತದೆ. ಸಾಮಾನ್ಯ ಜ್ಞಾನವಿರುವ ಯಾರೂ ಕೂಡ ಇದನ್ನು ನಂಬಲು ಸಾಧ್ಯವಿಲ್ಲ. ಆದರೆ ಹಲವು ಮಾಧ್ಯಮಗಳು ಇದನ್ನು ‘ಸುದ್ದಿ’ಯನ್ನಾಗಿ ಪ್ರಕಟ ಮಾಡಿವೆ. ಜನರಲ್ಲಿ ಗೊಂದಲ ಹುಟ್ಟಿಸುವುದು ಆ ಮೂಲಕ ಅವರು ಈ ಸುದ್ದಿಯನ್ನು ಓದುವಂತೆ ಮಾಡುವುದು ಅವರ ಉದ್ದೇಶವಾಗಿದೆ. ಪೊಲೀಸ್ ಜೀಪ್‌ಗೆ ಮೇಕೆ ತುಂಬುವ ವಿಡಿಯೋವನ್ನು ಮಾಧ್ಯಮಗಳು ಪದೇ ಪದೇ ತೋರಿಸಿವೆ. ಇನ್ನು ಕೆಲವರು ತನ್ನ ಮೇಕೆಯನ್ನು ಪೊಲೀಸರು ಬಲವಂತವಾಗಿ ತೆಗೆದುಕೊಂಡು ಹೋಗಿದ್ದಾರೆ ಎಂದು ವ್ಯಕ್ತಿಯೊಬ್ಬರು ಆರೋಪಿಸಿದ್ದಾರೆ ಎಂದು ಟ್ವಿಟ್ಟರ್‌ನಲ್ಲಿ ದೂರಿದ್ದಾರೆ. ಒಟ್ಟಿನಲ್ಲಿ ಗಾಸಿಪ್ ಹುಟ್ಟುಹಾಕುವಲ್ಲಿ ಮಾಧ್ಯಮಗಳು ಯಶಸ್ವಿಯಾಗಿವೆ. ಆದರೆ ಈ ಎಲ್ಲಾ ವರದಿಗಳು ತಪ್ಪಾಗಿವೆ.

ವಾಸ್ತವವೇನು?

ಲಾಕ್‌ಡೌನ್ ಸಮಯದಲ್ಲಿ ದಾದಾ ಮಿಯಾನ್ ಎಂಬ ಪ್ರದೇಶದಲ್ಲಿ ಮಾಲೀಕರಿಲ್ಲದ ಮೇಕೆಯೊಂದು ತಿರುಗಾಡುತ್ತಿದೆ. ಈ ಕುರಿತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಕಾರಣ ಬೆಕೊಂಗಂಜ್ ಪೊಲೀಸರು ಅದನ್ನು ಠಾಣೆಗೆ ಕರೆತಂದಿದ್ದಾರೆ. ಸ್ವಲ್ಪ ಸಮಯದ ಬಳಿಕ ಅದರ ಮಾಲೀಕ ಮೊಹಮ್ಮದ್ ಅಲಿಯ ಮಗ ಖಾನಿಕುಜ್ಮಾ ಅವರಿಗೆ ಹಸ್ತಾಂತರಿಸಲಾಗಿದೆ ಎಂದು ಕಾನ್ಪುರ್ ಪೊಲೀಸರು ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.

ಆಲ್ಟ್ ನ್ಯೂಸ್ ಈ ಕುರಿತು ಫ್ಯಾಕ್ಟ್‌ಚೆಕ್ ನಡೆಸಿದ್ದು, ಬೆಕೊಂಗಂಜ್ ಪೊಲೀಸರನ್ನು ಕೇಳಿದಾಗ “ಮಾಲೀಕರಿಲ್ಲದೆ ತಿರುಗಾಡುತ್ತಿದ್ದ ಮೇಕೆಯನ್ನು ಕರೆತಂದಿದ್ದವು. ನಂತರ ಅದರ ಮಾಲೀಕರಿಗೆ ಹಸ್ತಾಂತರಿಸಲಾಗಿದೆ. ಮಾಸ್ಕ್ ಧರಿಸದ ಕಾರಣ ನಾವು ಮೇಕೆಯನ್ನು ಬಂಧಿಸಿದ್ದೇವೆ ಎಂಬು ಸುದ್ದಿ ಸಂಪೂರ್ಣ ಸುಳ್ಳು” ಎಂದಿದ್ದಾರೆ.

ಮೇಕೆ ಮಾಲೀಕರಾದ ಮೊಹಮ್ಮದ್ ಅಲಿ, ಪತ್ರಿಕೆಗಳಲ್ಲಿನ ಸುದ್ದಿ ವರದಿಗಳನ್ನು ನೋಡಿ ನಕ್ಕಿದ್ದಾರೆ. “ಪೊಲೀಸರು ನಮಗೆ ಸಹಾಯ ಮಾಡಿದರು. ಅವರು ಅದನ್ನು ಪೊಲೀಸ್ ಠಾಣೆಗೆ ತಂದು ನಮಗೆ ತಿಳಿಸದಿದ್ದರೆ ನಮ್ಮ ಮೇಕೆ ಕಳೆದುಹೋಗುತ್ತದೆ” ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ Fact check : ಜನ ಮನೆಯಿಂದ ಹೊರಬರದಿರಲು ಬೀದಿಗಳಿಗೆ 800 ಸಿಂಹಗಳನ್ನು ಬಿಟ್ಟ ರಷ್ಯಾ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...