Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಮಾಸ್ಕ್ ಧರಿಸದ ಮೇಕೆ ಬಂಧಿಸಿದ ಕಾನ್ಪುರ ಪೊಲೀಸರು?- ತಪ್ಪು ವರದಿ ಮಾಡಿದ ಮಾಧ್ಯಮಗಳು

ಫ್ಯಾಕ್ಟ್‌ಚೆಕ್: ಮಾಸ್ಕ್ ಧರಿಸದ ಮೇಕೆ ಬಂಧಿಸಿದ ಕಾನ್ಪುರ ಪೊಲೀಸರು?- ತಪ್ಪು ವರದಿ ಮಾಡಿದ ಮಾಧ್ಯಮಗಳು

- Advertisement -
- Advertisement -

ಮಾಸ್ಕ್ ಧರಿಸದ ಮೇಕೆ ಒಂದನ್ನು ಕಾನ್ಪುರ ಪೊಲೀಸರು ಬಂಧಿಸಿದ್ದಾರೆ ಎಂಬ ವಿಲಕ್ಷಣ ಸುದ್ದಿ ಜುಲೈ 27 ರಂದು ಹಲವು ಮಾಧ್ಯಮಗಳಲ್ಲಿ ಪ್ರಕಟವಾಯಿತು. ಕನ್ನಡದ ಸುವರ್ಣ ಟಿವಿ ಸೇರಿದಂತೆ, ನ್ಯಾಷನಲ್ ಹೆರಾಲ್ಡ್, ಒರಿಸ್ಸಾ ಪೋಸ್ಟ್ ಮತ್ತು ನ್ಯೂಸ್ 18 ಇಂಗ್ಲಿಷ್‌ ಸೇರಿದಂತೆ ಹಲವು ಪತ್ರಿಕೆಗಳು ಇದೇ ಸುದ್ದಿಯನ್ನು ವರದಿ ಮಾಡಿವೆ.

ಸುದ್ದಿ ಸಂಸ್ಥೆ ಐಎಎನ್‌ಎಸ್ ಪ್ರಕಾರ “ಈ ಘಟನೆ ವಾರಾಂತ್ಯದಲ್ಲಿ ನಡೆಯಿತು ಮತ್ತು ಬೆಕೊಂಗಂಜ್ ಪೊಲೀಸರು ಜೀಪ್‌ನಲ್ಲಿ ಮೇಕೆ ಎತ್ತಿಕೊಂಡು ಪೊಲೀಸ್ ಠಾಣೆಗೆ ಕರೆದೊಯ್ದರು ಎಂದು ಪೊಲೀಸರು ತಮ್ಮ ಜೀಪಿನಲ್ಲಿ ಮೇಕೆ ತುಂಬುವ ವಿಡಿಯೋವನ್ನು ಹಲವರು ಪ್ರಸಾರ ಮಾಡಿದ್ದಾರೆ.

ಟೈಮ್ಸ್ ನೌ, ರಿಪಬ್ಲಿಕ್ ಮತ್ತು ಇಂಡಿಯಾ ಟೈಮ್ಸ್ ಇದೇ ರೀತಿಯ ವರದಿಗಳನ್ನು ಮಾಡಿವೆ. ಕೆಲ ಮಾಧ್ಯಮಗಳು ವ್ಯಕ್ತಿಯೊಬ್ಬ ಮಾಸ್ಕ್ ಧರಿಸದೆ ಮೇಕೆಯೊಂದನ್ನು ಹಿಡಿದು ಹೋಗುತ್ತಿದ್ದ, ಪೊಲೀಸರು ಬಂದ ತಕ್ಷಣ ಮೇಕೆ ಬಿಟ್ಟು ಓಡಿ ಹೋಗಿದ್ದಾನೆ. ಪೊಲೀಸರು ಮೇಕೆಯನ್ನು ಬಂಧಿಸಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ತಪ್ಪು ವರದಿ

ಮೇಲ್ನೋಟಕ್ಕೆ ಇದು ಹಾಸ್ಯದ ಸಂಗತಿಯಾಗಿ ಗೋಚರಿಸುತ್ತದೆ. ಸಾಮಾನ್ಯ ಜ್ಞಾನವಿರುವ ಯಾರೂ ಕೂಡ ಇದನ್ನು ನಂಬಲು ಸಾಧ್ಯವಿಲ್ಲ. ಆದರೆ ಹಲವು ಮಾಧ್ಯಮಗಳು ಇದನ್ನು ‘ಸುದ್ದಿ’ಯನ್ನಾಗಿ ಪ್ರಕಟ ಮಾಡಿವೆ. ಜನರಲ್ಲಿ ಗೊಂದಲ ಹುಟ್ಟಿಸುವುದು ಆ ಮೂಲಕ ಅವರು ಈ ಸುದ್ದಿಯನ್ನು ಓದುವಂತೆ ಮಾಡುವುದು ಅವರ ಉದ್ದೇಶವಾಗಿದೆ. ಪೊಲೀಸ್ ಜೀಪ್‌ಗೆ ಮೇಕೆ ತುಂಬುವ ವಿಡಿಯೋವನ್ನು ಮಾಧ್ಯಮಗಳು ಪದೇ ಪದೇ ತೋರಿಸಿವೆ. ಇನ್ನು ಕೆಲವರು ತನ್ನ ಮೇಕೆಯನ್ನು ಪೊಲೀಸರು ಬಲವಂತವಾಗಿ ತೆಗೆದುಕೊಂಡು ಹೋಗಿದ್ದಾರೆ ಎಂದು ವ್ಯಕ್ತಿಯೊಬ್ಬರು ಆರೋಪಿಸಿದ್ದಾರೆ ಎಂದು ಟ್ವಿಟ್ಟರ್‌ನಲ್ಲಿ ದೂರಿದ್ದಾರೆ. ಒಟ್ಟಿನಲ್ಲಿ ಗಾಸಿಪ್ ಹುಟ್ಟುಹಾಕುವಲ್ಲಿ ಮಾಧ್ಯಮಗಳು ಯಶಸ್ವಿಯಾಗಿವೆ. ಆದರೆ ಈ ಎಲ್ಲಾ ವರದಿಗಳು ತಪ್ಪಾಗಿವೆ.

ವಾಸ್ತವವೇನು?

ಲಾಕ್‌ಡೌನ್ ಸಮಯದಲ್ಲಿ ದಾದಾ ಮಿಯಾನ್ ಎಂಬ ಪ್ರದೇಶದಲ್ಲಿ ಮಾಲೀಕರಿಲ್ಲದ ಮೇಕೆಯೊಂದು ತಿರುಗಾಡುತ್ತಿದೆ. ಈ ಕುರಿತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಕಾರಣ ಬೆಕೊಂಗಂಜ್ ಪೊಲೀಸರು ಅದನ್ನು ಠಾಣೆಗೆ ಕರೆತಂದಿದ್ದಾರೆ. ಸ್ವಲ್ಪ ಸಮಯದ ಬಳಿಕ ಅದರ ಮಾಲೀಕ ಮೊಹಮ್ಮದ್ ಅಲಿಯ ಮಗ ಖಾನಿಕುಜ್ಮಾ ಅವರಿಗೆ ಹಸ್ತಾಂತರಿಸಲಾಗಿದೆ ಎಂದು ಕಾನ್ಪುರ್ ಪೊಲೀಸರು ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.

ಆಲ್ಟ್ ನ್ಯೂಸ್ ಈ ಕುರಿತು ಫ್ಯಾಕ್ಟ್‌ಚೆಕ್ ನಡೆಸಿದ್ದು, ಬೆಕೊಂಗಂಜ್ ಪೊಲೀಸರನ್ನು ಕೇಳಿದಾಗ “ಮಾಲೀಕರಿಲ್ಲದೆ ತಿರುಗಾಡುತ್ತಿದ್ದ ಮೇಕೆಯನ್ನು ಕರೆತಂದಿದ್ದವು. ನಂತರ ಅದರ ಮಾಲೀಕರಿಗೆ ಹಸ್ತಾಂತರಿಸಲಾಗಿದೆ. ಮಾಸ್ಕ್ ಧರಿಸದ ಕಾರಣ ನಾವು ಮೇಕೆಯನ್ನು ಬಂಧಿಸಿದ್ದೇವೆ ಎಂಬು ಸುದ್ದಿ ಸಂಪೂರ್ಣ ಸುಳ್ಳು” ಎಂದಿದ್ದಾರೆ.

ಮೇಕೆ ಮಾಲೀಕರಾದ ಮೊಹಮ್ಮದ್ ಅಲಿ, ಪತ್ರಿಕೆಗಳಲ್ಲಿನ ಸುದ್ದಿ ವರದಿಗಳನ್ನು ನೋಡಿ ನಕ್ಕಿದ್ದಾರೆ. “ಪೊಲೀಸರು ನಮಗೆ ಸಹಾಯ ಮಾಡಿದರು. ಅವರು ಅದನ್ನು ಪೊಲೀಸ್ ಠಾಣೆಗೆ ತಂದು ನಮಗೆ ತಿಳಿಸದಿದ್ದರೆ ನಮ್ಮ ಮೇಕೆ ಕಳೆದುಹೋಗುತ್ತದೆ” ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ Fact check : ಜನ ಮನೆಯಿಂದ ಹೊರಬರದಿರಲು ಬೀದಿಗಳಿಗೆ 800 ಸಿಂಹಗಳನ್ನು ಬಿಟ್ಟ ರಷ್ಯಾ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...