Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಮಾಸ್ಕ್ ಧರಿಸದ ಮೇಕೆ ಬಂಧಿಸಿದ ಕಾನ್ಪುರ ಪೊಲೀಸರು?- ತಪ್ಪು ವರದಿ ಮಾಡಿದ ಮಾಧ್ಯಮಗಳು

ಫ್ಯಾಕ್ಟ್‌ಚೆಕ್: ಮಾಸ್ಕ್ ಧರಿಸದ ಮೇಕೆ ಬಂಧಿಸಿದ ಕಾನ್ಪುರ ಪೊಲೀಸರು?- ತಪ್ಪು ವರದಿ ಮಾಡಿದ ಮಾಧ್ಯಮಗಳು

- Advertisement -
- Advertisement -

ಮಾಸ್ಕ್ ಧರಿಸದ ಮೇಕೆ ಒಂದನ್ನು ಕಾನ್ಪುರ ಪೊಲೀಸರು ಬಂಧಿಸಿದ್ದಾರೆ ಎಂಬ ವಿಲಕ್ಷಣ ಸುದ್ದಿ ಜುಲೈ 27 ರಂದು ಹಲವು ಮಾಧ್ಯಮಗಳಲ್ಲಿ ಪ್ರಕಟವಾಯಿತು. ಕನ್ನಡದ ಸುವರ್ಣ ಟಿವಿ ಸೇರಿದಂತೆ, ನ್ಯಾಷನಲ್ ಹೆರಾಲ್ಡ್, ಒರಿಸ್ಸಾ ಪೋಸ್ಟ್ ಮತ್ತು ನ್ಯೂಸ್ 18 ಇಂಗ್ಲಿಷ್‌ ಸೇರಿದಂತೆ ಹಲವು ಪತ್ರಿಕೆಗಳು ಇದೇ ಸುದ್ದಿಯನ್ನು ವರದಿ ಮಾಡಿವೆ.

ಸುದ್ದಿ ಸಂಸ್ಥೆ ಐಎಎನ್‌ಎಸ್ ಪ್ರಕಾರ “ಈ ಘಟನೆ ವಾರಾಂತ್ಯದಲ್ಲಿ ನಡೆಯಿತು ಮತ್ತು ಬೆಕೊಂಗಂಜ್ ಪೊಲೀಸರು ಜೀಪ್‌ನಲ್ಲಿ ಮೇಕೆ ಎತ್ತಿಕೊಂಡು ಪೊಲೀಸ್ ಠಾಣೆಗೆ ಕರೆದೊಯ್ದರು ಎಂದು ಪೊಲೀಸರು ತಮ್ಮ ಜೀಪಿನಲ್ಲಿ ಮೇಕೆ ತುಂಬುವ ವಿಡಿಯೋವನ್ನು ಹಲವರು ಪ್ರಸಾರ ಮಾಡಿದ್ದಾರೆ.

ಟೈಮ್ಸ್ ನೌ, ರಿಪಬ್ಲಿಕ್ ಮತ್ತು ಇಂಡಿಯಾ ಟೈಮ್ಸ್ ಇದೇ ರೀತಿಯ ವರದಿಗಳನ್ನು ಮಾಡಿವೆ. ಕೆಲ ಮಾಧ್ಯಮಗಳು ವ್ಯಕ್ತಿಯೊಬ್ಬ ಮಾಸ್ಕ್ ಧರಿಸದೆ ಮೇಕೆಯೊಂದನ್ನು ಹಿಡಿದು ಹೋಗುತ್ತಿದ್ದ, ಪೊಲೀಸರು ಬಂದ ತಕ್ಷಣ ಮೇಕೆ ಬಿಟ್ಟು ಓಡಿ ಹೋಗಿದ್ದಾನೆ. ಪೊಲೀಸರು ಮೇಕೆಯನ್ನು ಬಂಧಿಸಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ತಪ್ಪು ವರದಿ

ಮೇಲ್ನೋಟಕ್ಕೆ ಇದು ಹಾಸ್ಯದ ಸಂಗತಿಯಾಗಿ ಗೋಚರಿಸುತ್ತದೆ. ಸಾಮಾನ್ಯ ಜ್ಞಾನವಿರುವ ಯಾರೂ ಕೂಡ ಇದನ್ನು ನಂಬಲು ಸಾಧ್ಯವಿಲ್ಲ. ಆದರೆ ಹಲವು ಮಾಧ್ಯಮಗಳು ಇದನ್ನು ‘ಸುದ್ದಿ’ಯನ್ನಾಗಿ ಪ್ರಕಟ ಮಾಡಿವೆ. ಜನರಲ್ಲಿ ಗೊಂದಲ ಹುಟ್ಟಿಸುವುದು ಆ ಮೂಲಕ ಅವರು ಈ ಸುದ್ದಿಯನ್ನು ಓದುವಂತೆ ಮಾಡುವುದು ಅವರ ಉದ್ದೇಶವಾಗಿದೆ. ಪೊಲೀಸ್ ಜೀಪ್‌ಗೆ ಮೇಕೆ ತುಂಬುವ ವಿಡಿಯೋವನ್ನು ಮಾಧ್ಯಮಗಳು ಪದೇ ಪದೇ ತೋರಿಸಿವೆ. ಇನ್ನು ಕೆಲವರು ತನ್ನ ಮೇಕೆಯನ್ನು ಪೊಲೀಸರು ಬಲವಂತವಾಗಿ ತೆಗೆದುಕೊಂಡು ಹೋಗಿದ್ದಾರೆ ಎಂದು ವ್ಯಕ್ತಿಯೊಬ್ಬರು ಆರೋಪಿಸಿದ್ದಾರೆ ಎಂದು ಟ್ವಿಟ್ಟರ್‌ನಲ್ಲಿ ದೂರಿದ್ದಾರೆ. ಒಟ್ಟಿನಲ್ಲಿ ಗಾಸಿಪ್ ಹುಟ್ಟುಹಾಕುವಲ್ಲಿ ಮಾಧ್ಯಮಗಳು ಯಶಸ್ವಿಯಾಗಿವೆ. ಆದರೆ ಈ ಎಲ್ಲಾ ವರದಿಗಳು ತಪ್ಪಾಗಿವೆ.

ವಾಸ್ತವವೇನು?

ಲಾಕ್‌ಡೌನ್ ಸಮಯದಲ್ಲಿ ದಾದಾ ಮಿಯಾನ್ ಎಂಬ ಪ್ರದೇಶದಲ್ಲಿ ಮಾಲೀಕರಿಲ್ಲದ ಮೇಕೆಯೊಂದು ತಿರುಗಾಡುತ್ತಿದೆ. ಈ ಕುರಿತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಕಾರಣ ಬೆಕೊಂಗಂಜ್ ಪೊಲೀಸರು ಅದನ್ನು ಠಾಣೆಗೆ ಕರೆತಂದಿದ್ದಾರೆ. ಸ್ವಲ್ಪ ಸಮಯದ ಬಳಿಕ ಅದರ ಮಾಲೀಕ ಮೊಹಮ್ಮದ್ ಅಲಿಯ ಮಗ ಖಾನಿಕುಜ್ಮಾ ಅವರಿಗೆ ಹಸ್ತಾಂತರಿಸಲಾಗಿದೆ ಎಂದು ಕಾನ್ಪುರ್ ಪೊಲೀಸರು ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.

ಆಲ್ಟ್ ನ್ಯೂಸ್ ಈ ಕುರಿತು ಫ್ಯಾಕ್ಟ್‌ಚೆಕ್ ನಡೆಸಿದ್ದು, ಬೆಕೊಂಗಂಜ್ ಪೊಲೀಸರನ್ನು ಕೇಳಿದಾಗ “ಮಾಲೀಕರಿಲ್ಲದೆ ತಿರುಗಾಡುತ್ತಿದ್ದ ಮೇಕೆಯನ್ನು ಕರೆತಂದಿದ್ದವು. ನಂತರ ಅದರ ಮಾಲೀಕರಿಗೆ ಹಸ್ತಾಂತರಿಸಲಾಗಿದೆ. ಮಾಸ್ಕ್ ಧರಿಸದ ಕಾರಣ ನಾವು ಮೇಕೆಯನ್ನು ಬಂಧಿಸಿದ್ದೇವೆ ಎಂಬು ಸುದ್ದಿ ಸಂಪೂರ್ಣ ಸುಳ್ಳು” ಎಂದಿದ್ದಾರೆ.

ಮೇಕೆ ಮಾಲೀಕರಾದ ಮೊಹಮ್ಮದ್ ಅಲಿ, ಪತ್ರಿಕೆಗಳಲ್ಲಿನ ಸುದ್ದಿ ವರದಿಗಳನ್ನು ನೋಡಿ ನಕ್ಕಿದ್ದಾರೆ. “ಪೊಲೀಸರು ನಮಗೆ ಸಹಾಯ ಮಾಡಿದರು. ಅವರು ಅದನ್ನು ಪೊಲೀಸ್ ಠಾಣೆಗೆ ತಂದು ನಮಗೆ ತಿಳಿಸದಿದ್ದರೆ ನಮ್ಮ ಮೇಕೆ ಕಳೆದುಹೋಗುತ್ತದೆ” ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ Fact check : ಜನ ಮನೆಯಿಂದ ಹೊರಬರದಿರಲು ಬೀದಿಗಳಿಗೆ 800 ಸಿಂಹಗಳನ್ನು ಬಿಟ್ಟ ರಷ್ಯಾ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...