Homeಮುಖಪುಟಕಾನ್ಪುರದ 256 ಪಾನ್, ಸಮೋಸ, ಚಾಟ್ ಮಾರಾಟಗಾರರು ಕೋಟ್ಯಾಧಿಪತಿಗಳು!

ಕಾನ್ಪುರದ 256 ಪಾನ್, ಸಮೋಸ, ಚಾಟ್ ಮಾರಾಟಗಾರರು ಕೋಟ್ಯಾಧಿಪತಿಗಳು!

- Advertisement -
- Advertisement -

ಬೀದಿ ಬದಿಯಲ್ಲಿ ಪಾನ್ ಮಸಾಲಾ, ಚಾಟ್ಸ್, ಸಮೋಸಾ ಮಾರಾಟಗಾರರು ಇನ್ನೇಷ್ಟು ದುಡಿಯಲು ಸಾಧ್ಯ ಎಂದುಕೊಂಡಿರುವ ಜನರಿಗೆ ಆದಾಯ ತೆರಿಗೆ ಇಲಾಖೆಯ ತನಿಖೆ ನಿಜಕ್ಕೂ ಆಶ್ಚರ್ಯಕ್ಕೆ ನೂಕುತ್ತದೆ. ಕಾನ್ಪುರದ 256 ಮಂದಿ ಪಾನ್, ಸಮೋಸ, ಚಾಟ್ ಮಾರಾಟಗಾರರು ಕೋಟ್ಯಾಧಿಪತಿಗಳು!

ಉತ್ತರ ಪ್ರದೇಶದ ಆದಾಯ ತೆರಿಗೆ ಇಲಾಖೆ ಇತ್ತೀಚೆಗೆ ನಡೆಸಿದ ತನಿಖೆಯ ಪ್ರಕಾರ, ಕಾನ್ಪುರ ನಗರದ ಪಾನ್, ಸಮೋಸಾ ಮತ್ತು ಚಾಟ್ ಮಾರಾಟಗಾರರು ಕೋಟ್ಯಾಧಿಪತಿಗಳು ಎಂದು ತಿಳಿದುಬಂದಿದೆ. ರಸ್ತೆಬದಿಯ ತಿಂಡಿಗಳು ಮತ್ತು ತಿನ್ನಬಹುದಾದ ವಸ್ತುಗಳನ್ನು ಮಾರಾಟ ಮಾಡುವ 256 ಜನರು ಕೋಟ್ಯಾಧಿಪತಿಗಳು ಎಂದು ವರದಿ ತಿಳಿಸಿದೆ.

ಅಧ್ಯಯನದ ಪ್ರಕಾರ, ರಸ್ತೆ ಬದಿಯಲ್ಲಿ, ಕಸದ ಗುಡ್ಡೆಗಳಲ್ಲಿ ಚಿಂದಿ ಆಯುವವರಾಗಿ ಕೆಲಸ ಮಾಡುವ ಜನರು ಪ್ರತಿ ವ್ಯಕ್ತಿಗೆ ಮೂರು ಕಾರುಗಳಿಗಿಂತ ಹೆಚ್ಚಿನ ವಾಹನಗಳನ್ನು ಹೊಂದಿರುವುದು ಇದೇ ವರದಿಯಲ್ಲಿ ಕಂಡುಬಂದಿದೆ.

ಡೇಟಾ ಸಾಫ್ಟ್‌ವೇರ್ ಮತ್ತು ಇತರ ತಾಂತ್ರಿಕ ಪರಿಕರಗಳ ಸಹಾಯದಿಂದ ನಡೆಸಿದ ಈ ಸಮೀಕ್ಷೆಯಲ್ಲಿ 256 ಮಂದಿ ಕೋಟ್ಯಾಧಿಪತಿಗಳು ಆದಾಯ ತೆರಿಗೆಯ ಹೆಸರಿನಲ್ಲಿ ತೆರಿಗೆಯನ್ನು ಪಾವತಿಸುವುದಿಲ್ಲ. ಜೊತೆಗೆ ಜಿಎಸ್‌ಟಿಯನ್ನು ನೀಡುವುದಿಲ್ಲ, ನೀಡಿಲ್ಲ ಎಂಬುದು ವರದಿಯಲ್ಲಿ ತಿಳಿದುಬಂದಿದೆ.

ಇದನ್ನೂ ಓದಿ: ನಾಯಿ, ಆಮೆಗಳನ್ನು ವರದಕ್ಷಿಣೆ ಕೇಳಿದ ವರ: ಜೈಲಿಗೆ ತಳ್ಳಿದ ಪೊಲೀಸರು

ವರದಿಗಳ ಪ್ರಕಾರ, ಚಿಂದಿ ವ್ಯಾಪಾರಿಯೊಬ್ಬರು ಎರಡು ವರ್ಷಗಳಲ್ಲಿ 10 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಮೂರು ಆಸ್ತಿಗಳನ್ನು ಖರೀದಿಸಿದ್ದಾರೆ. ಆರ್ಯನಗರದ ಎರಡು ಪಾನ್ ಅಂಗಡಿಗಳ ಮಾಲೀಕರು, ಸ್ವರೂಪ್ ನಗರದಲ್ಲಿ ಒಂದು ಮತ್ತು ಬಿರ್ಹಾನಾ ರಸ್ತೆಯಲ್ಲಿ 5 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಕೋವಿಡ್ ಅವಧಿಯಲ್ಲಿ ಖರೀದಿಸಿದ್ದಾರೆ.

ಬಾಡಿಗೆ ವಾಹನಗಳಲ್ಲಿ ಇಲ್ಲಿ ವ್ಯವಹಾರವನ್ನು ನಡೆಸುವವರು ಪ್ರತಿದಿನ ಬಾಡಿಗೆ ಕಟ್ಟಲು ಹೆಣಗಾಡುತ್ತಿದ್ದಾರೆ ಎಂದು ಭಾವಿಸಿದರೆ ಖಂಡಿತ ಅದು ನಮ್ಮ ತಪ್ಪು ಕಲ್ಪನೆ. ಮಾಲ್ ರಸ್ತೆಯಲ್ಲಿ ತಿಂಡಿ ಮಾರಾಟ ಮಾಡುವ ವ್ಯಕ್ತಿಯೊಬ್ಬರು ಪ್ರತಿ ತಿಂಗಳು ವಿವಿಧ ವಾಹನಗಳಿಗೆ 1.25 ಲಕ್ಷ ರೂಪಾಯಿ ಬಾಡಿಗೆಗೆ ಪಾವತಿಸುತ್ತಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಮತ್ತಷ್ಟು ಚಾಟ್ ಮಾರಾಟಗಾರರು ತಮ್ಮ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ರಿಯಲ್ ಎಸ್ಟೇಟ್‌ನಲ್ಲಿ ಸಾಕಷ್ಟು ಹೂಡಿಕೆ ಮಾಡಿದ್ದಾರೆ ಎಂಬುದು ವರದಿಯಿಂದ ಬಹಿರಂಗವಾಗಿದೆ.


ಇದನ್ನೂ ಓದಿ: ಕೇಂದ್ರ ಸಂಪುಟ: 78 ಸಚಿವರಲ್ಲಿ 33 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ- ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...