Homeಮುಖಪುಟಕಾನ್ಪುರದ 256 ಪಾನ್, ಸಮೋಸ, ಚಾಟ್ ಮಾರಾಟಗಾರರು ಕೋಟ್ಯಾಧಿಪತಿಗಳು!

ಕಾನ್ಪುರದ 256 ಪಾನ್, ಸಮೋಸ, ಚಾಟ್ ಮಾರಾಟಗಾರರು ಕೋಟ್ಯಾಧಿಪತಿಗಳು!

- Advertisement -
- Advertisement -

ಬೀದಿ ಬದಿಯಲ್ಲಿ ಪಾನ್ ಮಸಾಲಾ, ಚಾಟ್ಸ್, ಸಮೋಸಾ ಮಾರಾಟಗಾರರು ಇನ್ನೇಷ್ಟು ದುಡಿಯಲು ಸಾಧ್ಯ ಎಂದುಕೊಂಡಿರುವ ಜನರಿಗೆ ಆದಾಯ ತೆರಿಗೆ ಇಲಾಖೆಯ ತನಿಖೆ ನಿಜಕ್ಕೂ ಆಶ್ಚರ್ಯಕ್ಕೆ ನೂಕುತ್ತದೆ. ಕಾನ್ಪುರದ 256 ಮಂದಿ ಪಾನ್, ಸಮೋಸ, ಚಾಟ್ ಮಾರಾಟಗಾರರು ಕೋಟ್ಯಾಧಿಪತಿಗಳು!

ಉತ್ತರ ಪ್ರದೇಶದ ಆದಾಯ ತೆರಿಗೆ ಇಲಾಖೆ ಇತ್ತೀಚೆಗೆ ನಡೆಸಿದ ತನಿಖೆಯ ಪ್ರಕಾರ, ಕಾನ್ಪುರ ನಗರದ ಪಾನ್, ಸಮೋಸಾ ಮತ್ತು ಚಾಟ್ ಮಾರಾಟಗಾರರು ಕೋಟ್ಯಾಧಿಪತಿಗಳು ಎಂದು ತಿಳಿದುಬಂದಿದೆ. ರಸ್ತೆಬದಿಯ ತಿಂಡಿಗಳು ಮತ್ತು ತಿನ್ನಬಹುದಾದ ವಸ್ತುಗಳನ್ನು ಮಾರಾಟ ಮಾಡುವ 256 ಜನರು ಕೋಟ್ಯಾಧಿಪತಿಗಳು ಎಂದು ವರದಿ ತಿಳಿಸಿದೆ.

ಅಧ್ಯಯನದ ಪ್ರಕಾರ, ರಸ್ತೆ ಬದಿಯಲ್ಲಿ, ಕಸದ ಗುಡ್ಡೆಗಳಲ್ಲಿ ಚಿಂದಿ ಆಯುವವರಾಗಿ ಕೆಲಸ ಮಾಡುವ ಜನರು ಪ್ರತಿ ವ್ಯಕ್ತಿಗೆ ಮೂರು ಕಾರುಗಳಿಗಿಂತ ಹೆಚ್ಚಿನ ವಾಹನಗಳನ್ನು ಹೊಂದಿರುವುದು ಇದೇ ವರದಿಯಲ್ಲಿ ಕಂಡುಬಂದಿದೆ.

ಡೇಟಾ ಸಾಫ್ಟ್‌ವೇರ್ ಮತ್ತು ಇತರ ತಾಂತ್ರಿಕ ಪರಿಕರಗಳ ಸಹಾಯದಿಂದ ನಡೆಸಿದ ಈ ಸಮೀಕ್ಷೆಯಲ್ಲಿ 256 ಮಂದಿ ಕೋಟ್ಯಾಧಿಪತಿಗಳು ಆದಾಯ ತೆರಿಗೆಯ ಹೆಸರಿನಲ್ಲಿ ತೆರಿಗೆಯನ್ನು ಪಾವತಿಸುವುದಿಲ್ಲ. ಜೊತೆಗೆ ಜಿಎಸ್‌ಟಿಯನ್ನು ನೀಡುವುದಿಲ್ಲ, ನೀಡಿಲ್ಲ ಎಂಬುದು ವರದಿಯಲ್ಲಿ ತಿಳಿದುಬಂದಿದೆ.

ಇದನ್ನೂ ಓದಿ: ನಾಯಿ, ಆಮೆಗಳನ್ನು ವರದಕ್ಷಿಣೆ ಕೇಳಿದ ವರ: ಜೈಲಿಗೆ ತಳ್ಳಿದ ಪೊಲೀಸರು

ವರದಿಗಳ ಪ್ರಕಾರ, ಚಿಂದಿ ವ್ಯಾಪಾರಿಯೊಬ್ಬರು ಎರಡು ವರ್ಷಗಳಲ್ಲಿ 10 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಮೂರು ಆಸ್ತಿಗಳನ್ನು ಖರೀದಿಸಿದ್ದಾರೆ. ಆರ್ಯನಗರದ ಎರಡು ಪಾನ್ ಅಂಗಡಿಗಳ ಮಾಲೀಕರು, ಸ್ವರೂಪ್ ನಗರದಲ್ಲಿ ಒಂದು ಮತ್ತು ಬಿರ್ಹಾನಾ ರಸ್ತೆಯಲ್ಲಿ 5 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಕೋವಿಡ್ ಅವಧಿಯಲ್ಲಿ ಖರೀದಿಸಿದ್ದಾರೆ.

ಬಾಡಿಗೆ ವಾಹನಗಳಲ್ಲಿ ಇಲ್ಲಿ ವ್ಯವಹಾರವನ್ನು ನಡೆಸುವವರು ಪ್ರತಿದಿನ ಬಾಡಿಗೆ ಕಟ್ಟಲು ಹೆಣಗಾಡುತ್ತಿದ್ದಾರೆ ಎಂದು ಭಾವಿಸಿದರೆ ಖಂಡಿತ ಅದು ನಮ್ಮ ತಪ್ಪು ಕಲ್ಪನೆ. ಮಾಲ್ ರಸ್ತೆಯಲ್ಲಿ ತಿಂಡಿ ಮಾರಾಟ ಮಾಡುವ ವ್ಯಕ್ತಿಯೊಬ್ಬರು ಪ್ರತಿ ತಿಂಗಳು ವಿವಿಧ ವಾಹನಗಳಿಗೆ 1.25 ಲಕ್ಷ ರೂಪಾಯಿ ಬಾಡಿಗೆಗೆ ಪಾವತಿಸುತ್ತಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಮತ್ತಷ್ಟು ಚಾಟ್ ಮಾರಾಟಗಾರರು ತಮ್ಮ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ರಿಯಲ್ ಎಸ್ಟೇಟ್‌ನಲ್ಲಿ ಸಾಕಷ್ಟು ಹೂಡಿಕೆ ಮಾಡಿದ್ದಾರೆ ಎಂಬುದು ವರದಿಯಿಂದ ಬಹಿರಂಗವಾಗಿದೆ.


ಇದನ್ನೂ ಓದಿ: ಕೇಂದ್ರ ಸಂಪುಟ: 78 ಸಚಿವರಲ್ಲಿ 33 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ- ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...