Homeಮುಖಪುಟಕನ್ಸಾಸ್ ಸಿಟಿ: ಬಾಗಿಲು ಬೆಲ್ ಬಾರಿಸಿದ್ದಕ್ಕೆ ಕಪ್ಪುವರ್ಣೀಯ ಯುವಕನ ಮೇಲೆ ಗುಂಡು ಹಾರಿಸಿದ ಮನೆ ಮಾಲಿಕ

ಕನ್ಸಾಸ್ ಸಿಟಿ: ಬಾಗಿಲು ಬೆಲ್ ಬಾರಿಸಿದ್ದಕ್ಕೆ ಕಪ್ಪುವರ್ಣೀಯ ಯುವಕನ ಮೇಲೆ ಗುಂಡು ಹಾರಿಸಿದ ಮನೆ ಮಾಲಿಕ

- Advertisement -
- Advertisement -

ಕಪ್ಪುವರ್ಣೀಯ ಯುವಕನೊಬ್ಬ ಬಾಗಿಲು ಬೆಲ್ ಬಾರಿಸಿದ್ದಕ್ಕೆ ಮನೆ ಮಾಲಿಕ ಆತನ ಮೇಲೆ ಎರಡು ಬಾರಿ ಗುಂಡು ಹಾರಿಸಿರುವ ಘಟನೆ ಕಳೆದ ವಾರ ಮಿಸೌರಿಯ ಕನ್ಸಾಸ್ ಸಿಟಿಯಲ್ಲಿ ನಡೆದಿದೆ. ಸಧ್ಯ ಗುಂಡು ಹಾರಿಸಿರುವ ವಯಸ್ಸಾದ ವ್ಯಕ್ತಿಯ ವಿರುದ್ಧ ಸೋಮವಾರ ಆರೋಪಗಳನ್ನು ದಾಖಲಿಸಲಾಗಿದೆ ಎಂದು ಕ್ಲೇ ಕೌಂಟಿ ಪ್ರಾಸಿಕ್ಯೂಟಿಂಗ್ ಅಟಾರ್ನಿ ಜಕಾರಿ ಥಾಂಪ್ಸನ್ ಹೇಳಿದ್ದಾರೆ.

85 ವರ್ಷ ವಯಸ್ಸಿನ ಬಿಳಿವರ್ಣೀಯ ಆಂಡ್ರ್ಯೂ ಲೆಸ್ಟರ್ ಅವರು, 16 ವರ್ಷದ ರಾಲ್ಫ್ ಯಾರ್ಲ್ ಅವರಿಗೆ ಗುರುವಾರ ರಾತ್ರಿ 10ಗಂಟೆಯ ಸುಮಾರಿಗೆ ಪಾಂಯಿಂಟ್ 32-ಕ್ಯಾಲಿಬರ್ ಪಿಸ್ತೂಲ್‌ನಿಂದ ಗುಂಡುಹೊಡೆದಿದ್ದಾರೆ. ಈ ಸಂಬಂಧ ಅವರ ಮೇಲೆ ಸಶಸ್ತ್ರ ಆಕ್ರಮಣ ಮತ್ತೊಂದು ಸಶಸ್ತ್ರ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಗುಂಡೇಟು ತಿಂದ ಯಾರ್ಲ್ ಅವರು ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ತಲೆ ಮತ್ತು ತೋಳಿಗೆ ಗುಂಡುಬಿದ್ದು ಗಾಯಗೊಂಡಿದ್ದರು, ಸಧ್ಯ ಮನೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಈ ಗುಂಡಿನ ದಾಳಿಯು ”ಜನಾಂಗೀಯ ಅಂಶ” ಒಳಗೊಂಡಿದೆ ಎಂದು ಥಾಂಪ್ಸನ್ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

”ಇದು ಎಷ್ಟು ನಿರಾಶಾದಾಯಕವಾಗಿದೆ ಎಂದು ನಾವು ಅರ್ಥಮಾಡಿಕೊಳ್ಳಬೇಕು. ಆದರೆ ಕ್ರಿಮಿನಲ್ ನ್ಯಾಯ ವ್ಯವಸ್ಥೆಯು ಇದನ್ನು ಗಂಭೀರವಾಗಿ ತೆಗೆದುಕೊಳ್ಳುತ್ತದೆ. ಈ ಬಗ್ಗೆ ತನಿಖೆ ಮುಂದುವರಿಸುತ್ತದೆ ಎಂದು ನಾನು ನಿಮಗೆ ಭರವಸೆ ನೀಡಬಲ್ಲೆ” ಎಂದು ಥಾಂಪ್ಸನ್ ಹೇಳಿದರು.

ಇದನ್ನೂ ಓದಿ: ಸುಡಾನ್‌ ಸಂಘರ್ಷ: 200 ಜನ ಸಾವು, 1800 ಜನರಿಗೆ ಗಾಯ; ಸಂಕಷ್ಟದಲ್ಲಿ ಕರ್ನಾಟಕದ ಜನ

ಯಾರ್ಲ್‌ನ ಚಿಕ್ಕಮ್ಮ ಸ್ಪೂನ್‌ಮೋರ್ ಅವರು, ಆತನ ಆರೈಕೆಗಾಗಿ ಹಣವನ್ನು ಸಂಗ್ರಹಿಸಲು GoFundMe ಪುಟವನ್ನು ತೆರೆದಿದ್ದಾರೆ. ಆ ಪುಟದ ಪ್ರಕಾರ, ಯಾರ್ಲ್ ಸಹೋದರರು ಸ್ನೇಹಿತರ ಮನೆಗೆ ಹೋಗಿದ್ದರು. ಅವರನ್ನು ಕರೆತರಲು ಹೋದಾಗ ತಪ್ಪಾದ ವಿಳಾಸಕ್ಕೆ ಹೋಗಿ ಬೆಲ್ ಮಾಡಿದ್ದಾನೆ. ಈ ವೇಳೆ ಮನೆ ಮಾಲಿಕ ಗ್ಲಾಸ್‌ನಲ್ಲಿ ನೋಡಿದ ಮನೆ ಮಾಲಿಕ ಕಪ್ಪು ವರ್ಣೀಯ ಮನೆ ಕಳ್ಳತನಕ್ಕೆ ಬಂದಿದ್ದಾನೆ ಎಂದು ಗುಂಡು ಹಾರಿಸಿದ್ದಾನೆ. ಗುಂಡು ಬಿದ್ದ ತಕ್ಷಣ ಅವನು ನೆಲಕ್ಕೆ ಬಿದ್ದಿದ್ದಾನೆ ಆಗಲೂ ಗುಂಡು ಹಾರಿಸಲಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ಯಾರ್ಲ್ ಅವರು ”ಮಿಸೌರಿಯ ಅಗ್ರ ಬಾಸ್ ಕ್ಲಾರಿನೆಟ್ ಪ್ಲೇಯರ್‌ಗಳಲ್ಲಿ ಒಬ್ಬರು, ಮೆಟ್ರೋಪಾಲಿಟನ್‌ನ ಯುವ ಆರ್ಕೆಸ್ಟ್ರಾದಲ್ಲಿ ಅನೇಕ ವಾದ್ಯಗಳನ್ನು ಆತ ನುಡಿಸುತ್ತಿದ್ದ” ಎಂದು ಆ ಪುಟದಲ್ಲಿ ಹೇಳಲಾಗಿದೆ.

ಹಾಲೆ ಬೆರ್ರಿ, ಕೆರ್ರಿ ವಾಷಿಂಗ್ಟನ್ ಮತ್ತು ಜೆನ್ನಿಫರ್ ಹಡ್ಸನ್ ಅವರಂತಹ ಸೆಲೆಬ್ರಿಟಿಗಳು ಸಾಮಾಜಿಕ ಮಾಧ್ಯಮದಲ್ಲಿ ನ್ಯಾಯಕ್ಕಾಗಿ ಒತ್ತಾಯಿಸಿದ್ದಾರೆ ಮತ್ತು ಯಾರ್ಲ್ ಕುಟುಂಬಕ್ಕೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.

ಸೋಮವಾರ ಮಧ್ಯಾಹ್ನ ಸ್ಥಳೀಯ ಕಾಲಮಾನದಂತೆ ಆ ಪುಟವು $1.5m (28,70,16,982 ರೂ.) ಸಂಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...