Homeಮುಖಪುಟಕನ್ಸಾಸ್ ಸಿಟಿ: ಬಾಗಿಲು ಬೆಲ್ ಬಾರಿಸಿದ್ದಕ್ಕೆ ಕಪ್ಪುವರ್ಣೀಯ ಯುವಕನ ಮೇಲೆ ಗುಂಡು ಹಾರಿಸಿದ ಮನೆ ಮಾಲಿಕ

ಕನ್ಸಾಸ್ ಸಿಟಿ: ಬಾಗಿಲು ಬೆಲ್ ಬಾರಿಸಿದ್ದಕ್ಕೆ ಕಪ್ಪುವರ್ಣೀಯ ಯುವಕನ ಮೇಲೆ ಗುಂಡು ಹಾರಿಸಿದ ಮನೆ ಮಾಲಿಕ

- Advertisement -
- Advertisement -

ಕಪ್ಪುವರ್ಣೀಯ ಯುವಕನೊಬ್ಬ ಬಾಗಿಲು ಬೆಲ್ ಬಾರಿಸಿದ್ದಕ್ಕೆ ಮನೆ ಮಾಲಿಕ ಆತನ ಮೇಲೆ ಎರಡು ಬಾರಿ ಗುಂಡು ಹಾರಿಸಿರುವ ಘಟನೆ ಕಳೆದ ವಾರ ಮಿಸೌರಿಯ ಕನ್ಸಾಸ್ ಸಿಟಿಯಲ್ಲಿ ನಡೆದಿದೆ. ಸಧ್ಯ ಗುಂಡು ಹಾರಿಸಿರುವ ವಯಸ್ಸಾದ ವ್ಯಕ್ತಿಯ ವಿರುದ್ಧ ಸೋಮವಾರ ಆರೋಪಗಳನ್ನು ದಾಖಲಿಸಲಾಗಿದೆ ಎಂದು ಕ್ಲೇ ಕೌಂಟಿ ಪ್ರಾಸಿಕ್ಯೂಟಿಂಗ್ ಅಟಾರ್ನಿ ಜಕಾರಿ ಥಾಂಪ್ಸನ್ ಹೇಳಿದ್ದಾರೆ.

85 ವರ್ಷ ವಯಸ್ಸಿನ ಬಿಳಿವರ್ಣೀಯ ಆಂಡ್ರ್ಯೂ ಲೆಸ್ಟರ್ ಅವರು, 16 ವರ್ಷದ ರಾಲ್ಫ್ ಯಾರ್ಲ್ ಅವರಿಗೆ ಗುರುವಾರ ರಾತ್ರಿ 10ಗಂಟೆಯ ಸುಮಾರಿಗೆ ಪಾಂಯಿಂಟ್ 32-ಕ್ಯಾಲಿಬರ್ ಪಿಸ್ತೂಲ್‌ನಿಂದ ಗುಂಡುಹೊಡೆದಿದ್ದಾರೆ. ಈ ಸಂಬಂಧ ಅವರ ಮೇಲೆ ಸಶಸ್ತ್ರ ಆಕ್ರಮಣ ಮತ್ತೊಂದು ಸಶಸ್ತ್ರ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಗುಂಡೇಟು ತಿಂದ ಯಾರ್ಲ್ ಅವರು ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ತಲೆ ಮತ್ತು ತೋಳಿಗೆ ಗುಂಡುಬಿದ್ದು ಗಾಯಗೊಂಡಿದ್ದರು, ಸಧ್ಯ ಮನೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಈ ಗುಂಡಿನ ದಾಳಿಯು ”ಜನಾಂಗೀಯ ಅಂಶ” ಒಳಗೊಂಡಿದೆ ಎಂದು ಥಾಂಪ್ಸನ್ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

”ಇದು ಎಷ್ಟು ನಿರಾಶಾದಾಯಕವಾಗಿದೆ ಎಂದು ನಾವು ಅರ್ಥಮಾಡಿಕೊಳ್ಳಬೇಕು. ಆದರೆ ಕ್ರಿಮಿನಲ್ ನ್ಯಾಯ ವ್ಯವಸ್ಥೆಯು ಇದನ್ನು ಗಂಭೀರವಾಗಿ ತೆಗೆದುಕೊಳ್ಳುತ್ತದೆ. ಈ ಬಗ್ಗೆ ತನಿಖೆ ಮುಂದುವರಿಸುತ್ತದೆ ಎಂದು ನಾನು ನಿಮಗೆ ಭರವಸೆ ನೀಡಬಲ್ಲೆ” ಎಂದು ಥಾಂಪ್ಸನ್ ಹೇಳಿದರು.

ಇದನ್ನೂ ಓದಿ: ಸುಡಾನ್‌ ಸಂಘರ್ಷ: 200 ಜನ ಸಾವು, 1800 ಜನರಿಗೆ ಗಾಯ; ಸಂಕಷ್ಟದಲ್ಲಿ ಕರ್ನಾಟಕದ ಜನ

ಯಾರ್ಲ್‌ನ ಚಿಕ್ಕಮ್ಮ ಸ್ಪೂನ್‌ಮೋರ್ ಅವರು, ಆತನ ಆರೈಕೆಗಾಗಿ ಹಣವನ್ನು ಸಂಗ್ರಹಿಸಲು GoFundMe ಪುಟವನ್ನು ತೆರೆದಿದ್ದಾರೆ. ಆ ಪುಟದ ಪ್ರಕಾರ, ಯಾರ್ಲ್ ಸಹೋದರರು ಸ್ನೇಹಿತರ ಮನೆಗೆ ಹೋಗಿದ್ದರು. ಅವರನ್ನು ಕರೆತರಲು ಹೋದಾಗ ತಪ್ಪಾದ ವಿಳಾಸಕ್ಕೆ ಹೋಗಿ ಬೆಲ್ ಮಾಡಿದ್ದಾನೆ. ಈ ವೇಳೆ ಮನೆ ಮಾಲಿಕ ಗ್ಲಾಸ್‌ನಲ್ಲಿ ನೋಡಿದ ಮನೆ ಮಾಲಿಕ ಕಪ್ಪು ವರ್ಣೀಯ ಮನೆ ಕಳ್ಳತನಕ್ಕೆ ಬಂದಿದ್ದಾನೆ ಎಂದು ಗುಂಡು ಹಾರಿಸಿದ್ದಾನೆ. ಗುಂಡು ಬಿದ್ದ ತಕ್ಷಣ ಅವನು ನೆಲಕ್ಕೆ ಬಿದ್ದಿದ್ದಾನೆ ಆಗಲೂ ಗುಂಡು ಹಾರಿಸಲಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ಯಾರ್ಲ್ ಅವರು ”ಮಿಸೌರಿಯ ಅಗ್ರ ಬಾಸ್ ಕ್ಲಾರಿನೆಟ್ ಪ್ಲೇಯರ್‌ಗಳಲ್ಲಿ ಒಬ್ಬರು, ಮೆಟ್ರೋಪಾಲಿಟನ್‌ನ ಯುವ ಆರ್ಕೆಸ್ಟ್ರಾದಲ್ಲಿ ಅನೇಕ ವಾದ್ಯಗಳನ್ನು ಆತ ನುಡಿಸುತ್ತಿದ್ದ” ಎಂದು ಆ ಪುಟದಲ್ಲಿ ಹೇಳಲಾಗಿದೆ.

ಹಾಲೆ ಬೆರ್ರಿ, ಕೆರ್ರಿ ವಾಷಿಂಗ್ಟನ್ ಮತ್ತು ಜೆನ್ನಿಫರ್ ಹಡ್ಸನ್ ಅವರಂತಹ ಸೆಲೆಬ್ರಿಟಿಗಳು ಸಾಮಾಜಿಕ ಮಾಧ್ಯಮದಲ್ಲಿ ನ್ಯಾಯಕ್ಕಾಗಿ ಒತ್ತಾಯಿಸಿದ್ದಾರೆ ಮತ್ತು ಯಾರ್ಲ್ ಕುಟುಂಬಕ್ಕೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.

ಸೋಮವಾರ ಮಧ್ಯಾಹ್ನ ಸ್ಥಳೀಯ ಕಾಲಮಾನದಂತೆ ಆ ಪುಟವು $1.5m (28,70,16,982 ರೂ.) ಸಂಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...