Homeಮುಖಪುಟಕನ್ಸಾಸ್ ಸಿಟಿ: ಬಾಗಿಲು ಬೆಲ್ ಬಾರಿಸಿದ್ದಕ್ಕೆ ಕಪ್ಪುವರ್ಣೀಯ ಯುವಕನ ಮೇಲೆ ಗುಂಡು ಹಾರಿಸಿದ ಮನೆ ಮಾಲಿಕ

ಕನ್ಸಾಸ್ ಸಿಟಿ: ಬಾಗಿಲು ಬೆಲ್ ಬಾರಿಸಿದ್ದಕ್ಕೆ ಕಪ್ಪುವರ್ಣೀಯ ಯುವಕನ ಮೇಲೆ ಗುಂಡು ಹಾರಿಸಿದ ಮನೆ ಮಾಲಿಕ

- Advertisement -
- Advertisement -

ಕಪ್ಪುವರ್ಣೀಯ ಯುವಕನೊಬ್ಬ ಬಾಗಿಲು ಬೆಲ್ ಬಾರಿಸಿದ್ದಕ್ಕೆ ಮನೆ ಮಾಲಿಕ ಆತನ ಮೇಲೆ ಎರಡು ಬಾರಿ ಗುಂಡು ಹಾರಿಸಿರುವ ಘಟನೆ ಕಳೆದ ವಾರ ಮಿಸೌರಿಯ ಕನ್ಸಾಸ್ ಸಿಟಿಯಲ್ಲಿ ನಡೆದಿದೆ. ಸಧ್ಯ ಗುಂಡು ಹಾರಿಸಿರುವ ವಯಸ್ಸಾದ ವ್ಯಕ್ತಿಯ ವಿರುದ್ಧ ಸೋಮವಾರ ಆರೋಪಗಳನ್ನು ದಾಖಲಿಸಲಾಗಿದೆ ಎಂದು ಕ್ಲೇ ಕೌಂಟಿ ಪ್ರಾಸಿಕ್ಯೂಟಿಂಗ್ ಅಟಾರ್ನಿ ಜಕಾರಿ ಥಾಂಪ್ಸನ್ ಹೇಳಿದ್ದಾರೆ.

85 ವರ್ಷ ವಯಸ್ಸಿನ ಬಿಳಿವರ್ಣೀಯ ಆಂಡ್ರ್ಯೂ ಲೆಸ್ಟರ್ ಅವರು, 16 ವರ್ಷದ ರಾಲ್ಫ್ ಯಾರ್ಲ್ ಅವರಿಗೆ ಗುರುವಾರ ರಾತ್ರಿ 10ಗಂಟೆಯ ಸುಮಾರಿಗೆ ಪಾಂಯಿಂಟ್ 32-ಕ್ಯಾಲಿಬರ್ ಪಿಸ್ತೂಲ್‌ನಿಂದ ಗುಂಡುಹೊಡೆದಿದ್ದಾರೆ. ಈ ಸಂಬಂಧ ಅವರ ಮೇಲೆ ಸಶಸ್ತ್ರ ಆಕ್ರಮಣ ಮತ್ತೊಂದು ಸಶಸ್ತ್ರ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಗುಂಡೇಟು ತಿಂದ ಯಾರ್ಲ್ ಅವರು ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ತಲೆ ಮತ್ತು ತೋಳಿಗೆ ಗುಂಡುಬಿದ್ದು ಗಾಯಗೊಂಡಿದ್ದರು, ಸಧ್ಯ ಮನೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಈ ಗುಂಡಿನ ದಾಳಿಯು ”ಜನಾಂಗೀಯ ಅಂಶ” ಒಳಗೊಂಡಿದೆ ಎಂದು ಥಾಂಪ್ಸನ್ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

”ಇದು ಎಷ್ಟು ನಿರಾಶಾದಾಯಕವಾಗಿದೆ ಎಂದು ನಾವು ಅರ್ಥಮಾಡಿಕೊಳ್ಳಬೇಕು. ಆದರೆ ಕ್ರಿಮಿನಲ್ ನ್ಯಾಯ ವ್ಯವಸ್ಥೆಯು ಇದನ್ನು ಗಂಭೀರವಾಗಿ ತೆಗೆದುಕೊಳ್ಳುತ್ತದೆ. ಈ ಬಗ್ಗೆ ತನಿಖೆ ಮುಂದುವರಿಸುತ್ತದೆ ಎಂದು ನಾನು ನಿಮಗೆ ಭರವಸೆ ನೀಡಬಲ್ಲೆ” ಎಂದು ಥಾಂಪ್ಸನ್ ಹೇಳಿದರು.

ಇದನ್ನೂ ಓದಿ: ಸುಡಾನ್‌ ಸಂಘರ್ಷ: 200 ಜನ ಸಾವು, 1800 ಜನರಿಗೆ ಗಾಯ; ಸಂಕಷ್ಟದಲ್ಲಿ ಕರ್ನಾಟಕದ ಜನ

ಯಾರ್ಲ್‌ನ ಚಿಕ್ಕಮ್ಮ ಸ್ಪೂನ್‌ಮೋರ್ ಅವರು, ಆತನ ಆರೈಕೆಗಾಗಿ ಹಣವನ್ನು ಸಂಗ್ರಹಿಸಲು GoFundMe ಪುಟವನ್ನು ತೆರೆದಿದ್ದಾರೆ. ಆ ಪುಟದ ಪ್ರಕಾರ, ಯಾರ್ಲ್ ಸಹೋದರರು ಸ್ನೇಹಿತರ ಮನೆಗೆ ಹೋಗಿದ್ದರು. ಅವರನ್ನು ಕರೆತರಲು ಹೋದಾಗ ತಪ್ಪಾದ ವಿಳಾಸಕ್ಕೆ ಹೋಗಿ ಬೆಲ್ ಮಾಡಿದ್ದಾನೆ. ಈ ವೇಳೆ ಮನೆ ಮಾಲಿಕ ಗ್ಲಾಸ್‌ನಲ್ಲಿ ನೋಡಿದ ಮನೆ ಮಾಲಿಕ ಕಪ್ಪು ವರ್ಣೀಯ ಮನೆ ಕಳ್ಳತನಕ್ಕೆ ಬಂದಿದ್ದಾನೆ ಎಂದು ಗುಂಡು ಹಾರಿಸಿದ್ದಾನೆ. ಗುಂಡು ಬಿದ್ದ ತಕ್ಷಣ ಅವನು ನೆಲಕ್ಕೆ ಬಿದ್ದಿದ್ದಾನೆ ಆಗಲೂ ಗುಂಡು ಹಾರಿಸಲಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ಯಾರ್ಲ್ ಅವರು ”ಮಿಸೌರಿಯ ಅಗ್ರ ಬಾಸ್ ಕ್ಲಾರಿನೆಟ್ ಪ್ಲೇಯರ್‌ಗಳಲ್ಲಿ ಒಬ್ಬರು, ಮೆಟ್ರೋಪಾಲಿಟನ್‌ನ ಯುವ ಆರ್ಕೆಸ್ಟ್ರಾದಲ್ಲಿ ಅನೇಕ ವಾದ್ಯಗಳನ್ನು ಆತ ನುಡಿಸುತ್ತಿದ್ದ” ಎಂದು ಆ ಪುಟದಲ್ಲಿ ಹೇಳಲಾಗಿದೆ.

ಹಾಲೆ ಬೆರ್ರಿ, ಕೆರ್ರಿ ವಾಷಿಂಗ್ಟನ್ ಮತ್ತು ಜೆನ್ನಿಫರ್ ಹಡ್ಸನ್ ಅವರಂತಹ ಸೆಲೆಬ್ರಿಟಿಗಳು ಸಾಮಾಜಿಕ ಮಾಧ್ಯಮದಲ್ಲಿ ನ್ಯಾಯಕ್ಕಾಗಿ ಒತ್ತಾಯಿಸಿದ್ದಾರೆ ಮತ್ತು ಯಾರ್ಲ್ ಕುಟುಂಬಕ್ಕೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.

ಸೋಮವಾರ ಮಧ್ಯಾಹ್ನ ಸ್ಥಳೀಯ ಕಾಲಮಾನದಂತೆ ಆ ಪುಟವು $1.5m (28,70,16,982 ರೂ.) ಸಂಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...